ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ


Team Udayavani, May 17, 2024, 1:11 PM IST

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ತೆಲಂಗಾಣದಲ್ಲಿ 10 ದಿನಗಳ ಕಾಲ 400ಕ್ಕೂ ಹೆಚ್ಚು ಚಿತ್ರಮಂದಿರಗಳು ತನ್ನ ಪ್ರದರ್ಶನವನ್ನು ಸ್ಥಗಿತಗೊಳಿಸಲು ನಿರ್ಧರಿಸಿವೆ. ಅದಕ್ಕೆ ಕಾರಣ ಸಿನಿಮಾ ಕೊರತೆ. ಸದ್ಯಕ್ಕೆ ತೆಲುಗು ಚಿತ್ರರಂಗದಲ್ಲೂ ಯಾವ ದೊಡ್ಡ ಸಿನಿಮಾಗಳು ಬಿಡುಗಡೆಯಾಗುತ್ತಿಲ್ಲ. ಜೊತೆಗೆ ಐಪಿಎಲ್‌, ಚುನಾವಣೆ ಎಂದು ಜನ ಚಿತ್ರಮಂದಿರಕ್ಕೂ ಬರುತ್ತಿಲ್ಲ… ಸುಖಾಸುಮ್ಮನೆ ಥಿಯೇಟರ್‌ ನಡೆಸಿದರೆ ಖರ್ಚು ಭರಿಸುವುದು ಕಷ್ಟ ಎಂಬ ಕಾರಣಕ್ಕೆ ಅಲ್ಲಿನ ಪ್ರದರ್ಶಕರ ಸಂಘ ಈ ನಿರ್ಧಾರಕ್ಕೆ ಬಂದೇ ಬಿಟ್ಟಿದೆ.

ಇದು ತೆಲಂಗಾಣದಲ್ಲಿ ತಾನೇ ಎಂದು ಕನ್ನಡ ಚಿತ್ರರಂಗ ಅಸಡ್ಡೆ ತೋರಿಸುವಂತಿಲ್ಲ. ಮುಂದೊಂದು ದಿನ ಕರ್ನಾಟಕದಲ್ಲೂ ಈ ಪರಿಸ್ಥಿತಿ ತಲೆದೋರಿದರೂ ಅಚ್ಚರಿ ಇಲ್ಲ. ಇವತ್ತು ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳನ್ನು ನಡೆಸುವುದು ಸವಾಲಿನ ಕೆಲಸ. ಈ ನಡುವೆ ಚಿತ್ರರಂಗದಿಂದ ಸಿನಿಮಾಗಳು ಪೂರೈಕೆಯಾಗದೇ ಇದ್ದಾಗ ಚಿತ್ರಮಂದಿರ ನಡೆಸುವುದು ಕಷ್ಟದ ಕೆಲಸ. ಇದೇ ಕಾರಣದಿಂದ ಇವತ್ತು ಅನೇಕ ಚಿತ್ರಮಂದಿರಗಳು ಶಾಶ್ವತವಾಗಿ ಮುಚ್ಚುತ್ತಿವೆ.

ತಾತ್ಕಾಲಿಕ ಸ್ಥಗಿತ

ಕರ್ನಾಟಕದಲ್ಲಿ 550ಕ್ಕೂ ಹೆಚ್ಚು ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳಿವೆ. ಆದರೆ, ಪ್ರಸ್ತುತ ಇದರಲ್ಲಿ ಎಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿವೆ ಎಂದರೆ ಬರುವ ಉತ್ತರ 300 ಪ್ಲಸ್‌. ಅದಕ್ಕೆ ಕಾರಣ ಕನ್ನಡ ಚಿತ್ರರಂಗದಲ್ಲಿನ ಸಿನಿಮಾಗಳ ಕೊರತೆ. ನಗರದೊಳಗಿನ ಚಿತ್ರಮಂದಿರಗಳು ಕೆಲವು ಶೋಗಳೊಂದಿಗೆ ಚಿತ್ರಮಂದಿರ ನಡೆಸುತ್ತಿದ್ದರೆ, ತಾಲೂಕು, ಜಿಲ್ಲಾ ಕೇಂದ್ರಗಳ ಅದೆಷ್ಟೋ ಚಿತ್ರಮಂದಿರಗಳು ಸದ್ಯಕ್ಕೆ ತಾತ್ಕಾಲಿಕವಾಗಿ ಶೋ ನಿಲ್ಲಿಸಿವೆ. ಈ ಮೂಲಕ ಅನವಶ್ಯಕ ವೆಚ್ಚವನ್ನು ತಪ್ಪಿಸುತ್ತಿವೆ.

ಈ ಕುರಿತು ಮಾತನಾಡುವ ವೀರೇಶ್‌ ಚಿತ್ರಮಂದಿರದ ಮಾಲೀಕರು ಹಾಗೂ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್‌, “ತೆಲಂಗಾಣದ ಚಿತ್ರಮಂದಿರಗಳ ಸ್ಥಿತಿ ಬಗ್ಗೆ ನಾವು ಮಾತನಾಡುತ್ತೇವೆ. ಆದರೆ, ನಮ್ಮಲ್ಲಿ ಈಗಾಗಲೇ 200ರಿಂದ 250 ಚಿತ್ರಮಂದಿರಗಳು ಪ್ರದರ್ಶನ ನಿಲ್ಲಿಸಿವೆ. ಉಳಿದ ಚಿತ್ರಮಂದಿರಗಳಲ್ಲೂ ಪೂರ್ಣ ಪ್ರಮಾಣದಲ್ಲಿ ಶೋಗಳು ನಡೆಯುತ್ತಿಲ್ಲ. ಅದಕ್ಕೆ ಕಾರಣ ಸಿನಿಮಾದ ಕೊರತೆ. ಇವತ್ತು ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರ ನಡೆಸುವುದು ಕಷ್ಟವಿದೆ. ಇಂತಹ ಸಮಯದಲ್ಲಿ ಶೋ ನಡೆಸುವ ಬದಲು ಸ್ಥಗಿತಗೊಳಿಸುವುದೇ ಉತ್ತಮ ಎಂಬ ನಿರ್ಧಾರಕ್ಕೆ ಕೆಲವು ಚಿತ್ರಮಂದಿರಗಳು ಬಂದಿವೆ’ ಎನ್ನುತ್ತಾರೆ.

ಬದ್ಧತೆಯ ಕೊರತೆ

ಒಂದು ಸಮಯದಲ್ಲಿ ವೈಭವದಲ್ಲಿ ಮೆರೆದ ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳ ಇವತ್ತಿನ ಈ ಸ್ಥಿತಿಗೆ ಕಾರಣವೇನು ಎಂದರೆ, ಬದ್ಧತೆಯ ಕೊರತೆ ಎಂಬ ಉತ್ತರ ಚಂದ್ರ ಶೇಖರ್‌ ಅವರಿಂದ ಬರುತ್ತದೆ. “ಇವತ್ತು ಚಿತ್ರರಂಗದಲ್ಲಿ ಬದ್ಧತೆ ಕಡಿಮೆಯಾಗಿದೆ. ನಾನು ಯಾವುದೇ ಒಂದು ವಿಭಾಗದ ಬಗ್ಗೆ ಹೇಳುತ್ತಿಲ್ಲ. ಚಿತ್ರರಂಗವೆಂದರೆ ಅದೊಂದು ಕುಟುಂಬ. ಒಂದು ಸಿನಿಮಾ ಹೊರಬರ ಬೇಕಾ ದರೆ ಅಲ್ಲಿ ಎಲ್ಲಾ ವಿಭಾಗಗಳು ಭಾಗಗಳು ಬದ್ಧತೆಯಿಂದ ಕೆಲಸ ಮಾಡ ಬೇಕಾಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಆ ಬದ್ಧತೆ ಕಡಿಮೆಯಾಗಿದೆ’ ಎನ್ನುತ್ತಾರೆ.

ರೆಗ್ಯುಲರ್‌ ನಿರ್ಮಾಪಕರು ದೂರ

ಅದೊಂದು ಸಮಯವಿತ್ತು. ಕನ್ನಡ ಚಿತ್ರರಂಗದಲ್ಲಿ ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ವರ್ಷಕ್ಕೆ ಎರಡು ಮೂರು ಸ್ಟಾರ್‌ ಸಿನಿಮಾಗಳನ್ನು ಮಾಡುತ್ತಿದ್ದವು. ಸ್ಟಾರ್‌ಗಳು ಕೂಡಾ ಆ ನಿರ್ಮಾಪಕರ ಜೊತೆ ಅನ್ಯೋನ್ಯವಾಗಿದ್ದು, ಸಿನಿಮಾ ಮುಗಿಸಿಕೊಡುತ್ತಿದ್ದರು. ಆದರೆ, ಕಳೆದ ಒಂದಷ್ಟು ವರ್ಷಗಳಿಂದ ರೆಗ್ಯುಲರ್‌ ನಿರ್ಮಾಪಕರೆನಿಸಿಕೊಂಡವರು ಸಿನಿಮಾರಂಗದಿಂದ ದೂರವಾಗುತ್ತಿದ್ದಾರೆ.

ಇದು ಕೂಡಾ ಇವತ್ತಿನ ಚಿತ್ರರಂಗದ ಸ್ಥಿತಿಗೆ ಕಾರಣ. ಈ ಕುರಿತು ಮಾತನಾಡುವ ಚಂದ್ರಶೇಖರ್‌, “ನೀವೇ ಸೂಕ್ಷ್ಮವಾಗಿ ಗಮನಿಸಿ ಮೂರ್‍ನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದ ರೆಗ್ಯುಲರ್‌ ನಿರ್ಮಾಪಕರೆನಿಸಿಕೊಂಡಿದ್ದವರು ಈಗ ಸಿನಿಮಾರಂಗದಿಂದ ದೂರವಾಗಿದ್ದಾರೆ. ಇವತ್ತಿನ ವ್ಯವಸ್ಥೆಯಲ್ಲಿ ಸಿನಿಮಾ ಮಾಡೋದು ಕಷ್ಟ ಎಂಬ ಭಾವನೆ ಅವರಲ್ಲಿದೆ’ ಎನ್ನುತ್ತಾರೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Ramesh Aravind spoke about bhairadevi movie

Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್‌ ಅರವಿಂದ್‌

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

night road kannada movie

Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್‌ ರೋಡ್‌ʼ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.