ರೈಡ್‌ಗೆ ಗಣೇಶ್‌ ರೆಡಿ..


Team Udayavani, Sep 25, 2020, 8:35 PM IST

suchitra-tdy-5

ಕೋವಿಡ್ ಲಾಕ್‌ಡೌನ್‌ ಸಡಿಲವಾಗುತ್ತಿದ್ದಂತೆ ನಿಧಾನವಾಗಿ ಒಬ್ಬೊಬ್ಬರಾಗಿ ಸ್ಟಾರ್‌ಗಳುಶೂಟಿಂಗ್‌ನತ್ತ ಮುಖ ಮಾಡುತ್ತಿದ್ದಾರೆ. ಇನ್ನು ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ಕೂಡ ಚಿತ್ರೀಕರಣದತ್ತ ಹೊರಡಲು ಅಣಿಯಾಗುತ್ತಿದ್ದಾರೆ.

ಈಗಾಗಲೇ ನಟ ಗಣೇಶ್‌ “ಗಾಳಿಪಟ-2′ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಆ ಚಿತ್ರದ ಚಿತ್ರೀಕರಣ ನಡೆಯುತ್ತಿರುವಾಗಲೇ ಲಾಕ್‌ ಡೌನ್‌ ಘೋಷಣೆಯಾಗಿದ್ದರಿಂದ, ಚಿತ್ರತಂಡ “ಗಾಳಿಪಟ-2′ ಚಿತ್ರೀಕರಣಕ್ಕೆ ಬ್ರೇಕ್‌ ಹಾಕಿತ್ತು. ಈಗ ಲಾಕ್‌ಡೌನ್‌ ತೆರವಾಗುತ್ತಿದ್ದರೂ, “ಗಾಳಿಪಟ-2’ಗೆ ಅಂದುಕೊಂಡ ಲೊಕೇಷನ್‌ಗಳಲ್ಲಿ ಚಿತ್ರೀಕರಣ ಮಾಡಲು ಅನುಮತಿ ಸಿಗದಿರುವುದರಿಂದ,ಸದ್ಯಕ್ಕೆ “ಗಾಳಿಪಟ-2′ ಶೂಟಿಂಗ್‌ ಮುಂದೂಡಿದೆ ಚಿತ್ರತಂಡ. ಇದರ ನಡುವೆಯೇ ನಾಯಕ ಗಣೇಶ್‌ ತಮ್ಮ ಮತ್ತೂಂದು ಹೊಸಚಿತ್ರಕ್ಕೆ ಸದ್ದಿಲ್ಲದೆ ತಯಾರಿ ನಡೆಸಿದ್ದಾರೆ.

ಹೌದು,ಕೆಲ ತಿಂಗಳ ಹಿಂದಷ್ಟೇ ಗಣೇಶ್‌ ಅಭಿನಯದ “ತ್ರಿಬಲ್‌ ರೈಡಿಂಗ್‌’ ಚಿತ್ರ ಘೋಷಣೆಯಾಗಿತ್ತು. ಇಲ್ಲಿಯವರೆಗೆ ಚಿತ್ರದ ಪ್ರೀ-ಪ್ರೊಡಕ್ಷನ್‌ಕೆಲಸಗಳಲ್ಲಿ ನಿರತವಾಗಿದ್ದ ಚಿತ್ರತಂಡ, ಈಗ ಚಿತ್ರದ ಚಿತ್ರೀಕರಣಕ್ಕೆ ಸಿದ್ಧತೆ ನಡೆಸಿದೆ.

ಈಗಾಗಲೇ “ತ್ರಿಬಲ್‌ ರೈಡಿಂಗ್‌’ ಚಿತ್ರದ ಹಾಡುಗಳ ಧ್ವನಿಮುದ್ರಣ ಕಾರ್ಯ ಹೈದರಾಬಾದ್‌ನಲ್ಲಿ ನಡೆಸುತ್ತಿರುವ ಚಿತ್ರತಂಡ, ಇದೇ ಅಕ್ಟೋಬರ್‌ ಎರಡನೇ ವಾರದಿಂದ ಚಿತ್ರದ ಶೂಟಿಂಗ್‌ ನಡೆಸಲು ಪ್ಲಾನ್‌ ಹಾಕಿಕೊಂಡಿದೆ. “ತ್ರಿಬಲ್‌ ರೈಡಿಂಗ್‌’ ಚಿತ್ರದಲ್ಲಿ ಗಣೇಶ್‌ ಅವರೊಂದಿಗೆ ಸಾಧುಕೋಕಿಲ, ರವಿಶಂಕರ್‌, ಕುರಿ ಪ್ರತಾಪ್‌ ಮುಂತಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.ಸದ್ಯ ಚಿತ್ರದ ನಾಯಕಿಯ ಆಯ್ಕೆ ಅಂತಿಮ ಹಂತದಲ್ಲಿದ್ದು, ಗಣೇಶ್‌ಗೆ ಜೋಡಿಯಾಗುವ ಹೀರೋಯಿನ್‌ ಹೆಸರು ಇನ್ನಷ್ಟೇ ಅನೌನ್ಸ್‌ ಆಗಬೇಕಿದೆ. ಈ ಹಿಂದೆ ವಿನೋದ್‌ ಪ್ರಭಾಕರ್‌ ಅಭಿನಯದ “ರಗಡ್‌’ ಚಿತ್ರವನ್ನು ನಿರ್ದೇಶಿಸಿದ್ದ, ಮಹೇಶ್‌ ಗೌಡ “ತ್ರಿಬಲ್‌ ರೈಡಿಂಗ್‌’ ಚಿತ್ರಕ್ಕೆಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಲವ್‌ ಕಂ ಕಾಮಿಡಿ ಜೊತೆಗೆ ಆ್ಯಕ್ಷನ್‌ ಹಾಗೂ ಸಸ್ಪೆನ್ಸ್‌ – ಥ್ರಿಲ್ಲರ್‌ ಕಥಾಹಂದರವಿರುವ “ತ್ರಿಬಲ್‌ ರೈಡಿಂಗ್‌’ ಚಿತ್ರವನ್ನು ರಾಮ್‌ ಗೋಪಾಲ್‌ ವೈ.ಎಂ ನಿರ್ಮಿಸುತ್ತಿದ್ದಾರೆ.

ಚಿತ್ರದ ಹಾಡುಗಳಿಗೆ ಸಾಯಿಕಾರ್ತಿಕ್‌ ಸಂಗೀತ ಸಂಯೋಜಿಸುತ್ತಿದ್ದು, ಜಯಂತ್‌ಕಯ್ಕಿಣಿ, ಡಾ. ವಿ.ನಾಗೇಂದ್ರ ಪ್ರಸಾದ್‌, ಚೇತನ್‌ಕುಮಾರ್‌ ಹಾಡುಗಳನ್ನು ಸಾಹಿತ್ಯ ರಚಿಸಿದ್ದಾರೆ. ರಾಜಶೇಖರ್‌, ಮಹೇಶ್‌ ಗೌಡ ಸಂಭಾಷಣೆ ಬರೆಯುತ್ತಿದ್ದಾರೆ. ­

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.