ಧರ್ಮಕ್ಕಿಂತ ಬದುಕು ಮುಖ್ಯ: ಮಾರ್ಚ್‌ 22ರಲ್ಲಿ ಶೆಟ್ಟರೂ ಇದ್ದಾರೆ


Team Udayavani, Apr 14, 2017, 3:50 AM IST

14-SUCHI-7.jpg

“ಮಾರ್ಚ್‌ 22′ ಎಂಬ ತಮ್ಮ ಹೊಸ ಚಿತ್ರದ ಬಗ್ಗೆ ಮೂರು ವಿಷಯವನ್ನು ಹೇಳಬೇಕಿತ್ತು ಕೋಡ್ಲು ರಾಮಕೃಷ್ಣ.
1. ಮುಂಚೆ ಅನಂತ ನಾಗ್‌ ಎದುರು ಲಕ್ಷ್ಮೀ ನಟಿಸಬೇಕಿತ್ತು. ಈಗ ಡೇಟ್‌ ಸಮಸ್ಯೆಯಿಂದಾಗಿ ಲಕ್ಷ್ಮೀ ಬದಲು ಗೀತಾ ಬಂದಿರುವುದು.
2. ಎರಡನೆಯದಾಗಿ ಚಿತ್ರದಲ್ಲಿ ಅನಿವಾಸಿ ಭಾರತೀಯ ಬಿ.ಆರ್‌. ಶೆಟ್ಟಿ ನಟಿಸಿರುವುದು.
3. ಮೂರನೆಯದಾಗಿ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿರುವುದು.

ಈ ಮೂರೂ ವಿಷಯಗಳನ್ನು ತಿಳಿಸುವುದಕ್ಕೆ ಕೋಡ್ಲು ಪತ್ರಿಕಾಗೋಷ್ಠಿ ಆಯೋಜಿಸಿದ್ದರು. ವಿಶೇಷವೆಂದರೆ, ಈ ಪತ್ರಿಕಾಗೋಷ್ಠಿಯಲ್ಲಿ ಖುದ್ದು ಬಿ.ಆರ್‌. ಶೆಟ್ಟಿ ಹಾಜರಿದ್ದು, ನಟನೆಯ ತಮ್ಮ ಅನುಭವಗಳನ್ನು ಹಂಚಿಕೊಂಡರು. ಅವರು ಮಾತಾಡಿದ್ದು ಕಡೆಗೆ. ಅದಕ್ಕೂ ಮುನ್ನ ಚಿತ್ರದಲ್ಲಿ ನಟಿಸಿರುವ ಶರತ್‌ ಲೋಹಿತಾಶ್ವ, ಪದ್ಮಜಾ ರಾವ್‌, ರಮೇಶ್‌ ಭಟ್‌ ಮುಂತಾದವರು ಮಾತಾಡಿದ್ದರು. ಚಿತ್ರ ಮೂಡಿ ಬಂದಿರುವ ರೀತಿಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸುವುದರ ಜೊತೆಗೆ, ನಿರ್ಮಾಪಕ ಹರೀಶ್‌ ಶೇರಗಾರ್‌ ಅವರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರೂ ಮಾತು ಮುಗಿಸಿದ ನಂತರ ಬಿ.ಆರ್‌. ಶೆಟ್ಟರು ಮಾತಿಗೆ ನಿಂತರು.

ಬಿ.ಆರ್‌. ಶೆಟ್ಟರು ಈ ಚಿತ್ರದಲ್ಲಿ ನಟಿಸುವುದಕ್ಕೆ ಮುಖ್ಯ ಕಾರಣ ನಿರ್ಮಾಪಕರಂತೆ. ಅವರು ಬಂದು ಕೇಳಿದಾಗ ಇಲ್ಲ ಎನ್ನಲಾಗದೆ ಅವರು ಚಿತ್ರದಲ್ಲಿ ನಟಿಸಿದರಂತೆ. ಜೊತೆಗೆ ಚಿತ್ರಗಳಲ್ಲಿ ನಟಿಸಬೇಕು ಎಂಬುದು ಅವರ ಬಹಳ ವರ್ಷಗಳ ಆಸೆಯಾಗಿತ್ತಂತೆ. “ಹಿಂದೊಮ್ಮೆ “ಕೋಟಿ-ಚೆನ್ನಯ’ ತುಳು ಚಿತ್ರದಲ್ಲಿ ನಟಿಸಬೇಕಿತ್ತು. ಆದರೆ, ಹಣದ ತಾಪತ್ರಯ ಇದ್ದುದರಿಂದ ನಾನು ನಟನೆ ಬಿಟ್ಟು, ದುಬೈಗೆ ಹೋದೆ. ಆ ನಂತರ ಶ್ರೀದೇವಿ ಜೊತೆಗೆ ನಟಿಸುವುದಕ್ಕೆ ಅವಕಾಶ ಸಿಕ್ಕಿತ್ತು. ನನ್ನ ಹೆಂಡತಿ ಬಿಡಲಿಲ್ಲ. ಈಗಲೂ ನಟಿಸುವುದು ಬಹಳ ಕಷ್ಟವಾಗಿತ್ತು. ಕಾರಣ ನನ್ನ ವ್ಯಾಪಾರ. 32 ದೇಶಗಳಲ್ಲಿ ನನ್ನ ಬಿಝಿನೆಸ್‌ ಇದೆ. ಹರೀಶ್‌ ಫೋನ್‌ ಮಾಡಿ ಹೇಳುತ್ತಲೇ ಇದ್ದರು. ಕೊನೆಗೆ ಚಿತ್ರೀಕರಣದ ಕೊನೆಯ ದಿನ ಬಂದು ನನ್ನ ಕೆಲಸ ಮುಗಿಸಿಕೊಟ್ಟಿದ್ದೇನೆ. ರಾತ್ರಿ 9ಕ್ಕೆ ಶುರುವಾದ ಚಿತ್ರೀಕರಣ, ಮಧ್ಯರಾತ್ರಿ 2.30ರವರೆಗೂ ನಡೆದಿದೆ. ಐದು ನಿಮಿಷದ ಪದ್ಯಕ್ಕೆ ಐದು ಗಂಟೆಗಳ ಚಿತ್ರೀಕರಣವಾಗಿದೆ’ ಎಂದರು. ಇನ್ನು ಈ ತರಹ ಚಿತ್ರ ಈಗಿನ ಕಾಲಕ್ಕೆ ಬಹಳ ಸೂಕ್ತ ಎಂದರು ಬಿ.ಆರ್‌. ಶೆಟ್ಟರು. “ಕೋಮು ಸೌಹಾರ್ಧತೆಯನ್ನು ಪ್ರೋತ್ಸಾಹಿಸುವ ಸಿನಿಮಾ ಇದು. ಧರ್ಮಕ್ಕಿಂತ ಬದುಕು ಮುಖ್ಯ ಎಂದು ಸಾರುವ ಚಿತ್ರ ಇದು. ಈ ಚಿತ್ರ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಳ್ಳಲಿ’ ಎಂದು ಹಾರೈಸಿ ಮಾತು ಮುಗಿಸಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesh Chaturthi; ನಟಿಮಣಿಯರ ಚೌತಿ ಸಂಭ್ರಮ; ಬಾಲ್ಯದ ಹಬ್ಬದ ನೆನಪು ಹಂಚಿಕೊಂಡ ನಟಿಯರು…

Ganesh Chaturthi; ನಟಿಮಣಿಯರ ಚೌತಿ ಸಂಭ್ರಮ; ಬಾಲ್ಯದ ಹಬ್ಬದ ನೆನಪು ಹಂಚಿಕೊಂಡ ನಟಿಯರು…

ಇಂದಿನಿಂದ ತೆರೆಯಲ್ಲಿ ಅನ್ನ ಪ್ರಸಾದ

Anna Movie; ಇಂದಿನಿಂದ ತೆರೆಯಲ್ಲಿ ‘ಅನ್ನ’ ಪ್ರಸಾದ

Bhuvanam Gaganam ಹಾಡಿನ ಸದ್ದು; ರೊಮ್ಯಾಂಟಿಕ್‌ ಹಾಡಿನಲ್ಲಿ ರಚೆಲ್‌-ಪ್ರಮೋದ್‌

Bhuvanam Gaganam ಹಾಡಿನ ಸದ್ದು; ರೊಮ್ಯಾಂಟಿಕ್‌ ಹಾಡಿನಲ್ಲಿ ರಚೆಲ್‌-ಪ್ರಮೋದ್‌

Sandalwood; 8 ತಿಂಗಳು 150 ಸಿನಿಮಾ.. ಗೆದಿದ್ದು ಕೆಲವು, ಸೋತಿದ್ದು ಹಲವು

Sandalwood; 8 ತಿಂಗಳು 150 ಸಿನಿಮಾ.. ಗೆದ್ದಿದ್ದು ಕೆಲವು, ಸೋತಿದ್ದು ಹಲವು

Vinay Rajkumar; ಪೆಪೆ ನೋಡಿದ ಬಳಿಕ ಮೌನ ಕಾಡಿತು..: ವಿನಯ್‌ ಮಾತು

Vinay Rajkumar; ಪೆಪೆ ನೋಡಿದ ಬಳಿಕ ಮೌನ ಕಾಡಿತು..: ವಿನಯ್‌ ಮಾತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.