ಅಂತರಂಗ ಸಂಪತ್ತು ಮುಖ್ಯ


Team Udayavani, Jan 18, 2020, 6:05 AM IST

antaranaga

ಮನುಷ್ಯನ ಪರಿಪೂರ್ಣ ಜೀವನಕ್ಕೆ ಸಂಪತ್ತು ಅವಶ್ಯ. ಸಂಪತ್ತಿನಲ್ಲಿ ಬಹಿರಂಗ ಮತ್ತು ಅಂತರಂಗ ಸಂಪತ್ತುಗಳೆಂದು ಎರಡು ಭಾಗಗಳನ್ನಾಗಿ ಮಾಡಲಾಗಿದೆ. ಬಹಿರಂಗ ಸಂಪತ್ತು ಹಣ, ವಸ್ತು, ಒಡವೆಗಳಿಂದ ಕೂಡಿದ್ದರೆ, ಅಂತರಂಗ ಸಂಪತ್ತು ಶಾಂತಿ, ನೆಮ್ಮದಿಗಳಿಂದ ಕೂಡಿದೆ. ಇವೆರಡೂ ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಮನುಷ್ಯನಿಗೆ ಬಹಿರಂಗ ಸಂಪತ್ತಿದ್ದು, ಅಂತರಂಗ ಸಂಪತ್ತಿಲ್ಲದಿದ್ದರೆ ಆತ ನ ಜೀವನ ಪ್ರಾಣಿಗಳಿಗಿಂತ ಕೀಳು.

ನಾವು ಇನ್ನೊಬ್ಬರಿಗೆ ಮಾದರಿಯಾಗುವಂತೆ ಜೀವನ ನಡೆಸಬೇಕು. ನಮ್ಮಿಂದ ಇನ್ನೊಬ್ಬರು ಕಲಿಯುವಂತೆ ಜೀವನ ನಡೆಸಬೇಕು. ನಮ್ಮ ಜೀವನ ಮುಂದಿನ ಪೀಳಿಗೆಗೆ ದಾರಿಯಾಗಬೇಕು. ಆಗ ನಮಗೆ ಬದುಕು ನಡೆಸಲು ಕಲಿಸಿದ ದೇವನಿಗೆ ಪ್ರೀತಿ ಹುಟ್ಟುತ್ತದೆ. ಸುಂದರ ಬದುಕು ಕಟ್ಟಿಕೊಳ್ಳಲು ಶ್ರೀಮಂತಿಕೆ ಒಂದೇ ಅವಶ್ಯವಲ್ಲ. ಮನುಷ್ಯನ ಅಂತರಾಳದಲ್ಲಿನ ನಿಷ್ಕಲ್ಮಷವಾದ ಮನಸ್ಸು ಬಹು ಮುಖ್ಯ.

ಮನುಷ್ಯನ ಜೀವನದಲ್ಲಿ ಇನ್ನೊಬ್ಬರ ಅಂತಸ್ತು ನೋಡಿ ಅಸೂಯೆ ಪಡುವುದಕ್ಕಿಂತ ಅವರನ್ನು ನೋಡಿ ನಾವು ಬೆಳೆಯುವುದನ್ನು ಕಲಿಯಬೇಕು. ಆಗ ನಮ್ಮ ಜೀವನದಲ್ಲಿ ಬೆಳಕು ಕಾಣಬಹುದು. ಭೂಮಿಯಲ್ಲಿ ಹುಟ್ಟಿದ ನಮಗೆಲ್ಲ ಬದುಕು ಕೊಟ್ಟ ದೇವನು ಕೂಡ ಹೊಟ್ಟೆಕಿಚ್ಚು ಪಡುವಂತೆ ನಾವು ಬದುಕಬೇಕು. ನಮ್ಮ ಮನಸ್ಸಿನಲ್ಲಿರುವ ಭಯ ತೊರೆದು ನೆಮ್ಮದಿಯಾಗಿ ಬದುಕಲು ಮುಂದಾಗಬೇಕು.

ಭೂತಕಾಲದಲ್ಲಿ ನಡೆದ ಘಟನೆಗಳನ್ನು ನೆನಪಿಸಿಕೊಂಡು ಕಂಪಿಸುವುದು, ಮುಂದೆ ಹೀಗೆ ನಡೆಯುತ್ತದೆ ಎಂದು ಊಹಿಸಿಕೊಂಡು ಭಯ ಪಡುವುದಕ್ಕಿಂತ ನಿನ್ನೆ-ನಾಳೆಯದನ್ನು ಮರೆತು ಈಗಿನ ಕ್ಷಣವನ್ನು ಸಂತೋಷದಿಂದ ಅನುಭವಿಸುವುದನ್ನು ಕಲಿಯಬೇಕು.

ಭಯ ಹೋಗಲಾಡಿಸಲು ಮೂರು ದಾರಿಗಳಿವೆ
1. ಬಂದಿದ್ದನ್ನು ಯಥಾವತ್ತಾಗಿ ಸ್ವೀಕರಿಸುವುದು.
2. ಸಾಮರ್ಥ್ಯಕ್ಕೆ ನೀಗುವಷ್ಟು ಮಾಡಿ, ಉಳಿದಿದ್ದನ್ನು ಆ ದೇವರಿಗೆ ಬಿಡಬೇಕು.
3. ಭಯ ಕಾಡುತ್ತಿದೆ ಎನ್ನುವಾಗ ಶಕ್ತಿ, ಸಮಯವನ್ನು ಸೃಜನಾತ್ಮಕ ಕೆಲಸಗಳಿಗೆ ಬಳಸಬೇಕು.

ಹೀಗೆ ಮಾಡಿದಾಗ, ಭಯ ಹೋಗಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ. ಭೂಮಿಯ ಎಲ್ಲಾ ವಸ್ತುಗಳೂ ಭಯದ ನೆರಳೊಳಗೆ ಬದುಕುತ್ತಿವೆ. ನೆರಳೊಳಗೆ ಬದುಕದ ಭೂಮಿಯ ಮೇಲಿನ ವಸ್ತುವೆಂದರೆ ಅದು ವೈರಾಗ್ಯ ಮಾತ್ರ. ಜೀವನದಲ್ಲಿ ಬರುವ ಎಲ್ಲವನ್ನೂ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕಾದ ಮನುಷ್ಯರು, “ಬಂದದ್ದು ಬರಲಿ ನಿನ್ನ ದಯೆ ಇರಲಿ’ ಎಂದು ದೇವರಿಗೆ ಬಿಡಬೇಕು. ಅಲ್ಲದೇ ನಾನು, ನನ್ನದು ಎಂದುಕೊಳ್ಳದೇ “ಎಲ್ಲಾ ದೇವರದ್ದು’ ಎನ್ನುವ ಮೂಲಕ ನಿಸ್ವಾರ್ಥತೆ ಮೆರೆಯಬೇಕು.

* ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ, ಗವಿಮಠ, ಕೊಪ್ಪಳ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.