73ರಲ್ಲಿ ಗೆಜ್ಜೆಕಟ್ಟಿದ ಸಾವಿತ್ರಿ 


Team Udayavani, May 25, 2018, 6:00 AM IST

c-9.jpg

ಸಾವಿತ್ರಿ ಎಸ್‌ . ರಾವ್‌ ಇವರು ಸುರತ್ಕಲ್‌ನಲ್ಲಿ ಜನಿಸಿ, ಕೂಡು ಕುಟುಂಬದಲ್ಲಿ ಅಕ್ಕ-ತಂಗಿ, ಅಣ್ಣ-ತಮ್ಮಂದಿರೊಡನಾಡಿ ಬೆಳೆದು, ಮಂಗಳೂರಿನ ಉರ್ವದ ಕಲ್ಲಾವು ಕುಟುಂಬಕ್ಕೆ ಸೊಸೆಯಾಗಿ, ಶ್ರೀನಿವಾಸ ರಾವ್‌ ಅವರ ಮಡದಿಯಾಗಿ ಬಂದು ಮೇ 13ಕ್ಕೆ 50 ವರ್ಷ ತುಂಬಿತು. ಈ ಅವಧಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ದುಡಿದು, ಮಕ್ಕಳ ಅಪಾರ ಪ್ರೀತಿಯನ್ನು ಗಳಿಸಿದ ಅವರು ರಾಜ್ಯ ಪ್ರಶಸ್ತಿಯನ್ನು ಪಡೆದರು. ಮಕ್ಕಳ ಸಾಹಿತಿಯಾಗಿ ಹಲವಾರು ಕಥೆ ಕವನಗಳನ್ನು ಬರೆದರು. ತೋಟದ ಆರೈಕೆ, ಮಕ್ಕಳಿಗೆ ಭಗವದ್ಗೀತೆಯನ್ನು ಕಲಿಸುವುದು, ಕಥಾ,ಕವನದ ಕಮ್ಮಟಗಳನ್ನು ನಡೆಸುವುದೇ ಮುಂತಾದ ಹಲವಾರು ಚಟುವಟಿಕೆಗಳಲ್ಲಿ ಇವರು ತಮ್ಮನ್ನು ತೊಡಗಿಸಿಕೊಂಡವರು. ಸ್ವಯಂ ನಿವೃತ್ತಿಯನ್ನು ಪಡೆದು ಇಂತಹ ಹಲವಾರು ಪ್ರವೃತ್ತಿಗಳಿಗೆ ಸಮಯವನ್ನು ಮುಡಿಪಾಗಿಟ್ಟರು. ತನ್ನ 66ನೇ ವಯಸ್ಸಿನಲ್ಲಿ ಇವೆಲ್ಲವನ್ನು ಮೀರಿಸಿದ ಹೊಸ ಪ್ರಯೋಗವೊಂದನ್ನು ಮಾಡಿದರು ಹಾಗು ಯಶಸ್ವಿಯೂ ಆದರು. ಅದೇ ಯಕ್ಷಲೋಕಕ್ಕೆ ಪದಾರ್ಪಣೆ. 

ಇಂದು ಅವರಿಗೆ 73ರ ಹರೆಯ. ನವತರುಣ-ತರುಣಿಯರು ನಾಚುವಂತೆ ಅವರು ಯಕ್ಷಗಾನದಲ್ಲಿ ಗೆಜ್ಜೆ ಕಟ್ಟಿ ಕುಣಿದು ಕಲಾಭಿಮಾನಿಗಳನ್ನು ಮಂತ್ರ ಮುಗ್ಧಗೊಳಿಸಬಲ್ಲರು. ಇಳಿ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಮಿಂಚುವ ಕನಸು ಕೂಡಾ ಕಂಡವರಲ್ಲ. ಆದರೆ ಅವರ ಉತ್ಸಾಹ, ಕಲಿಯುವ ಮನಸ್ಸು, ಉತ್ತಮ ಆರೋಗ್ಯ ಸಾಧನೆಯ ಗುಟ್ಟು. ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರೂ ಆದ ಪತಿಯ ನಿರಂತರ ಸಹಕಾರ ಮತ್ತು ಬೆಂಬಲ, ಯಕ್ಷಗುರು ಸುಮಂಗಲ ರತ್ನಾಕರ ಅವರ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ಅವರ ಸಾಧನೆಯ ಹಾದಿಯ ಮೆಟ್ಟಿಲುಗಳಾದವು. 

50ನೇ ವಿವಾಹ ವಾರ್ಷಿಕೋತ್ಸವದಂದು ಯಕ್ಷಗಾನದ 100ನೇ ಪ್ರದರ್ಶನವನ್ನು ನಗರದ ಪುರಭವನದಲ್ಲಿ ಏರ್ಪಡಿಸಿದ್ದರು. ಸುಮಂಗಲ ರತ್ನಾಕರ ಅವರ ನೇತೃತ್ವದಲ್ಲಿ ದಂಪತಿಯನ್ನು ಸಮ್ಮಾನಿಸಲಾಯಿತು.ಅನಂತರ ನಡೆದ “ನರಕಾಸುರ ವಧೆ’ ಪ್ರದರ್ಶನದಲ್ಲಿ ಸಾವಿತ್ರಿಯವರು ದೇವೇಂದ್ರನ ಪಾತ್ರವನ್ನು ಅದ್ಭುತವಾಗಿ ನಿರ್ವಹಿಸಿದರು. ಇವರ ಈ ಜೀವನೋತ್ಸಾಹ ಸರ್ವರಿಗೂ ಆದರ್ಶ. ಮಧ್ಯ ವಯಸ್ಸಿನಲ್ಲೇ ಎಲ್ಲ ಮುಗಿಯಿತೆಂದುಕೊಂಡು ನೀರಸ ಬಾಳು ಬಾಳುವವರಿಗೊಂದು ದಾರಿದೀಪ, ಸ್ಫೂರ್ತಿ. 

ಯಕ್ಷಪ್ರಿಯ 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.