ಆ್ಯಕ್ಷನ್‌ ಅರ್ಜುನ್‌ ಗೌಡ ಡಿ.31ರಂದು ರಿಲೀಸ್‌


Team Udayavani, Dec 24, 2021, 11:34 AM IST

ಆ್ಯಕ್ಷನ್‌ ಅರ್ಜುನ್‌ ಗೌಡ ಡಿ.31ರಂದು ರಿಲೀಸ್‌

ನಿರ್ಮಾಪಕ ರಾಮು ಅವರ ಡ್ರೀಮ್‌ ಪ್ರಾಜೆಕ್ಟ್ “ಅರ್ಜುನ್‌ ಗೌಡ’. ಆದರೆ, ಆ ಚಿತ್ರ ತೆರೆಕಾಣುವ ಮುನ್ನವೇ ರಾಮು ಅವರು ಕೋವಿಡ್‌ಗೆ ಬಲಿಯಾದರು. ಈಗ ಅವರ ಕನಸಿನ ಚಿತ್ರ “ಅರ್ಜುನ್‌ ಗೌಡ’ ಬಿಡುಗಡೆಯ ಹಂತಕ್ಕೆ ಬಂದಿದ್ದು, ಡಿಸೆಂಬರ್‌ 31ರಂದು ತೆರೆಕಾಣುತ್ತಿದೆ.

ಪ್ರಜ್ವಲ್‌ ದೇವರಾಜ್‌ ನಟನೆಯ ಈ ಚಿತ್ರದಲ್ಲಿ ಪ್ರಿಯಾಂಕಾ ತಿಮ್ಮೇಶ್‌ ನಾಯಕಿ. “ಅರ್ಜುನ್‌ ಗೌಡ ನಂತರ ಮತ್ತೂಂದು ಸಿನಿಮಾ ಮಾಡುವ ಎಂದು ರಾಮು ಅವರು ಹೇಳಿದ್ದರು. ಆದರೆ, ಅದು ಈಡೇರಲೇ ಇಲ್ಲ. ಈಗ ಅರ್ಜುನ್‌ ಗೌಡ ಬಿಡುಗಡೆಯಾಗುತ್ತಿದ್ದು, ಎಲ್ಲರೂ ನೋಡಿ ಪ್ರೋತ್ಸಾಹಿಸಿ’ ಎಂದು ಕೇಳಿಕೊಂಡರು ಪ್ರಜ್ವಲ್‌.

ನಾಯಕಿ ಪ್ರಿಯಾಂಕಾ ಮಾತನಾಡಿ, ಇಲ್ಲಿ ಜಾಹ್ನವಿ ಎಂಬ ಪಾತ್ರ ನನ್ನದು. ನಾಯಕನಿಗೆ ಉತ್ತಮ ಗೆಳತಿ. ಆತನನ್ನು ತುಂಬಾ ಪ್ರೀತಿಸುವ ಯುವತಿ. ಪ್ರೀತಿ ಮೂಡಿದ ನಂತರ ಏನಾಗುತ್ತದೆ ಎಂಬುದು ಚಿತ್ರದ ಕಥಾವಸ್ತು. ಚಿತ್ರ ಬಿಡುಗಡೆಗೆ ನಾನು ಕಾತುರದಲ್ಲಿದ್ದೇನೆ ಎಂದರು.

ಇದನ್ನೂ ಓದಿ:‘ಬಡವ ರಾಸ್ಕಲ್‌’ ನಲ್ಲಿ ಡಾಲಿ ಕನಸು

ಇದೊಂದು ಕಂಪ್ಲೀಟ್‌ ಆ್ಯಕ್ಷನ್‌, ರೊಮ್ಯಾಂಟಿಕ್‌, ಥ್ರಿಲ್ಲರ್‌ ಸಿನಿಮಾ. ಒಂದೊಳ್ಳೆ ಆ್ಯಕ್ಷನ್‌ ಸಿನಿಮಾ ಮಾಡಬೇಕೆಂಬ ಕನಸು ಈ ಸಿನಿಮಾ ಮೂಲಕ ನನಸಾಗಿದೆ. ಒಂದು ಲೈನ್‌ ಕಥೆ ಕೇಳಿದ ಕೂಡಲೇ ಪ್ರಜ್ವಲ್‌ ಇಷ್ಟಪಟ್ಟು ಈ ಸಿನಿಮಾ ಒಪ್ಪಿಕೊಂಡರು. ಎಂಟರ್‌ ಟೈನ್ಮೆಂಟ್‌ ಜೊತೆಗೆ ಇಂದಿನ ಯೂಥ್ಸ್ಗೆ ಕನೆಕ್ಟ್ ಆಗುವಂತ ಕೆಲ ವಿಷಯಗಳನ್ನೂ ಸಿನಿಮಾದಲ್ಲಿ ಹೇಳಿದ್ದೇವೆ. ನಮ್ಮ ನಡುವೆಯೇ ನಡೆದು, ಮರೆತು ಹೋದ ಕೆಲ ಸಂಗತಿಗಳನ್ನು ಈ ಸಿನಿಮಾ ಮೂಲಕ ಹೇಳಿದ್ದೇವೆ. 6 ಭರ್ಜರಿ ಫೈಟ್ಸ್‌, 4 ಹಾಡು ಚಿತ್ರದಲ್ಲಿದೆ. ಮಾಸ್‌ ಆಡಿಯನ್ಸ್‌ಗೆ ಬೇಕಾದ ಎಲ್ಲ ಎಂಟರ್‌ಟೈನ್ಮೆಂಟ್‌ ಅಂಶಗಳೂ ಈ ಸಿನಿಮಾದಲ್ಲಿ ಸಿಗುತ್ತಿದೆ ಎನ್ನುವುದು ನಿರ್ದೇಶಕ ಲಕ್ಕಿ ಶಂಕರ್‌ ಮಾತು.

ಇನ್ನು, ಸುಮಾರು 200ಕ್ಕೂ ಹೆಚ್ಚು ತಂತ್ರಜ್ಞರನ್ನು ಬಳಸಿಕೊಂಡು “ಅರ್ಜುನ್‌ ಗೌಡ’ ಚಿತ್ರದ ರೀ-ರೆಕಾರ್ಡಿಂಗ್‌ ಕಾರ್ಯಗಳನ್ನು ಬೆಂಗಳೂರು ಮಾತ್ರವಲ್ಲದೆ ಮುಂಬೈ, ಚೆನ್ನೈ ಹಾಗೂ ಕೊಲ್ಕತ್ತದ ಪ್ರಸಿದ್ದ ಸ್ಟುಡಿಯೋಗಳಲ್ಲಿ ಮಾಡಲಾಗಿದೆ. ಈಗಾಗಲೇ ಬಿಡುಗಡೆಯಾಗಿರುವ “ಅರ್ಜುನ್‌ ಗೌಡ’ ಚಿತ್ರದ ಟ್ರೇಲರ್‌ ನೋಡುಗರ ಗಮನ ಸೆಳೆಯಲು ಯಶಸ್ವಿಯಾಗಿದ್ದು, ಆ್ಯಕ್ಷನ್‌ ದೃಶ್ಯಗಳಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಲಕ್ಕಿ ಶಂಕರ್‌ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಚಿತ್ರದಲ್ಲಿ ಪ್ರಜ್ವಲ್‌ ದೇವರಾಜ್ ಗೆ ನಾಯಕಿಯಾಗಿ ಪ್ರಿಯಾಂಕಾ ತಿಮ್ಮೇಶ್‌ ಜೋಡಿಯಾಗಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.