![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 24, 2022, 2:01 PM IST
ಆರಂಭದಿಂದಲೂ ತನ್ನ ಟೈಟಲ್ ಮತ್ತು ಫಸ್ಟ್ಲುಕ್ ಪೋಸ್ಟರ್ ಮೂಲಕ ಕುತೂಹಲ ಮೂಡಿಸಿದ್ದ “ಸ್ಪೂಕಿ ಕಾಲೇಜ್’ ಸಿನಿಮಾದ ಮೊದಲ ಟೀಸರ್ ಹೊರ ಬಂದಿದೆ. ನಿರ್ಮಾಪಕ ಹೆಚ್.ಕೆ ಪ್ರಕಾಶ್ “ಶ್ರೀದೇವಿ ಎಂಟರ್ಟೈನರ್’ ಬ್ಯಾನರ್ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಭರತ್ ಜಿ. “ಸ್ಪೂಕಿ ಕಾಲೇಜ್’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆ್ಯಕ್ಷನ್-ಕಟ್ ಹೇಳಿದ್ದಾರೆ.
ಇನ್ನು “ಶ್ರೀದೇವಿ ಮ್ಯೂಸಿಕ್’ ಯು-ಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿರುವ ಔಟ್ ಆ್ಯಂಡ್ ಔಟ್ ಸೈಕಾಲಜಿಕಲ್ ಹಾರರ್-ಥ್ರಿಲ್ಲರ್ ಶೈಲಿಯ “ಸ್ಪೂಕಿ ಕಾಲೇಜ್’ ಟೀಸರ್ಗೆ ಸೋಶಿಯಲ್ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಟೀಸರ್ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ.
“ಸ್ಪೂಕಿ’ ಟೀಸರ್ ಸಿನಿಪ್ರಿಯರು ಮಾತ್ರವಲ್ಲದೆ ಚಿತ್ರರಂಗದ ಮಂದಿಯ ಗಮನವನ್ನೂ ಸೆಳೆಯುತ್ತಿದ್ದು, ನಟರಾದ ರಮೇಶ್ ಅರವಿಂದ್, ಡಾಲಿ ಧನಂಜಯ್ ಸೇರಿದಂತೆ ಅನೇಕ ಸ್ಟಾರ್ “ಸ್ಪೂಕಿ ಕಾಲೇಜ್’ ಟೀಸರ್ ನೋಡಿ ಮೆಚ್ಚುಗೆಯ ಮಾತುಗಳನ್ನಾಡಿದ್ದು, ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲೂ ಟೀಸರ್ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:‘ಗೀತಾ ಪಿಕ್ಚರ್’ ನಡಿ ಅದ್ಧೂರಿ ‘ವೇದಾ’: ಶಿವಣ್ಣ ನಿರ್ಮಾಣದಲ್ಲಿ 125ನೇ ಚಿತ್ರ
“ಸ್ಪೂಕಿ’ ಎಂದರೆ ಭಯ. ಟೀಸರ್ ನೋಡಿದ ವರಿಗೆ “ಸ್ಪೂಕಿ’ ಪದದ ವಿಶ್ಲೇಷಣೆಯನ್ನು ನಿರ್ದೇಶಕರು ತಿಳಿಸುವ ಪ್ರಯತ್ನ ಮಾಡಿದ್ದಾರೆ. ಕನ್ನಡದ “ನಾ ನಿನ್ನ ಬಿಡಲಾರೆ’, “ಆಪ್ತಮಿತ್ರ’ದಂತಹ ಹಾರರ್ ಕಂ ಸಸ್ಪೆನ್ಸ್-ಥ್ರಿಲ್ಲರ್ ಸಿನಿಮಾಗಳ ರೀತಿ “ಸ್ಪೂಕಿ ಕಾಲೇಜ್’ ಕೂಡ ಪ್ರೇಕ್ಷಕರ ಮನಗೆಲ್ಲಲಿದೆ ಎಂಬ ವಿಶ್ವಾಸದ ಮಾತುಗಳನ್ನಾಡಿದ್ದಾರೆ.
ವಿವೇಕ್ ಸಿಂಹ, ಖುಷಿ ರವಿ, ಅಜಯ್ ಪೃಥ್ವಿ, ಹನುಮಂತೇ ಗೌಡ, ಕೆ. ಎಸ್ ಶ್ರೀಧರ್, ವಿಜಯ್ ಚೆಂಡೂರ್, ಎಂ. ಕೆ ಮಠ ಮೊದಲಾದ ಕಲಾವಿದರ ತಾರಾಗಣ “ಸ್ಪೂಕಿ ಕಾಲೇಜ್’ ಚಿತ್ರದಲ್ಲಿದೆ.
ಜಿ. ಎಸ್. ಕಾರ್ತಿಕ ಸುಧನ್
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.