Kannada Movies; ತ್ರಿಬಲ್‌ ಸ್ಟಾರ್‌ ಅಕ್ಟೋಬರ್‌: ಧ್ರುವ, ಮುರಳಿ, ಉಪ್ಪಿ ಅಖಾಡಕ್ಕೆ


Team Udayavani, Sep 13, 2024, 10:51 AM IST

Martin, UI, Bagheera movies releasing in october

ಶ್ರೀಮುರಳಿ ನಾಯಕರಾಗಿರುವ “ಬಘೀರ’ ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಪ್ರಶ್ನೆ ಅನೇಕರಲ್ಲಿತ್ತು. ಏಕೆಂದರೆ ಚಿತ್ರ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಬಿಡುಗಡೆಯಾಗಬೇಕಿತ್ತು. ಆದರೆ, ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಅಕ್ಟೋಬರ್‌ 31ಕ್ಕೆ ಚಿತ್ರವನ್ನು ತೆರೆಗೆ ತರುವುದಾಗಿ ಚಿತ್ರತಂಡ ಘೋಷಿಸಿದೆ. ಈ ಮೂಲಕ ಅಕ್ಟೋಬರ್‌ ಸ್ಟಾರ್‌ ಸಿನಿಮಾಗಳ ಪಟ್ಟಿಗೆ “ಬಘೀರ’ ಕೂಡಾ ಸೇರಿದೆ.

ನಿಮಗೆ ಗೊತ್ತಿರುವಂತೆ ಈಗಾಗಲೇ ಅಕ್ಟೋಬರ್‌ನಲ್ಲಿ 11ಕ್ಕೆ “ಮಾರ್ಟಿನ್‌’ ಚಿತ್ರ ಬರುವುದಾಗಿ ಘೋಷಿಸಿಕೊಂಡಿದೆ. ಇದರ ಜೊತೆಗೆ ಉಪೇಂದ್ರ ಅವರ “ಯು-ಐ’ ಕೂಡಾ ಅಕ್ಟೋಬರ್‌ ರಿಲೀಸ್‌ ಎಂದಿದೆ. ಆದರೆ, ಆ ಚಿತ್ರ ಡೇಟ್‌ ಅನೌನ್ಸ್‌ ಮಾಡಿಲ್ಲ. ಈಗ “ಬಘೀರ’ ಕೂಡಾ ಅಕ್ಟೋಬರ್‌ ಕೊನೆಯ ವಾರವನ್ನು ಆಯ್ಕೆ ಮಾಡಿಕೊಂಡಿದೆ.

ಒಂದು ತಿಂಗಳಲ್ಲಿ ಮೂರು ಸ್ಟಾರ್‌ ಸಿನಿಮಾಗಳು ಬಂದರೆ ಅದರಿಂದ ಚಿತ್ರರಂಗಕ್ಕೆ ಲಾಭವೇ ಹೆಚ್ಚು. ಆದರೆ, ಕೊನೆಯ ಕ್ಷಣದ ಬದಲಾವಣೆ ಮಾಡಿಕೊಂಡರೆ ಇತರ ಸಿನಿಮಾಗಳ ತಯಾರಿ ಮೇಲೆ ಪ್ರಭಾವ ಬೀರುವುದು ಸುಳ್ಳಲ್ಲ. ಇನ್ನು, ಉಪೇಂದ್ರ ಅವರ “ಯು-ಐ’ ಚಿತ್ರ ಇನ್ನೂ ಡೇಟ್‌ ಅನೌನ್ಸ್‌ ಮಾಡದೇ ಅಕ್ಟೋಬರ್‌ ಎಂದಷ್ಟೇ ಹೇಳಿರುವುದರಿಂದ ಈ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗುತ್ತಾ ಎಂಬ ಪ್ರಶ್ನೆ ಎದ್ದಿದೆ.

ಪೂರ್ಣ ಸಮಯ ಬಘೀರನಿಗೆ

“ಬಘೀರ’ ಸಿನಿಮಾದ ಹೆಸರೇ ಹೇಳುವಂತೆ ಇದೊಂದು ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಂ ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯ ಸಿನಿಮಾ. ಹಿಂದಿನ ಯಾವ ಸಿನಿಮಾಗಳಲ್ಲೂ ಕಾಣಿಸಿಕೊಂಡಿರದಂತಹ ಗೆಟಪ್‌ ಈ ಸಿನಿಮಾದಲ್ಲಿ ಶ್ರೀಮುರಳಿ ಅವರಿಗೆ ಇದೆಯಂತೆ. ಇನ್ನು ಶ್ರೀಮುರಳಿ ಅವರ ಪಾತ್ರದಲ್ಲಿ ಸಾಕಷ್ಟು ವಿಶೇಷತೆ ಮತ್ತು ವೈವಿದ್ಯತೆಗಳಿರುವುದರಿಂದ, ತಮಗಿರುವ ಪಾತ್ರಕ್ಕೆ ತಕ್ಕಂತೆ ತಮ್ಮ ದೇಹದ ತೂಕವನ್ನೂ ಶ್ರೀಮುರಳಿ ಹೆಚ್ಚು-ಕಡಿಮೆ ಮಾಡಿಕೊಂಡಿದ್ದಾರೆ. ಈ ಪ್ರಕ್ರಿಯೆಗಾಗಿ ಶ್ರೀಮುರಳಿ ಅವರಿಗೆ ಸಾಕಷ್ಟು ಸಮಯ ಹಿಡಿದಿದೆ.

ಈ ಹಿಂದೆ ಶ್ರೀಮುರಳಿ ಬಘೀರನ ಬಗ್ಗೆ ಹೇಳಿಕೊಂಡಂತೆ, “ಪ್ರತಿಯೊಬ್ಬರ ವರ್ಕ್‌ ಕೂಡ ಬಘೀರ ಸಿನಿಮಾವನ್ನು ಬೇರೊಂದು ಲೆವೆಲ್‌ಗೆ ತೆಗೆದುಕೊಂಡು ಹೋಗುತ್ತಿದೆ. ಎಲ್ಲರ ಡೆಡಿಕೇಷನ್‌ ನೋಡಿದಾಗ, ನಾನು ಕೂಡ ಅವರಿಗೆ ತಕ್ಕಂತೆ ಸಿನಿಮಾದಲ್ಲಿ ನನ್ನ ಪಾತ್ರಕ್ಕೆ ಡೆಡಿಕೇಷನ್‌ ಮಾಡಬೇಕು ಅಂಥ ಅನಿಸುತ್ತದೆ. ಹಾಗಾಗಿ ಸಿನಿಮಾದಲ್ಲಿ ನನ್ನ ಪಾತ್ರಕ್ಕೆ ತುಂಬ ಪೋಕಸ್‌ ಆಗಿದ್ದೇನೆ. ಅದಕ್ಕೆ ಏನು ಮಾಡಬೇಕೊ ಅದೆಲ್ಲವನ್ನು ಮಾಡುತ್ತಿದ್ದೇನೆ. ನಾನಂತೂ “ಬಘೀರ’ನ ಬಗ್ಗೆ ತುಂಬ ಎಕ್ಸೈಟ್‌ ಆಗಿದ್ದೇನೆ. ಅದೇ ಎಕ್ಸೈಟ್‌ಮೆಂಟ್‌ ಥಿಯೇಟರ್‌ನಲ್ಲಿ ಆಡಿಯನ್ಸ್‌ಗೂ ಸಿಗಲಿದೆ’ ಎಂದಿದ್ದರು.

ಈಗ ಅಭಿಮಾನಿಗಳು ಕೂಡಾ ಈ ಚಿತ್ರಕ್ಕಾಗಿ ಎದುರು ನೋಡುತ್ತಿದ್ದಾರೆ. ಚಿತ್ರಕ್ಕೆ ಪ್ರಶಾಂತ್‌ ನೀಲ್‌ ಕಥೆ ಇದ್ದು, ಡಾ.ಸೂರಿ ನಿರ್ದೇಶನವಿದೆ. ಹೊಂಬಾಳೆ ಫಿಲಂಸ್‌ ಚಿತ್ರ ನಿರ್ಮಾಣ ಮಾಡುತ್ತಿದೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

After 10 years, today is the first phase of voting in Kashmir

Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ

BC-Road

Audio Contraversy: ಶರಣ್‌ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

Cylinder

Server Problem: ಗೃಹಬಳಕೆ ಅಡುಗೆ ಅನಿಲ ಪೂರೈಕೆ ವ್ಯತ್ಯಯ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

JHONTY SON OF JAYRAJ: ಜಯರಾಜ್‌ ಸುತ್ತ ಮತ್ತೊಂದು ಚಿತ್ರ

Dhruva Thare Movie: ಸೆ.20ಕ್ಕೆ ಧ್ರುವತಾರೆ ತೆರೆಗೆ

Dhruva Thare Movie: ಸೆ.20ಕ್ಕೆ ಧ್ರುವತಾರೆ ತೆರೆಗೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

11

Kannada Short Movie: ದುಡ್ಡಿನ ಸುತ್ತ ಜೋಕರ್‌ ಆಲ್ಬಮ್‌

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

After 10 years, today is the first phase of voting in Kashmir

Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ

BC-Road

Audio Contraversy: ಶರಣ್‌ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

Cylinder

Server Problem: ಗೃಹಬಳಕೆ ಅಡುಗೆ ಅನಿಲ ಪೂರೈಕೆ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.