ಕೋಟೆ ನಾಡಿನ “ಊಟಿ’


Team Udayavani, Nov 16, 2019, 4:12 AM IST

kote-naadina

“ಕೋಟೆನಾಡಿನ ಊಟಿ’ ಖ್ಯಾತಿಯ ಜೋಗಿಮಟ್ಟಿ ಗಿರಿಧಾಮದ ಸೌಂದರ್ಯ ಮಲೆನಾಡನ್ನು ಹೋಲುವಂಥದ್ದು. ಬೆಂಕಿಯಂಥ ಚಳಿ, ಹಿಮ್ಮೆಟ್ಟುವ ಬಿರುಗಾಳಿ, ಪ್ರೇಮ ಕಾಶ್ಮೀರವನ್ನು ನೆನಪಿಸುತ್ತದೆ…

ಕೋಟೆನಾಡು ಚಿತ್ರದುರ್ಗ ನಗರದ ಸುತ್ತ ಎತ್ತ ನೋಡಿದರತ್ತ ಬೃಹತ್‌ ಬಂಡೆಗಲ್ಲುಗಳ ರಾಶಿ ಕಣ್ಣಿಗೆ ರಾಚುತ್ತದೆ. ಕಲ್ಲಿನ ಕೋಟೆ, ಕೊತ್ತಲಗಳು, ಗುಹಾಂತರ ದೇಗುಲಗಳು, ಶಿಲ್ಪ ಕಲೆಗಳ ವೈಭವ ಕಣ್ಮನ ಸೆಳೆಯುತ್ತವೆ. ಕಲ್ಲುಗುಡ್ಡಗಳ ನಡುವೆ ಅಪರೂಪದ ಹಸಿರು ತಾಣವೊಂದಿದೆ. ಅದೇ ಜೋಗಿಮಟ್ಟಿ! ಆಗಸದಲ್ಲಿ ಬೆಳ್ಳಿ ಮೋಡಗಳ ಬೆಲ್ಲಿ ನೃತ್ಯ ವೈಭವ. ಸಂಭ್ರಮದಿ ತುಂತುರು ಹನಿಯಾಗಿ ಧರೆಗಳಿಯುವ ವರುಣ ದೇವ.

ಗಿರಿಧಾಮದ ಹಸಿರೆಲೆಗಳಿಗೆ ಇಬ್ಬನಿಯ ಮುತ್ತು. ನರ್ತಿಸುತ್ತ ಬಯಲಿಗೆ ಬಂದು ಪರಿಸರ ಪ್ರಿಯರಿಗೆ ಆಹ್ವಾನ ನೀಡುವ ನಾಟ್ಯ ಮಯೂರಿಯ ಗಮ್ಮತ್ತು. ಇದು ಬಯಲುಸೀಮೆಯ ಹಸಿರು ತಾರೆ ಜೋಗಿಮಟ್ಟಿಯ ಸೊಬಗು. ಚಿತ್ರದುರ್ಗ ನಗರದ ಮದಕರಿ ನಾಯಕ ವೃತ್ತದಿಂದ ಜೋಗಿಮಟ್ಟಿ ರಸ್ತೆ ಮೂಲಕ 10 ಕಿ.ಮೀ.ನಷ್ಟು ಕಾಡಿನ ನಡುವೆ ಸಾಗಿದರೆ ಸಾಕು “ಕೋಟೆನಾಡಿನ ಊಟಿ’ ಖ್ಯಾತಿಯ ಜೋಗಿಮಟ್ಟಿ ಗಿರಿಧಾಮದ ಸೌಂದರ್ಯ ಮಲೆನಾಡನ್ನು ಹೋಲುವಂಥದ್ದು.

ಬೆಂಕಿಯಂಥ ಚಳಿ, ಹಿಮ್ಮೆಟ್ಟುವ ಬಿರುಗಾಳಿ, ಪ್ರೇಮ ಕಾಶ್ಮೀರವನ್ನು ನೆನಪಿಸುತ್ತದೆ. ಬೆಳಗಿನ ಜಾವ ಜೋಗಿಮಟ್ಟಿಯತ್ತ ಹೆಜ್ಜೆ ಹಾಕಿದರೆ ನೂರಾರು ಜನ ವಾಯು ವಿಹಾರಿಗಳು ಜತೆಯಾಗುತ್ತಾರೆ. ಒಂದು ಕಡೆ ಚಿರತೆ, ಮತ್ತೂಂದು ಕಡೆ ಕರಡಿ ಆಕೃತಿಯ ಸುಂದರ ದ್ವಾರದಡಿ ಪ್ರವೇಶಿಸಿ, ಹಸಿರಸಿರಿ ನಡುವೆ ಮುನ್ನಡೆದರೆ ಸಾಲು ಸಾಲು ನವಿಲುಗಳು ಸ್ವಾಗತಕ್ಕೆ ನಿಂತಿರುತ್ತವೆ. ಹಕ್ಕಿಗಳ ಚಿಲಿಪಿಲಿ ಗಾನ ಮನಸ್ಸಿಗೆ ಮುದ ನೀಡಿದರೆ ತಣ್ಣನೇ ಗಾಳಿ ಮೈಗೆ ಸೋಕುತ್ತದೆ.

ವಿಸ್ಮಯಗಳ ಗಣಿ: ಜೋಗಿಮಟ್ಟಿ ಅರಣ್ಯ ಏಷ್ಯಾ ಖಂಡದಲ್ಲೇ ಅತಿ ಹೆಚ್ಚು ಗಾಳಿ ಬೀಸುವ ಪ್ರದೇಶಗಳ ಪೈಕಿ ಒಂದು. ಸಮುದ್ರ ಮಟ್ಟದಿಂದ 1323 ಮೀಟರ್‌ ಎತ್ತರ ಪ್ರದೇಶದಲ್ಲಿದೆ. 22 ಸಾವಿರ ಎಕರೆ ಪ್ರದೇಶ ವ್ಯಾಪ್ತಿ ಹೊಂದಿದ್ದು, ಹಲವು ವಿಶಿಷ್ಟ, ವಿಸ್ಮಯಗಳ ಗಣಿ. ಮಶ್ಚೇಂದ್ರನಾಥ ಎಂಬ ಜೋಗಿ ಈ ಪ್ರದೇಶದಲ್ಲಿ ನೆಲೆಸಿದ್ದು, ಈ ಭಾಗದ ಜನರಿಗೆ ಉಪಕಾರಿಯಾಗಿದ್ದರು. ಅರಣ್ಯದ ಔಷಧೀಯ ಸಸ್ಯಗಳ ಮೂಲಕ ಜನ- ಜಾನುವಾರುಗಳ ರೋಗ- ರುಜನಿಗೆ ಪರಿಹಾರ ನೀಡುತ್ತಿದ್ದರು.

ಅಧ್ಯಾತ್ಮದ ಮೂಲಕ ದೈವತ್ವಕ್ಕೇರಿದ ಸಂತ ನೆಲೆಸಿದ್ದರಿಂದ “ಜೋಗಿಮರಡಿ’, “ಜೋಗಿಮಟ್ಟಿ’ ಎಂಬ ಹೆಸರು ಬಂದಿದೆ. ಹಸಿರೆಲೆಗಳ ನಡುವೆ ನೂರಾರು ಮೆಟ್ಟಿಲೇರಿ ಸಾಗುವ ಗಿರಿಧಾಮದ ತುತ್ತ ತುದಿಯ ಸುಂದರ ಪರಿಸರದಲ್ಲಿ ಜೋಗಿಯ (ಕಾಲ ಭೈರವೇಶ್ವರ) ದೇಗುಲವಿದೆ. ದೇಗುಲ ಬಳಿ ಅರಣ್ಯ ಇಲಾಖೆ ನಿರ್ಮಿಸಿರುವ ವೀವ್‌ಪಾಯಿಂಟ್‌ ಏರಿದರೆ, ಆಕಾಶಕ್ಕೆ ಮೂರೇ ಗೇಣು. ನೂಕುವ ಗಾಳಿಗೆ ಎದೆಯೊಡ್ಡುವ ಸಾಹಸವೇ ರೋಚಕ, ಸವಿ ನೆನಪಿನ ಹಂದರ.

ದೇಗುಲದ ಕೆಳ ಭಾಗದ ವಿಶಾಲ ಪ್ರದೇಶದಲ್ಲಿ 1905ರಲ್ಲಿ ಬ್ರಿಟಿಷರು ನಿರ್ಮಿಸಿದ ಭವ್ಯ ಬಂಗಲೆ, ವಿಶ್ರಾಂತಿ ಕೊಠಡಿಗಳಿವೆ. ವಾಹನ ಪಾರ್ಕಿಂಗ್‌, ಸುಂದರ ವನ ಮತ್ತು ಅರಣ್ಯದಲ್ಲಿ ವಾಕಿಂಗ್‌ ವೇ ನಿರ್ಮಿಸಿಲಾಗಿದೆ. ಅರಣ್ಯ ಇಲಾಖೆಯ ಪರವಾನಗಿ ಪಡೆದರೆ ವಿಶ್ರಾಂತಿ ಗೃಹಗಳಲ್ಲಿ ಉಳಿದುಕೊಳ್ಳುವ ಅವಕಾಶವೂ ಇದೆ. ಗುಡ್ಡಗಾಡುಗಳ ನಡುವೆ ಹಸಿರೊದ್ದುಕೊಂಡು ನಿಂತಿರುವ ನವ ತರುಣೆ ಜೋಗಿಮಟ್ಟಿ ಚಾರಣಿಗರ ಸ್ವರ್ಗವೂ ಹೌದು.

ಗಾಳಿಯಲ್ಲಿ ಚಿಕಿತ್ಸಕ ಗುಣ” ಕರಡಿ, ಚಿರತೆ, ಜಿಂಕೆ, ನವಿಲುಗಳು, ಮೊಲ, ಕಾಡು ಹಂದಿ, ವಿವಿಧ ಪಕ್ಷಿಗಳು ಸೇರಿದಂತೆ ಸಾವಿರಾರು ಜೀವರಾಶಿಗಳು ಇಲ್ಲಿ ಆಶ್ರಯ ಪಡೆದಿವೆ. ಗಿರಿಧಾಮ, ಬೆಟ್ಟಗುಡ್ಡಗಳಲ್ಲಿ ಚಾರಣ ಹೊರಟವರಿಗೆ ದರ್ಶನ ನೀಡಿ ನಿಬ್ಬೆರಗಾಗಿಸಿವೆ. ಲೆಕ್ಕವಿಲ್ಲದಷ್ಟು ವಿವಿಧ ಜಾತಿಯ ಔಷದೀಯ ಸಸ್ಯಗಳು ಕಾಣಸಿಗುತ್ತವೆ. ಹೊನ್ನೆ , ತೇಗ, ಹೊಂಗೆ, ಶ್ರೀಗಂಧ, ಹಣ್ಣು- ಹಂಪಲು ಮರಗಳು ಸೇರಿದಂತೆ ವಿವಿಧ ತಳಿಯ ಗಿಡಮರಗಳು ಸಾಕಷ್ಟಿವೆ. ಇಲ್ಲಿನ ಗಾಳಿಯಲ್ಲೇ ಚಿಕಿತ್ಸಕ ಗುಣವಿದ್ದು, ವಾಯು ವಿಹಾರದಿಂದ ಮೈಮನಸ್ಸು ಹಗುರಾಗುತ್ತದೆ.

ಮಿನಿ ಝೂ…: ಜೋಗಿಮಟ್ಟಿ ತಪ್ಪಲಿನಲ್ಲಿರುವ ಆಡುಮಲ್ಲೇಶ್ವರ ಅರಣ್ಯ ಜೋಗಿಮಟ್ಟಿಗೆ ಹೊಸ ಮೆರಗು ನೀಡಿದೆ. ಜೋಗಿಮಟ್ಟಿ ಪ್ರವೇಶದ ಗೇಟ್‌ನಿಂದ ಬಲಕ್ಕೆ ತಿರುಗಿದರೆ ಆಡುಮಲ್ಲೇಶ್ವರ ಅರಣ್ಯ ಹಚ್ಚ ಹಸಿರಿನ ಸಿರಿಯೊಂದಿಗೆ ಬರಮಾಡಿಕೊಳ್ಳುತ್ತದೆ. 2 ಕಿ.ಮೀ. ಸಾಗಿದರೆ ಅರಣ್ಯ ಇಲಾಖೆ ನಿರ್ಮಿಸಿರುವ ಆಡುಮಲ್ಲೇಶ್ವರ ಕಿರು ಪ್ರಾಣಿ ಸಂಗ್ರಹಾಲಯ ಸಿಗುತ್ತದೆ. ಚಿರತೆ, ಕರಡಿ, ಹೆಬ್ಬಾವು, ನವಿಲು, ಜಿಂಕೆ, ಲವ್‌ ಬರ್ಡ್ಸ್ ಸೇರಿದಂತೆ ವಿವಿಧ ಪ್ರಾಣಿ-ಪಕ್ಷಿಗಳ ವೀಕ್ಷಣೆ ಕಣ್ಣಿಗೆ ಹಬ್ಬ. ಹೊರ ಭಾಗದಲ್ಲಿ ನಿರ್ಮಿಸಿರುವ ಸುಂದರ ಪಾರ್ಕ್‌ ಮಕ್ಕಳಿಗೆ ರಸದೌತಣ ನೀಡುತ್ತದೆ.

ಇದೇ ದಾರಿ…: ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಎನ್‌ಎಚ್‌- 4ರಲ್ಲಿ ಸಂಚರಿಸಿದರೆ, 200 ಕಿ.ಮೀ. ದೂರವಾಗಲಿದೆ. ನಗರದಿಂದ ಜೋಗಿಮಟ್ಟಿ ತಲುಪಲು 10 ಕಿ.ಮೀ. ಕಾಡಿನ ದಾರಿಯಲ್ಲಿ ಚಲಿಸಬೇಕಿದೆ.

ಪ್ರವಾಸಿಗರ ಗಮನಕ್ಕೆ…
– ಜೋಗಿಮಟ್ಟಿಯ ವೀವ್‌ ಪಾಯಿಂಟ್‌ಗೆ ತೆರಳಿದಾಗ ಅಲ್ಲಿ ಯಾವುದೇ ಆಹಾರ ವ್ಯವಸ್ಥೆ ಇರುವುದಿಲ್ಲ.
– ಅತಿಥಿ ಗೃಹದಲ್ಲಿ ಉಳಿದವರಿಗೆ ಮುಂಗಡವಾಗಿ ತಿಳಿಸಿದ್ದರೆ, ಆಹಾರ ವ್ಯವಸ್ಥೆಯನ್ನೂ ಅಲ್ಲಿನ ಸಿಬ್ಬಂದಿ ಪೂರೈಸುತ್ತಾರೆ.
– ಜೋಗಿಮಟ್ಟಿ ಪರಿಸರ ಸವೆಯಲು ತೆರಳುವವರು, ದುರ್ಗ ನಗರದಿಂದಲೇ ನೀರು ಆಹಾರ ಜತೆಗೆ ಕೊಂಡೊಯ್ಯುವುದು ಸೂಕ್ತ.
– ಆಡುಮಲ್ಲೇಶ್ವರ ಕಿರು ಪ್ರಾಣಿ ಸಂಗ್ರಹಾಲಯದಲ್ಲಿ ಪುಟ್ಟ ಕ್ಯಾಂಟೀನ್‌ ಇದೆ.
– ಜೋಗಿಮಟ್ಟಿ ಪ್ರವೇಶ ದ್ವಾರದಿಂದ ಕೇವಲ ಅರ್ಧ ಕಿ.ಮೀ. ನಗರದತ್ತ ಚಲಿಸಿದರೂ ಸಾಕು ಹೋಟೆಲ್‌ಗ‌ಳು ಸಿಗುತ್ತವೆ.

* ಬಸವರಾಜ ಮುದನೂರ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.