![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 22, 2022, 2:06 PM IST
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸೋದರ ಸಂಬಂಧಿ ಮನೋಜ್ ಕುಮಾರ್ “ಟಕ್ಕರ್’ ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ.
ಇದೇ ಮೇ. 6ರಂದು “ಟಕ್ಕರ್’ ಥಿಯೇಟರ್ ಗೆ ಬರುತ್ತಿದ್ದು, ಇತ್ತೀಚೆಗೆ ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ಬಳಿಕ ಹಿರಿಯ ನಟ ದಿ. ತೂಗುದೀಪ ಶ್ರೀನಿವಾಸ್ ಅವರ ಮನೆಗೆ ತೆರಳಿ ಮೀನಾ ತೂಗುದೀಪ ಅವರ ಆಶೀರ್ವಾದ ಪಡೆದು ಚಿತ್ರತಂಡ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿತು.
ಇದೇ ವೇಳೆ ಮಾತನಾಡಿದ ಮೀನಾ ತೂಗುದೀಪ ಶ್ರೀನಿವಾಸ್, “ನನ್ನ ಮೊಮ್ಮಗ ಮನೋಜ್ ಹೀರೋ ಆಗಿ ನಟಿಸಿರುವ “ಟಕ್ಕರ್’ ಸಿನಿಮಾ, ಮೊಬೈಲ್ನಿಂದ ಆಗುತ್ತಿರುವ ಅನಾಹುತಗಳ ಕುರಿತಾಗಿ ಮಾಡಲಾಗಿದೆ. ಎಲ್ಲರಿಗೂ ಇಷ್ಟವಾಗುವಂಥ ಸಿನಿಮಾ ಮಾಡಿದ್ದಾರೆಂಬ ನಂಬಿಕೆಯಿದೆ. ನಮ್ಮ ಕುಟುಂಬದ ಹುಡುಗನೊಬ್ಬ ಹೀರೋ ಆಗುತ್ತಿರುವುದು ಖುಷಿ ತಂದಿದೆ’ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು.
“ಎಸ್.ಎಲ್.ಎನ್ ಕ್ರಿಯೇಶನ್ಸ್’ ಬ್ಯಾನರ್ನಲ್ಲಿ ನಾಗೇಶ ಕೋಗಿಲು ನಿರ್ಮಿಸಿರುವ ಸೈಬರ್ ಕ್ರೈಂ ಕಥಾಹಂದರದ “ಟಕ್ಕರ್’ ಚಿತ್ರಕ್ಕೆ ವಿ. ರಘುಶಾಸ್ತ್ರೀ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಮನೋಜ್ಗೆ “ಪುಟ್ಟಗೌರಿ ಮದುವೆ’ ಖ್ಯಾತಿಯ ರಂಜನಿ ರಾಘವನ್ ನಾಯಕಿಯಾಗಿ ಜೋಡಿಯಾಗಿದ್ದಾರೆ.
ಇದನ್ನೂ ಓದಿ:ಕೆಜಿಎಫ್ 2 ಅಬ್ಬರದ ನಡುವೆ ಥಿಯೇಟರ್ ನಲ್ಲಿ ‘ಗಂಡುಲಿ’ ಘರ್ಜನೆ
ಉಳಿದಂತೆ “ಭಜರಂಗಿ’ ಖ್ಯಾತಿಯ ಸೌರವ್ ಲೋಕಿ, ಸಾಧುಕೋಕಿಲ, ಅಶ್ವಿನ್ ಹಾಸನ್, ಆದಿ, ನಯನಾ, ಕುರಿ ಸುನಿಲ್, ಜೈ ಜಗದೀಶ್, ಶ್ರೀಧರ್, ಸುಮಿತ್ರಾ ಮೊದಲಾದ ಕಲಾವಿದರ ಬೃಹತ್ ತಾರಾಗಣ ಚಿತ್ರದಲ್ಲಿದೆ.
ಚಿತ್ರದ ಹಾಡುಗಳಿಗೆ ಮಣಿಕಾಂತ್ ಕದ್ರಿ ಸಂಗೀತವಿದ್ದು, ವಿಜಯ ಪ್ರಕಾಶ್, ಅನುರಾಧಾ ಭಟ್, ಸಂಜಿತ್ ಹೆಗ್ಡೆ, ಶಶಾಂಕ್ ಶೇಷಗಿರಿ ಮೊದಲಾದವರು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಚಿತ್ರಕ್ಕೆ ವಿಲಿಯಮ್ಸ್ ಡೇವಿಡ್ ಛಾಯಾಗ್ರಹಣವಿದ್ದು ಬೆಂಗಳೂರು, ಮೈಸೂರು, ಮಲೇಶಿಯಾ ಮೊದಲಾದ ಕಡೆಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.