ಸಾಮಾನ್ಯನೊಬ್ಬನ ಅಸಾಮಾನ್ಯ ಕಥೆ… ತೋತಾಪುರಿ ಸಿಕ್ಕಿದ್ದು ನನ್ನ ಪುಣ್ಯ ಎಂದ ಜಗ್ಗೇಶ್


Team Udayavani, Sep 30, 2022, 11:57 AM IST

ಸಾಮಾನ್ಯನೊಬ್ಬನ ಅಸಾಮಾನ್ಯ ಕಥೆ… ತೋತಾಪುರಿ ಸಿಕ್ಕಿದ್ದು ನನ್ನ ಪುಣ್ಯ ಎಂದ ಜಗ್ಗೇಶ್

“ನಗಿಸುತ್ತಲೇ ಜನರಿಗೆ ಒಂದೊಳ್ಳೆಯ ಸಂದೇಶ ಕೊಡಬೇಕು….’ – ಹೀಗೆ ಹೇಳಿ ಸಣ್ಣದೊಂದು ನಗೆ ಬೀರಿದರು ನವರಸ ನಾಯಕ ಜಗ್ಗೇಶ್‌. ಅವರು ಹೇಳಿದ್ದು “ತೋತಾಪುರಿ’ ಚಿತ್ರದ ಬಗ್ಗೆ. ಈ ಚಿತ್ರ ಇಂದು ವಿಶ್ವಾದ್ಯಂತ ತೆರೆಕಾಣುತ್ತಿದೆ. ಸಹಜವಾಗಿಯೇ ಈ ಚಿತ್ರದ ಮೇಲೆ ಜಗ್ಗೇಶ್‌ ಅವರಿಗೆ ನಿರೀಕ್ಷೆ ಇದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್‌, ಹಾಡು ಹಿಟ್‌ಲಿಸ್ಟ್‌ ಸೇರಿದೆ. ಜಗ್ಗೇಶ್‌ ಸಿನಿಮಾದಲ್ಲಿರಬೇಕಾದ ಹಾಸ್ಯ ಇಲ್ಲಿ ಡಬಲ್‌ ಆಗಿದೆ. ಇದೇ ಕಾರಣದಿಂದ ಜಗ್ಗೇಶ್‌ ಕೂಡಾ ಈ ಸಿನಿಮಾ ಬಗ್ಗೆ ಖುಷಿಯಿಂದ ಮಾತನಾಡುತ್ತಾರೆ.

“ನನ್ನ ಪ್ರಕಾರ ಯಾವುದೇ ಒಂದು ಸೀರಿಯಸ್‌ ವಿಚಾರವನ್ನು ಅಷ್ಟೇ ಸೀರಿಯಸ್‌ ಆಗಿ ಹೇಳುವ ಬದಲು, ಅದನ್ನು ಹ್ಯೂಮರಸ್‌ ಆಗಿ ಹೇಳಬೇಕು. ಆಗ ಅದು ಜನರಿಗೆ ಬೇಗನೇ ಕನೆಕ್ಟ್ ಆಗುತ್ತದೆ. ಇದನ್ನು ನಾನು ನನ್ನ ಶಾಲಾ ದಿನಗಳಲ್ಲೇ ಕಲಿತುಕೊಂಡೆ. ಅದೇ ಕಾರಣದಿಂದ ನನ್ನ ಸಿನಿಮಾಗಳಲ್ಲಿ ಕಾಮಿಡಿ ಜೊತೆಗೆ ಒಂದು ಗಂಭೀರ, ಸಿನಿಮಾ ಮುಗಿದ ಮೇಲೂ ಕಾಡುವ ವಿಚಾರ ಇರುತ್ತದೆ. “ತೋತಾಪುರಿ’ ಕೂಡಾ ಅದೇ ತರಹದ ಸಿನಿಮಾ. ಈ ಸಿನಿಮಾ ನನಗೆ ಸಿಕ್ಕಿದ್ದು ನನ್ನ ಪುಣ್ಯ. ಏಕೆಂದರೆ ಇಲ್ಲಿ ನಿರ್ದೇಶಕ ವಿಜಯ ಪ್ರಸಾದ್‌ ಮಾಡಿರುವ ಕಥೆ ಇಂದಿನ ಸಮಾಜಕ್ಕೆ ತುಂಬಾ ಪ್ರಸ್ತುತವಾಗಿದೆ. ಕಾಮಿಡಿ, ಡಬಲ್‌ ಮೀನಿಂಗ್‌ … ಎಲ್ಲಾ ಇದ್ದರೂ ಅದಕ್ಕಿಂತ ಹೆಚ್ಚಾಗಿ ಸಂವಿಧಾನವನ್ನು ಎತ್ತಿಹಿಡಿಯುವ ಅಂಶ ಸಿನಿಮಾದ ಹೈಲೈಟ್‌’ ಎನ್ನುವುದು ಜಗ್ಗೇಶ್‌ ಮಾತು.

ಅದ್ಭುತವಾದ ಸ್ಕ್ರಿಪ್ಟ್ ಮೊದಲೇ ಹೇಳಿದಂತೆ ಜಗ್ಗೇಶ್‌ “ತೋತಾಪುರಿ’ ಮೇಲೆ ಅಪಾರ ನಿರೀಕ್ಷೆ ಇಟ್ಟಿದ್ದಾರೆ. ನಿರ್ದೇಶಕ ವಿಜಯ ಪ್ರಸಾದ್‌ ಈ ಜನ್ಮದಲ್ಲಿ ಮತ್ತೂಮ್ಮೆ ಈ ತರಹದ ಕಥೆ ಮಾಡಲು ಸಾಧ್ಯವಿಲ್ಲ ಎನ್ನುವ ಮಟ್ಟದ ವಿಶ್ವಾಸ ಜಗ್ಗೇಶ್‌ ಅವರದು.

ಇದನ್ನೂ ಓದಿ:ಆರ್ ಎಸ್ಎಸ್ ನಿಷೇಧ ಮಾಡಿ ಎನ್ನುವುದು ದುರ್ದೈವ: ಸಿಎಂ ಬಸವರಾಜ ಬೊಮ್ಮಾಯಿ

ಈ ಬಗ್ಗೆ ಮಾತನಾಡುವ ಅವರು, “ತೋತಾಪುರಿ ಒಂದು ಅದ್ಭುತವಾದ ಸ್ಕ್ರಿಪ್ಟ್. ಆ ನಿರ್ದೇಶಕರು ಇನ್ನು ಈ ಜನ್ಮದಲ್ಲಿ ಆ ತರಹದ ಕಥೆ ಮತ್ತೆ ಮಾಡುವುದಕ್ಕೆ ಸಾಧ್ಯವಿಲ್ಲ. ನನ್ನ ಪುಣ್ಯಕ್ಕೆ ಈ ಕಥೆ ನನಗೆ ಸಿಕ್ಕಿದೆ. ನಮ್ಮಲ್ಲಿ ಸಾಕಷ್ಟು ಗೊಂದಲ, ಸಮಸ್ಯೆಗಳಿವೆ. ನಾನು, ನೀನು, ತಾನು, ಜಾತಿ ಅಂತ. ಇದನ್ನು ಹೊರತುಪಡಿಸಿ ಪ್ರೀತಿ ಹುಡುಕೋಣ ಎಂಬ ತಾತ್ಪರ್ಯ ನಮ್ಮ ಸಿನಿಮಾದ್ದು. ಕಥೆಯಲ್ಲಿ ಎಲ್ಲ ಜಾತಿಯವರು ಸ್ನೇಹಿತರು. ಇದೊಂದು ಕಂಟೆಂಟ್‌ ಸಿನಿಮಾ. ಇವತ್ತು ಜನರ ಸಿನಿಮಾ ಅಭಿರುಚಿ ಬದಲಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಥೆ ಬೇಕು ಎನ್ನುತ್ತಿದ್ದಾರೆ. ಇವತ್ತು ಓಟಿಟಿಯಲ್ಲೂ ಇದಕ್ಕೆ ಮಾರ್ಕೆಟ್‌ ಜಾಸ್ತಿ. ಜನ ಸಹ ಇದು ನನ್ನ ಕಥೆ ಅಂತ ಬರುತ್ತಾರೆ. ಆ ತರಹ ಕಂಟೆಂಟ್‌ ಇರುವ ಸಿನಿಮಾ ಇದು. ನನ್ನ ಪಾತ್ರದ ಜೊತೆಗೆ ಶಕೀಲಾ ಬಾನು, ದೊನ್ನೆ ರಂಗಮ್ಮ, ನಂಜಮ್ಮ ಪಾತ್ರಗಳು ತುಂಬಾ ಗಟ್ಟಿತನದಿಂದ ಕೂಡಿವೆ. ಬಡತನದ ರೇಖೆಯ ಕೆಳಗಿರುವವರ ಮಾತಾಡಿಸಿ, ಅವರ ಭಾವನೆಗಳನ್ನು ಕೆದಕಿ ಒಂದೊಳ್ಳೆಯ ಕಥೆ ಮಾಡಿದ್ದಾರೆ. ತುಂಬಾ ಉದ್ದ ಇತ್ತು. ಕೊನೆಗೆ ಎರಡು ಭಾಗ ಆಯ್ತು’ ಎನ್ನುವುದು ಜಗ್ಗೇಶ್‌ ಅವರ ಮಾತು.

ಇನ್ನು, ಚಿತ್ರದ ಎರಡನೆಯ ಭಾಗದಲ್ಲಿ ಪುನೀತ್‌ ಇದ್ದರೆ ಚೆಂದ ಎನಿಸಿ, ಅವರನ್ನು ಭೇಟಿ ಕೂಡಾ ಮಾಡಿತ್ತಂತೆ ಚಿತ್ರತಂಡ. ಆದರೆ, ಕಾರಣಾಂತರಗಳಿಂದ ಆಗಲಿಲ್ಲ. ಆ ಜಾಗಕ್ಕೆ ಧನಂಜಯ್‌ ಬಂದಿದ್ದಾರೆ. ತೋತಾಪುರಿ ಎರಡು ಭಾಗಗಳಲ್ಲಿ ತಯಾರಾಗಿದ್ದು, ನೂರಾರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಕಾಮಿಡಿ ಸಿನಿಮಾವೊಂದಕ್ಕೆ ಈ ಪರಿ ಶೂಟಿಂಗ್‌ ಮಾಡಿರುವುದು ಒಂದೆಡೆಯಾದರೆ, ಜಗ್ಗೇಶ್‌ ನಟಿಸಿರುವ ಸಿನಿಮಾಗಳ ಪೈಕಿ ತೋತಾಪುರಿ ಬಿಗ್‌ ಬಜೆಟ್‌ ಸಿನಿಮಾ ಎಂಬುದು ಗಮನಾರ್ಹ. ಹಾಗೆಯೇ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದೆ ಎಂಬುದು ಮತ್ತೂಂದು ಗಮನಾರ್ಹ ವಿಷಯ. ಡಾಲಿ ಧನಂಜಯ, ಅದಿತಿ ಪ್ರಭುದೇವ, ಸುಮನ್‌ ರಂಗನಾಥ್‌, ವೀಣಾ ಸುಂದರ್‌, ದತ್ತಣ್ಣ, ಹೇಮಾದತ್‌ ಸೇರಿದಂತೆ ಅನೇಕ ಕಲಾವಿದರು ತೋತಾಪುರಿ ತಾರಾಗಣದಲ್ಲಿದ್ದಾರೆ. ಈ ಚಿತ್ರವನ್ನು ಕೆ.ಎ.ಸುರೇಶ್‌ ನಿರ್ಮಿಸಿದ್ದಾರೆ.

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.