![ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!](https://www.udayavani.com/wp-content/uploads/2024/07/team-india-415x277.jpg)
Kangaroo; ಥ್ರಿಲ್ಲರ್ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು
Team Udayavani, May 3, 2024, 11:06 AM IST
![Aditya’s kangaroo movie released](https://www.udayavani.com/wp-content/uploads/2024/05/kangroo-620x342.jpg)
ಆದಿತ್ಯ ನಾಯಕರಾಗಿ ನಟಿಸಿರುವ “ಕಾಂಗರೂ’ ಚಿತ್ರ ಇಂದು ತೆರೆಕಾಣುತ್ತಿದೆ. ಮೇ 4 ಆದಿತ್ಯ ಹುಟ್ಟುಹಬ್ಬ. ಹುಟ್ಟುಹಬ್ಬಕ್ಕೆ ಚಿತ್ರತಂಡ ಸಿನಿಮಾವನ್ನೇ ಕೊಡುಗೆಯಾಗಿ ನೀಡುತ್ತಿದೆ.
ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಹಿಟ್ಲಿಸ್ಟ್ ಸೇರುವ ಮೂಲಕ ಚಿತ್ರತಂಡದ ಮೊಗದಲ್ಲಿ ನಗುಮೂಡಿದೆ. ಚಿತ್ರದ ಬಗ್ಗೆ ಮಾತನಾಡುವ ನಟ ಆದಿತ್ಯ, “ಈ ಚಿತ್ರದಲ್ಲಿ ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ತಾಯಿ ಹೃದಯದ ಮಮತೆಯಿದೆ. “ನೀನೊಂದು ಮುಗಿಯದ ಮೌನ’ದಂತಹ ಎವರ್ ಗ್ರೀನ್ ಹಾಡನ್ನು ನನಗೆ ಕೊಟ್ಟವರು ಸಾಧು ಕೋಕಿಲ. ಅವರು ಮತ್ತೂಮ್ಮೆ ನನ್ನ ಚಿತ್ರಕ್ಕೆ ಅದ್ಭುತವಾದ ಮ್ಯೂಸಿಕ್ ಮಾಡಿಕೊಟ್ಟಿದ್ದಾರೆ. ಸಂಗೀತದ ನಂತರ ನಮ್ಮ ಚಿತ್ರದ ಮತ್ತೂಂದು ಹೈಲೈಟ್ ಎಂದರೆ ಛಾಯಾಗ್ರಹಣ. ಉದಯಲೀಲಾ ಅವರು ಅದ್ಭುತವಾಗಿ ಛಾಯಾಗ್ರಹಣ ಮಾಡಿಕೊಟ್ಟಿದ್ದಾರೆ. ನಾನು ಈ ಚಿತ್ರದಲ್ಲಿ ತನಿಖಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ’ ಎನ್ನುವುದು ಆದಿತ್ಯ ಮಾತು.
ಅನಿಮೇಶನ್ ಮೂಲಕ ಸಿನಿಮಾ…
“ನಿರ್ದೇಶಕ ಕಿಶೋರ್ ಕಥೆ ಕೇಳಿ ಎಂದರು. ನಾನು ಸರಿ ಎಂದೆ. ಆನಂತರ ಕೇಳುವುದು ಬೇಡ ಸಿನಿಮಾನೇ ತೋರಿಸುತ್ತೇನೆ ಎಂದರು. ನನಗೆ ಆಶ್ಚರ್ಯ ವಾಯಿತು. ಚಿತ್ರದ ಕಥೆಯನ್ನು ಅನಿಮೇಶನ್ ಮೂಲಕ ತೋರಿಸಿದ ಪ್ರಥಮ ನಿರ್ದೇಶಕ ಇವರೇ ಇರಬಹುದು’ ಎನ್ನುವ ಮೂಲಕ ಸಿನಿಮಾ ತಂಡದ ಕೆಲಸದ ಬಗ್ಗೆ ಮಾತನಾಡುತ್ತಾರೆ ಆದಿತ್ಯ.
ಸಸ್ಪೆನ್ಸ್ ಥ್ರಿಲ್ಲರ್ ಜರ್ನಿ
ಇದೊಂದು ಸಸ್ಪೆನ್ಸ್ – ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಕನ್ನಡದಲ್ಲಿ ಸಾಕಷ್ಟು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳು ಬಂದಿವೆಯಾದರೂ, ನಮ್ಮ ಚಿತ್ರ ಸ್ವಲ್ಪ ವಿಭಿನ್ನ. ಫ್ಯಾಮಿಲಿ ಆಡಿಯನ್ಸ್ ಗಾಗಿಯೇ ಮಾಡಿರುವ ಕಥೆ ಇದು. ಇನ್ನು ಕಾಂಗರೂ ಮೃದು ಸ್ವಭಾವದ ಪ್ರಾಣಿ. ಯಾರ ತಂಟೆಗೂ ಹೋಗುವುದಿಲ್ಲ. ಆದರೆ ತನ್ನ ಮಕ್ಕಳ ತಂಟೆಗೆ ಬಂದರೆ ಅದು ಯಾರನ್ನು ಬಿಡುವುದಿಲ್ಲ. ಇದೇ ಚಿತ್ರದ ಕಥಾಸಾರಾಂಶ.
ಆರೋಹ ಪ್ರೊಡಕ್ಷನ್ಸ್ನಡಿ ಚೆನ್ನಕೇಶವ ಬಿ.ಸಿ, ನರಸಿಂಹ ಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲಾರ ಮಂಡ್ಯ ಹಾಗೂ ಕೆ.ಜಿ.ಆರ್.ಗೌಡ ನಿರ್ಮಿಸಿರುವ ಈ ಚಿತ್ರವನ್ನು ಕಿಶೋರ್ ಮೇಗಳಮನೆ ನಿರ್ದೇಶಿಸಿದ್ದಾರೆ. ರಂಜನಿ ರಾಘವನ್ ಈ ಚಿತ್ರದ ನಾಯಕಿ.
ಟಾಪ್ ನ್ಯೂಸ್
![ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!](https://www.udayavani.com/wp-content/uploads/2024/07/team-india-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!](https://www.udayavani.com/wp-content/uploads/2024/07/team-india-150x100.jpg)
ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!
![Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ](https://www.udayavani.com/wp-content/uploads/2024/07/hassan-150x104.jpg)
Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ
![Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…](https://www.udayavani.com/wp-content/uploads/2024/07/crocodile-150x93.jpg)
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
![DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ](https://www.udayavani.com/wp-content/uploads/2024/07/dines-150x83.jpg)
DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ
![Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು](https://www.udayavani.com/wp-content/uploads/2024/07/7-150x90.jpg)
Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.