ವಿಶಿಷ್ಟ ಪ್ರಯೋಗ”ನಡುಮನೆ ಯಕ್ಷಗಾನ’


Team Udayavani, Oct 26, 2018, 12:52 PM IST

nadumane-1.jpg

 ಪ್ರಸ್ತುತ ರಾತ್ರಿಯಿಡೀ ನಿದ್ರೆ ಬಿಟ್ಟು ಯಕ್ಷಗಾನ ವೀಕ್ಷಿಸುವ ಕಲಾಭಿಮಾನಿಗಳು ಸಿಗುವುದು ಅಪರೂಪವಾಗಿದೆ. ಈ ನೆಲೆಯಲ್ಲಿ ಇಂದಿನ ಕಾಲಸ್ಥಿತಿಗೆ ಅನುಗುಣವಾಗಿ 3 ಗಂಟೆಗಳ ಕಾಲ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವ ವಿನೂತನ ಪ್ರಯೋಗವೋ ಎಂಬಂತೆ “ನಡುಮನೆ ಯಕ್ಷಗಾನ’ ಜಿಲ್ಲೆಯಾದ್ಯಂತ ಪ್ರದರ್ಶನ ಕಾಣುವ ಮೂಲಕ ಸದ್ದಿಲ್ಲದೆ ಯಕ್ಷಗಾನ ಉಳಿವಿಗೆ ಶ್ರಮಿಸುತ್ತಿದೆ.

ನಡುಮನೆ ಯಕ್ಷ ಗಾಯನ ಮಂದಾರ್ತಿ ಮೇಳದ ಪ್ರಧಾನ ಭಾಗವತ ನಗರ ಸುಬ್ರಹ್ಮಣ್ಯ ಆಚಾರ್‌ ಈ ನಡುಮನೆ ಯಕ್ಷಗಾನ ತಂಡದ ಸಾರಥಿ. ಅವರು ಕಳೆದ 7 ವರ್ಷಗಳಿಂದ ನಗರ ಯಕ್ಷ ಬಳಗದ ಮೂಲಕ ಯಕ್ಷಗಾನ ಕಲೆಯನ್ನು ಪಸರಿಸುತ್ತ ಇದೀಗ 755 ಪ್ರಯೋಗಗಳನ್ನು ಪ್ರದರ್ಶಿಸಿದ್ದಾರೆ. ಪ್ರಪ್ರಥಮವಾಗಿ ಮಂದಾರ್ತಿ ದೇಗುಲದಲ್ಲಿ ಚಾಲನೆಗೊಂಡು ಆರಂಭದ ವರ್ಷದಲ್ಲಿ “ನಡುಮನೆ ಯಕ್ಷ ಗಾಯನ’ ಹೆಸರಿನಡಿ ದಿನವೊಂದಕ್ಕೆ ಹಲವಾರು ಮನೆಗಳಿಗೆ ತೆರಳಿ ದೇವರ ಕೋಣೆಯಲ್ಲಿ ಪ್ರಾರ್ಥನೆ ಮಾಡಿ ಅನಂತರ ರಾಮಾಯಣ, ಮಹಾಭಾರತದ ಆಯ್ದ ಪದ್ಯಗಳನ್ನು ಹಾಡಿ ರಂಜಿಸುತ್ತಿದ್ದರು.
ಇದು ಕೇವಲ ಒಂದು ವಾರ ಮಾತ್ರ ನಡೆಯಿತು. ಛಲ ಬಿಡದ ಅವರು ದಿನಕ್ಕೊಂದು ಕಾರ್ಯಕ್ರಮದಂತೆ 3 ವರ್ಷಗಳ ಕಾಲ ಮಳೆಗಾಲದಲ್ಲಿ 350 ಪ್ರಯೋಗಗಳನ್ನು ನಡೆಸಿದರು.

ಕಾಲಮಿತಿ – ಹಾಸ್ಯ ಪ್ರಧಾನ 351ನೇ ಸಂಭ್ರಮಾಚರಣೆಯನ್ನು ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇಗುಲದಲ್ಲಿ ಆಚರಿಸುವ ಮೂಲಕ
351ನೇ ಪ್ರಯೋಗದಲ್ಲಿ ನಾಟ್ಯವನ್ನು ಸೇರ್ಪಡೆಗೊಳಿಸಿ “ಯಕ್ಷ ನಾಟ್ಯ ಗಾಯನ’ವಾಗಿ ಮಾರ್ಪಟ್ಟಿತು. 2 ವರ್ಷಗಳ ಕಾಲ ಯಕ್ಷಗಾನ ನಾಟ್ಯ ನಾಡಿನೆಲ್ಲೆಡೆ ಪ್ರದರ್ಶಿಸಿಸಲ್ಪಟ್ಟು, ಯಶಸ್ಸಿನತ್ತ ಸಾಗಿತು. ಅನಂತರ 6ನೇ ವರ್ಷದಲ್ಲಿ ಪ್ರೇಕ್ಷಕರ ಬೇಡಿಕೆಗನುಸಾರ ಯಕ್ಷ ನಾಟ್ಯ, ಗಾಯನದೊಂದಿಗೆ ಹಾಸ್ಯವನ್ನು ಅಳವಡಿಸಿಕೊಂಡು ಇದೀಗ “ಕಾಲಮಿತಿ ಹಾಸ್ಯ ಪ್ರಧಾನ ನಡುಮನೆ ಯಕ್ಷಗಾನ’ವಾಗಿ ಏಳನೇ ವರ್ಷದಲ್ಲಿ ಮುಂದುವರೆಯುತ್ತಿದೆ.

ಪ್ರಸಿದ್ಧ ಕಲಾವಿದರ ಸಮ್ಮಿಲನ ಭಾಗವತಿಕೆಯಲ್ಲಿ ತಂಡದ ಮುಖಂಡ ಸುಬ್ರಹ್ಮಣ್ಯ ಆಚಾರ್‌ ಸೇರಿದಂತೆ ಇನ್ನಿತರ ಪ್ರಸಿದ್ಧ ಭಾಗವತರು, ಮದ್ದಳೆಯಲ್ಲಿ ಕೆ.ಜೆ. ಸುಧೀಂದ್ರ, ಕೆ.ಜೆ. ಕೃಷ್ಣ, ಚಂಡೆಯಲ್ಲಿ ರಾಮಕೃಷ್ಣ ಮಂದಾರ್ತಿ, ಎನ್‌.ಜಿ. ಹೆಗಡೆ ಸೇರಿದಂತೆ ಪ್ರಸಿದ್ಧ ಹಿಮ್ಮೇಳ ವಾದಕರು ಸಹಕಾರ
ನೀಡುತ್ತಿದ್ದಾರೆ. ಮುಮ್ಮೇಳದಲ್ಲಿ ನಾಟ್ಯ ವಿಭಾಗದ ಪ್ರಧಾನ ಸ್ತ್ರೀ ಪಾತ್ರಧಾರಿಯಾಗಿ ಸಂತೋಷ್‌ ಕುಲಶೇಖರ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುರುಷ ವೇಷಧಾರಿಯಾಗಿ ಆರಂಭದಲ್ಲಿ ತೀರ್ಥಹಳ್ಳಿ ಗೋಪಾಲ್‌ ಆಚಾರ್‌, ಅನಂತರ ಬಾಲಕೃಷ್ಣ ನಾಯಕ್‌ ಪೇತ್ರಿ ಹೀಗೆ ಹೆಸರಾಂತ ಕಲಾವಿದರು, ಹಾಸ್ಯಗಾರರಾಗಿ ಕಡಬ ಪೂವಪ್ಪ ಭಾಗವಹಿಸುತ್ತಿದ್ದಾರೆ. 

ಪ್ರೇಕ್ಷಕರೇ ಪ್ರಾಯೋಜಕರು ಪೂರ್ವನಿಯೋಜಿತವಿಲ್ಲದ ಕಾರ್ಯಕ್ರಮವು ಬೆಳಗ್ಗೆ ಆಯ್ಕೆ ಮಾಡಿಕೊಂಡ ಊರಿಗೆ ತೆರಳಿ ಊರಿನ ದೇಗುಲ, ಸಭಾಭವನ, ಭಜನ ಮಂದಿರ ಹೀಗೆ ಆಯ್ಕೆ ಮಾಡಿಕೊಂಡ ಸ್ಥಳದಲ್ಲಿ ಧ್ವನಿವರ್ಧಕದ ಮೂಲಕ ಕಾಳಿಂಗ ನಾವುಡರ ಯಕ್ಷಗಾನ ಪದ್ಯದ ಧ್ವನಿಸುರುಳಿಯನ್ನು ಹಾಕಲಾಗುತ್ತದೆ. ಧ್ವನಿವರ್ಧಕದ ಶಬ್ದ ಎಲ್ಲಿಯವರೆಗೆ ಕೇಳುತ್ತದೆಯೋ ಅಲ್ಲಿಯ ವರೆಗಿನ ಮನೆಗಳಿಗೆ ತೆರಳಿ ಆಹ್ವಾನ ಪತ್ರಿಕೆ ನೀಡಿ ಪ್ರದರ್ಶನಕ್ಕೆ ಸ್ವಾಗತಿಸಲಾಗುತ್ತದೆ. ಯಕ್ಷಗಾನ ಪ್ರದರ್ಶನ ವೀಕ್ಷಿಸಲಾಗಮಿಸಿದ ಪ್ರೇಕ್ಷಕರು ಧನಸಹಾಯವೀಯುತ್ತಾರೆ.

ಮಳೆಗಾಲದಲ್ಲಿ ಸಂಚಾರ ಕಾರ್ಯಕ್ರಮದ ಆರಂಭದಲ್ಲಿ ಅರ್ಧ ಗಂಟೆ ಗಾಯನ ಭಾಗವಾದರೆ, ಇನ್ನುಳಿದ ಎರಡೂವರೆ ಗಂಟೆಯಲ್ಲಿ ಅರ್ಥ ಸಹಿತ ಪ್ರಬುದ್ಧ ಯಕ್ಷಗಾನ ನಡೆಯುತ್ತದೆ. ತಂಡದಲ್ಲಿ ಒಟ್ಟು 9 ಮಂದಿ ಇದ್ದು, ಪ್ರದರ್ಶನಕ್ಕೆ ಬೇಕಾದ ಧ್ವನಿವರ್ಧಕ, ವೇಷಭೂಷಣ, ಜನರೇಟರ್‌, ಕುರ್ಚಿಯನ್ನು ತಂಡವೇ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಕೊಂಡೊಯ್ದು ಪ್ರದರ್ಶನ ನೀಡುತ್ತದೆ. ಸಂಜೆ 6ಕ್ಕೆ ಸರಿಯಾಗಿ ಚಂಡೆಯ ಅಬ್ಬರ ಹಾಕಿ ಯಕ್ಷಗಾನ ಆರಂಭವಾಗುತ್ತದೆ ಎನ್ನುವ ಸೂಚನೆ ನೀಡಲಾಗುತ್ತದೆ. ಅನಂತರ ಚೌಕಿ ಪೂಜೆ ನೆರವೇರಿಸಿ, ಯಕ್ಷಗಾನ ಪ್ರಾರಂಭಿಸಲಾಗುತ್ತದೆ. 

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.