ಏಕ್‌ ಚಿತ್ರ ಕಥಾ

ರಿಷಭ್‌ ಸಂಗ ಮತ್ತು ಸಂಗಮದಲ್ಲಿ ಭವಿಷ್ಯ ಕಾಣುವವರು...

Team Udayavani, Dec 6, 2019, 6:12 AM IST

ws-36

ಕನ್ನಡದಲ್ಲಿ ಈ ವಾರ ಮತ್ತೂಂದು “ಕಥಾ ಸಂಗಮ’ ತೆರೆಗೆ ಬರುತ್ತಿದೆ. “ಕಥಾ ಸಂಗಮ’ ಅಂದ್ರೆ ಕನ್ನಡ ಸಿನಿಪ್ರಿಯರಿಗೆ ಮೊದಲು ನೆನಪಿಗೆ ಬರುವ ಹೆಸರು ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್‌. 70ರ ದಶಕದಲ್ಲಿ ವಿನೂತನ ಪ್ರಯೋಗವಾಗಿ ತೆರೆಗೆ ಬಂದಿದ್ದ “ಕಥಾ ಸಂಗಮ’ ಇಂದಿಗೂ ಸಿನಿಪ್ರಿಯರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಇದೇ ಪ್ರಯೋಗವನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ನಿರ್ದೇಶಕ ರಿಷಭ್‌ ಶೆಟ್ಟಿ ಈ ವಾರ “ಕಥಾ ಸಂಗಮ’ ಎನ್ನುವ ಹೆಸರಿನಲ್ಲಿ ಅಂಥದ್ದೇ ಮತ್ತೂಂದು ಪ್ರಯೋಗವನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದಾರೆ.

ಹಾಗಾದರೆ ಅಂದು ಬಂದ “ಕಥಾ ಸಂಗಮಕ್ಕೂ’ ಇಂದು ಬರುತ್ತಿರುವ “ಕಥಾ ಸಂಗಮ’ಕ್ಕೂ ಏನು ಸಂಬಂಧ? ಎರಡಕ್ಕೂ ಇರುವ ಹೋಲಿಕೆ, ಎರಡರಲ್ಲೂ ಇರುವ ವಿಭಿನ್ನತೆಗಳು ಏನು ಎನ್ನುವುದರ ಬಗ್ಗೆ ರಿಷಭ್‌ ಶೆಟ್ಟಿ ಮಾತನಾಡಿದ್ದಾರೆ.

“1976ರಲ್ಲಿ ತೆರೆಗೆ ಬಂದ “ಕಥಾ ಸಂಗಮ’ ಪುಟ್ಟಣ್ಣ ಕಣಗಾಲರು ಮಾಡಿದ ಒಂದು ವಿಭಿನ್ನ ಪ್ರಯೋಗ. ಮೂರು ಕಿರು ಕಥೆಗಳನ್ನು ಜೋಡಿಸಿ, ಪುಟ್ಟಣ್ಣ ಅದನ್ನು ಒಂದು ಚಿತ್ರವಾಗಿ ತೆರೆಮೇಲೆ ತಂದಿದ್ದರು. ಅದು ಕನ್ನಡ ಚಿತ್ರರಂಗದಲ್ಲಿ ಆ ಚಿತ್ರ ಇಂದಿಗೂ ಒಂದು ದಾಖಲೆಯಾಗಿ ಉಳಿದಿದೆ. ನಮ್ಮ ಚಿತ್ರದಲ್ಲೂ ಅಂಥದ್ದೇ ಒಂದು ಪ್ರಯೋಗವಿದೆ. ಇಲ್ಲಿ ಏಳು ವಿಭಿನ್ನ ಕಥೆಗಳನ್ನು ಜೋಡಿಸಿ ನಾವು ಒಂದು ಚಿತ್ರವಾಗಿ ತೆರೆಮೇಲೆ ತರುತ್ತಿದ್ದೇವೆ. ಈ ಪ್ರಯೋಗಕ್ಕೆ ಪುಟ್ಟಣ್ಣ ಕಣಗಾಲರು ಪ್ರೇರಣೆ ಹಾಗಾಗಿ ಅವರ “ಕಥಾ ಸಂಗಮ’ ಚಿತ್ರದ ಹೆಸರನ್ನೇ ನಮ್ಮ ಚಿತ್ರಕ್ಕೂ ಇಟ್ಟುಕೊಂಡಿದ್ದೇವೆ. ಈ ಮೂಲಕ ಪುಟ್ಟಣ್ಣ ಅವರನ್ನು ಸ್ಮರಿಸುವ, ಗೌರವಿಸುವ ಚಿಕ್ಕ ಪ್ರಯತ್ನ ಮಾಡಿದ್ದೇವೆ. ಹಾಗಾಗಿ ಈ ಚಿತ್ರವನ್ನು ಪುಟ್ಟಣ್ಣ ಕಣಗಾಲರಿಗೆ ಅರ್ಪಣೆ ಮಾಡುತ್ತಿದ್ದೇವೆ’ ಎನ್ನುತ್ತಾರೆ ರಿಷಭ್‌ ಶೆಟ್ಟಿ.

ಇನ್ನು ಈ “ಕಥಾ ಸಂಗಮ’ ಚಿತ್ರದ ಏಳು ಕಥೆಗಳು ಏಳು ಥರದಲ್ಲಿ ಮೂಡಿಬಂದಿದ್ದು, ಏಳು ಜನ ನವ ನಿರ್ದೇಶಕರು ಚಿತ್ರದಲ್ಲಿ ಬರುವ ಏಳು ವಿಭಿನ್ನ ಕಥೆಗಳಿಗೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. “ಏಳು ಜನ ಛಾಯಾಗ್ರಾಹಕರು, ಏಳು ಜನ ಸಂಗೀತ ನಿರ್ದೇಶಕರು ಸೇರಿದಂತೆ, ಏಳು ತಂಡಗಳು ಒಂದುಗೂಡಿ ಒಂದು ಚಿತ್ರವನ್ನು ಮಾಡಿರುವುದು ವಿಶೇಷ. ಲವ್‌, ಸಸ್ಪೆನ್ಸ್‌, ಥ್ರಿಲ್ಲರ್‌, ಕ್ರೈಂ ಹೀಗೆ ಎಲ್ಲ ಜಾನರ್‌ನ ಕಥೆಗಳೂ ಇದರಲ್ಲಿದೆ. ಒಂದೇ ಮಾತಿನಲ್ಲಿ ಹೇಳುವುದಾದರೆ, ಹೆಸರೇ ಹೇಳುವಂತೆ, ವಿಭಿನ್ನ ಕಥೆಗಳ ಸಂಗಮ ಈ “ಕಥಾ ಸಂಗಮ’ ಕನ್ನಡ ಚಿತ್ರರಂಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಇದೊಂದು ವಿಭಿನ್ನ ಪ್ರಯೋಗ. ನಮ್ಮ ಪ್ರಯತ್ನ ಪ್ರೇಕ್ಷಕರಿಗೂ ಇಷ್ಟವಾಗುವುದೆಂಬ ನಂಬಿಕೆ ಇದೆ’ ಎನ್ನುತ್ತಾರೆ ರಿಷಭ್‌ ಶೆಟ್ಟಿ.

“ರಿಷಭ್‌ ಶೆಟ್ಟಿ ಫಿಲಂಸ್‌’ ಹಾಗೂ “ಶ್ರೀದೇವಿ ಎಂಟರ್‌ಟೈನರ್’ ಲಾಂಛನದಲ್ಲಿ ರಿಷಭ್‌ ಶೆಟ್ಟಿ, ಕೆ.ಹೆಚ್‌.ಪ್ರಕಾಶ್‌ ಹಾಗೂ ಪ್ರದೀಪ್‌ ಎನ್‌.ಆರ್‌ ಜಂಟಿಯಾಗಿ “ಕಥಾ ಸಂಗಮ’ವನ್ನು ನಿರ್ಮಿಸಿದ್ದಾರೆ. ರಿಷಭ್‌ ಶೆಟ್ಟಿ, ಹರಿಪ್ರಿಯಾ, ರಾಜ್‌ ಬಿ. ಶೆಟ್ಟಿ, ಪ್ರಮೋದ್‌ ಶೆಟ್ಟಿ, ಬಾಲಾಜಿ ಮನೋಹರ್‌, ಕಿಶೋರ್‌, ಯಜ್ಞಾ ಶೆಟ್ಟಿ, ಪ್ರಕಾಶ್‌ ಬೆಳವಾಡಿ ಮೊದಲಾದವರು

ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರ ಈ ವಾರ ರಾಜ್ಯಾದ್ಯಂತ ಸುಮಾರು 60ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ತೆರೆ ಕಾಣುತ್ತಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.