ಪ್ಯೂರ್‌ ಲವ್‌ಸ್ಟೋರಿ

ಅಂದದ ಸಿನಿಮಾ ಚೆಂದದ ಮಾತು

Team Udayavani, Jun 28, 2019, 5:00 AM IST

Udayavani Kannada Newspaper

ಪ್ರಶ್ನೆ- ಪ್ಯೂರ್‌ ಲವ್‌ ಅಂದರೇನು?
ಉತ್ತರ- ಜೀವನ ಪರ್ಯಂತ ಒಂದೇ ಹುಡುಗಿಯನ್ನು ಲವ್‌ ಮಾಡುವುದಕ್ಕೆ ಪ್ಯೂರ್‌ ಲವ್‌ ಅಂತಾರೆ.

– ಮೇಲಿನ ಈ ಪ್ರಶ್ನೋತ್ತರ ಅಪ್ಪ-ಮಗನ ನಡುವಿನದ್ದು. ಚಿಕ್ಕಂದಿನಿಂದಲೂ ರೇಡಿಯೋ ಕೇಳುವ ಹುಚ್ಚು ಆ ಹುಡುಗನದ್ದು. ಹಾಗೊಮ್ಮೆ ರೇಡಿಯೋದಲ್ಲಿ ಪದೇ ಪದೇ ಬರುತ್ತಿದ್ದ ಪದವೊಂದನ್ನು ಕೇಳುವ ಆ ಹುಡುಗ, ಒಮ್ಮೆ ತನ್ನ ಅಪ್ಪನ ಬಳಿ ಬಂದು, “ಅಪ್ಪ ಆ ಪದದ ಅರ್ಥವೇನು’ ಎಂಬ ಪ್ರಶ್ನೆ ಮುಂದಿಟ್ಟಾಗ, ಅಪ್ಪನ ಉತ್ತರ ಹೀಗಿರುತ್ತೆ.’ ಹಾಗಾದರೆ, ಈ ಪ್ರಶ್ನೋತ್ತರ ಎಲ್ಲಿಯದ್ದು ಎಂಬುದಕ್ಕೆ “ಅಂದವಾದ ‘ ಸಿನಿಮಾ ಉತ್ತರ.

ಹೌದು, ಇದೇ ಮೊದಲ ಸಲ ಹೊಸಬರು ಸೇರಿ ಮಾಡಿರುವ ಚಿತ್ರವಿದು. ಸದ್ಯಕ್ಕೆ ಸೆನ್ಸಾರ್‌ ಅಂಗಳದಲ್ಲಿದ್ದು, ಬಿಡುಗಡೆ ತಯಾರಿಯಲ್ಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜುಲೈ ಅಂತ್ಯದಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರದ ಮೂಲಕ ಚಲ ನಿರ್ದೇಶಕರಾಗಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿರುವ ಚಲ, ಚಿತ್ರದ ಬಗ್ಗೆ ಹೇಳುವುದು ಇಷ್ಟು. “ಪ್ಯೂರ್‌ ಲವ್‌ ಅನ್ನೋದು ಈ ಕಾಲಕ್ಕೆ ಸರಿಹೊಂದುತ್ತಾ? ಒಂದೇ ಹುಡುಗಿಯನ್ನು ಲವ್‌ ಮಾಡುವುದು ಈಗಿನ ಕಾಲದಲ್ಲಿ ಕಷ್ಟನಾ, ಸುಲಭನಾ ಎಂಬುದನ್ನು ಹಾಸ್ಯಮಯವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಇದೊಂದು ರೊಮ್ಯಾಂಟಿಕ್‌ ಕಾಮಿಡಿ ಜಾನರ್‌ ಸಿನಿಮಾ ಆಗಿದ್ದು, ಚಿತ್ರದಲ್ಲಿ ಅನುಷಾ ನಾಯಕಿಯಾಗಿದ್ದಾರೆ. ಜೈ ಎಂಬ ಹೊಸ ಪ್ರತಿಭೆ ನಾಯಕನಾಗಿ ಎಂಟ್ರಿಕೊಟ್ಟಿದ್ದಾನೆ. ಅವರಿಬ್ಬರದು ಇಲ್ಲಿ ಲವ್‌ ಪ್ಯೂರ್‌ ಆಗಿ ಉಳಿಯುತ್ತಾ ಇಲ್ಲವಾ ಎಂಬ ಪ್ರೀತಿ ಕಥೆಯನ್ನೇ ಇಲ್ಲಿ ಹೊಸದಾಗಿ ಹೇಳುವ ಪ್ರಯತ್ನ ಮಾಡಿರುವುದಾಗಿ ಹೇಳುತ್ತಾರೆ ಚಲ.

ಸದ್ಯಕ್ಕೆ ಆಡಿಯೋ ಬಿಡುಗಡೆಗೆ ಸಜ್ಜಾಗಿರುವ ಚಿತ್ರಕ್ಕೆ ಗುರುಕಿರಣ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ. ಎ.ಆರ್‌.ರೆಹಮಾನ್‌ ಅವರ ಜೊತೆ ಕೆಲಸ ಮಾಡಿರುವ ವಿಕ್ರಮ್‌ ವರ್ಮನ್‌ ಸಂಗೀತವಿದ್ದು, ಜಯಂತ್‌ ಕಾಯ್ಕಿಣಿ, ಯೋಗರಾಜ್‌ಭಟ್‌, ಹೃದಯಶಿವ ಎಂಟು ಗೀತೆಗಳನ್ನು ರಚಿಸಿದ್ದಾರೆ. ಇದುವರೆಗೆ ಖಳ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಂಡಿದ್ದ ಹರೀಶ್‌ ರಾಯ್‌ ಇಲ್ಲಿ ನಾಯಕನ ಒಳ್ಳೆಯ ತಂದೆಯಾಗಿ ನಟಿಸಿದ್ದಾರೆ. ಶ್ರೀಧರ್‌ ನಾಯಕಿಯ ತಂದೆಯಾಗಿ ಕಾಣಿಸಿಕೊಂಡಿದ್ದಾರೆ. ಕೊಡಚಾದ್ರಿ, ಸಕಲೇಶಪುರ ಸುತ್ತಮುತ್ತ ಚಿತ್ರೀಕರಣವಾಗಿದ್ದು, ಬಹುತೇಕ ಚಿತ್ರ ಮಳೆ ಮತ್ತು ಮಂಜುವಿನಲ್ಲೇ ಚಿತ್ರಿತಗೊಂಡಿದೆ. ಫ್ಯಾಷನ್‌ ಡಿಸೈನರ್‌ ಆಗಿರುವ ಮಧು ರಾಜ್‌ ನಿರ್ಮಾಕರಾಗಿದ್ದು, ಅವರಿಗೆ ಇದು ಮೊದಲ ಚಿತ್ರ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.