ಇಲಿ, ಹೆಗ್ಗಣ ಕಾಟಕ್ಕೆ ಮದ್ದು


Team Udayavani, Apr 29, 2019, 6:30 AM IST

Isiri–Ili-726

ಇಲಿ ಮತ್ತು ಹೆಗ್ಗಣಗಳು ಮೂಲತಃ ಅನುಮಾನದ ಪ್ರಾಣಿಗಳು. ಉಗ್ರ ವಾಸನೆಯ ವಿಷಗಳನ್ನು ಬೇಗ ಪತ್ತೆಹಚ್ಚಿ ದೂರ ಉಳಿಯುತ್ತವೆ. ಆದ್ದರಿಂದಲೇ ಇಲಿಗಳನ್ನು ಕೊಲ್ಲಲು ಬಳಸುವ ರಾಸಾಯನಿಕ ವಿಷಗಳು ಅಷ್ಟೊಂದು ಯಶಸ್ವಿಯಾಗುವುದಿಲ್ಲ. ಇದರ ಬದಲಿಗೆ, ಗೊಬ್ಬರಗಿಡ ಬಳಸಿ, ಇಲಿ-ಹೆಗ್ಗಣಗಳನ್ನು ಸಮರ್ಥವಾಗಿ ನಿಯಂತ್ರಿಸಬಹುದು. ಕೃಷಿಕರೆಲ್ಲರಿಗೂ ಗ್ಲಿರಿಸೀಡಿಯಾ ಸೊಪ್ಪು ಪರಿಚಿತ. ಇದನ್ನು ಗೊಬ್ಬರದ ಗಿಡ ಎಂದು ಕರೆಯುತ್ತಾರೆ.

ವಾಸ್ತವವಾಗಿ ಈ ಸಸ್ಯವನ್ನು ಗ್ರೀಕ್‌ನ ಜನರು ಇಲಿ- ಹೆಗ್ಗಣಗಳನ್ನು ನಿಯಂತ್ರಿಸಲು ಬಳಸುತ್ತಿದ್ದರು. ಗ್ರೀಕ್‌ ಭಾಷೆಯಲ್ಲಿ ಗ್ಲಿರಿ ಎಂದರೆ ಇಲಿ ಎಂದರ್ಥ. ನಿರ್ದಿಷ್ಟ ಪ್ರಮಾಣದ ಅನ್ನ ಮತ್ತು ಗ್ಲಿರಿಸೀಡಿಯಾ ಎಲೆಗಳನ್ನು ಮಿಶ್ರಣ ಮಾಡಿ, ನಾಲ್ಕುದಿನಗಳ ಕಾಲ ಪಾತ್ರೆಯಲ್ಲಿ ಭದ್ರವಾಗಿ ಮುಚ್ಚಿಡಬೇಕು. ಸೊಪ್ಪನ್ನು ಚೆನ್ನಾಗಿ ಅರೆದು ಕೂಡ ಅನ್ನದಲ್ಲಿ ಬೆರೆಸಬಹುದು. ಒಂದೆರಡು ದಿನಗಳಲ್ಲಿಯೇ ಇದರಿಂದ ತೀವ್ರ ಹಳಸಲು ವಾಸನೆ ಬರಲು ಪ್ರಾರಂಭವಾಗುತ್ತದೆ. ನಾಲ್ಕುದಿನಗಳ ಬಳಿಕ ಈ ಮಿಶ್ರಣವನ್ನು ಉಂಡೆಗಳನ್ನಾಗಿ ಮಾಡಿ ಇಲಿ ಹೆಗ್ಗಣಗಳ ಬಿಲಗಳ ಬಳಿ ಅಥವಾ ಅವುಗಳು ಓಡಾಡುವ ದಾರಿಯಲ್ಲಿ ಇಡಬೇಕು.

ಹಳಸಲು ಅನ್ನದ ವಾಸನೆಗೆ ಆಕರ್ಷಿತವಾಗುವ ಇಲಿ ಹೆಗ್ಗಣಗಳು ಖಂಡಿತವಾಗಿಯೂ ಉಂಡೆಗಳನ್ನು ತಿನ್ನುತ್ತವೆ. ಬಳಿಕ ಅಸ್ವಸ್ಥಗೊಂಡು ಸಾವನ್ನಪ್ಪುತ್ತವೆ. ಗ್ಲಿರಿಸೀಡಿಯಾ ಸೊಪ್ಪು ಮಿಶ್ರಿತ ಅನ್ನದ ಉಂಡೆಯನ್ನು ಇಲಿ ಹೆಗ್ಗಣ ತಿಂದ ಲಕ್ಷಣಗಳಿದ್ದು, ಸತ್ತ ಇಲಿಗಳು ಕಾಣಿಸದಿದ್ದರೆ ತುಸು ದೂರ ಸಾಗಿಸುತ್ತಿರುತ್ತವೆ. ಹಲವು ಬಾರಿ ಪಾಷಾಣ ಬೆರೆಸಿದ ಆಹಾರ ತಿಂದ ಇಲಿ – ಹೆಗ್ಗಣಗಳು ಬದುಕಿ ಉಳಿಯುವುದುಂಟು. ಹೇಗೆಂದರೆ, ಚೆನ್ನಾಗಿ ನೀರು ಕುಡಿಯುತ್ತವೆ. ಇದರಿಂದ ಅವುಗಳ ಜೀರ್ಣಾಂಗದ ಮೇಲೆ ವಿಷ ಪರಿಣಾಮಕಾರಿಯಾಗುವುದಿಲ್ಲ.

ಆದರೆ ಗ್ಲಿರಿಸೀಡಿಯಾ ಸೇವಿಸಿದ ಇಲಿ, ಹೆಗ್ಗಣಗಳು ನೀರು ಕುಡಿದರೆ ಮತ್ತಷ್ಟು ಬೇಗ ಸಾಯುತ್ತವೆ. ಏಕೆಂದರೆ, ಗ್ಲಿಸೀಡಿಯಾ ಅಷ್ಟು ಪರಿಣಾಮಕಾರಿ. ನಾಯಿ, ಕಾಗೆ ಮತ್ತಿತರ ಇನ್ನಿತರ ಪ್ರಾಣಿ-ಪಕ್ಷಿಗಳು ಆಕಸ್ಮಿಕವಾಗಿ ಈ ಉಂಡೆಗಳನ್ನು ತಿಂದರೂ ಸಾಯುವುದಿಲ್ಲ. ಇದೊಂದು ಬಹು ಅಚ್ಚರಿಯ ವಿಷಯ. ಗ್ಲಿರಿಸೀಡಿಯಾ ಮಿಶ್ರಿತ ಆಹಾರ ಸೇವಿಸುವುದರಿಂದ ಸಾಯುವ ಜೀವಿಗಳೆಂದರೆ ಇಲಿ-ಹೆಗ್ಗಣ, ಅಳಿಲುಗಳು ಮಾತ್ರ. ಇದು ಪ್ರಕೃತಿಯ ಅನೇಕ ವಿಸ್ಮಯಗಳಲ್ಲಿ ಒಂದು. ಗ್ರೀಕ್‌ ದೇಶದ ಜನ ಇದನ್ನು ಅರಿತು ಬಳಸುತ್ತಾ ಬಂದಿದ್ದಾರೆ.

ನೆನಪಿಡಿ: ಗ್ಲಿರಿಸೀಡಿಯಾ ಸೊಪ್ಪು ಮತ್ತು ಅನ್ನ ನಿರ್ದಿಷ್ಟ ಪ್ರಮಾಣದಲ್ಲಿ ಇರಬೇಕು. ಇದರ ಅಳತೆಯಲ್ಲಿ ವ್ಯತ್ಯಾಸವಾದರೂ ಪರಿಣಾಮವಾಗುವುದಿಲ್ಲ ಎಂದು ಹಿರಿಯ ಕೃಷಿವಿಜ್ಞಾನಿ ವಿ.ಪಿ. ಹೆಗ್ಡೆ ಹೇಳುತ್ತಾರೆ.

— ಕುಮಾರ ರೈತ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.