ಹೊನ್ನಿನ ಮೊಗದ ಮುಕ್ಕಣ್ಣನ ಶಿವರಾತ್ರಿ


Team Udayavani, Feb 15, 2020, 6:05 AM IST

honninna

ಮಹಾ ಶಿವರಾತ್ರಿಯಂದು ಮೈಸೂರು ಅರಮನೆ ಆವರಣದಲ್ಲಿರುವ ಶ್ರೀ ತ್ರಿಣೇಶ್ವರಸ್ವಾಮಿಯನ್ನು (ಮುಕ್ಕಣ್ಣ) ನೋಡುವುದೇ ಒಂದು ಚೆಂದ. ಬಂಗಾರದ ಮುಖ ಹೊತ್ತು ಫ‌ಳಗುಟ್ಟುತ್ತಿರುತ್ತಾನೆ. ಮೈಸೂರಿನ ದೊಡ್ಡ ಕೆರೆ ಏರಿಯ ಮೇಲೆ ಅರಮನೆ ನಿರ್ಮಿಸುವ ಮುಂಚೆಯೇ ಇಲ್ಲಿ ತ್ರಿಣೇಶ್ವರ ಸ್ವಾಮಿ ಮತ್ತು ಕೋಡಿ ಸೋಮೇಶ್ವರ ಸ್ವಾಮಿ ದೇಗುಲಗಳನ್ನು 16ನೇ ಶತಮಾನದಲ್ಲಿ ರಾಜ ಒಡೆಯರ್‌ ಆಳ್ವಿಕೆಯ ಕಾಲದಲ್ಲಿ ಕಟ್ಟಿಸಲಾಗಿತ್ತು. ದ್ರಾವಿಡ ಶೈಲಿಯ ದೇಗುಲ ಇದು. ಸಾಮಾನ್ಯವಾಗಿ ದೇಗುಲಗಳು ಪೂರ್ವಾಭಿಮುಖವಾಗಿದ್ದರೆ, ಶಿವನ ಸ್ವರೂಪಿ ಮೂರು ಕಣ್ಣಿನ ದೈವ ತ್ರಿಣೇಶ್ವರ ಸ್ವಾಮಿ ದೇಗುಲ ಪಶ್ಚಿಮಾಭಿಮುಖವಾಗಿದೆ.

ತ್ರಿಣೇಶ್ವರನ ಅಂಗಳದಲ್ಲಿ…: ದೇಗುಲ ಪ್ರಕಾರದ ಸುತ್ತಲೂ ಪಾರ್ವತಿ, ಸೂರ್ಯ ನಾರಾಯಣ ಮತ್ತು ಶಂಕರಾಚಾರ್ಯರ ವಿಗ್ರಹಗಳು ಮತ್ತು ಹಲವಾರು ಲಿಂಗಗಳು ಇವೆ. ದೇವಾಲಯದ ಮಹಾದ್ವಾರದ ಒಳಗಿನ ಗೂಡುಗಳಲ್ಲಿ ಗಣಪತಿ ಮತ್ತು ಭೈರವನ ಮೂರ್ತಿಗಳಿವೆ. ನವರಂಗದಲ್ಲಿ ಎರಡು ಪ್ರವೇಶದ್ವಾರಗಳಿದ್ದು, ಒಂದು ಪಶ್ಚಿಮ ಮತ್ತು ಇನ್ನೊಂದು ದಕ್ಷಿಣಕ್ಕಿದೆ. ಪ್ರವೇಶದ್ವಾರದ ಎಡಭಾಗದಲ್ಲಿ ಸುಮಾರು ಅರ್ಧ ಮೀಟರ್‌ ಎತ್ತರವಿರುವ ತೃಣಬಿಂದು ಮಹರ್ಷಿಯ ಪ್ರತಿಮೆ ಇದೆ. “ತೃಣಬಿಂದು ಮಹರ್ಷಿಗಳು ಈ ಸ್ಥಳದಲ್ಲಿ ಶಿವನಿಗಾಗಿ ತಪಸ್ಸು ಮಾಡಿದಾಗ ಇಲ್ಲಿಯೇ ಶಿವ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಲ್ಲಿ ತ್ರಿಣೇಶ್ವರನನ್ನು ಪ್ರತಿಷ್ಠಾಪಿಸಿದರು ಎಂದು ಸ್ಥಳ ಪುರಾಣ ಇದೆ’ ಎನ್ನುತ್ತಾರೆ, ತ್ರಿಣೇಶ್ವರ ಸ್ವಾಮಿ ದೇಗುಲದ ಅಂಗಳದಲ್ಲಿರುವ ತ್ರಿಪುರ ಸುಂದರಿ ಅಮ್ಮನವರ ದೇವಸ್ಥಾನದ ಅರ್ಚಕ ಶ್ರೀಹರಿ ಅವರು.

ಮುಖವಾಡ ಹೇಗಿದೆ?: ತ್ರಿಣೇಶ್ವರ ಸ್ವಾಮಿಗೆ ತೊಡಿಸುವ ಚಿನ್ನದ ಮುಖವಾಡ 11 ಕಿಲೊ (716 ತೊಲ) ತೂಗುತ್ತದೆ. ಅಪರಂಜಿ ಚಿನ್ನದ ಈ ಮುಖವಾಡದಲ್ಲಿ ಶಿವನ ತಲೆಯ ಮೇಲೆ ಗಂಗೆ, ಆಕೆಗೆ ಮೂಗುತಿ, ಓಲೆ ಇದೆ. ಶಿವನಿಗೆ ಎಡಭಾಗದಲ್ಲಿ ಕರ್ಣಕುಂಡಲ, ಬಲಭಾಗದಲ್ಲಿ ಕಾಂತಕ (ಲಾಳಾಕೃತಿ), ತಲೆಯ ಮೇಲೆ ಬೆಳ್ಳಿಯ ಚಂದ್ರ… ಹೀಗೆ ಚಿನ್ನದ ಕೊಳಗದ ಮೂರು ಭಾಗಗಳಿದ್ದು, ವರ್ಷಪೂರ್ತಿ ಜಿಲ್ಲಾ ಖಜಾನೆಯಲ್ಲಿರಿಸಲಾಗುತ್ತದೆ. ಮಹಾ ಶಿವರಾತ್ರಿಯ ಹಿಂದಿನ ದಿನ ಜಿಲ್ಲಾ ಖಜಾನೆಯಿಂದ ತಂದು ದೇವಸ್ಥಾನದ ಆಡಳಿತ ವರ್ಗಕ್ಕೆ ಚಿನ್ನದ ಕೊಳಗವನ್ನು ಒಪ್ಪಿಸಲಾಗುತ್ತದೆ. ಮಹಾಶಿವರಾತ್ರಿ­ಯಂದು ಶಿವನಿಗೆ ಚಿನ್ನದ ಕೊಳಗ ಧಾರಣೆ ಮಾಡಿ, ವಿಶೇಷ ಪೂಜೆ ಸಲ್ಲಿಸಿ ಹಗಲು- ರಾತ್ರಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಶಿವರಾತ್ರಿ ಮುಗಿದ ಮೇಲೆ ಚಿನ್ನದ ಕೊಳಗವನ್ನು ಮತ್ತೆ ಜಿಲ್ಲಾ ಖಜಾನೆಗೆ ಒಪ್ಪಿಸಲಾಗುತ್ತದೆ.

ಪುತ್ರ ಸಂತಾನದ ನೆನಪಿಗೆ ಚಿನ್ನದ ಮುಖವಾಡ: ಶಿವರಾತ್ರಿಯಲ್ಲಿ ತ್ರಿಣೇಶ್ವರ ಧರಿಸುವ ಮುಖವಾಡಕ್ಕೂ ಒಂದು ಕಥೆ ಇದೆ. ಮೈಸೂರು ಸಂಸ್ಥಾನದ ಕೊನೆಯ ಮಹಾರಾಜರಾದ ಶ್ರೀ ಜಯಚಾಮರಾಜೇಂದ್ರ ಒಡೆಯರ್‌, ತಮಗೆ ಪುತ್ರ ಸಂತಾನವಾದ ಸವಿನೆನಪಿಗಾಗಿ (ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಹುಟ್ಟಿದ) 1953ರಲ್ಲಿ ಅರಮನೆ ಕೋಟೆಯಲ್ಲಿರುವ ಶ್ರೀ ತ್ರಿಣೇ ಶ್ವರ ಸ್ವಾಮಿ, ನಂಜನಗೂಡಿನ ಶ್ರೀ ಕಂಠೇಶ್ವರ ಸ್ವಾಮಿ ಹಾಗೂ ಮಲೆ ಮಹದೇಶ್ವರ ಸ್ವಾಮಿಗೆ ಚಿನ್ನದಲ್ಲಿ ಸುಂದರವಾದ ಕೊಳಗ (ಮುಖವಾಡ) ಮಾಡಿಸಿಕೊಟ್ಟಿದ್ದಾರೆ.

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.