ಪರೀಕ್ಷೆ .. ಐ ಲವ್‌ ಯೂ!


Team Udayavani, Mar 14, 2017, 3:50 AM IST

14-JOSH-10.jpg

ಪರೀಕ್ಷೆ ಎಂದರೆ ಭಯ, ಆತಂಕ, ಆವೇಗ, ಗಲಿಬಿಲಿ, ಇತ್ಯಾದಿ ಇತ್ಯಾದಿ. ಇದು ಎಲ್ಲರಿಗೂ ಕಾಡುವ ಸಾಮಾನ್ಯ ಸಂಗತಿ. ಈ ಭಯದಿಂದ ಹೊರ ಬಂದು ಪರೀಕ್ಷೆ ಬರೆಯುವುದಾದರೂ ಹೇಗೆ ಎಂಬುದೇ ಈಗ ಬಿಲಿಯನ್‌ ಡಾಲರ್‌ ಪ್ರಶ್ನೆ! ಕೆಲವರಿರುತ್ತಾರೆ ಬಿಡಿ, ಅವರೆಲ್ಲರೂ ಜೀನಿಯಸ್ಸುಗಳು. ನಾನು ಮಾತನಾಡುತಿರುವುದು ಲಾಸ್ಟ್… ಬೆಂಚಿನವರ ಬಗ್ಗೆ.

ಯಾವುದೇ ವಿಷಯದ ಬಗ್ಗೆ ನಮಗೆ ಅರಿವಿರದಿದ್ದಾಗ ಭಯ ಸಾಮಾನ್ಯ. ರಸ್ತೆಯೇ ಇಲ್ಲದ ಊರಿಗೆ ಹೊರಟಾಗ ಅಳುಕು ಕಾಡುತ್ತದೆ, ಹೋಗಿ ಬಂದು, ಹೋಗಿ ಬಂದು ಅಭ್ಯಾಸವಾಗಿಬಿಟ್ಟರೆ ಆನೆ ನಡೆದದ್ದೇ ದಾರಿ ಎಂಬಂತೆ ಸಣ್ಣ ಕಾಲುದಾರಿಯೇ ಮುಂದೊಂದು ದಿನ ಹೆ¨ªಾರಿಯಾಗುತ್ತದೆ.

ಪರೀಕ್ಷೆ ಎದುರಿಸಲು ಸುಲಭೋಪಾಯವೆಂದರೆ ಆರಂಭದಿಂದ ಓದಲು ಶುರು ಮಾಡುವುದು. ಸರಿಯಾದ ವೇಳಾಪಟ್ಟಿಯನ್ನು ಅನುಸರಿಸುವುದು. ತರಗತಿಗೆ ಗೈರಾಗದಿರುವುದು. ಹೆಚ್ಚೆಚ್ಚು ಬಾರಿ ಪುನರಾವರ್ತನೆ ಮಾಡುವುದು. ಅಣಕು ಪರೀಕ್ಷೆಗಳಲ್ಲಿ ಭಾಗವಹಿಸುವುದು. ಇದಕ್ಕೆ ಹಿಂದಿನ ಪ್ರಶ್ನೆಪತ್ರಿಕೆಗಳನ್ನು ಪರಾಮರ್ಶಿಸುವುದು. ಹಿರಿಯ ವಿದ್ಯಾರ್ಥಿಗಳ ಸಲಹೆ- ಮಾರ್ಗದರ್ಶನ
ಪಡೆಯುವುದು. ಮೊಬೈಲ… ಬಳಕೆಗೆ ಸ್ವಯಂ ನಿಷೇಧ ವಿಧಿಸುವುದು. ಲೈಬ್ರರಿಯಲ್ಲಿ ಸೆರೆಯಾಗುವುದು. ವಿಷಯ ಜ್ಞಾನವನ್ನು ವೃದ್ದಿಸಿಕೊಂಡು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವುದು. ಒಂದೇ ಮಾತಿನಲ್ಲಿ ಹೇಳಬೇಕೆಂದರೆ ಸ್ವಯಂ ಶಿಸ್ತು ಅಳವಡಿಸಿಕೊಳ್ಳುವುದು. ಏಕೆಂದರೆ “ಹೇಳಿಕೊಟ್ಟ ಬುದ್ದಿ; ಕಟ್ಟಿ ಕೊಟ್ಟ ಬುತ್ತಿ’ ಎಲ್ಲಿಯವರೆಗೆ ಬಂದಾವು ಅಲ್ಲವೇ?!

ಈ ಎಲ್ಲಾ ಸಂಗತಿಗಳು ನಿಮಗೆ ಗೊತ್ತಿಲ್ಲದವೇನಲ್ಲ. ಆದರೆ ಅವುಗಳನ್ನು ಅನುಸರಿಸದಿರುವುದೇ ನಾವು ಮಾಡುವ ಪರಮ ಪಾಪದ ಕೆಲಸ. ಇಲ್ಲಿ ಮುಖ್ಯವಾಗಿ ಒಂದು ಮಾತನ್ನು ಚೆನ್ನಾಗಿ ನೆನಪಿಡಿ. ನಾವು ಆಯ್ದುಕೊಂಡ ಕೋರ್ಸ್‌ ಬಗ್ಗೆ ನಮಗೆ ಅಪಾರ ಪ್ರೀತಿ ಇರಬೇಕು. ಎಷ್ಟೆಂದರೆ ಹರೆಯದಲ್ಲಿ ಹುಡುಗಿಯೊಬ್ಬಳೆಡೆಗೆ ಇರುವಷ್ಟು (ಹುಡುಗಿಯರಿಗೂ ಈ ಮಾತು ಅನ್ವಯಿಸುತ್ತದೆ).
ನಾವು ನಮ್ಮ ಕೋರ್ಸನ್ನು ಪ್ರೀತಿಸಬೇಕು. ಅದನ್ನು ಚೆನ್ನಾಗಿ ಅರಿಯಬೇಕು. ನಮ್ಮ ಕೋರ್ಶೇ ನಮಗೆ ಸರ್ವಸ್ವ. ಜಗತ್ತಿನಲ್ಲಿ ನಮ್ಮ ಅಧ್ಯಯನದ ಸಂಗತಿ ಬಿಟ್ಟರೆ ಬೇರೇನೂ ಇಲ್ಲವೆಂದು ತೀರ್ಮಾನಿಸಬೇಕು. “ನನ್ನ ಗುರಿ ತಲುಪಲು ನಾನೇ ಹೋರಾಡುತ್ತೇನೆ’ ಎಂದು ಅಂದುಕೊಂಡ ಘಳಿಗೆಯಲ್ಲಿ ಅಡಗಿದೆ ನೋಡಿ ಯಶಸ್ಸಿನ ಸೀಕ್ರೆಟ್‌. ಹೇಗೆ ಅರ್ಜುನನಿಗೆ ಮರದ ಮೇಲೆ ಕುಳಿತ ಪಕ್ಷಿಯ ಕಣ್ಣಿನ ಹೊರತು ಬೇರೇನೂ ಕಾಣಿಸಲಿಲ್ಲವೋ, ಹಾಗೆಯೇ ನಮಗೆ ಪರೀಕ್ಷೆಯ ಪ್ರಶ್ನೆಗಳಿಗೆ ಉತ್ತರದ ಹೊರತು ಬೇರೇನೂ 
ಕಾಣದಂತಿರಬೇಕು. ಇವತ್ತಿನ ಹೈ ಸ್ಪೀಡ್‌ ಕಾಂಪಿಟೇಶನ್‌ ಯುಗದಲ್ಲಿ, ನೀನು ಅಂದ್ರೆ ನಿಮ್ಮಪ್ಪಅನ್ನುವವರೇ ಹೆಚ್ಚಾಗಿರುವಾಗ ನಾವು ಬೆಪ್ಪರಾಗುವುದು ತಪ್ಪಲ್ಲವೇ?! ಇಷ್ಟೆಲ್ಲಾ ಸಿದ್ದತೆ ಮಾಡಿಕೊಂಡ ಮೇಲೂ ಅಫ್ಟರ್‌ಆಲ… ಪರೀಕ್ಷೆಗೆ ಹೆದರಬೇಕೆ? ಜೋರಾಗಿ ಒಮ್ಮೆ ಪ್ರಳಯವಾಗುವಂತೆ ಕೂಗಿ: “ಪರೀಕ್ಷೆ… ಐ ಲವ್‌ ಯೂ!’ ಎದೆಯೊಳಗಿನ ಅಳುಕನ್ನು ಅಳಿಸಿಹಾಕಿ “ಜೋಶ್‌’ನಿಂದ ಪರೀಕ್ಷೆ ಬರೆಯಿರಿ. ಆಲ…ದ ಬೆಸ್ಟ್….

ಎಡೆಯೂರು ಸೋಮಣ್ಣ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.