ಭೀಮಣ್ಣನ ಹಿಂದೆ ಬರಗೂರು

ಬಯಲಾಟದ ಕಲಾವಿದನ ಏಳು-ಬೀಳಿನ ಸುತ್ತ

Team Udayavani, Aug 2, 2019, 5:00 AM IST

k-25

ನಿರ್ದೇಶಕ ಬರಗೂರು ರಾಮಚಂದ್ರಪ್ಪ ಸದ್ದಿಲ್ಲದೆಯೇ ಒಂದು ಸಿನಿಮಾ ಮಾಡಿ ಮುಗಿಸಿದ್ದಾರೆ. ಆ ಚಿತ್ರಕ್ಕೆ “ಬಯಲಾಟದ ಭೀಮಣ್ಣ’ ಎಂದು ಹೆಸರಿಡಲಾಗಿದೆ. ಅದು ಅವರೇ ಬರೆದ ಕಥೆ. ರಂಗ ಕಲಾವಿದನ ಯಶೋಗಾಥೆ ಕುರಿತಾದ ಚಿತ್ರವದು. ಇತ್ತೀಚೆಗೆ ರವಿಚಂದ್ರನ್‌ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

ನಿರ್ದೇಶಕ ಬರಗೂರು ರಾಮಚಂದ್ರಪ್ಪ ತಮ್ಮ “ಬಯಲಾಟದ ಭೀಮಣ್ಣ’ ಕುರಿತು ಹೇಳಿದ್ದಿಷ್ಟು. “ಇದು ನಾನೇ ಬರೆದ ಕಥೆಯೊಂದನ್ನು ಆಧರಿಸಿದ ಚಿತ್ರ. ಯಕ್ಷಗಾನ ಮತ್ತು ಬಯಲಾಟ ದೊಡ್ಡ ಕಲೆ. ಬಯಲಾಟದ ಕಲಾವಿದನೊಬ್ಬ ಸಾಮಾಜಿಕ ನಾಟಕದಲ್ಲೊಮ್ಮೆ ನಟಿಸಬೇಕು ಎಂಬ ಆಸಕ್ತಿ ಉಳ್ಳವನು. ಆದರೆ, ಅದನ್ನು ಮಾಡದಂತಹ ಸ್ಥಿತಿ ಎದುರಾಗುತ್ತದೆ. ಬಯಲಾಟ ಕಲಾವಿದನ ಬದುಕಿನ ಏಳು-ಬೀಳು, ನಿರಾಸೆ, ಹತಾಶೆ ಕುರಿತಾದ ವಿಷಯಗಳು ಇಲ್ಲಿವೆ. ಇದೊಂದು ಹಳ್ಳಿ ಕಥೆಯಾಗಿದ್ದರೂ, ದೇಶದ ಕಲಾವಿದನ ಆಶೋತ್ತರ ಇಲ್ಲಿದೆ. ಹಳ್ಳಿಕಥೆಯಾಗಿದ್ದರೂ, ದೇಶದ ಕಥೆಯೇ ಎನ್ನುವಷ್ಟರ ಮಟ್ಟಿಗೆ ರೂಪಕವಾಗಿರಲಿದೆ’ ಎಂದು ಹೇಳಿದ ಬರಗೂರು, ರವಿಚಂದ್ರನ್‌ ಅವರ ಗುಣಗಾನ ಮಾಡಿದ್ದು ಹೀಗೆ, “ರವಿಚಂದ್ರನ್‌ ನೇರ ಮಾತುಗಾರ. ಭಾರತೀಯ ಚಿತ್ರರಂಗದಲ್ಲಿ ತೆರೆಯ ಮೇಲೆ ಹಾಡುಗಳ ಚಿತ್ರಣವನ್ನು ಅದ್ಭುತವಾಗಿ ಕಟ್ಟಿಕೊಡುವ ಇಬ್ಬರು ಅದ್ಭುತ ಪ್ರತಿಭೆಗಳೆಂದರೆ ಅದು ರವಿಚಂದ್ರನ್‌ ಹಾಗೂ ರಾಜ್‌ಕಪೂರ್‌. ಹಾಡಿನ ಸಂದರ್ಭದ ಭಾವ ತೀವ್ರತೆಯನ್ನು ಚೆನ್ನಾಗಿ ಕಟ್ಟಿಕೊಡುತ್ತಾರೆ. ಹಾಡಲ್ಲಿ ಸೌಂದರ್ಯ ಪ್ರಜ್ಞೆ, ಭಾವ ಪ್ರಜ್ಞೆ ವಿಶೇಷವಾಗಿ ಕಾಣಬಹುದು. ನನ್ನ ಪ್ರಕಾರ, ಸಾಲ ಮಾಡಿಯೂ ಸಂಭ್ರಮ ಪಡುವ ಕಲಾವಿದ ಅಂದರೆ ಅದು ರವಿಚಂದ್ರನ್‌. ದಿನದ 24 ಗಂಟೆ ಸಿನಿಮಾ ಬಿಟ್ಟು ಬೇರೆ ಏನೂ ಯೋಚಿಸಲ್ಲ. ರವಿಚಂದ್ರನ್‌ ಅವರ ಸರಳ ಮಾತುಗಳ ಹಿಂದೆ ಫಿಲಾಸಫಿ ಇರುತ್ತದೆ. ಅದು ಸಿನಿಮಾ ಬದುಕಿಗೆ ಸಂಬಂಧಿಸಿದಂತೆ ಸೀಮಿತವಾಗಿರುತ್ತೆ. ಅವರ ಚಿತ್ರಗಳ ಕುರಿತು ಗಂಭೀರ ಅಧ್ಯಯನ ಆಗಬೇಕು’ ಎಂಬುದು ಬರಗೂರು ಮಾತು.

ಈ ವೇಳೆ ರವಿಚಂದ್ರನ್‌ ಕೂಡ, ಬಯಲಾಟದ ಭೀಮಣ್ಣ ಕುರಿತು ಮಾತನಾಡಿದರು. “ಬರಗೂರು ಅವರು ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುವ ಮೂಲಕ ಅವರ ಮೊಗದಲ್ಲಿ ನಗುವಿಗೆ ಕಾರಣರಾಗಿದ್ದಾರೆ. ಅವರು ನನಗೂ ಮೇಷ್ಟ್ರು ಇದ್ದಂತೆ. ಅವರ ನನ್ನ ಸ್ನೇಹ ಹಳೆಯದು. ಆ ಪ್ರೀತಿಗೆ ನಾನು ಬಂದಿದ್ದೇನೆ. ಚಿತ್ರಕ್ಕೆ ಒಳ್ಳೆಯದಾಗಲಿ’ ಎಂದರು ರವಿಚಂದ್ರನ್‌.

ಸಂಗೀತ ನಿರ್ದೇಶಕಿ ಶಮಿತಾ ಮಲಾ°ಡ್‌ ಅವರಿಗೆ ಬರಗೂರು ರಾಮಚಂದ್ರಪ್ಪ ಅವರ ಚಿತ್ರಕ್ಕೆ ಸಂಗೀತ ನೀಡಿದ್ದು ಹೆಮ್ಮೆಯಂತೆ. ಆ ಬಗ್ಗೆ ಹೇಳುವ ಶಮಿತಾ ಮಲಾ°ಡ್‌, “ಚಿತ್ರದಲ್ಲಿ ಎಲ್ಲಾ ಗೀತೆಗಳಿಗೆ ಬರಗೂರು ಅವರ ಸಾಹಿತ್ಯವಿದೆ. ಇನ್ನು, ಚಿತ್ರಕ್ಕೆ ಪೊಲೀಸ್‌ ಅಧಿಕಾರಿ ರೂಪಾ, ಸುಂದರ್‌ರಾಜ್‌, ಸಂಚಾರಿ ವಿಜಯ್‌ ಹಾಡಿರುವುದು ವಿಶೇಷ. ಪ್ರತಿ ಹಾಡಲ್ಲೂ ವಿಶೇಷ ಅರ್ಥವಿದೆ. ಈ ಚಿತ್ರ ನನ್ನ ಬದುಕಿನ ಮೈಲಿಗಲ್ಲು’ ಎಂದರು ಶಮಿತಾ.

ಚಿತ್ರಕ್ಕೆ ಹಾಡಿರುವ ಪೊಲೀಸ್‌ ಅಧಿಕಾರಿ ರೂಪಾ, ಸಂಚಾರಿ ವಿಜಯ್‌, ಸುಂದರ್‌ರಾಜ್‌, ಕುರಿಗಾಹಿ ಹನುಮಂತ ಬಟ್ಟೂರು ತಮ್ಮ ಹಾಡುಗಳ ಬಗ್ಗೆ ಮಾತನಾಡಿದರು. ರಂಜಿತ್‌ ಎಂಬ ಹೊಸ ಪ್ರತಿಭೆ ಈ ಚಿತ್ರದ ಮೂಲಕ ಹೀರೋ ಆಗಿ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದೆ. ಚಿತ್ರವನ್ನು ನಂಜಪ್ಪ ಕಾಳೇಗೌಡ, ಕೃಷ್ಣವೇಣಿ, ಧನಲಕ್ಷ್ಮಿ, ಕೃಷ್ಣಪ್ಪ ನಿರ್ಮಾಣ ಮಾಡಿದ್ದಾರೆ. ನಾಗರಾಜ ಆದವಾನಿ ಛಾಯಾಗ್ರಹಣವಿದೆ. ಸುರೇಶ್‌ ಅರಸ್‌ ಸಂಕಲನವಿದೆ. ಚಿತ್ರದಲ್ಲಿ “ಸ್ಪರ್ಶ’ ರೇಖಾ, ಪ್ರಮೀಳಾ ಜೋಷಾಯ್‌, ರಾಧಾ, ಮಾ.ಆಕಾಂಕ್ಷ್, ವತ್ಸಲಾ ಮೋಹನ್‌, ಶಾಂತರಾಜ್‌, ಬಸವರಾಜ್‌, ರಂಗಾರೆಡ್ಡಿ , ಅರುಣ್‌ ಇತರರು ನಟಿಸಿದ್ದಾರೆ.

ವಿಜಯ್‌ ಭರಮಸಾಗರ

ಟಾಪ್ ನ್ಯೂಸ್

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Pushpa-2; Bollywood withered in Pushpa fire

Pushpa-2; ಪುಷ್ಪ ಫೈರ್‌ ನಲ್ಲಿ ಬಾಡಿದ ಬಾಲಿವುಡ್

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.