ಚಿತ್ರೋತ್ಸವಕ್ಕೆ ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ
ಗಿರೀಶ್ಕಾಸರವಳ್ಳಿ ನಿರ್ದೇಶನದ ಚಿತ್ರ
Team Udayavani, Dec 4, 2020, 5:00 PM IST
ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಹೊಸಚಿತ್ರ “ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಚಿತ್ರ ಎರಡು ಪ್ರತಿಷ್ಟಿತ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. “ರೋಮ್’ ಮತ್ತು “ಢಾಕಾ’ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಏಷ್ಯನ್ ಮತ್ತು ಸ್ಪರ್ಧಾತ್ಮಕ ವಿಭಾಗಕ್ಕೆ ಈ ಚಿತ್ರ ಆಯ್ಕೆಯಾಗಿದೆ.
ಜಯಂತ್ ಕಾಯ್ಕಿಣಿ ಅವರ “ಹಾಲಿನ ಮೀಸೆ’ ಕಥೆಯನ್ನಾಧರಿಸಿದ ಈ ಚಿತ್ರಕ್ಕೆ ಗಿರೀಶ್ ಕಾಸರವಳ್ಳಿ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಗಿರೀಶ್ಕಾಸರವಳ್ಳಿ, “ಇದು ನಮ್ಮೆಲ್ಲರ ಸಂಕಟದಕಥೆ. ಇಲ್ಲೂ ಇರುವುದಕ್ಕೆ ಆಗುವುದಿಲ್ಲ. ಅಲ್ಲಿಯೂ ಕಷ್ಟ. ಇದನ್ನುಕಥೆ ಧ್ವನಿಸುತ್ತದೆ. ನಾಗರಾಜ ಎಂಬ ವ್ಯಕ್ತಿತ್ವವನ್ನು ಇಟ್ಟುಕೊಂಡು ಈ ಕಥೆ ಹೇಳಲಾಗುತ್ತಿದೆ. ಬಾಲ್ಯ ಮತ್ತು ಗೃಹಸ್ಥ ಹೀಗೆ ಎರಡು ಘಟ್ಟಗಳನ್ನು ಚಿತ್ರದಲ್ಲಿಹಿಡಿದಿಡಲಾಗಿದೆ. ಎರಡು ಘಟ್ಟದಕಥಾ ಹಂದರ ಈ ಚಿತ್ರದಲ್ಲಿದೆ. ಸುಖ ಮತ್ತು ನೆಮ್ಮದಿ ನಡುವಿನ ತೊಳಲಾಟದ ಸಂಘರ್ಷ ಈ ಕಥೆ ಇಲ್ಲಿದೆ.ಎಲ್ಲರಲ್ಲೂ ಒಂದಲ್ಲ ಒಂದು ಈ ರೀತಿಯ ಸಂಕಟಇರುವುದರಿಂದ ಸಾರ್ವತ್ರಿಕಮತ್ತು ಸಾರ್ವಕಾಲಿಕರೂಪವನ್ನು ಈ ಚಿತ್ರ ಪಡೆದುಕೊಳ್ಳುತ್ತದೆ’ ಎನ್ನುತ್ತಾರೆ.
“ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಚಿತ್ರಕ್ಕೆ ಹೆಚ್.ಎಂ ರಾಮಚಂದ್ರ ಹಾಲ್ಕೆರೆ ಛಾಯಾಗ್ರಹಣ, ಗುಣಶೇಖರ್ ಸಂಕಲನ, ಎಸ್.ಆರ್ ರಾಮಕೃಷ್ಣ ಸಂಗೀತವಿದೆ. “ಸಂಗಮ ಫಿಲಂಸ್’ ಬ್ಯಾನರ್ ಅಡಿಯಲ್ಲಿ ಎಸ್.ವಿ ಶಿವಕುಮಾರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.