ಭ್ರಮೆಯಲ್ಲಿ ಹೊಸಬರು
Team Udayavani, Sep 11, 2020, 3:53 PM IST
ಕನ್ನಡ ಚಿತ್ರರಂಗದಲ್ಲಿ ಆಗಾಗ್ಗೆ ನೈಜ ಘಟನೆಗಳನ್ನು ತೆರೆಮೇಲೆ ತರುವ ಪ್ರಯತ್ನ ಆಗುತ್ತಿರುತ್ತದೆ. ಈಗ ಅಂಥದ್ದೇ ಒಂದು ಘಟನೆ ತೆರೆಮೇಲೆ ದೃಶ್ಯರೂಪದಲ್ಲಿ ಬರುತ್ತಿದೆ. ಅದರ ಹೆಸರು “ಭ್ರಮೆ’.
ಕೆಲ ವರ್ಷಗಳ ಹಿಂದೆ ಕುಂದಾಪುರದಲ್ಲಿ ನಡೆದಂಥ ನೈಜ ಘಟನೆಯೊಂದನ್ನು ಇಟ್ಟುಕೊಂಡುನಿರ್ಮಾಣವಾಗಿರುವ “ಭ್ರಮೆ’ ಚಿತ್ರಕ್ಕೆ ಯುವ ನಿರ್ದೇಶಕ ಚರಣ ರಾಜ್. ಡಿ ಆ್ಯಕ್ಷನ್-ಕಟ್ ಹೇಳಿದ್ದಾರೆ. ಈ ಚಿತ್ರದ ಮೂಲಕ ಹಿರಿಯ ನಿರ್ದೇಶಕ ತಿಪಟೂರು ರಘು ಅವರ ಪುತ್ರ ನವೀನ್ ನಾಯಕ ನಾಯಕನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಡುತ್ತಿದ್ದಾರೆ. ಹಾರರ್ – ಕಾಮಿಡಿ ಕಥಾಹಂದರ ಹೊಂದಿರುವ “ಭ್ರಮೆ’ ಚಿತ್ರದಲ್ಲಿ ನವೀನ್ ಅವರಿಗೆ ಅಂಜನಾ ಗೌಡ ಹಾಗೂ ಇಶಾನಾ ನಾಯಕಿಯರಾಗಿ ಜೋಡಿಯಾಗಿದ್ದಾರೆ.
ಉಳಿದಂತೆ ರಘು, ಬೆನಕ ಪವನ್ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ ಚಿತ್ರದ ಪ್ರಮೋಶನ್ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೇ ಸೆ. 5ರಶಿಕ್ಷಕರ ದಿನಾಚರಣೆಯಂದು ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿದೆ. ಹಿರಿಯ ನಿರ್ದೇಶಕ ಕೆ.ಎಸ್ ಭಗವಾನ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಮುತ್ತುರಾಜ್, ಗಾಯಕ ಹರ್ಷಮೊದಲಾದವರು ಮುಖ್ಯ ಅತಿಥಿಯಾಗಿ ಆಗಮಿಸಿ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಚರಣ ರಾಜ್, “ಕೆಲ ವರ್ಷಗಳ ಹಿಂದೆ ಕುಂದಾಪುರದಲ್ಲಿ ನಡೆದ ನೈಜ ಘಟನೆ ಈ ಸಿನಿಮಾ ಮಾಡಲು ನಮಗೆ ಪ್ರೇರಣೆಯಾಯಿತು. ಚಿತ್ರದ ನಾಯಕ ಆಸ್ಪತ್ರೆಯೊಂದರಲ್ಲಿ ಮೇಲ್ ನರ್ಸ್. ಅಲ್ಲಿ ಏನೇನು ನಡೆಯುತ್ತದೆ ಅನ್ನೋದರ ಸುತ್ತ ಇಡೀ ಸಿನಿಮಾ ನಡೆಯುತ್ತದೆ’ ಎಂದರು. ಚಿತ್ರದ ನಾಯಕ ನವೀನ್, ನಾಯಕಿಯರಾದ ಅಂಜನಾ ಗೌಡ ಹಾಗೂ ಇಶಾನಾ ಚಿತ್ರದ ಅನುಭವಗಳು ಮತ್ತು ಪಾತ್ರದ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡರು. “ಭ್ರಮೆ’ ಚಿತ್ರದ ಹಾಡುಗಳಿಗೆ ಡಾ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿ, ಸಂಗೀತ ಸಂಯೋಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.