ಒಂದು ಮುಂಜಾನೆ, ಹಂಗೆ ಸುಮ್ಮನೆ…

ಕೈ ಹಿಡಿದು ಬಸ್ಸು ಹತ್ತಿಸು ಎನ್ನನು...

Team Udayavani, Apr 16, 2019, 6:00 AM IST

q-4

ಎಲ್ಲರೂ ಓಡಿ ಹೋಗಿ ಬಸ್‌ಗೆ ಕೈ ಮಾಡಿ ನಿಂತೆವು. ಡ್ರೈವರ್‌, ಬಸ್ಸನ್ನೇನೋ ನಿಲ್ಲಿಸಿದ. ಆದರೆ, ಅದರಲ್ಲಿ ಒಂದು ಸಣ್ಣ ನೊಣ ಕೂಡ ಹೋಗಲು ಜಾಗ ಇಲ್ಲದಷ್ಟು ಜನ. ನನ್ನ ಫ್ರೆಂಡ್‌ ಹೇಗೋ ಮಾಡಿ ಬಸ್‌ ಹತ್ತಿಕೊಂಡಿದ್ದಳು. ನಾನು ಇನ್ನೂ ಕೆಳಗೆಯೇ ಇದ್ದೆ. ಬಸ್‌ ಹೊರಟಿತು… ಆಗ ಬಾಗಿಲಲ್ಲಿ ನಿಂತ ಆ ಹುಡುಗ…

ಯಾಕೋ ಈ ಬಿರು ಬೇಸಿಗೆಯ ಹೊತ್ತಿನಲ್ಲಿ ಮಳೆಗಾಲದ ನೆನಪೊಂದು ಎದೆಯನ್ನು ತಂಪು ಮಾಡಿತು. ಅವತ್ತು ಇನ್ನೂ ಸೂರ್ಯ ಹುಟ್ಟಿರಲಿಲ್ಲ. ನಾನು ಏಳುವುದು ಲೇಟಾಗಿತ್ತು. ಎದ್ದು ನೋಡಿದರೆ, ಮನೆಯ ಎದುರಿನ ಮೆಟ್ಟಿಲಿನವರೆಗೆ ಮಳೆಯ ನೀರು! ಬಾಗಿಲಿನಲ್ಲಿ ನಿಂತು ನೋಡುತ್ತಿದ್ದರೆ ಮನೆಯ ಮುಂದೆ ಒಂದು ಸ್ವಿಮ್ಮಿಂಗ್‌ ಫ‌ೂಲ್‌ ಇದೆಯೇನೊ ಅನ್ನಿಸ್ತಿತ್ತು. ಅಂದು ಕಾಲೇಜಿಗೆ ಹೋಗಲೇಬೇಕಿತ್ತು. ಫ‌ಸ್ಟ್‌ ಸೆಮ್‌ನ ಇಂಟರ್ನಲ್ಸ್‌ನ ಮೊದಲನೆಯ ಎಕ್ಸಾಮ್‌ ಅಂದು. ಆ ದಿನ ಯಾರು ಆ ಮಳೆಯಲ್ಲಿ ಹೊರಗೆ ಬೀಳ್ತಾರೆ? ಬೆಚ್ಚಗೆ ಮೂರು- ನಾಲ್ಕು ಕಂಬಳಿ ಹೊದ್ದು ಬಿಸಿಬಿಸಿ ಕಾಫಿಯ ಜೊತೆ ಟಿ.ವಿ.ಯಲ್ಲಿ ಉದಯ ಮ್ಯೂಸಿಕ್‌ ನೋಡ್ತಾ ಕುಳಿತುಕೊಳ್ಳೋಣ ಅನ್ನಿಸಿತ್ತು. ಆದರೆ, ಏನು ಮಾಡೋದು?… ಎಕ್ಸಾಮ್‌ ಇದ್ದಿದ್ದರಿಂದ ಕಾಲೇಜಿಗೆ ಹೋಗಲೇಬೇಕಿತ್ತು. ಬೇಗ ಬೇಗನೆ ಸ್ನಾನ ಮುಗಿಸಿ, ತಿಂಡಿ ತಿಂದು, ಯೂನಿಫಾರಂ ಹಾಕ್ಕೊಂಡು, ಬ್ಯಾಗ್‌ ಧರಿಸಿ ಬಾಗಿಲಲ್ಲಿ ಬಂದು ನಿಂತು, “ದೇವ್ರೇ, ಇವತ್ತು ಕಾಲೇಜಿಗೆ ರಜೆ ಕೊಡ್ಲಪ್ಪ !’ ಎಂದು ಜೋರಾಗಿ ಕೂಗಿದೆ.

ಅಷ್ಟರಲ್ಲಿ ಅಪ್ಪ ಒಳಗಿನಿಂದ ಓಡಿ ಬಂದು ಇದ್ದಕ್ಕಿದ್ದಂತೆ, “ಏನಾಯಿತೆ ನಿಂಗೆ? ಅದ್ಯಾಕೆ ಆ ಥರ ಕೂಗ್ತಿಯೆ? ಸುಮ್ನೆ ಛತ್ರಿ ಹಿಡಿದು ಹೊರಡು ಕಾಲೇಜಿಗೆ. ನೀ ಹೇಳಿದೆ ಅಂತ ಏನ್‌ ದೇವ್ರು ನಿನ್‌ ಬಗ್ಗೆ ಕರುಣೆ ತೋರ್ಸಿ ರಜೆ ಕೊಟ್ಟುಬಿಡ್ತಾನಾ? ನಿಂತ್ಕೊಂಡು ಒದರುತ್ತಾ ಇದ್ರೆ ಬಸ್‌ ಮಿಸ್‌ ಆಗಿ ಎಕ್ಸಾಮ್‌ ತಪ್ಪಿ ಹೋಗುತ್ತೆ. ಹೊರಡು ಬೇಗ’ ಎಂದು ಗದರಿದರು. ಬೆಳ್‌ ಬೆಳಗ್ಗೆ ಈ ಮಳೆಯಲ್ಲಿ ನಡೆದುಕೊಂಡು ಹೋಗ್ಬೇಕಲ್ವಾ? ಎಂಬ ಯೋಚನೆ ಒಂದು ಕಡೆಯಾದ್ರೆ ಈ ಚಳಿಯಲ್ಲಿ ಅಪ್ಪನ ಸುಪ್ರಭಾತದ ಜೊತೆ ಊರಿನ ಬಸ್‌ಸ್ಟಾಪ್‌ ತಲುಪಿದೆ.

ಬಸ್‌ಸ್ಟಾಪ್‌ ನಮ್ಮ ಕಡೆಯಿಂದ ಕಾಲೇಜಿಗೆ ಹೋಗುವವರಿಂದ ತುಂಬಿತ್ತು. ಇದೇಕೆ ಇಷ್ಟು ಜನ ನಿಂತಿದ್ದಾರೆ ಎಂದು ಆಲೋಚಿಸುತ್ತಾ, ನನ್ನ ಫ್ರೆಂಡ್‌ ಬಳಿ, “ಯಾಕೆ ಇಷ್ಟು ಜನಾನೇ?’ ಎಂದಾಗ, “ಬೆಳಗ್ಗಿನ ಫ‌ಸ್ಟ್ ಬಸ್‌ ನಿಲ್ಲಿಸಿಲ್ವಂತೆ ಕಣೇ. ಅದಕ್ಕೆ ಇಷ್ಟು ಜನ ಇದಾರೆ’ ಅಂದಳು. “ಇವತ್ತು ಎಕ್ಸಾಮ್‌ಗೆ ಹೋದ್ಹಂಗೆ ಬಿಡೇ…’ ಅಂತ ಹೇಳುತ್ತಿರುವಾಗಲೇ ಬಸ್ಸು ಬರುತ್ತಿರುವ ಶಬ್ದ ಕೇಳಿಸಿತು. ಎಲ್ಲರೂ ಓಡಿ ಹೋಗಿ ಬಸ್‌ಗೆ ಕೈ ಮಾಡಿ ನಿಂತೆವು. ಡ್ರೈವರ್‌, ಬಸ್ಸನ್ನೇನೋ ನಿಲ್ಲಿಸಿದ. ಆದರೆ, ಅದರಲ್ಲಿ ಒಂದು ಸಣ್ಣ ನೊಣ ಕೂಡ ಹೋಗಲು ಜಾಗ ಇಲ್ಲದಷ್ಟು ಜನ. ಎಲ್ಲರೂ ಮುಂದೊಗಿ ಮುಂದೊಗಿ ಅಂತ ಬಸ್ಸಿನಲ್ಲಿದ್ದ ಜನರನ್ನು ಕಂಡಕ್ಟರ್‌ ಮುಂದೆ ಕಳುಹಿಸಿದ. ನನ್ನ ಫ್ರೆಂಡ್‌ ಹೇಗೊ ಮಾಡಿ ಬಸ್‌ ಹತ್ತಿಕೊಂಡಿದ್ದಳು.

ಬಸ್‌ ಹತ್ತಿದ ಅವಳು ಅಲ್ಲಿಂದ, “ಏಯ್‌ ಶ್ರುತಿ, ಹೇಗಾದರೂ ಹತ್ತೆ ಬಸ್ನಾ. ಇವತ್ತು ಎಕ್ಸಾಮ್‌ ಕಣೆ’ ಎಂದು ಕೂಗುತ್ತಿದ್ದಳು. ನಾನು ಒಂದು ಕಾಲನ್ನು ಬಸ್‌ನಲ್ಲಿ ಇಟ್ಟಿದ್ದೆ. ಆದರೆ, ಕೈಯಲ್ಲಿ ಹಿಡಿದುಕೊಳ್ಳಲು ಬಾಗಿಲಿನ ಹಿಡಿಕೆ ಸಿಗುತ್ತಿರಲಿಲ್ಲ. ಅಷ್ಟರಲ್ಲೇ ಕಂಡಕ್ಟರ್‌ ರೈಟ್‌ ಅಂತ ಸೀಟಿ ಊದೇಬಿಟ್ಟ. ಅದೇ ಸಮಯಕ್ಕೆ ಯಾರೋ ಒಬ್ಬ ಬಾಗಿಲಲ್ಲೇ ನಿಂತಿದ್ದ. ಹುಡುಗ ನನ್ನ ಕೈ ಹಿಡಿದು ಬಸ್ಸಿನೊಳಗೆ ಕರೆದುಕೊಂಡ. ಆ ರಶ್‌Ïನಲ್ಲಿ ಅವನ ಮುಖ ನೋಡಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಬಾಗಿಲ ಬಳಿ ನಿಂತಿರುವವರೆಲ್ಲ ಗಂಡು ಹೈಕಳೇ ಆಗಿದ್ದರು. ಹೆಣ್ಣುಮಕ್ಕಳೆಲ್ಲ ಮುಂದೆ ನಿಂತಿದ್ದರು.

ಬಾಗಿಲ ಬಳಿ ಹೇಗೋ ಬಂದು ಕೈಯಲ್ಲಿ ಬಸ್ಸಿನ ಬಾಗಿಲನ್ನು ಗಟ್ಟಿಯಾಗಿ ಹಿಡಿದು ನಿಂತಿದ್ದೆ. ನನ್ನ ಹಿಂದೆ ಗಂಡು ಹೈಕಳ ಗ್ಯಾಂಗೇ ನಿಂತಿತ್ತು. ಅವರು ಚುಡಾಯಿಸ್ತಾ ನಿಂತಿದ್ದರು. ಇದನ್ನೆಲ್ಲ ಕೇಳಿ ಒಂದು ಕಡೆ ಸಿಟ್ಟು ಬರುತ್ತಿದ್ದರೆ, ಇನ್ನೊಂದು ಕಡೆ ಕೈಹಿಡಿದು ಬಸ್‌ ಹತ್ತಿಸಿದ್ರಲ್ಲ ಎಂಬ ಉಪಕಾರ ಭಾವ. ಅದರಲ್ಲೂ ಎಕ್ಸಾಮ್‌ ದಿನ ಬೇರೆ. ಅದಕ್ಕಾಗಿ ಆ ಕಮೆಂಟ್ಸ್‌ಗಳನ್ನು ಸಹಿಸಿಕೊಂಡು ನಿಂತಿದ್ದೆ. ಅದರಲ್ಲೂ ನನ್ನ ಕೈ ಹಿಡಿದು ಮೇಲಕ್ಕೆತ್ತಿದವನು ಯಾರು? ಅವನಿಗೆ ಒಂದು ಥ್ಯಾಂಕ್ಸ್‌ ಆದ್ರೂ ಹೇಳಬೇಕಲ್ಲವೆ ಎಂದು ಮನಸ್ಸಿನಲ್ಲಿಯೇ ಗುನುಗುತ್ತಿದ್ದೆ.

ಅವರು ಯಾರೋ ಏನೋ? ಮೊದಲು ನಾನು ಎಲ್ಲೂ ಅವರನ್ನು ನೋಡಿರಲಿಲ್ಲ. ಅವರು ಮಾಡಿದ ಸಹಾಯಕ್ಕೆ ನಾನು ಅಂದು ಎಕ್ಸಾಮ್‌ ಬರೆದೆ. ಸಿಂಪಲ್‌ ಆಗೊಂದು ಥ್ಯಾಂಕ್ಸೂ ಹೇಳಿದ್ದೆ.

ಶ್ರುತಿ ಹೆಗಡೆ, ಉಜಿರೆ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.