ಪದವೀಧರ ಯಕ್ಷಗಾನ ಸಮಿತಿಗೆ ವಿಶ್ವೇಶ ತೀರ್ಥ ಪ್ರಶಸ್ತಿ


Team Udayavani, Nov 15, 2019, 3:00 AM IST

Udayavani Kannada Newspaper

ಈ ವರ್ಷದ ಶ್ರೀ ವಿಶ್ವೇಶ ತೀರ್ಥ ಪ್ರಶಸ್ತಿಗೆ ಪದವೀಧರ ಯಕ್ಷಗಾನ ಸಮಿತಿ ಮುಂಬಯಿ ಆಯ್ಕೆಯಾಗಿದೆ. ಪ್ರಶಸ್ತಿ ಪ್ರಧಾನ ಸಮಾರಂಭ ನ.17ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನಗೊಳ್ಳಲಿದೆ. ಯಕ್ಷಗಾನಕ್ಕೆ ಎಚ್‌.ಬಿ.ಎಲ್‌. ರಾವ್‌ ನೇತೃತ್ವದ ಪದವೀಧರ ಯಕ್ಷಗಾನ ಸಮಿತಿ ಮುಂಬಯಿ ಇದರ ಕೊಡುಗೆ ದಾಖಲಾರ್ಹ. 1950-60ರ ದಶಕದಲ್ಲಿ ಮುಂಬಯಿಗೆ ಹೋಗಿ ಅಲ್ಲಿ ನೆಲೆನಿಂತವರು ಯಕ್ಷಗಾನವನ್ನು ಸಂಘಟಿಸಿದ್ದು ಮುಖ್ಯವಾಗಿ ಪ್ರದರ್ಶನ ನೋಡಿ ಆನಂದಿಸುವುದಕ್ಕೇ ಹೌದಾದರು ಅದರಿಂದ ಈ ಕಲಾ ಪ್ರಕಾರಕ್ಕಾದ ಲಾಭ ಗಮನಾರ್ಹ.

1973ರಲ್ಲಿ ಸ್ಥಾಪನೆಗೊಂಡ ಈ ಸಂಸ್ಥೆ ಐದು ದಶಕದ ಕಾಲಾವಧಿಯಲ್ಲಿ ಮಾಡಿದ ಸಾಧನೆ ಬಹುಮುಖೀ. ಪ್ರದರ್ಶನ, ಸಮ್ಮಾನ, ಸಮ್ಮೇಳನ ಮತ್ತು ಪುಸ್ತಕ ಪ್ರಕಟಣೆಯತ್ತ ತನ್ನ ಕಾರ್ಯವ್ಯಾಪ್ತಿ ವಿಸ್ತರಿಸಿದೆ. ನಿರಂತರ ಕಾರ್ಯಕ್ರಮ ನಡೆಸುತ್ತಾ ಕಲಾವಿದರನ್ನು, ಕಲಾವಿದ್ವಾಂಸರನ್ನು ಮಾನಿಸುತ್ತಾ ಬಂದಿದೆ.

ಪದವೀಧರ ಯಕ್ಷಗಾನ ಸಮಿತಿ ಆರಂಭದಲ್ಲಿ ಯಕ್ಷಗಾನ ಪ್ರದರ್ಶನ ನೀಡುವುದಕ್ಕಷ್ಟೇ ಸೀಮಿತವಾಗಿತ್ತು. ತರಬೇತಿಯೊಂದಿಗೆ ಮುಂಬಯಿ ಮತ್ತು ಕರ್ನಾಟಕದ ಅನ್ಯಾನ್ಯ ಪ್ರದೇಶಗಳಲ್ಲಿ ರಾಜಧಾನಿ ದೆಹಲಿಯಲ್ಲಿ ಪ್ರದರ್ಶನ ನೀಡಿದೆ. ಹವ್ಯಾಸಿ ತಂಡವಾಗಿದ್ದು ಸ್ವಂತ ವೇಷಭೂಷಣ ಹಿಮ್ಮೇಳ ಪರಿಕರ ಹೊಂದಿರುವುದು ಇನ್ನೊಂದು ವೈಶಿಷ್ಟé. ಮುಂಬಯಿಯಲ್ಲಿ 16 ಬಾರಿ ಯಕ್ಷಗಾನ ಸಾಹಿತ್ಯ ಸಮ್ಮೇಳನ ನಡೆಸಿದ ಖ್ಯಾತಿಗೆ ಸಂಘಟನೆ ಪಾತ್ರವಾಗಿದೆ. ಯಕ್ಷಸೌರಭ, ಯಕ್ಷಪದ್ಮ, ಯಕ್ಷರತ್ನ, ಯಕ್ಷಸುಧಾ, ಯಕ್ಷಲಕ್ಷ್ಮೀ, ಯಕ್ಷದರ್ಪಣ, ಯಕ್ಷನೂಪುರ ಹೀಗೆ ಸುಂದರ ಶಿರೋನಾಮೆಯೊಂದಿಗೆ ಮೌಲಿಕ ಗ್ರಂಥಗಳನ್ನು ಪ್ರಕಟಿಸಿದೆ. ಬಣ್ಣದ ವೇಷ, ಹಾಡುಗಾರಿಕೆಯ ಕಮ್ಮಟ ನಡೆಸಿದೆ. ಯಕ್ಷಗಾನದ ಪ್ರಸಂಗ ಸಾಹಿತ್ಯವನ್ನು ಪ್ರಕಟಿಸುವಲ್ಲಿ ಈ ಸಂಸ್ಥೆ ಮಹಣ್ತೀದ ಮೈಲಿಗಲ್ಲು ಸ್ಥಾಪಿಸಿದೆ. ಈ ವರೆಗೆ 153 ಪ್ರಸಂಗ ಕೃತಿಗಳು ಪ್ರಕಟವಾಗಿವೆ. ಇವುಗಳಲ್ಲಿ ಹಲವು ಅಜ್ಞಾತ ಕವಿಗಳ ಅಪ್ರಕಟಿತವಾಗಿದ್ದ ಅಮೂಲ್ಯ ಕೃತಿಗಳೆಂಬುದು ಗಮನಾರ್ಹ. ಅತ್ಯುತ್ತಮ ಯಕ್ಷಗಾನ ಧ್ವನಿ ಸುರುಳಿಗಳನ್ನು ಬಿಡುಗಡೆ ಮಾಡಿದೆ.

ತಾಳಮದ್ದಲೆ ಸಪ್ತಾಹವನ್ನೇರ್ಪಡಿಸಿ ಶ್ರೇಷ್ಠ ಅರ್ಥಧಾರಿಗಳ ಮೌಲಿಕ ಕೂಟಗಳ ಮೂಲಕ ಮುಂಬಯಿಯ ಕಲಾರಸಿಕರಿಗೆ ಮಾತುಗಾರಿಕೆಯ ರಸದೌತಣ ಬಡಿಸಿದೆ. ಹಿರಿಯ ಅರ್ಥಧಾರಿಗಳನ್ನು ಕಲಾವಿದರನ್ನು ಗುರುತಿಸಿ ಗೌರವಿಸಿದೆ. ಹಲವಾರು ಕಲಾ ಸಂಘಟನೆಗಳನ್ನು ಪುರಸ್ಕರಿಸಿ ಪ್ರೋತ್ಸಾಹಿಸಿದೆ.

ಪ್ರೊ| ನಾರಾಯಣ ಎಂ. ಹೆಗಡೆ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-1

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.