![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-415x229.jpg)
‘ಕೌಸಲ್ಯ ಸುಪ್ರಜಾ ರಾಮ’ ಟ್ರೇಲರ್ ಇಂದು ಬಿಡುಗಡೆ
Team Udayavani, Jul 14, 2023, 10:40 AM IST
![Kausalya supraja rama kannada movie](https://www.udayavani.com/wp-content/uploads/2023/07/kausla-620x342.jpg)
ಟ್ರೇಲರ್ನಲ್ಲಿ ಏನಿರಬಹುದು… – ಹೀಗೊಂದು ಕುತೂಹಲವನ್ನು ವಿಭಿನ್ನ ಪ್ರಚಾರ ತಂತ್ರದ ಮೂಲಕ ಹುಟ್ಟುಹಾಕಿರುವ “ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಟ್ರೇಲರ್ ಇಂದು ಬಿಡುಗಡೆಯಾಗುತ್ತಿದೆ. ನಟ ಕಿಚ್ಚ ಸುದೀಪ್ ಟ್ರೇಲರ್ ಬಿಡುಗಡೆಗೆ ಸಾಥ್ ನೀಡಲಿದ್ದಾರೆ. ಈಗಾಗಲೇ ಚಿತ್ರತಂಡ ಅನೇಕರನ್ನು ಸಂದರ್ಶಿಸಿ ಸಿನಿಮಾದೊಳಗೆ ಏನಿರಬಹುದು ಎಂಬ ಪ್ರಶ್ನೆಯನ್ನು ಕೇಳಿದೆ.
ಅನೇಕರು ಚಿತ್ರದ ಟೈಟಲ್ ಅನ್ನು ಗಮನದಲ್ಲಿಟ್ಟು ಬೇರೆ ಬೇರೆ ಉತ್ತರ ನೀಡಿದ್ದಾರೆ. ಆದರೆ, ಅಂತಿಮವಾಗಿ ಸಿನಿಮಾದೊಳಗೆ ಏನಿರುತ್ತದೆ ಎಂಬ ಇಣುಕು ನೋಟ ಇಂದು ಸಿಗಲಿದೆ.
ಇಂದು ಸಂಜೆ ಚಿತ್ರದ ಟ್ರೇಲರ್ ರಿಲೀಸ್ ಇವೆಂಟ್ ಅನ್ನು ಅದ್ಧೂರಿಯಾಗಿ ನಡೆಸಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಈಗಾಗಲೇ ಟ್ರೇಲರ್ ಗ್ಲಿಂಪ್ಸ್ಗಳನ್ನು ಬಿಡುಗಡೆ ಮಾಡಿರುವ ತಂಡ ಚಿತ್ರದ ಕುತೂಹಲಕ್ಕೆ ಕಾರಣವಾಗಿದೆ.
“ಇದೊಂದು ಕಂಪ್ಲೀಟ್ ಫ್ಯಾಮಿಲಿ ಕಥಾಹಂದರ ಹೊಂದಿರುವ ಸಿನಿಮಾ. ಬಹುತೇಕ ಎಲ್ಲ ಫ್ಯಾಮಿಲಿಗಳಲ್ಲೂ ಎದುರಿಸುವಂಥ ವಿಷಯವೊಂದನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಇಂಥದ್ದೊಂದು ವಿಷಯದ ಮೇಲೆ ಇಲ್ಲಿಯವರೆಗೆ ಯಾವ ಭಾಷೆಗಳಲ್ಲೂ ಸಿನಿಮಾ ಬಂದಿಲ್ಲ. ಆ ವಿಷಯವನ್ನು ನಾವು ಈ ಸಿನಿಮಾದಲ್ಲಿ ಹೇಳಿದ್ದೇವೆ. ಒಂದಷ್ಟು ಎಮೋಶನ್ಸ್ ಮತ್ತು ಎಂಟರ್ ಟೈನ್ಮೆಂಟ್ ಎರಡೂ ಈ ಸಿನಿಮಾದಲ್ಲಿದೆ. ಫ್ಯಾಮಿಲಿ ಆಡಿಯನ್ಸ್ಗೆ ಖಂಡಿತಾ ಇಷ್ಟವಾಗುವಂಥ ಸಿನಿಮಾ ಇದಾಗಲಿದೆ’ ಎನ್ನುವುದು ನಿರ್ದೇಶಕ ಶಶಾಂಕ್ ಮಾತು.
“ಶಶಾಂಕ್ ಕನ್ನಡದಲ್ಲಿ ಹಲವು ಹೊಸಥರದ ಸಿನಿಮಾಗಳನ್ನು ಮಾಡಿದ ಅನುಭವಿ ನಿರ್ದೇಶಕ. ಅವರೊಂದಿಗೆ ಈ ಸಿನಿಮಾದಲ್ಲಿ ಕೆಲಸ ಮಾಡಲು ಖುಷಿಯಾಗುತ್ತಿದೆ. ಕನ್ನಡದ ಮಟ್ಟಿಗೆ ಇದೊಂದು ಅಪರೂಪ ಸಿನಿಮಾವಾಗಲಿದೆ’ ಎಂಬ ವಿಶ್ವಾಸ ಕೃಷ್ಣ ಅವರಿಗಿದೆ.
“ಶಶಾಂಕ್ ಸಿನೆಮಾಸ್’ ಮತ್ತು “ಕೌರವ ಪ್ರೊಡಕ್ಷನ್ಸ್’ ಬ್ಯಾನರ್ನಲ್ಲಿ ಜಂಟಿಯಾಗಿ ನಿರ್ಮಾಣ ಮಾಡಿದೆ.
ಟಾಪ್ ನ್ಯೂಸ್
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-150x83.jpg)
Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![7-yellapura](https://www.udayavani.com/wp-content/uploads/2024/07/7-yellapura-150x90.jpg)
Yellapura: ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ; ತಪ್ಪಿದ ಅನಾಹುತ
![belagavi](https://www.udayavani.com/wp-content/uploads/2024/07/belagavi-150x90.jpg)
Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ
![Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ](https://www.udayavani.com/wp-content/uploads/2024/07/sahitya-150x83.jpg)
Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.