ಇಂದಿನಿಂದ ಭಜರಂಗಿ-2 ಹವಾ ಶುರು: ಪ್ರೇಕ್ಷಕರ ಮುಂದೆ ತೆರೆದುಕೊಳ್ಳಲಿದೆ ಹೊಸ ಲೋಕ


Team Udayavani, Oct 29, 2021, 9:03 AM IST

bhajarangi 2

ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಭಿಮಾನಿಗಳ ಕುತೂಹಲ ಹೆಚ್ಚುತ್ತಲೇ ಇದೆ. ಅದಕ್ಕೆ ಕಾರಣ “ಭಜರಂಗಿ-2′. ಶಿವರಾಜ್‌ ಕುಮಾರ್‌ ನಟನೆಯ “ಭಜರಂಗಿ-2′ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ದೊಡ್ಡ ಗ್ಯಾಪ್‌ನ ನಂತರ ಬಿಡುಗಡೆಯಾಗುತ್ತಿರುವ ಸಿನಿಮಾ ಇದಾಗಿರುವುದರಿಂದ ಸಹಜವಾಗಿಯೇ ಶಿವಣ್ಣ ಫ್ಯಾನ್ಸ್‌ ಈ ಚಿತ್ರವನ್ನು ಅದ್ಧೂರಿಯಾಗಿ ಆಚರಿಸಲು ತಯಾರಿ ನಡೆಸಿದ್ದಾರೆ. ಈ ಮೂಲಕ ಕೋವಿಡ್‌ ಎರಡನೇ ಲಾಕ್‌ಡೌನ್‌ ನಂತರ ಬಿಡುಗಡೆಯಾಗುತ್ತಿರುವ ಅದ್ಧೂರಿ ಸಿನಿಮಾವಾಗಿ “ಭಜರಂಗಿ-2′ ಹೊರಹೊಮ್ಮುತ್ತಿದೆ. ಎ.ಹರ್ಷ ಅವರ ಕನಸಿಗೆ, ನಿರ್ಮಾಪಕ ಜಯಣ್ಣ ಸಾಥ್‌ ನೀಡುವ ಮೂಲಕ ಒಂದು ಫ್ಯಾಂಟಸಿ ಲೋಕವನ್ನು ಸೃಷ್ಟಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್‌, ಹಾಡುಗಳು ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿವೆ.

“ಭಜರಂಗಿ-2′ ಚಿತ್ರದ ಕೆಲವು ಹೈಲೈಟ್ಸ್‌ಗಳು ಇಲ್ಲಿವೆ…

ಶಿವರಾಜ್‌ಕುಮಾರ್‌- ಹರ್ಷ ಕಾಂಬಿನೇಶನ್‌ನಲ್ಲಿ ಈ ಹಿಂದೆ “ಭಜರಂಗಿ-2′ ಚಿತ್ರ ಬಂದು, ಹಿಟ್‌ ಆಗಿತ್ತು. ಆದರೆ, “ಭಜರಂಗಿ-2′ ಅದರ ಮುಂದುವರೆದ ಭಾಗವಲ್ಲ. ಸಂಪೂರ್ಣ ಬೇರೆಯೇ ಕಥೆ. ಆ ಚಿತ್ರದ ನೋಡಿರದಂತಹ ಒಂದು ಹೊಸ ಲೋಕವನ್ನು ಇಲ್ಲಿ ಸೃಷ್ಟಿಸಲಾಗಿದೆ. ಚಿತ್ರದ ಟೈಟಲ್‌ ಅಷ್ಟೇ ಇಲ್ಲಿ ಮುಂದುವರೆದಿದೆಯೇ ಹೊರತು ಕಥೆಯಲ್ಲ.

* ಭಜರಂಗಿ-2 ಒಂದು ಫ್ಯಾಂಟಸಿ ಡ್ರಾಮಾ ಸಿನಿಮಾ. ನೀವಿದನ್ನು ಡಿವೋಶನಲ್‌ ಮಾಸ್‌ ಸಿನಿಮಾ ಎಂದು ಕರೆಯಬಹುದು. ಅದಕ್ಕೆ ಕಾರಣ ಚಿತ್ರದಲ್ಲಿ ಕೆಟ್ಟದು-ಒಳ್ಳೆಯದು, ದೇವರು- ರಾಕ್ಷಸರು ಈ ತರಹದ ಒಂದಷ್ಟು ಅಂಶಗಳು ಇರುವುದು. ಜೊತೆಗೆ ಹಾಲಿವುಡ್‌ ಸಿನಿಮಾಗಳಲ್ಲಿ ಕಾಣುವಂತಹ ವಿಚಿತ್ರ ಗೆಟಪ್‌ನ ಪಾತ್ರಗಳು ಈಚಿತ್ರದಲ್ಲಿದ್ದು, ಪ್ರೇಕ್ಷಕರನ್ನು ಹೊಸ ರೀತಿಯಲ್ಲಿ ರಂಜಿಸಲಿವೆ.

* ಚಿತ್ರದಲ್ಲಿ ವೈದ್ಯೋ ನಾರಾಯಣೋ ಹರಿ ಎಂಬ ಹಾಡಿದೆ. ಆ ಹಾಡಿಗೂ ಇಡೀ ಕಥೆಗೂ ಒಂದು ಲಿಂಕ್‌ ಇದೆ. ಚಿತ್ರದ ಟ್ರೇಲರ್‌ನ್ನು ಸೂಕ್ಷ್ಮವಾಗಿ ಗಮನಿಸಿದಾಗ “ವೈದ್ಯೋ ನಾರಾಯಣೋ ಹರಿ’ ಕಾನ್ಸೆಪ್ಟ್ನ ಕೆಲವು ದೃಶ್ಯಗಳು ಕಾಣಸಿಗುತ್ತವೆ.

* ಸಾಮಾನ್ಯವಾಗಿ ಚಿತ್ರದ ಟ್ರೇಲರ್‌ಗಳಲ್ಲಿ ಡೈಲಾಗ್‌ ಇರುತ್ತವೆ. ಆದರೆ, “ಭಜರಂಗಿ-2′ ಚಿತ್ರದ ಟ್ರೇಲರ್‌ನಲ್ಲಿ ಒಂದೇ ಒಂದು ಡೈಲಾಗ್‌ ಇಲ್ಲ. ಅದಕ್ಕೆ ಕಾರಣ, ಮಾತಿಗಿಂತ ಸನ್ನಿವೇಶ ಮುಖ್ಯ ಎಂಬುದು. ಇಡೀ ಚಿತ್ರದ ಮೇಕಿಂಗ್‌, ಹಿನ್ನೆಲೆ ಸಂಗೀತ, ಕಲಾವಿದರ ಮುಖಭಾವದಲ್ಲೇ ಕಥೆ ಹೇಳಬೇಕೆಂಬ ಕಾನ್ಸೆಪ್ಟ್ನಲ್ಲಿ ಈ ಟ್ರೇಲರ್‌ ಕಟ್ಟಿಕೊಡಲಾಗಿದೆ. ಅದರಂತೆ “ಭಜರಂಗಿ-2′ ಟ್ರೇಲರ್‌ ಹಿಟ್‌ ಆಗಿ, ಸಿನಿಮಾದ ಕುತೂಹಲವನ್ನು ಹೆಚ್ಚಿಸಿದೆ. ಜೊತೆಗೆ ಅರ್ಜುನ್‌ ಜನ್ಯಾ ಸಂಗೀತದ ಹಾಡುಗಳು ಈಗಾಗಲೇ ಹಿಟ್‌ಲಿಸ್ಟ್‌ ಸೇರಿ, ಭಜರಂಗಿಯನ್ನು ಮತ್ತೂಂದು ಎತ್ತರಕ್ಕೆ ಕೊಂಡೊಯ್ಯಿದಿದೆ.

* ಈ ಸಿನಿಮಾದ ಹೈಲೈಟ್‌ಗಳಲ್ಲಿ ಸೆಟ್‌ ಕೂಡಾ ಒಂದು. ಸೆಟ್‌ಗಿಂತ ಗ್ರಾಫಿಕ್‌ ಮೊರೆ ಹೋಗುತ್ತಿರುವ ಈ ಸಮಯದಲ್ಲಿ “ಭಜರಂಗಿ-2′ ಚಿತ್ರದ ಬಹುತೇಕ ಚಿತ್ರೀಕರಣ ಸೆಟ್‌ನಲ್ಲೇ ನಡೆದಿದೆ.

*ಒಮ್ಮೆ ಸುಟ್ಟುಹೋದ ಸೆಟ್‌ ಅನ್ನೇ ಚಿತ್ರತಂಡ ಅಷ್ಟೇ ಪ್ರೀತಿಯಿಂದ ಮರು ನಿರ್ಮಾಣ ಮಾಡಿದೆ. ಈ ಮೂಲಕ ತೆರೆಮೇಲೆ ಹೊಸ ಲೋಕವೊಂದು ತೆರೆದುಕೊಳ್ಳಲಿದೆ.

* ಈ ಚಿತ್ರದಲ್ಲಿ ದೊಡ್ಡ ತಾರಾಬಳಗವಿದೆ. ಶಿವರಾಜ್‌ಕುಮಾರ್‌, ಭಾವನಾ, ಶ್ರುತಿ, ಶಿವರಾಜ್‌ ಕೆ.ಆರ್‌.ಪೇಟೆ… ಹೀಗೆ ಸಾಕಷ್ಟು ಮಂದಿ ನಟಿಸಿದ್ದಾರೆ. ಆದರೆ, ಇವರೆಲ್ಲರೂ ವಿಭಿನ್ನ ಪಾತ್ರ ಹಾಗೂ ಗೆಟಪ್‌ನಲ್ಲಿ ಕಾಣಿಸಿಕೊಂಡು ಚಿತ್ರದ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

* ದೇಶದಾದ್ಯಂತ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪರದೆಗಳಲ್ಲಿ ಈ ಚಿತ್ರ ಪ್ರದರ್ಶನ ಕಾಣಲಿದೆ. ಈ ಮೂಲಕ ಎರಡನೇ ಲಾಕ್‌ಡೌನ್‌ ನಂತರ ಕನ್ನಡ ಚಿತ್ರರಂಗದಿಂದ ಬಿಡುಗಡೆಯಾಗುತ್ತಿರುವ ಬಹುನಿರೀಕ್ಷಿತ ಹಾಗೂ ಅದ್ಧೂರಿ ಚಿತ್ರವಾಗಿ “ಭಜರಂಗಿ-2′ ಬಿಡುಗಡೆಯಾಗುತ್ತಿದೆ.

* ಇಡೀ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಈ ಹಿಂದಿನ “ಭಜರಂಗಿ’ ಚಿತ್ರ ಇಂದಿನ “ಭಜರಂಗಿ’ ಚಿತ್ರ ಒಂದು ಫೀಲ್‌ ಕೊಟ್ಟರೆ, “ಭಜರಂಗಿ-2′ ಮತ್ತೂಂದು ಭಜರಂಗಿ-2′ ಮತ್ತೂಂದು ಫೀಲ್‌ ಕೊಡಲಿದೆ.

ಹೊಸದೊಂದು ಫ್ಯಾಂಟಸಿ ಹೊಸದೊಂದು ಫ್ಯಾಂಟಸಿ ಲೋಕವನ್ನು ಇಲ್ಲಿ ಸೃಷ್ಟಿಸಲಾ ಲೋಕವನ್ನು ಇಲ್ಲಿ ಸೃಷ್ಟಿಸಲಾಗಿದೆ. ಸಾಕಷ್ಟು ಅಡೆತಡೆ ದೆ. ಸಾಕಷ್ಟು ಅಡೆತಡೆ ಬಂದರೂ,  ನಿರ್ಮಾಪಕ ಜಯಣ್ಣ ಧೈರ್ಯವಾಗಿ ನಿಂತು ಚಿತ್ರವನ್ನು ಅದ್ಧೂರಿಯಾಗಿ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸಿದ್ದಾರೆ.. ನಿರ್ದೇಶಕ ‌ಹರ್ಷ ಶ್ರಮ ತೆರೆಮೇಲೆ ಕಾಣಲಿದೆ.- ಶಿವರಾಜ್‌ ಕುಮಾರ್‌

ರವಿ ಪ್ರಕಾಶ್ ರೈ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.