ಬಿಳಿ ಸಾಹೇಬನ ಬೇಂದ್ರೆ

ಸಾಧನಕೇರಿಗೆ ಬಂದ ವಿದೇಶಿಗನ ಕಥೆ

Team Udayavani, Mar 14, 2020, 6:11 AM IST

bili-saheb

ಇತ್ತೀಚೆಗೆ ಯೂಟ್ಯೂಬ್‌ನ ಬುಟ್ಟಿಯಲ್ಲಿ ಬೇಂದ್ರೆಯ ಹಾಡೊಂದು, ಹೊಸ ಗತ್ತು ತಳೆದು, ಸದ್ದು ಮಾಡುತಿದೆ. “ಬಾರೋ ಸಾಧನ ಕೇರಿಗೆ…’ ಎನ್ನುತ್ತಾ ರಘು ದೀಕ್ಷಿತ್‌ ಹಾಡುತ್ತಿದ್ದರೆ, ಪಕ್ಕದಲ್ಲಿ ಕುಳಿತ ಅಮೆರಿಕದ ಡ್ರಿಸನ್‌, ಬೇಂದ್ರೆ ನನ್ನ ಪಕ್ಕದ ಮನೆಯವರು ಎನ್ನುವ ಆಪ್ತತೆಯಲ್ಲಿ ವಯೋಲಿನ್‌ ನುಡಿಸುತ್ತಿದ್ದಾರೆ…

ಬಾರೋ ಸಾಧನ ಕೇರಿಗೆ, ಮರಳಿ ನಿನ್ನೀ ಊರಿಗೇ… ಕೆಳಗಡೆ ರೂಮಿನಲ್ಲಿ ರಘು ದೀಕ್ಷಿತ್‌ ದ.ರಾ. ಬೇಂದ್ರೆಯವರ ಈ ಹಾಡನ್ನು ಹಾಡುತ್ತಿದ್ದರು. ತಾರಕಸ್ಥಾಯಿಯಿಂದ ಇಳಿದು ಮಂದ್ರ ಮುಟ್ಟೋ ಹೊತ್ತಿಗೆ, ಮೇಲಿನ ರೂಮಿನಲ್ಲಿದ್ದ ಅಮೆರಿಕದ ವಯೋಲಿನ್‌ ವಾದಕ ಕೆ.ಸಿ. ಡ್ರಿಸನ್‌ ಮೆಲ್ಲಗೆ ಇಳಿದುಬಂದರು. “ರಘು, ವಾಟ್‌ ಈಸ್‌ ದಿಸ್‌?’, ಕೇಳಿದರು ಬೆರಗಿನಿಂದ. ರಘು, “ಮತ್ತೆ ಬಾರೋ ಸಾಧನ ಕೇರಿಗೆ’ ಅಂತ ಹಾಡಿದರು.

ವಯೋಲಿನ್‌ ವಾದಕರಿಗೆ ಕನ್ನಡ ತಿಳಿಯದೇ ಇರುವುದರಿಂದ ದ.ರಾ. ಬೇಂದ್ರೆ ಸಾಹಿತ್ಯದ ಸತ್ವವನ್ನು ಇಂಗ್ಲಿಷಿನಲ್ಲಿ ವಿವರಿಸಿ, “ನೀನು ಎಲ್ಲೇ ಇದ್ದರೂ, ಏನೇ ಮಾಡುತ್ತಿದ್ದರೂ ಮರಳಿ ಊರಿಗೆ ಬಾ’ ಅಂತ ಅಂತೆಲ್ಲ ಹೇಳಿದರು. ಬೇಂದ್ರೆ ಅವರ ಗೀತೆಯ ಸಾರ ಆ ಪಿಟೀಲು ವಾದಕನ ಹೃದಯ ಮೀಟಿತು. ಅದಕ್ಕೆ ಕಾರಣ; ಆತ ವಿಶ್ವ ಪರ್ಯಟನೆ ಮಾಡುವ ಉದ್ದೇಶದಿಂದ ತನ್ನ ಊರಾದ ಅಮೆರಿಕ ಬಿಟ್ಟು ವರ್ಷವೇ ಕಳೆದಿತ್ತು.

ಭಾರತದಲ್ಲಿ ಬಂಗಾಳಿ ಸಂಗೀತದ ಬಗ್ಗೆ ಸಂಶೋಧನೆ ಮುಗಿಸಿ, ಮೈಸೂರು, ಬೆಂಗಳೂರ ಕಲಾವಿದರನ್ನು ಭೇಟಿಯಾಗಲು ರಘು ದೀಕ್ಷಿತರ ಮನೆಯಲ್ಲಿ ತಂಗಿದ್ದರು. ರಘು ಹಾಡುತ್ತಿದ್ದ ರೀತಿ ಕೇಳಿ, ಕೈಯಲ್ಲಿ ಪಿಟೀಲು ಹಿಡಿದು ಬಂದರು. ಇಡೀ ಹಾಡಿನ ಅರ್ಥ ಮತ್ತೆ ಕೇಳಿಸಿಕೊಂಡು. ಪಿಟೀಲು ನುಡಿಸಲು ಕೂತರು. ಅವರದು ಜಾಸ್‌ ಮ್ಯೂಸಿಕ್‌. ನಮ್ಮ ಸಂಗೀತ ಪ್ರಕಾರಕ್ಕೂ ಅದಕ್ಕೂ ಹೊಂದುವುದಿಲ್ಲ. ಜುಗಲ್‌ಬಂದಿಯಾದರೆ ಸರಿ. ಆದರೆ, ಇದು ಹಾಗಲ್ಲ.

ಡ್ರಿಸನ್‌ ಅವರು ಸಾಹಿತ್ಯವನ್ನು ಯಾವ ಮಟ್ಟಕ್ಕೆ ಗ್ರಹಿಸಿದ್ದರು ಅಂದರೆ, ಚರಣದಲ್ಲಿ, ಮೋಡಗಳಾಟವೂ ನೆರಳಾಟವೂ, ಅಡವಿ ಹೂಗಳ ಕೂಟವೂ ಅಂತೆಲ್ಲಾ ಬರುತ್ತದೆ. ಆಗ ಮೋಡದ ಸದ್ದನ್ನು, ಅಡವಿ ಹೂಗಳಿಗೆ ದುಂಬಿ ಸದ್ದನ್ನು ನೆನಪಿಸುವಂತೆ ಪಿಟೀಲಿನ ಕಮಾನನ್ನು ಬಳಸಿ (ಬೋಯಿಂಗ್‌) ನುಡಿಸಿದ್ದಾರೆ. “ರೆಕಾರ್ಡ್‌ ಮಾತ್ರ ನಾನು ಮಾಡಿದ್ದು. ಮಿಕ್ಕ ಸೆಟ್ಟಿಂಗ್ಸ್‌ ಎಲ್ಲವೂ ಅವರದೇ. ನಾನು ಗೀತೆಯ ವಿವರಣೆ ಕೊಟ್ಟೆ. ಒಂದೇ ಟೇಕ್‌ಗೆ, ಯಾವುದೇ ರಿಹರ್ಸಲ್‌ ಇಲ್ಲದೇ ಇಡೀ ಹಾಡಿಗೆ ಪಿಟೀಲು ನುಡಿಸಿಯೇ ಬಿಟ್ಟರು. ಸ್ಕೇಲ್‌ ಬಹಳ ಚೆನ್ನಾಗಿ ಫಾಲೋ ಮಾಡಿದ್ದಾರೆ’ ಎನ್ನುತ್ತಾರೆ ದೀಕ್ಷಿತ್‌.

ರಘು ದೀಕ್ಷಿತ್‌ ಜತೆ ಮಾತುಕತೆ
ನೀವು ಬೇಂದ್ರೆ ಅವರ ಹಿಂದೆ ಬಿದ್ದಿದ್ದು ಏಕೆ?
ನಾನು ಧಾರವಾಡಕ್ಕೆ ಯಾವುದೋ ಕಾರ್ಯಕ್ರಮಕ್ಕಾಗಿ ಹೋಗಿದ್ದೆ. ಪ್ರೊ. ಕೆ.ಎಸ್‌. ಶರ್ಮ, ಬೇಂದ್ರೆ ಸಂಗೀತ ಅಂತಲೇ ಮಾಡುತ್ತಿದ್ದರು. ಅದನ್ನು ತೋರಿಸಲು ನನ್ನನ್ನು ಕರೆದುಕೊಂಡು ಹೋಗಿ, ಒಂದಷ್ಟು ಪುಸ್ತಕ ಕೊಟ್ಟರು. ಒಂದು ಸಲ ಹೀಗೆ, ತೆಗೆದು ನೋಡುತ್ತಿದ್ದೆ. “ಬಾರೋ ಸಾಧನ ಕೇರಿಗೆ’ ಪದ್ಯ ಬಹಳ ಇಷ್ಟವಾಯಿತು. ಸುಮ್ಮನೆ ಹಾಗೇ ಟ್ಯೂನ್‌ ಹಾಕಿದೆ. ನಾನು ನಮ್ಮೂರು ಮೈಸೂರಿಗೆ ಹೋಗಬೇಕಾದರೆ ಈ ಹಾಡು ಬಹಳ ಕಾಡೋದು. ಎಲ್ಲರೂ ತಮ್ಮ ತಮ್ಮ ಊರಿಗೆ ಹೋಗಬೇಕಾದರೆ ಇದು ಕಾಡುವ ಹಾಗೆ ಮಾಡಬೇಕಲ್ಲ ಅಂತ ಪೂರ್ತಿ ಟ್ಯೂನ್‌ ಹಾಕಿದೆ.

ನಿಮಗೆ “ಶಿಶುನಾಳ ಶರೀಫ‌ರು’ ಸಿಕ್ಕಿದ್ದು ಹೇಗೆ?
ನಾನು ಗೆಳೆಯರ ಮನೆಗೆ ಊಟಕ್ಕೆ ಅಂತ ಹೋಗಿದ್ದೆ. ಗಡದ್ದಾಗಿ ತಿಂದಿದ್ದರಿಂದ ಕಣ್ಣು ಎಳೆಯಲು ಶುರುವಾಯಿತು. ಹಾಗಾಗಿ, ರೂಮ್‌ನಲ್ಲಿ ಮಲಗೋಣ ಅಂತ ಹೋದೆ. ಅಲ್ಲೊಂದು ಬುಕ್‌ ರ್ಯಾಕ್‌ ಇತ್ತು. ಅದರಲ್ಲಿ ಶಿಶುನಾಳ ಶರೀಫ‌ರ ಪದ್ಯಗಳು ಇದ್ದವು. ಹಾಗೇ ತೆಗೆದು, ಮಂಪರುಗಣ್ಣಿನಲ್ಲಿ “ಗುಡು ಗುಡಿಯಾ ಸೇದಿ ನೋಡು…’ ಪದ್ಯ ಓದುತ್ತಾ ಇದ್ದೆ. “ಮನಸೆಂಬ ಸಂಚಿಯ ಬಿಚ್ಚಿ, ದಿನ ದಿನವೂ ಮೋಹ ಅಂಬೋ ಭಂಗಿಯ ಕೊಚ್ಚಿ’ ಅಂತ ಲೈನ್‌ ಬಂತು. ನಮ್ಮನ್ನು ನಾವು ಶುದ್ಧೀಕರಿಸಿಕೊಳ್ಳೋದು, ನಮ್ಮನ್ನು ನಾವು ನೋಡಿಕೊಳ್ಳೋದು ಹೇಗೆ ಅನ್ನೋ ಅಧ್ಯಾತ್ಮವನ್ನು ಹೇಳುತ್ತಿದೆಯಲ್ಲಾ ಅಂತ ಇಷ್ಟವಾಯಿತು. ನಿದ್ದೆ ನಿಧಾನಕ್ಕೆ ಇಳಿಯಿತು. ಒಳಗಿಂದ ಟ್ಯೂನ್‌ ಎದ್ದು ಬಂತು.

ನೀವು ಸಿ. ಅಶ್ವತ್ಥ್ ಅವರ ಮನೆಗೆ ಹೋಗಿದ್ದರಂತಲ್ಲ?
ಹೌದು. ಅಶ್ವತ್ಥ್ ಅವರು ಶರೀಫ‌ರ ಪದ್ಯಕ್ಕೆ ಅದ್ಭುತವಾಗಿ ರಾಗ ಸಂಯೋಜನೆ ಮಾಡಿದ್ದಾರೆ. ಅದನ್ನು ಮೀರಿ ಸಂಗೀತ ಮಾಡೋದು ಬಹಳ ಕಷ್ಟ. ಹಾಗಾಗಿ, ಅವರು ರಾಗ ಸಂಯೋಜಿಸಿದ “ಕೋಡಗನ ಕೋಳಿ ನುಂಗಿತ್ತಾ…’, “ಸೋರುತಿಹುದು…’ ಹಾಡನ್ನು ಇಟ್ಟುಕೊಂಡೇ ನಮ್ಮ ಬ್ಯಾಂಡ್‌ನ‌ಲ್ಲಿ ಬಳಸಿಕೊಳ್ಳೋಣ ಅಂತ, ಅನುಮತಿ ಕೇಳ್ಳೋಕೆ ಅಶ್ವತ್ಥರ ಮನೆಗೆ ಹೋದೆ. ಅದಕ್ಕೆ ಅವರು, “ರೀ, ನಾವು ಬಹಳ ಕಷ್ಟಪಟ್ಟು ಸಂಗೀತ ಹಾಕಿ, ಅಷ್ಟೇ ಕಷ್ಟಪಟ್ಟು ಕಾಪಾಡಿಕೊಂಡು ಬಂದಿದ್ದೀವಿ. ನೀವು ಬ್ಯಾಂಡ್‌ನ‌ಲ್ಲಿ ಮನಸ್ಸಿಗೆ ಬಂದಂತೆ ಹಾಡಿದರೆ ಕಷ್ಟ ಆಗುತ್ತೆ. ನೀವೇ ಯಾವುದಾದರೂ ಬೇರೆ ಟ್ಯೂನ್‌ ಹಾಕ್ಕೊಳಿ’ ಅಂದಿದ್ದರು.

ವಿದೇಶಗಳಲ್ಲಿ ಕಾರ್ಯಕ್ರಮ ಕೊಟ್ಟಾಗ ಕನ್ನಡ ಹಾಡು ಹಾಡ್ತೀರಿ. ಅವರಿಗೆ ನಮ್ಮ ಶರೀಫ‌ರ, ಬೇಂದ್ರೆಯವರ ಪದ್ಯ ಹೇಗೆ ಅರ್ಥವಾಗುತ್ತೆ?
ನಮ್ಮದು ಒಂದು ನಿಯಮ ಇದೆ. ಹಾಡುವ ಮೊದಲು, ಆ ಗೀತೆಯ ಹುಟ್ಟು, ಅದರ ಉದ್ದೇಶ, ಯಾರು, ಏಕೆ ಬರೆದರು, ಇದರ ಅರ್ಥ ಏನು- ಇವಿಷ್ಟನ್ನು ಕೇಳುಗರಿಗೆ ಹೇಳಿ, ಆಮೇಲೆ ಹಾಡ್ತೀವಿ. ಇಂಗ್ಲೀಷ್‌ನಲ್ಲಿ ಇಷ್ಟು ವಿವರಣೆ ಕೊಟ್ಟರೆ ಸಾಕು, ಅವರು ಸಂಗೀತದ ಮೂಲಕ ಭಾವಗಳನ್ನು ಹಿಡಿದು, ಅನುಭವಿಸಿ ಕೇಳಿಸಿಕೊಳ್ತಾರೆ. ಹೀಗೆ ನಮ್ಮ ಅನೇಕ ಕವಿಗಳ ಹಾಡು ವಿದೇಶಿಗರ ನಾಲಿಗೆಯ ಮೇಲಿದೆ. ಇವತ್ತು ಕನ್ನಡ ಬರದೇ ಇರುವ ಎಷ್ಟೋ ಟೆಕ್ಕಿಗಳಿಗೆ “ಗುಡು ಗುಡಿಯಾ…’ ನಿತ್ಯದ ಹಾಡಾಗಿದೆ.

* ಕಟ್ಟೆ ಗುರುರಾಜ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.