ನಾರಾಯಣೀಯಮ್‌ನ ಎರಡು ಸಂಗೀತ  ಕಛೇರಿ


Team Udayavani, Nov 30, 2018, 6:00 AM IST

10.jpg

ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪರಿಸರದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಲೆಯನ್ನು ಪಸರಿಸಬೇಕೆಂಬ ಉದ್ದೇಶದಿಂದ ಕಳೆದ ಹತ್ತೂಂಬತ್ತು ವರ್ಷಗಳ ಹಿಂದೆ ಬಳ್ಳಪದವಿನಲ್ಲಿ ನಾರಾಯಣ ಉಪಾಧ್ಯಾಯರ ಸ್ಮರಣಾರ್ಥ ಸ್ಥಾಪನೆಗೊಂಡ ‘ನಾರಾಯಣೀಯಮ…’ ಸಮುಚ್ಚಯದ ‘ವೀಣಾವಾದಿನೀ ಸಂಗೀತ ಶಾಲೆ’ಯಲ್ಲಿ ವಿದ್ಯಾದಶಮಿಯಂದು ಸರಸ್ವತಿ ಪೂಜೆ, ಹೊಸದಾಗಿ ತರಗತಿಗೆ ಸೇರಿದ ಸಂಗೀತಾಸಕ್ತ ವಿದ್ಯಾರ್ಥಿಗಳಿಗೆ ವಿದ್ಯಾರಂಭ ಮತ್ತು ಉದಯೋನ್ಮುಖ ಕಲಾವಿದರ ಎರಡು ಕಚೇರಿಗಳು ಜರಗಿದವು. 

ಮೊದಲ ಸಂಗೀತ ಕಚೇರಿ ನಡೆಸಿ ಕೊಟ್ಟವರು ಶಾಲೆಯ ಹಿರಿಯ ವಿದ್ಯಾರ್ಥಿನಿಯಾದ ಕುಮಾರಿ ರಮ್ಯಾ ಮಾಧವನ್‌. ವೀಣಾವಾದಿನಿಯ ಪೆರ್ಲ ಶಾಖೆಯಲ್ಲಿ ಕಳೆದ ಹದಿನೈದು ವರ್ಷಗಳಿಂದ ಸಂಗೀತ ಕಲಿಯುತ್ತಿದ್ದ ಈಕೆ ಪ್ರಸ್ತುತ ಕಣ್ಣೂರಿನಲ್ಲಿ ಎಂಜಿನಿಯರಿಂಗ್‌ ವಿದ್ಯಾಭ್ಯಾಸ ಮಾಡುತ್ತಿದ್ದರೂ ಸಂಗೀತ ಕಲಿಕೆಯನ್ನು ನಿಲ್ಲಿಸದೆ ಸತತಾಭ್ಯಾಸ ಮಾಡುತ್ತ ಬಂದಿದ್ದಾರೆ. ಉತ್ತಮ ಶಾರೀರ ಇರುವ ಈಕೆ ತಾನು ಕಲಿತುದನ್ನು ಒಂದೂವರೆ ಗಂಟೆಯ ಕಛೇರಿಯಲ್ಲಿ ಅಚ್ಚುಕಟ್ಟಾಗಿ ನಿರೂಪಿಸಿದರು. ದೇಹಭಾಷೆ ಮತ್ತು ಸ್ಥೈರ್ಯ ಮುಂದೆ ಈ ರಂಗದಲ್ಲಿ ಉಜ್ವಲ ಭವಿಷ್ಯ ಇದೆ ಎಂಬುದನ್ನು ಶ್ರುತಪಡಿಸಿತು. ಗುರುಗಳಾದ ಬಳ್ಳಪದವು ಯೋಗೀಶ ಶರ್ಮಾ ಅವರೇ ಮೃದಂಗದಲ್ಲಿ ಸಾಥ್‌ ನೀಡಿ ಕಲಾವಿದೆಯನ್ನು ಮುನ್ನಡೆಸಿದರು. ಪ್ರಭಾಕರ ಕುಂಜಾರು ಪಿಟೀಲಿನಲ್ಲಿ ಮತ್ತು ಸಹೋದರ ಕೃಷ್ಣನ್‌ ಉಣ್ಣಿ ಘಟಂ ಪಕ್ಕವಾದ್ಯ ಸಹಕಾರ ನೀಡಿ ಕಛೇರಿಯನ್ನು ರಂಜಿಸಿದರು. 

ಅನಂತರ ವಯಲಿನ್‌ ಕಚೇರಿ ನಡೆಸಿಕೊಟ್ಟವರು ಮಂಗಳೂರಿನ ಭರವಸೆಯ ಯುವ ಕಲಾವಿದೆ ಕುಮಾರಿ ಧನಶ್ರೀ ಶಬರಾಯ. ಮೈಸೂರಿನ ಹಿರಿಯ ಕಲಾವಿದ ಎಚ್‌. ಕೆ. ನರಸಿಂಹಮೂರ್ತಿ ಅವರ ಶಿಷ್ಯೆಯಾಗಿರುವ ಇವರು ಪಿಟಿಲಿನಲ್ಲಿ ಪಳಗಿದ್ದಾರೆ. ವಿವಿಧ ರಾಗಗಳನ್ನು ನಿರರ್ಗಳವಾಗಿ ಮತ್ತು ನಿರಾಯಾಸವಾಗಿ ನುಡಿಸಿದ ಇವರ ಜಾಣ್ಮೆ ಪ್ರಶಂಸೆಗೆ ಪಾತ್ರವಾಯಿತು. ಯೋಗೀಶ ಶರ್ಮ ಮೃದಂಗ ಸಾಥ್‌ ನೀಡಿದರು. ರಮ್ಯಾ ಮಾಧವನ್‌ ಮತ್ತು ಧನಶ್ರೀ ಶಬರಾಯ ಈ ಇಬ್ಬರು ಯುವ ಕಲಾವಿದರು ಇನ್ನಷ್ಟು ಸಾಧನೆ ಹಾಕಿ ಈ ಕ್ಷೇತ್ರದಲ್ಲಿ ಹೇಗೆ ಬೆಳೆಯುತ್ತಾರೆ ಎಂಬುದನ್ನು ಮುಂದಿನ ದಿನಮಾನಗಳು ಹೇಳಬೇಕಾಗಿದೆ.

ಕೆ. ಶೈಲಾಕುಮಾರಿ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-1

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.