ಹಳೇ ಬ್ಯಾಟು ಹಳೇ ಚೆಂಡು


Team Udayavani, Oct 5, 2019, 3:01 AM IST

hale-bat

ಸತತ 4 ಸಿಕ್ಸರ್‌: ಆಟದ ಮೂಲಕವೇ ಉತ್ತರ!
ಭಾರತ ಕ್ರಿಕೆಟ್‌ ತಂಡವು ಮೊದಲ ಬಾರಿಗೆ ವಿಶ್ವಕಪ್‌ ಗೆದ್ದಿತಲ್ಲ: ಆಗ ತಂಡದ ನಾಯಕ ಆಗಿದ್ದವನು ಕಪಿಲ್‌ ದೇವ್‌. ಭಾರತದ ಕ್ರಿಕೆಟ್‌ ಆಟಗಾರರು ಏನಿದ್ದರೂ ಪಂದ್ಯಗಳನ್ನು ಡ್ರಾ ಮಾಡಿಕೊಳ್ಳಲು ಮಾತ್ರ ಯೋಚಿಸುತ್ತಾರೆ ಎಂದು ಎಲ್ಲರೂ ನಂಬಿದ್ದಾಗ, ಎದುರಾಳಿಯಾಗಿ ಯಾರೇ ಇರಲಿ, ಅವರನ್ನು ಸೋಲಿಸಬೇಕು ಎಂದು ಜೊತೆಗಾರರಿಗೆ ಹೇಳಿಕೊಟ್ಟಿದ್ದು, ಬಿರುಗಾಳಿ ಬೌಲಿಂಗ್‌ ಮತ್ತು ಬಿರುಸಿನ ಬ್ಯಾಟಿಂಗ್‌ನಿಂದ ಪಂದ್ಯ ಗೆಲ್ಲಿಸುವ ಆಲ್‌ರೌಂಡರ್‌ ಅನ್ನಿಸಿಕೊಂಡಿದ್ದು ಕಪಿಲ್‌ ದೇವ್‌ ಅವರ ಹೆಚ್ಚುಗಾರಿಕೆ. ಇಂಥ ಹಿನ್ನೆಲೆಯ ಕಪಿಲ್‌ ದೇವ್‌ ಕುರಿತೂ ಕೆಲವು ಕ್ರೀಡಾ ಪತ್ರಕರ್ತರಿಗೆ ಅಸಹನೆ ಇತ್ತು. ಅವರು ಸಂದರ್ಭ ಸಿಕ್ಕಾಗೆಲ್ಲ, ಕಪಿಲ್‌ಗೆ ಬ್ಯಾಟಿಂಗ್‌ ಗೊತ್ತಿಲ್ಲ, ಆತ ನಂಬಿಕಸ್ತ ಆಟಗಾರ ಅಲ್ಲ, ಆತನನ್ನ ನಂಬಿ ಪಂದ್ಯ ಗೆಲ್ಲಲು ಆಗುವುದಿಲ್ಲ ಎಂದೆಲ್ಲಾ ಬರೆಯುತ್ತಿದ್ದರು. ಇಂಥ ಟೀಕೆಗಳಿಗೆ ಆಟದ ಮೂಲಕವೇ ಉತ್ತರ ಕೊಡಬೇಕು ಎಂದು ಕಪಿಲ್‌ ದೇವ್‌, ಅಂಥದೊಂದು ಸಂದರ್ಭಕ್ಕಾಗಿ ಕಾಯುತ್ತಾ ಇದ್ದರು.

1990 ರಲ್ಲಿ ಲಾರ್ಡ್ಸ್ನಲ್ಲಿ ಟೆಸ್ಟ್‌ ಮ್ಯಾಚ್‌ ನಡೆದ ಸಂದರ್ಭ. ಭಾರತ 430 ರನ್‌ಗಳಿಗೆ 9 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಕ್ರೀಸ್‌ನಲ್ಲಿ ಕಪಿಲ್‌ ದೇವ್‌ ಮತ್ತು ನರೇಂದ್ರ ಹಿರ್ವಾನಿ ಇದ್ದರು. ಹಿರ್ವಾನಿಗೆ ಬ್ಯಾಟಿಂಗ್‌ ಬರುತ್ತಿರಲಿಲ್ಲ. ಆತನಿಗೆ ಬ್ಯಾಟಿಂಗ್‌ ಮಾಡುವ ಅವಕಾಶ ಸಿಕ್ಕರೆ, ಮೊದಲ ಎಸೆತಕ್ಕೇ ಔಟ್‌ ಆಗುತ್ತಾನೆ ಎಂದು ಎಲ್ಲರಿಗೂ ಗೊತ್ತಿತ್ತು. ಬ್ಯಾಟಿಂಗ್‌ ಸೈಡ್‌ನ‌ ಕ್ರೀಸ್‌ನಲ್ಲಿ ಆಗ ಕಪಿಲ್‌ ದೇವ್‌ ಇದ್ದ. ಫಾಲೋಆನ್‌ ತಪ್ಪಿಸಿಕೊಳ್ಳಬೇಕು ಅಂದರೆ, ಸತತವಾಗಿ ನಾಲ್ಕು ಸಿಕ್ಸರ್‌ ಹೊಡೆಯಬೇಕಿತ್ತು. ಬೌಲಿಂಗ್‌ ಮಾಡುತ್ತಿದ್ದವ, ಅವತ್ತಿನ ಶ್ರೇಷ್ಠ ಸ್ಪಿನ್ನರ್‌ ಎಡ್ಡಿ ಹೆಮ್ಮಿಂಗ್ಸ್‌. ಕ್ರೀಡಾ ಪತ್ರಕರ್ತನ ಮಾತು ಕಪಿಲ್‌ಗೆ ನೆನಪಾಗಿದ್ದೇ ಆಗ. ಈತ ಏನು ಮಾಡಿದ ಗೊತ್ತೇ? ಒಂದರ ಹಿಂದೆ ಒಂದರಂತೆ ಸತತವಾಗಿ ನಾಲ್ಕು ಸಿಕ್ಸರ್‌ ಹೊಡೆದ! ಅದುವರೆಗೆ, ಟೆಸ್ಟ್‌ ಮ್ಯಾಚ್‌ನಲ್ಲಿ ಯಾರೂ ಸತತವಾಗಿ ನಾಲ್ಕು ಸಿಕ್ಸರ್‌ ಹೊಡೆದಿರಲಿಲ್ಲ. ಒಂದು ವಿಶ್ವದಾಖಲೆಯ ನಿರ್ಮಾಣ, ಬ್ಯಾಟಿಂಗ್‌ ಗೊತ್ತಿಲ್ಲ ಎಂಬ ಟೀಕೆಗೆ ಉತ್ತರ, ತಂಡವನ್ನು ಸೋಲಿನಿಂದ ತಪ್ಪಿಸಿದ ಸಂತೃಪ್ತಿ… ಇಷ್ಟನ್ನೂ ಸಾಧಿಸಿದ ಹೆಗ್ಗಳಿಕೆ ಅವತ್ತು ಕಪಿಲ್‌ ದೇವ್‌ ಪಾಲಾಯಿತು.

ಕ್ರಿಕೆಟ್‌ಗೆ ಒಬ್ಬನೇ ವಿಶ್ವನಾಥ್‌
ಜಗತ್ತಿನ ಶ್ರೇಷ್ಠ ಕ್ರಿಕೆಟ್‌ ಆಟಗಾರರು ಎಂದು ಪಟ್ಟಿ ಮಾಡಲು ಹೊರಟರೆ, ತಪ್ಪದೇ ಸೇರಿಸಬೇಕಾದ ಹೆಸರು ಜಿ.ಆರ್‌.ವಿಶ್ವನಾಥ್‌ ಅವರದ್ದು. ಕೆಲವು ಆಟಗಾರರನ್ನು ದಾಖಲೆಯ ಪುಸ್ತಕದ ಮೂಲಕ ಅಳೆಯುವುದಕ್ಕೆ ಸಾಧ್ಯವಿಲ್ಲ. ದಾಖಲೆ ಲೆಕ್ಕಾಚಾರದಲ್ಲಿ ಅವರ ಸಾಧನೆ ಕಡಿಮೆ ಅನ್ನಿಸಬಹುದು. ಆದರೆ ನಿರ್ದಿಷ್ಟ ಸಂದರ್ಭ, ಸನ್ನಿವೇಶದಲ್ಲಿ ಅವರ ಆಟಗಾರಿಕೆಯಿಂದ ಅದ್ಭುತ ಲಾಭಗಳಾಗಿರುತ್ತವೆ. ಅವೆಲ್ಲ ಸಾರ್ವಕಾಲಿಕವಾಗಿ ನೆನಪಿರುವಂತಹ ಇನಿಂಗ್ಸ್‌ಗಳು. ವಿಶ್ವನಾಥ್‌ ಅವರು ಈ ಮಾದರಿಯ ಕ್ರಿಕೆಟಿಗ. ಭಾರತಕ್ಕೆ ಗಾವಸ್ಕರ್‌ ಅವರಂಥ 10 ಜನ ಆಟಗಾರರು ಬರಬಹುದು. ಆದರೆ ವಿಶ್ವನಾಥ್‌ ಅವರಂಥ ಮತ್ತೂಬ್ಬ ಆಟಗಾರ ಬರಲಾರ ಎಂದು ಕ್ರೀಡಾ ವಿಮರ್ಶಕರೆಲ್ಲ ಒಕ್ಕೊರಲಿನಿಂದ ಹೇಳಿದ್ದರು ಎಂಬುದೇ ವಿಶ್ವನಾಥ್‌ ಅವರ ಹಿರಿಮೆ ಎಂಥದು ಎಂಬುದಕ್ಕೆ ಸಾಕ್ಷಿ. ಇಂಥ ಹಿನ್ನೆಲೆಯ ವಿಶ್ವನಾಥ್‌, 14 ವರ್ಷಗಳ ಕಾಲ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಒಟ್ಟು 91 ಟೆಸ್ಟ್‌ ಆಡಿದ ಅವರು, 14 ಶತಕ ಹೊಡೆದಿದ್ದರು. ವಿಶೇಷವೇನು ಗೊತ್ತೇ? ಅವರು ಶತಕ ಹೊಡೆದಾಗಲೆಲ್ಲ, ಭಾರತ ತಂಡ ಗೆದ್ದಿದೆ ಅಥವಾ ಸೋಲಿನಿಂದ ಪಾರಾಗಿ ಪಂದ್ಯವನ್ನು ಡ್ರಾ ಮಾಡಿಕೊಂಡಿದೆ!

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.