‘ಬಡವ ರಾಸ್ಕಲ್‌’ ನಲ್ಲಿ ಡಾಲಿ ಕನಸು


Team Udayavani, Dec 24, 2021, 9:03 AM IST

badava rascal

ಇದು ನನಗೆ ತುಂಬಾನೇ ಸ್ಪೆಷಲ್‌ ಸಿನಿಮಾ…’ – ಹೀಗೆ ಹೇಳಿ ಒಂದು ಕ್ಷಣ ಮೌನವಾದರು ಧನಂಜಯ್‌. ಅವರ ಮಾತಲ್ಲಿ ಒಂದು ತೃಪ್ತಭಾವವಿತ್ತು. ಒಂದೊಳ್ಳೆಯ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುತ್ತಿರುವ ಖುಷಿಯೂ ಇತ್ತು. ಇಷ್ಟು ಹೇಳಿದ ಮೇಲೆ ಧನಂಜಯ್‌ ಯಾವ ಸಿನಿಮಾ ಬಗ್ಗೆ ಮಾತನಾಡುತ್ತಿದ್ದಾರೆಂಬುದನ್ನು ಪ್ರತ್ಯೇಕವಾಗಿ ಹೇಳುವಂತಿಲ್ಲ.

ಹೌದು, ಧನಂಜಯ್‌ ನಿರ್ಮಿಸಿ, ನಟಿಸಿರುವ “ಬಡವ ರಾಸ್ಕಲ್‌’ ಚಿತ್ರ ಇಂದು ತೆರೆಕಾಣುತ್ತಿದೆ. ಧನಂಜಯ್‌ ಸ್ವಲ್ಪ ಹೆಚ್ಚೇ ಎಕ್ಸೈಟ್‌ ಆಗಿದ್ದಾರೆ. ಅದಕ್ಕೆ ಮುಖ್ಯ ಕಾರಣ ನಿರ್ಮಾಣ. ನಟನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟು, ಆರಂಭದಲ್ಲಿ ಸಾಕಷ್ಟು ಕಷ್ಟದ ದಿನಗಳನ್ನು ನೋಡಿ, “ಡಾಲಿ’ ಪಾತ್ರದ ಮೂಲಕ ಸಿಕ್ಕಾಪಟ್ಟೆ ಫೇಮಸ್  ಆದ  ನಟ ಧನಂಜಯ್‌, ನಟನಾಗಿ ಬೇಡಿಕೆಯಲ್ಲಿರುವಾಗಲೇ ನಿರ್ಮಾಣದ ಕನಸು ಕಂಡವರು. ಅದರ ಫ‌ಲವಾಗಿ ಮೂಡಿಬಂದಿರೋದು “ಬಡವ ರಾಸ್ಕಲ್‌’.

ಇದು ಡಾಲಿ ಶ್ರಮದ ಸಿನಿಮಾ, ಜೊತೆಗೊಂದು ಕನಸು. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡು, ಟ್ರೇಲರ್‌ ಹಿಟ್‌ ಆಗುವ ಮೂಲಕ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

ಚಿತ್ರದ ಬಗ್ಗೆ ಮಾತನಾಡುವ ಧನಂಜಯ್‌, “ಬಡವ ರಾಸ್ಕಲ್‌ ಫ್ಯಾಮಿಲಿ ಆಡಿಯನ್ಸ್‌ಗೆ ಹೆಚ್ಚು ಕನೆಕ್ಟ್ ಆಗುವ ಸಿನಿಮಾ. ಬರೀ ಹೀರೋಯಿಸಂ ಇಲ್ಲ. ಪ್ರತಿ ಪಾತ್ರವೂ ಮಾತನಾಡುತ್ತದೆ. ಅಷ್ಟೊಂದು ಪ್ರಾಮುಖ್ಯತೆ ಇಲ್ಲಿದೆ. ಸಮಯ, ಸಂದರ್ಭಕ್ಕನುಗುಣವಾಗಿ ಹೀರೋಯಿಂಸ ತೋರಿಸಲಾಗಿದೆ’ ಎನ್ನುವ ಧನಂಜಯ್‌ ಸ್ವಲ್ಪ ಹೆಚ್ಚೇ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ ಪ್ರೀಮಿಯರ್‌ ಶೋ. ಮೈಸೂರಿನಲ್ಲಿ ಪ್ರೀಮಿಯರ್‌ ಶೋ ನಡೆದಿದೆ. ಪ್ರೀಮಿಯರ್‌ ಶೋ ಟಿಕೆಟ್‌ ಬುಕ್ಕಿಂಗ್‌ ಓಪನ್‌ ಆದ ಕೇವಲ ಎರಡು ಗಂಟೆಯಲ್ಲೇ ಅಷ್ಟೂ ಟಿಕೆಟ್‌ಗಳು ಮಾರಾಟವಾಗುವ ಮೂಲಕ ಜನ ಸಿನಿಮಾದ ಬಗೆಗಿನ ಕುತೂಹಲ ತೋರಿಸಿದ್ದಾರೆ.

ಇನ್ನು, ಮೊದಲ ಬಾರಿಗೆ ನಿರ್ಮಾಣ ಮಾಡಿರುವ ಧನಂಜಯ್‌ಗೆ ಮುಂದೆ ಮತ್ತಷ್ಟು ಸಿನಿಮಾಗಳನ್ನು ನಿರ್ಮಿಸುವ ಕನಸಿದೆ. “ಕನ್ನಡದಲ್ಲಿ ಒಳ್ಳೆಯ ಸಿನಿಮಾಗಳನ್ನು ನಿರ್ಮಿಸಿ, ಹೊಸಬರಿಗೆ ಅವಕಾಶ ನೀಡುವ ಕನಸಿದೆ. ಅವೆಲ್ಲವೂ “ಬಡವ ರಾಸ್ಕಲ್‌’ ಮೇಲೆ ನಿಂತಿದೆ. ಈಗಾಗಲೇ ಸಿನಿಮಾ ನೋಡಿರುವವರು ನಿರ್ಮಾಪಕರಾಗಿಯೂ ಯಶಸ್ವಿಯಾಗುತ್ತೀರಿ ಎನ್ನುವ ಭರವಸೆ ನೀಡಿದ್ದಾರೆ. ಅಂತಿಮವಾಗಿ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದಷ್ಟೇ ಮುಖ್ಯವಾಗುತ್ತದೆ’ ಎನ್ನುವುದು ಧನಂಜಯ್‌ ಮಾತು.

“ಬಡವ ರಾಸ್ಕಲ್‌’ ಸಾಕಷ್ಟು ಅಡೆತಡೆಗಳನ್ನು ದಾಟಿಕೊಂಡು ಬಂದು ಇಂದು ತೆರೆಕಾಣುತ್ತಿದೆ. ಚಿತ್ರವನ್ನು ಶಂಕರ್‌ ಗುರು ನಿರ್ದೇಶಿಸಿದ್ದು, ಧನಂಜಯ್‌, ಅಮೃತಾ ಅಯ್ಯಂ ಗಾರ್‌, ರಂಗಾಯಣ ರಘು, ತಾರಾ, ನಾಗಭೂಷಣ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.