ಮಾನಸಿಕ ಆರೋಗ್ಯದ ಪ್ರಾಮುಖ್ಯ 

ಜಾಗತಿಕ ಸಾಂಕ್ರಾಮಿಕವಾಗಿರುವ ಕೋವಿಡ್‌-19 ಈಗಲೂ ಹಬ್ಬಿ ಹರಡುತ್ತಿದೆ.

Team Udayavani, Feb 1, 2022, 12:15 PM IST

ಮಾನಸಿಕ ಆರೋಗ್ಯದ ಪ್ರಾಮುಖ್ಯ 

ಕಳೆದ ಎರಡು ದಶಕಗಳಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ತನ್ನ ವೈವಿಧ್ಯಮಯ ಸ್ವರೂಪಗಳ ಮೂಲಕ ನಮ್ಮ ಬದುಕಿನ ವಿವಿಧ ಆಯಾಮಗಳಲ್ಲಿ ಒಳಪ್ರವೇಶಿಸಿದೆ. ಮಾಹಿತಿ ತಂತ್ರಜ್ಞಾನದಲ್ಲಿ ಆಗಿರುವ ಪ್ರಗತಿಗಳನ್ನು ಆರೋಗ್ಯ ಸೇವಾ ಕ್ಷೇತ್ರದಲ್ಲಿ ವಿವಿಧ ರೀತಿಗಳಲ್ಲಿ ಬಳಸಿಕೊಳ್ಳಲಾಗುತ್ತಿದೆ. ದಾಖಲೆಗಳನ್ನು ಸಂಗ್ರಹಿಸಿಡುವುದು, ಜನಸಾಮಾನ್ಯರಿಗೆ ಮಾಹಿತಿ ಒದಗಿಸುವುದು ಇದಕ್ಕೆ ಕೆಲವು ಉದಾಹರಣೆಗಳು. ಭಾರತದ ಜನರಲ್ಲಿ ಸ್ಮಾರ್ಟ್‌ಫೋನ್‌ ಬಳಕೆ ಮತ್ತು ಡಿಜಿಟಲ್‌ ಸಾಕ್ಷರರ ಪ್ರಮಾಣ ಹೆಚ್ಚಳವಾಗಿರುವುದರಿಂದ ಇ-ಆರೋಗ್ಯ ಸೇವೆಯು ಭವಿಷ್ಯದಲ್ಲಿ ಪ್ರಧಾನ ಪಾತ್ರ ವಹಿಸಲಿದೆ ಮತ್ತು ವಿಶೇಷವಾಗಿ  ಗ್ರಾಮೀಣ ಜನರ ಸಹಿತ ದೇಶದ ನಾಗರಿಕರಿಗೆ ಪ್ರಯೋಜನ ಉಂಟು ಮಾಡಲಿದೆ.

ಜಾಗತಿಕ ಸಾಂಕ್ರಾಮಿಕವಾಗಿರುವ ಕೋವಿಡ್‌-19 ಈಗಲೂ ಹಬ್ಬಿ ಹರಡುತ್ತಿದೆ. ಆರೋಗ್ಯ ಸೇವೆ ಮತ್ತು ಅದರ ಸಂಪನ್ಮೂಲಗಳಿಗೆ ಹೊಸ ಹೊಸ ಸವಾಲುಗಳನ್ನು ಒಡುತ್ತಿದೆ. ಪ್ರಯಾಣ ನಿರ್ಬಂಧಗಳು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಸಹಿತ ಅದರ ಮುಂಜಾಗ್ರತೆಗಳಿಗೆ ಕೊನೆಯೇ ಇಲ್ಲವಾಗಿದ್ದು, ಆರೋಗ್ಯ ಸೇವೆಯ ಉಪಯೋಗ ಪಡೆದುಕೊಳ್ಳಬೇಕಾದವರು ಶೀಘ್ರವಾಗಿ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಲು ಅಡ್ಡಿ ಉಂಟು ಮಾಡಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರಿಗೆ ಕೂಡ ಈ ಬದಲಾವಣೆಯಿಂದಾಗಿ ಸಮಸ್ಯೆಗಳಾಗಿವೆ.

ಪ್ರಸ್ತುತ ಜಾಗತಿಕ ಆರೋಗ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಅನುಸರಿಸಲಾದ ಒಂದು ಕ್ರಮವೆಂದರೆ ಸಣ್ಣ ಪ್ರಮಾಣದ ಆರೋಗ್ಯ ಸಮಸ್ಯೆಗಳು, ಅನಾರೋಗ್ಯಗಳಿಗೆ ವೈದ್ಯಕೀಯ ಸಲಹೆ ಪಡೆದು ಬಗೆಹರಿಸಿಕೊಳ್ಳುವುದಕ್ಕೆ ಇ-ಸಮಾಲೋಚನೆಯ ಮೊರೆ ಹೋದುದು. ಖಂಡಿತವಾಗಿ ಈ ವಿಧಾನವು ಕೋವಿಡ್‌ ಪ್ರಕರಣಗಳ ಹೆಚ್ಚಳ ಮತ್ತು ಆರೈಕೆಯ ಅಗತ್ಯಗಳ ನಡುವೆ ಇರುವ ಕಂದರವನ್ನು ಕಡಿಮೆ ಮಾಡಲು ಸಹಾಯ ಮಾಡಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳ ವಿಚಾರದಲ್ಲಿ ಇತರ ಅನಾರೋಗ್ಯಗಳಿಗೆ ಹೋಲಿಸಿದರೆ ದೈಹಿಕ ಪರೀಕ್ಷೆಗಳು ಕಡಿಮೆ ಅಗತ್ಯ ಮತ್ತು ನಿರ್ಣಾಯಕವಾಗಿರುವುದರಿಂದ “ಇ-ಮಾನಸಿಕ ಆರೋಗ್ಯ’ ಸೊಲ್ಯೂಶನ್‌ ಆರೋಗ್ಯ ಸೇವೆಯನ್ನು ಒದಗಿಸುವವರಿಗೂ ಪಡೆಯುವವರಿಗೂ ಸಮಾನವಾಗಿ ಪ್ರಯೋಜನಕಾರಿಯಾಗಿದೆ.

ಈಗ ಕೋವಿಡ್‌-19 ಸಾಂಕ್ರಾಮಿಕದ ಹಾವಳಿಯು ಡಿಜಿಟಲ್‌ ಆರೋಗ್ಯ ಸೇವೆಯ ಬಾಗಿಲುಗಳನ್ನು ತೆರೆದುಕೊಟ್ಟಿದೆ. ಸಾಂಕ್ರಾಮಿಕ ಪರಿಸ್ಥಿತಿಯು ತಿಳಿಯಾದ ಬಳಿಕವೂ ಕೂಡ ಭಾರತದ ಗ್ರಾಮೀಣ ಪ್ರದೇಶಗಳಿಗೆ ಮಾನಸಿಕ ಆರೋಗ್ಯ ಸೇವೆಗಳನ್ನು ಪಸರಿಸುವುದಕ್ಕೆ ತಂತ್ರಜ್ಞಾನದ ಸಹಾಯವನ್ನು ಪಡೆಯಲು ಸಾಧ್ಯ ಎನ್ನುವುದನ್ನು ಇದು ತೋರಿಸಿಕೊಟ್ಟಿದೆ.

 

ಡಾ| ಕೃತಿಶ್ರೀ ಸೋಮಣ್ಣ

ಕನ್ಸಲ್ಟಂಟ್‌ ಸೈಕಿಯಾಟ್ರಿಸ್ಟ್‌,

ಕೆಎಂಸಿ ಆಸ್ಪತ್ರೆ, ಮಂಗಳೂರು

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.