ಪ್ಯೂರ್‌ ಲವ್‌ಸ್ಟೋರಿ

ಅಂದದ ಸಿನಿಮಾ ಚೆಂದದ ಮಾತು

Team Udayavani, Jun 28, 2019, 5:00 AM IST

Udayavani Kannada Newspaper

ಪ್ರಶ್ನೆ- ಪ್ಯೂರ್‌ ಲವ್‌ ಅಂದರೇನು?
ಉತ್ತರ- ಜೀವನ ಪರ್ಯಂತ ಒಂದೇ ಹುಡುಗಿಯನ್ನು ಲವ್‌ ಮಾಡುವುದಕ್ಕೆ ಪ್ಯೂರ್‌ ಲವ್‌ ಅಂತಾರೆ.

– ಮೇಲಿನ ಈ ಪ್ರಶ್ನೋತ್ತರ ಅಪ್ಪ-ಮಗನ ನಡುವಿನದ್ದು. ಚಿಕ್ಕಂದಿನಿಂದಲೂ ರೇಡಿಯೋ ಕೇಳುವ ಹುಚ್ಚು ಆ ಹುಡುಗನದ್ದು. ಹಾಗೊಮ್ಮೆ ರೇಡಿಯೋದಲ್ಲಿ ಪದೇ ಪದೇ ಬರುತ್ತಿದ್ದ ಪದವೊಂದನ್ನು ಕೇಳುವ ಆ ಹುಡುಗ, ಒಮ್ಮೆ ತನ್ನ ಅಪ್ಪನ ಬಳಿ ಬಂದು, “ಅಪ್ಪ ಆ ಪದದ ಅರ್ಥವೇನು’ ಎಂಬ ಪ್ರಶ್ನೆ ಮುಂದಿಟ್ಟಾಗ, ಅಪ್ಪನ ಉತ್ತರ ಹೀಗಿರುತ್ತೆ.’ ಹಾಗಾದರೆ, ಈ ಪ್ರಶ್ನೋತ್ತರ ಎಲ್ಲಿಯದ್ದು ಎಂಬುದಕ್ಕೆ “ಅಂದವಾದ ‘ ಸಿನಿಮಾ ಉತ್ತರ.

ಹೌದು, ಇದೇ ಮೊದಲ ಸಲ ಹೊಸಬರು ಸೇರಿ ಮಾಡಿರುವ ಚಿತ್ರವಿದು. ಸದ್ಯಕ್ಕೆ ಸೆನ್ಸಾರ್‌ ಅಂಗಳದಲ್ಲಿದ್ದು, ಬಿಡುಗಡೆ ತಯಾರಿಯಲ್ಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜುಲೈ ಅಂತ್ಯದಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರದ ಮೂಲಕ ಚಲ ನಿರ್ದೇಶಕರಾಗಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿರುವ ಚಲ, ಚಿತ್ರದ ಬಗ್ಗೆ ಹೇಳುವುದು ಇಷ್ಟು. “ಪ್ಯೂರ್‌ ಲವ್‌ ಅನ್ನೋದು ಈ ಕಾಲಕ್ಕೆ ಸರಿಹೊಂದುತ್ತಾ? ಒಂದೇ ಹುಡುಗಿಯನ್ನು ಲವ್‌ ಮಾಡುವುದು ಈಗಿನ ಕಾಲದಲ್ಲಿ ಕಷ್ಟನಾ, ಸುಲಭನಾ ಎಂಬುದನ್ನು ಹಾಸ್ಯಮಯವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಇದೊಂದು ರೊಮ್ಯಾಂಟಿಕ್‌ ಕಾಮಿಡಿ ಜಾನರ್‌ ಸಿನಿಮಾ ಆಗಿದ್ದು, ಚಿತ್ರದಲ್ಲಿ ಅನುಷಾ ನಾಯಕಿಯಾಗಿದ್ದಾರೆ. ಜೈ ಎಂಬ ಹೊಸ ಪ್ರತಿಭೆ ನಾಯಕನಾಗಿ ಎಂಟ್ರಿಕೊಟ್ಟಿದ್ದಾನೆ. ಅವರಿಬ್ಬರದು ಇಲ್ಲಿ ಲವ್‌ ಪ್ಯೂರ್‌ ಆಗಿ ಉಳಿಯುತ್ತಾ ಇಲ್ಲವಾ ಎಂಬ ಪ್ರೀತಿ ಕಥೆಯನ್ನೇ ಇಲ್ಲಿ ಹೊಸದಾಗಿ ಹೇಳುವ ಪ್ರಯತ್ನ ಮಾಡಿರುವುದಾಗಿ ಹೇಳುತ್ತಾರೆ ಚಲ.

ಸದ್ಯಕ್ಕೆ ಆಡಿಯೋ ಬಿಡುಗಡೆಗೆ ಸಜ್ಜಾಗಿರುವ ಚಿತ್ರಕ್ಕೆ ಗುರುಕಿರಣ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ. ಎ.ಆರ್‌.ರೆಹಮಾನ್‌ ಅವರ ಜೊತೆ ಕೆಲಸ ಮಾಡಿರುವ ವಿಕ್ರಮ್‌ ವರ್ಮನ್‌ ಸಂಗೀತವಿದ್ದು, ಜಯಂತ್‌ ಕಾಯ್ಕಿಣಿ, ಯೋಗರಾಜ್‌ಭಟ್‌, ಹೃದಯಶಿವ ಎಂಟು ಗೀತೆಗಳನ್ನು ರಚಿಸಿದ್ದಾರೆ. ಇದುವರೆಗೆ ಖಳ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಂಡಿದ್ದ ಹರೀಶ್‌ ರಾಯ್‌ ಇಲ್ಲಿ ನಾಯಕನ ಒಳ್ಳೆಯ ತಂದೆಯಾಗಿ ನಟಿಸಿದ್ದಾರೆ. ಶ್ರೀಧರ್‌ ನಾಯಕಿಯ ತಂದೆಯಾಗಿ ಕಾಣಿಸಿಕೊಂಡಿದ್ದಾರೆ. ಕೊಡಚಾದ್ರಿ, ಸಕಲೇಶಪುರ ಸುತ್ತಮುತ್ತ ಚಿತ್ರೀಕರಣವಾಗಿದ್ದು, ಬಹುತೇಕ ಚಿತ್ರ ಮಳೆ ಮತ್ತು ಮಂಜುವಿನಲ್ಲೇ ಚಿತ್ರಿತಗೊಂಡಿದೆ. ಫ್ಯಾಷನ್‌ ಡಿಸೈನರ್‌ ಆಗಿರುವ ಮಧು ರಾಜ್‌ ನಿರ್ಮಾಕರಾಗಿದ್ದು, ಅವರಿಗೆ ಇದು ಮೊದಲ ಚಿತ್ರ.

ಟಾಪ್ ನ್ಯೂಸ್

Haryana: How did Nayab Singh Saini become the “Nawab” of Haryana despite only being CM for 210 days?

Haryana: ಕೇವಲ 210 ದಿನ ಸಿಎಂ ಆದರೂ ನಯಾಬ್‌ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?

7-sagara

Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!

Mumtaz Ali Case: CCB police arrested three people including the main accused Rehmat

Mumtaz Ali Case: ಪ್ರಮುಖ ಆರೋಪಿ ರೆಹಮತ್‌ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

6-madikeri

Madikeri: ಕಾಫಿ ತೋಟದಲ್ಲಿ ಸುಟ್ಟು ಕರಕಲಾದ ಮೃತದೇಹ, ಅಂಗಾಂಗಗಳು ಪತ್ತೆ

15

Vettaiyan: ರಿಲೀಸ್‌ಗೂ ಮುನ್ನ ʼಗೋಟ್‌ʼ ದಾಖಲೆ ಮೀರಿಸಿದ ರಜಿನಿಕಾಂತ್‌ ʼವೆಟ್ಟೈಯನ್‌ʼ

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

farooq

Jammu Kashmir Result: ಜಮ್ಮು-ಕಾಶ್ಮೀರದ ನೂತನ ಸಿಎಂ ಹೆಸರು ಘೋಷಿಸಿದ ಫಾರೂಕ್ ಅಬ್ದುಲ್ಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Haryana: How did Nayab Singh Saini become the “Nawab” of Haryana despite only being CM for 210 days?

Haryana: ಕೇವಲ 210 ದಿನ ಸಿಎಂ ಆದರೂ ನಯಾಬ್‌ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?

7-sagara

Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!

13(2)

Manipal: ಮಣ್ಣಪಳ್ಳ ಕೆರೆಯೊಡಲಿಗೆ ತ್ಯಾಜ್ಯ;ಡಸ್ಟ್‌ಬಿನ್‌ ಅಳವಡಿಕೆ ಮಾಡಿದ್ದರೂ ಉಪಯೋಗ ಶೂನ್ಯ

Mumtaz Ali Case: CCB police arrested three people including the main accused Rehmat

Mumtaz Ali Case: ಪ್ರಮುಖ ಆರೋಪಿ ರೆಹಮತ್‌ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

12

MGM, ಕುಂಜಿಬೆಟ್ಟು: ಇಂಟರ್‌ಲಾಕ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.