ಹುಟ್ಟಿನಿಂದ ಬರುವ ಹೃದಯ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸುವ ಮಾಸಾಚರಣೆ


Team Udayavani, Feb 21, 2021, 1:06 PM IST

Congenital heart disease

ಫೆಬ್ರವರಿ ಮಾಸದಲ್ಲಿ ನಾವು ಹಲವಾರು ವಿಶೇಷ ಹಬ್ಬ , ಹರಿದಿನಗಳಲ್ಲಿ ಸಂಭ್ರಮಿಸುವಂತೆ ಈ ತಿಂಗಳನ್ನು ಹೃದಯ ಮಾಸವನ್ನಾಗಿ ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. ಒಳ್ಳೆಯ ಆರೋಗ್ಯ ಹಾಗೂ ಜೀವನ ಶೈಲಿ ಅಳವಡಿಸಿಕೊಂಡು ಜನರು ಆರೋಗ್ಯವಂತ ಹೃದಯವನ್ನು ಹೊಂದುವಂತಾಗಲಿ ಎಂಬುದೇ ಈ ಹೃದಯ ಮಾಸದ ಉದ್ದೇಶವಾಗಿದೆ.

ಹಿರಿಯರಲ್ಲಿ ಕಂಡುಬರುವ ಮುಖ್ಯವಾದ ಹೃದಯ ಕಾಯಿಲೆಗಳಲ್ಲಿ ಅಧಿಕ ರಕ್ತದೊತ್ತಡ, ತೀವ್ರ ಹೃದಯಾ ಘಾತ, ಹೃದಯದ ಅಸಮರ್ಪಕ ಬಡಿತ, ಎದೆನೋವು ಇತ್ಯಾದಿಗಳಾದರೆ ಮಕ್ಕಳಲ್ಲಿ ಕಂಡುಬರುವ ಹೃದಯ ಕಾಯಿಲೆಗಳ ಲಕ್ಷಣಗಳು ಸಂಪೂರ್ಣವಾಗಿ ಬೇರೆಯೇ ಆಗಿರುತ್ತವೆ. ಸಾಮಾನ್ಯವಾಗಿ ಮಕ್ಕಳಲ್ಲಿ ಅಥವಾ ನವಜಾತ ಶಿಶುಗಳಲ್ಲಿ ಕಂಡುಬರುವ ಹೃದಯ ಕಾಯಿಲೆಗಳು ಹುಟ್ಟಿನಿಂದ ಬಂದಂಥವಾಗಿರುತ್ತವೆ. ತಾಯಿಯ ಗರ್ಭದಲ್ಲಿ ಇರುವಾಗಲೇ ಅಸಮರ್ಪಕ ಬೆಳವಣಿಗೆಯಿಂದಾಗಿ ಈ ಕಾಯಿಲೆಗಳು ಕಂಡುಬರುತ್ತವೆ. ಪ್ರತೀ ವರ್ಷ ಫೆಬ್ರವರಿ 7ರಿಂದ 14ರ ವರೆಗೆ ಹುಟ್ಟಿನಿಂದ ಬರುವ ಹೃದಯ ಕಾಯಿಲೆಗಳ ವಾರವಾಗಿ ಪರಿಗಣಿಸಲ್ಪಡುತ್ತದೆ. ಹುಟ್ಟಿನಿಂದ ಬರುವ ಹೃದಯ ಕಾಯಿಲೆಗಳ ಬಗೆಗಿನ ಮಾಹಿತಿ ಹಾಗೂ ಇದರ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಆರೋಗ್ಯ ಕಾರ್ಯಕರ್ತರನ್ನು ಗುರುತಿಸುವುದು ಇದರ ಮೂಲ ಉದ್ದೇಶ.

ಹುಟ್ಟಿನಿಂದ ಬರುವ ಹೃದಯ ಕಾಯಿಲೆಗಳು ((Congenital Heart disease)) ಮಗುವಿನ ಹೃದಯದ ಕಾರ್ಯ ವೈಖರಿಯ ಮೇಲೆ ನೇರ ಪರಿಣಾಮ ಬೀರುತ್ತವೆ. ಸರಿ ಸುಮಾರು 100 ಮಕ್ಕಳಲ್ಲಿ ಒಂದು ಮಗು ಹೃದಯ ಕಾಯಿಲೆಯೊಂದಿಗೆ ಹುಟ್ಟುತ್ತಿವೆ. ಇಂತಹ ಹೃದಯ ಕಾಯಿಲೆಗಳಲ್ಲಿ ಹೃತ್ಕರ್ಣ ಅಥವಾ ಹೃತುRಕ್ಷಿಯ ಮಧ್ಯೆ ಸಣ್ಣ  ತೂತಿನಿಂದ ಹಿಡಿದು ಹೃದಯ ಭಾಗಗಳು ಸರಿಯಾಗಿ ಬೆಳವಣಿಗೆ ಆಗದ, ನೀಲಿ ಬಣ್ಣಕ್ಕೆ ತಿರುಗುವ ಹೃದಯದ ಕಾಯಿಲೆಯೂ ಒಳಗೊಂಡಿರುತ್ತದೆ. ಹೆಚ್ಚಿನ ಇಂತಹ ಹೃದಯ ಕಾಯಿಲೆಗಳು ಭ್ರೂಣಾವಸ್ಥೆಯಲ್ಲಿಯೇ ಅಂದರೆ ಮಗು ತಾಯಿಯ ಗರ್ಭದಲ್ಲಿ  ಇರುವಾಗಲೇ ಪತ್ತೆ ಹಚ್ಚಲು ಸಾಧ್ಯವಿದೆ. ಆದ್ದರಿಂದ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರು ತಮ್ಮ ಸಾಮಾನ್ಯ ಸ್ಕ್ಯಾನಿಂಗ್‌ ಪರೀಕ್ಷೆಯಲ್ಲಿ ಯಾವುದೇ ಸಂಶಯ ಕಂಡುಬಂದಲ್ಲಿ ಹೆಚ್ಚಿನ ನಿಖರ ಪರೀಕ್ಷೆಗಾಗಿ, ಹೃದಯ ಕಾಯಿಲೆಯ ಪತ್ತೆ ಹಚ್ಚುವಿಕೆಗಾಗಿ “ಭ್ರೂಣದ ಹೃದಯ ಕೇಂದ್ರ’ಕ್ಕೆ ಹೆಚ್ಚಿನ ತಪಾಸಣೆಗಾಗಿ ಕಳುಹಿಸಿಕೊಡುತ್ತಾರೆ.

ಈ ಕೇಂದ್ರಗಳಲ್ಲಿ ಹೃದಯ ಕಾಯಿಲೆಯ ಪರಿಣತ ತಜ್ಞರು/ಮಕ್ಕಳ ಹಾಗೂ ಭ್ರೂಣದ ಹೃದಯ ತಜ್ಞರು ಪರೀಕ್ಷಿಸಿ (Fetal Echo)

ನಿಖರವಾದ ಮಾಹಿತಿಯನ್ನು ಗರ್ಭಿಣಿಯ ಕುಟುಂಬಸ್ಥರಿಗೆ ಮನದಟ್ಟು  ಮಾಡುತ್ತಾರೆ. ಮುಂದೆ ಮಗು ಜನಿಸಿದ ತತ್‌ಕ್ಷಣ ಅಥವಾ ಅನಂತರ ಯಾವ ರೀತಿಯ ಚಿಕಿತ್ಸೆ ಬೇಕೆಂಬುದಾಗಿ ಆಪ್ತ ಸಮಾಲೋಚನೆ ಮಾಡುತ್ತಾರೆ. ಹೆಚ್ಚಿನ ಹುಟ್ಟಿನಿಂದ ಬರುವ ಹೃದಯ ಕಾಯಿಲೆಗಳಿಗೆ ನಿರ್ದಿಷ್ಟವಾದ ಕಾರಣಗಳಿರುವುದಿಲ್ಲ, ಇದರಲ್ಲಿ  ಕೆಲವು ಹೃದಯ ಕಾಯಿಲೆಗಳು ಕುಟುಂಬದ ಇತರೇ ವ್ಯಕ್ತಿಗಳಲ್ಲಿ ಕಂಡುಬಂದಿರುವುದಾಗಿದ್ದು , ಈ ಕಾಯಿಲೆಗಳು ಕೆಲವೊಮ್ಮೆ ವಂಶವಾಹಿನಿಗೆ ಸಂಬಂಧಪಟ್ಟಂತೆ ಇರುವ ಸಾಧ್ಯತೆಗಳಿವೆ.

ಕೆಲವು ಬಾರಿ ಗರ್ಭಿಣಿ ತಾಯಿಯು ಕೆಲವು ತರಹದ ಮದ್ದು ತೆಗೆದುಕೊಳ್ಳುವುದರಿಂದಲೂ ಅಥವಾ ತಾಯಿಗೆ ಇರುವಂತಹ ಹೃದಯ ಕಾಯಿಲೆಯಿಂದ ಮಗುವಿಗೆ ಬರುವ ಸಾಧ್ಯತೆಯೂ ಇರುವುದು.

ಇದರಲ್ಲಿ ಕೆಲವು ಹುಟ್ಟಿನಿಂದ ಬರುವ ಹೃದಯ ಕಾಯಿಲೆಗಳು ತೀರಾ ಅಲ್ಪ ಮಟ್ಟದ್ದು ಆಗಿದ್ದು, ಮಕ್ಕಳ ತಜ್ಞರು ಕೆಲವು ಮದ್ದು ನೀಡಿ ಸರಿಪಡಿಸಬಹುದಾಗಿದೆ. ಇನ್ನು ಕೆಲವು ಹುಟ್ಟಿನಿಂದ ಬರುವ ಕಾಯಿಲೆಗಳು ಹೃದಯದ ಶಸ್ತ್ರಚಿಕಿತ್ಸೆ  ಮಾಡಿ ಸರಿಪಡಿಸಬೇಕಾಗಿ ಬರಬಹುದು. ಕೆಲವು ಕಾಯಿಲೆಗಳಿಗೆ ಮಗು ಹುಟ್ಟಿದ ತತ್‌ಕ್ಷಣ ತೀವ್ರ ನಿಗಾದ ವ್ಯಸ್ಥೆ ಹಾಗೂ ವಿಶೇಷವಾದ ಮದ್ದು ನೀಡಬೇಕಾಗಿ ಬರಬಹುದು.

ಕೆಲವು ಸಣ್ಣ ತೂತುಗಳು ಮಗು ಬೆಳೆದಂತೆ ತನ್ನಿಂದ ತಾನಾಗಿ ಮುಚ್ಚಬಹುದು. ಇನ್ನು ಕೆಲವು ತೂತುಗಳನ್ನು ಮಗು ಬೆಳವಣಿಗೆಯಾಗಿ ಎರಡರಿಂದ ಮೂರು ವರ್ಷಗಳ ಅವಧಿಯಲ್ಲಿ ಹೃದ್ರೋಗ ತಜ್ಞರು ತೊಡೆಯಿಂದ ಸಪೂರ ನಳಿಕೆಯನ್ನು ಹೃದಯಕ್ಕೆ ಕಳುಹಿಸಿ ತೂತಿನ ಭಾಗದಲ್ಲಿ ಒಂದು ಸಣ್ಣ ಸಾಧನವನ್ನು ಅಳವಡಿಸಿ ಮುಚ್ಚುತ್ತಾರೆ. ಕೆಲವು ಸಂಕೀರ್ಣ ಹೃದಯದ ಕಾಯಿಲೆಗಳಿಗೆ ಒಂದು ಅಥವಾ ಹೆಚ್ಚಿನ ಶಸ್ತ್ರಚಿಕಿತ್ಸೆಗಳ ಆವಶ್ಯಕತೆ ಇರುವ ಸಾಧ್ಯತೆ ಇರುತ್ತದೆ. ಕೆಲವು ವಂಶವಾಹಿನಿಯ (Genetic Syndrome)

ತೊಂದರೆಯಿಂದ ಹೃದಯ ಕಾಯಿಲೆಯ ಒಟ್ಟೊಟ್ಟಿಗೆ ಮಗುವಿನ ಬುದ್ಧಿಯ ಬೆಳವಣಿಗೆ ಕೂಡ ವ್ಯತ್ಯಾಸ ಕಂಡುಬರುವುದು. ಇದನ್ನು ಡೌನ್‌ ಸಿಂಡ್ರೋಮ್‌ (Down Syndrome) ಎನ್ನುವರು. ಆದುದರಿಂದ ಇಂತಹ ಅಸಮರ್ಪಕ ಬುದ್ಧಿಯ ಬೆಳವಣಿಗೆ ಇರುವ ಮಕ್ಕಳಿಗೆ ವಿವಿಧ ಸ್ತರಗಳಲ್ಲಿ  ಚಿಕಿತ್ಸೆ ಹಾಗೂ ಆಪ್ತಸಮಾಲೋಚನೆ ಬೇಕಾಗಿ ಬರಬಹುದು.

ಭಾರತದ ಪ್ರಸಿದ್ಧ ಸಿನೆಮಾ ನಿಟಿಯಾದ ಮಧುಬಾಲಾ ಎಂಬವರು ಕೂಡ ಹುಟ್ಟಿನಿಂದ ಬರುವ ಈ ಹೃದಯದ ತೊಂದರೆಗೆ ತುತ್ತಾಗಿದ್ದರೆಂಬುದನ್ನು ನಾವು ಇಲ್ಲಿ ಸ್ಮರಿಸಬಹುದು. ತಡವಾಗಿ ಈ  ಹೃದಯದ ಸಮಸ್ಯೆ ಅವರ ಗಮನಕ್ಕೆ ಬಂದ ಕಾರಣ ಸರಿಯಾದ ಚಿಕಿತ್ಸೆ ನೀಡಲು ಸಾಧ್ಯವಾಗದ ಕಾರಣ ಅವರು ತನ್ನ 36ನೇ ವಯಸ್ಸಿನಲ್ಲಿ ತೀರಿಕೊಂಡರು. ಆಕೆಯ ಹುಟ್ಟುಹಬ್ಬವನ್ನು  ಫೆಬ್ರವರಿ 14ರಂದು ಆಚರಿಸಲಾಗುತ್ತಿದ್ದು , ಈ ದಿನವನ್ನು ಹೃದಯ ಕಾಯಿಲೆಯ ಜಾಗೃತಾ ದಿನವಾಗಿಯೂ ಹಾಗೂ ಪ್ರೇಮಿಗಳ ದಿನಾಚರಣೆಯಾಗಿಯೂ ಆಚರಿಸಲ್ಪಡುತ್ತಿದೆ. ಆದುದರಿಂದ ಆದಷ್ಟು ಬೇಗ ಈ ಹುಟ್ಟಿನಿಂದ ಬರುವ ಹೃದಯ ಕಾಯಿಲೆಗಳನ್ನು ಪತ್ತೆ ಹಚ್ಚಿದಲ್ಲಿ ಅದಕ್ಕೆ ಬೇಕಾದ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಿದೆ.

ಹೆಚ್ಚಿನ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಹುಟ್ಟಿದ ಮಕ್ಕಳಿಗೆ ನಿಯತವಾಗಿ ಹೃದಯ ಪರೀಕ್ಷೆ ಮಾಡಿಸುವ ವ್ಯವಸ್ಥೆಯನ್ನು ಹೊಂದಿದ್ದು ನಮ್ಮ ದೇಶದಲ್ಲಿಯೂ ಈ ವ್ಯವಸ್ಥೆಯು ಹೆಚ್ಚಾಗಿ ಹಂತ ಹಂತವಾಗಿ ಜಾರಿಯಾಗುತ್ತಿದೆ. ಆದುದರಿಂದ ಈ ಹುಟ್ಟಿನಿಂದ ಬರುವ ಹೃದಯ ಕಾಯಿಲೆಗಳ ಬಗ್ಗೆ  ಜಾಗೃತಿ ಮೂಡಿಸಿ ಶೀಘ್ರವಾಗಿ ಪತ್ತೆ ಹಚ್ಚಿ ಎಲ್ಲ ಮಕ್ಕಳಿಗೂ ಒಳ್ಳೆಯ ಆರೋಗ್ಯ ಒದಗುವಂತೆ ಪ್ರಯತ್ನಿಸೋಣ ಎಂಬುದೇ ನಮ್ಮ ಆಶಯ

ಡಾ| ಗುಂಜನ್‌ ಬಂಗ
ಸಹಾಯಕ ಪ್ರಾಧ್ಯಾಪಕರು ಹಾಗೂ ಮಕ್ಕಳ ಹೃದಯ ತಜ್ಞರು, ಹೃದ್ರೋಗ ಚಿಕಿತ್ಸೆ ವಿಭಾಗ, ಕೆ.ಎಂ.ಸಿ. ಮಣಿಪಾಲ
ಡಾ| ಕೃಷ್ಣಾನಂದ ನಾಯಕ್‌
ಸಹಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು,
ಹೃದಯ ಮತ್ತು ಪರಿಚಲನ ತಂತ್ರಜ್ಞಾನ ವಿಭಾಗ, ಎಂಸಿಎಚ್‌ಪಿ, ಮಾಹೆ, ಮಣಿಪಾಲ

ಟಾಪ್ ನ್ಯೂಸ್

1-SCC

Kolkata Case ಪ್ರತಿಭಟನಾನಿರತ ವೈದ್ಯರಿಗೆ ಕೆಲಸ ಪುನರಾರಂಭಿಸಲು ಹೇಳಿದ ಸುಪ್ರೀಂ ಕೋರ್ಟ್

Maharaja Movie: ಓಟಿಟಿಯಲ್ಲಿ ಹೊಸ ದಾಖಲೆ ಬರೆದ ವಿಜಯ್‌ ಸೇತುಪತಿ ʼಮಹಾರಾಜʼ

Maharaja Movie: ಓಟಿಟಿಯಲ್ಲಿ ಹೊಸ ದಾಖಲೆ ಬರೆದ ವಿಜಯ್‌ ಸೇತುಪತಿ ʼಮಹಾರಾಜʼ

Deepa Malik; ಪ್ಯಾರಲಿಸಿಸ್ ನಿಂದ ಪ್ಯಾರಾಲಿಂಪಿಕ್ಸ್ ವರೆಗೆ: ಇದು ದೀಪಾ ಸ್ಪೂರ್ತಿಯ ಕಥೆ

Deepa Malik; ಪ್ಯಾರಲಿಸಿಸ್ ನಿಂದ ಪ್ಯಾರಾಲಿಂಪಿಕ್ಸ್ ವರೆಗೆ: ಇದು ದೀಪಾ ಸ್ಪೂರ್ತಿಯ ಕಥೆ

police crime

Delhi Police; ಅಲ್ ಖೈದಾ ಉಗ್ರ ಜಾಲ: ವಿವಿಧ ರಾಜ್ಯಗಳಲ್ಲಿ 14 ಮಂದಿ ಶಂಕಿತರು ವಶಕ್ಕೆ

archana kamath

Table Tennis; 24ನೇ ವಯಸ್ಸಿನಲ್ಲೇ ಟೇಬಲ್‌ ಟೆನ್ನಿಸ್‌ ಗೆ ವಿದಾಯ ಹೇಳಿದ ಅರ್ಚನಾ ಕಾಮತ್

muddebihala

Vijayapura; ಜಾತಿ ನಿಂದನೆ ಆರೋಪ: ಮುದ್ದೇಬಿಹಾಳ ಠಾಣೆ ಎದುರು ಪಿಎಸ್‍ಐ ವಿರುದ್ಧ ಧರಣಿ

ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆ… ಅರಣ್ಯ ಇಲಾಖೆಯ ಸಿಬ್ಬಂದಿ ವರ್ತನೆಗೆ ಗ್ರಾಮಸ್ಥರ ಆಕ್ರೋಶ

ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆ… ಅರಣ್ಯ ಇಲಾಖೆಯ ಸಿಬ್ಬಂದಿ ವರ್ತನೆಗೆ ಗ್ರಾಮಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Orthodontics: ವಯಸ್ಕರಿಗಾಗಿ ಆರ್ಥೋಡಾಂಟಿಕ್ಸ್‌

6

hearing loss: ಮಕ್ಕಳಲ್ಲಿ ಶ್ರವಣ ದೋಷವನ್ನು ಶೀಘ್ರ ಪತ್ತೆಹಚ್ಚುವಲ್ಲಿ ಶಿಕ್ಷಕರ ಪಾತ್ರ

1

Health: ಪರಿಷ್ಕೃತಗೊಂಡ ಆಹಾರ ಮಾರ್ಗಸೂಚಿಗಳು

ga

Orthodontics ಮತ್ತು ಕ್ರೀಡೆ; ಸಕ್ರಿಯ ಕ್ರೀಡಾಳುಗಳಿಗೆ ಸುರಕ್ಷೆಯ ಸಲಹೆಗಳು

3-health

Speech development: ಮಕ್ಕಳಲ್ಲಿ ಮಾತಿನ ಬೆಳವಣಿಗೆ; ಮಾತು-ಭಾಷಾ ಪ್ರಚೋದನೆಯ ಪ್ರಾಮುಖ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-SCC

Kolkata Case ಪ್ರತಿಭಟನಾನಿರತ ವೈದ್ಯರಿಗೆ ಕೆಲಸ ಪುನರಾರಂಭಿಸಲು ಹೇಳಿದ ಸುಪ್ರೀಂ ಕೋರ್ಟ್

Maharaja Movie: ಓಟಿಟಿಯಲ್ಲಿ ಹೊಸ ದಾಖಲೆ ಬರೆದ ವಿಜಯ್‌ ಸೇತುಪತಿ ʼಮಹಾರಾಜʼ

Maharaja Movie: ಓಟಿಟಿಯಲ್ಲಿ ಹೊಸ ದಾಖಲೆ ಬರೆದ ವಿಜಯ್‌ ಸೇತುಪತಿ ʼಮಹಾರಾಜʼ

Deepa Malik; ಪ್ಯಾರಲಿಸಿಸ್ ನಿಂದ ಪ್ಯಾರಾಲಿಂಪಿಕ್ಸ್ ವರೆಗೆ: ಇದು ದೀಪಾ ಸ್ಪೂರ್ತಿಯ ಕಥೆ

Deepa Malik; ಪ್ಯಾರಲಿಸಿಸ್ ನಿಂದ ಪ್ಯಾರಾಲಿಂಪಿಕ್ಸ್ ವರೆಗೆ: ಇದು ದೀಪಾ ಸ್ಪೂರ್ತಿಯ ಕಥೆ

Tallur Grama Panchayat Embankment Construction

Hangarkere: ತಲ್ಲೂರು ಗ್ರಾ.ಪಂ.ನಿಂದ ದಂಡೆ ನಿರ್ಮಾಣ

police crime

Delhi Police; ಅಲ್ ಖೈದಾ ಉಗ್ರ ಜಾಲ: ವಿವಿಧ ರಾಜ್ಯಗಳಲ್ಲಿ 14 ಮಂದಿ ಶಂಕಿತರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.