ಸೆಂಟಿಮೆಂಟ್‌ ಪದ್ಮಾವತಿ


Team Udayavani, Jun 28, 2019, 5:00 AM IST

22

ಒಮ್ಮೆ ನೀವು ಚಿತ್ರರಂಗಕ್ಕೆ ಎಂಟ್ರಿಕೊಟ್ಟರೆ, ಮತ್ತೆ ಅದರಿಂದ ದೂರವಾಗೋದು ಕಷ್ಟದ ಮಾತು. ಅಲ್ಲೇ ಇದ್ದು ಸಾಧಿಸಬೇಕೆಂದು ಕನಸು ಕಾಣುವವರು ಮತ್ತು ಆ ನಿಟ್ಟಿನಲ್ಲಿ ಪ್ರಯತ್ನಿಸುವವರು ಅನೇಕರಿದ್ದಾರೆ. ಆ ಸಾಲಿಗೆ ವಿಕ್ರಮ್‌ ಆರ್ಯ ಕೂಡಾ ಸೇರುತ್ತಾರೆ. ಎಲ್ಲಾ ಓಕೆ, ಯಾರು ಈ ವಿಕ್ರಮ್‌ ಆರ್ಯ ಎಂದು ನೀವು ಕೇಳಬಹುದು. ಈ ಹಿಂದೆ “ತಲೆ ಬಾಚ್ಕೋಳ್ಳಿ ಪೌಡ್ರು ಹಾಕ್ಕೊಳ್ಳಿ’ ಎಂಬ ಸಿನಿಮಾವನ್ನು ನಿರ್ಮಿಸಿ, ನಟಿಸಿದ್ದ ವಿಕ್ರಮ್‌ ಈಗ “ಪದ್ಮಾವತಿ’ ಎಂಬ ಸಿನಿಮಾ ಮಾಡಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ.

ಹೆಸರಿಗೆ ತಕ್ಕಂತೆ ಇದು ನಾಯಕಿ ಪ್ರಧಾನ ಚಿತ್ರ. ಮುಖ್ಯವಾಗಿ ಈ ಚಿತ್ರದಲ್ಲಿ ತಾಯಿ ಮಗನ ಸಂಬಂಧದ ಬಗ್ಗೆ ಹೇಳಲಾಗಿದೆಯಂತೆ. ಹಾಗಾಗಿ, ಈ ಚಿತ್ರ ಎಲ್ಲರ ಮನಮುಟ್ಟುತ್ತದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ. ಮಿಥುನ್‌ ಚಂದ್ರಶೇಖರ್‌ ಈ ಚಿತ್ರದ ನಿರ್ದೇಶಕರು. ದಾಮೋದರ್‌ ರಾವ್‌ ಈ ಚಿತ್ರದ ನಿರ್ಮಾಪಕರು. ಸ್ನೇಹಿತ ವಿಕ್ರಮ್‌ ಆರ್ಯ ಅವರಿಗೋಸ್ಕರ ಈ ಚಿತ್ರ ಮಾಡಿದ್ದಾಗಿ ಹೇಳಿಕೊಂಡರು ದಾಮೋದರ್‌.

ನಾಯಕ ವಿಕ್ರಮ್‌ ಆರ್ಯ ಇಲ್ಲಿ ಮಿಲಿಟರಿ ಕ್ಯಾಪ್ಟನ್‌ ಆಗಿ ಕಾಣಿಸಿಕೊಂಡಿದ್ದಾರಂತೆ. “ಆರಂಭದಲ್ಲಿ ಏನೂ ಗೊತ್ತಿಲ್ಲದೇ ಚಿತ್ರರಂಗಕ್ಕೆ ಬಂದು ಒಂದಷ್ಟು ಅನುಭವ ಪಡೆದೆ. ಈಗ ಎರಡೂವರೆ ವರ್ಷದ ನಂತರ ಮತ್ತೆ ಬರುತ್ತಿದ್ದೇನೆ. ನಮ್ಮದು ಚಿಕ್ಕ ಬಜೆಟ್‌ ಸಿನಿಮಾ. ತುಂಬಾ ಕಷ್ಟಪಟ್ಟು ಮಾಡಿದ್ದೇವೆ. ಚಿತ್ರದಲ್ಲಿ ತಾಯಿ ಸೆಂಟಿಮೆಂಟ್‌ ಹೈಲೈಟ್‌’ ಎಂದು ಚಿತ್ರದ ಬಗ್ಗೆ ಹೇಳಿಕೊಂಡರು.

ಈ ಹಿಂದೆ ಸಾಯಿಪ್ರಕಾಶ್‌ ಅವರ ಜೊತೆ ಹಲವು ಸಿನಿಮಾಗಳಿಗೆ ಕೆಲಸ ಮಾಡಿರುವ ಮಿಥುನ್‌ ಚಂದ್ರಶೇಖರ್‌ ಅವರಿಗೆ “ಪದ್ಮಾವತಿ’ ಚೊಚ್ಚಲ ಚಿತ್ರ. ಚಿತ್ರದ ಬಗ್ಗೆ ನೇರವಾಗಿ ಮಾತನಾಡದೇ ಒಗಟಿನ ರೀತಿ ಮಾತನಾಡಲು ಪ್ರಯತ್ನಿಸಿದರು. ಜೊತೆಗೆ ಚಿತ್ರದಲ್ಲಿ ಲವ್‌, ಸೆಂಟಿಮೆಂಟ್‌, ಆ್ಯಕ್ಷನ್‌ ಎಲ್ಲವೂ ಇದೆ ಎನ್ನಲು ಮರೆಯಲಿಲ್ಲ. ಲತಾ ಎನ್ನುವವರು ಬರೆದ ಕಥೆಯನ್ನು ಸಿನಿಮಾ ಮಾಡಿರುವ ನಿರ್ದೇ­ಶಕರು, ಆರಂಭದಲ್ಲಿ ಈ ಪ್ರೀತಿಯ ಮರೆತು ಎಂಬ ಟೈಟಲ್‌ ಇಡಲು ನಿರ್ಧರಿಸಿದ್ದರಂತೆ. ಆದರೆ, ಕಾರಣಾಂತರಗಳಿಂದ ಆ ಟೈಟಲ್‌ ಕೈ ಬಿಟ್ಟು, “ಪದ್ಮಾವತಿ’ ಎಂದಿಟ್ಟಿದ್ದಾರೆ. ಶಿವಮೊಗ್ಗ, ಹೊಸನಗರ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಸಾಕ್ಷಿ ಮೇಘನಾ ನಾಯಕಿಯಾಗಿ ನಟಿಸಿದ್ದಾರೆ. ಒಂದೇ ಚಿತ್ರದಲ್ಲಿ ವಿಭಿನ್ನ ಶೇಡ್‌ ಇರುವ ಪಾತ್ರ ಸಿಕ್ಕಿದೆಯಂತೆ. ಚಿತ್ರಕ್ಕೆ ದಿನೇಶ್‌ ಕುಮಾರ್‌ ಸಂಗೀತ ನೀಡಿದ್ದು, ಅನೇಕಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದೆ.
ಅಂದಹಾಗೆ, ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆಯಾಯಿತು. ಲಹರಿ ಸಂಸ್ಥೆ ಹಾಡು­ಗಳನ್ನು ಹೊರತಂದಿದೆ. ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ.ಚಿನ್ನೇಗೌಡ, ಹಿರಿಯ ನಿರ್ದೇಶಕ ಸಾಯಿಪ್ರಕಾಶ್‌ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

haryana

Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಕಿಡಿ

8-vijayanagara

Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು

Eshwarappa

Gadag: ಆರ್‌ಸಿ ಬ್ರಿಗೇಡ್​ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್‌ ಸಮಾವೇಶ: ಈಶ್ವರಪ್ಪ

4

Tollense Valley: ಬಾಣದ ಮೊನೆಯಂಚು ಹುಡುಕುತ್ತಾ.. ಸುಂದರ ಜಾಗದ ಹಿಂದಿದೆ ರಕ್ತಸಿಕ್ತ ಇತಿಹಾಸ

Bangladesh Cricket: Another senior player announced his farewell in the midst of the India series

Bangladesh Cricket: ಭಾರತ ಸರಣಿಯ ನಡುವೆ ವಿದಾಯ ಘೋಷಿಸಿದ ಮತ್ತೊಬ್ಬ ಹಿರಿಯ ಆಟಗಾರ

Election Result: No faith in the exit poll survey…: DK Shivakumar

Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

haryana

Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಕಿಡಿ

PDO misappropriation of lakhs of rupees: File a complaint

Davanagere: ಲಕ್ಷಾಂತರ ರೂ. ಹಣ ದುರುಪಯೋಗ ಮಾಡಿದ ಪಿಡಿಒ: ದೂರು ದಾಖಲು

8-vijayanagara

Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು

Eshwarappa

Gadag: ಆರ್‌ಸಿ ಬ್ರಿಗೇಡ್​ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್‌ ಸಮಾವೇಶ: ಈಶ್ವರಪ್ಪ

4

Tollense Valley: ಬಾಣದ ಮೊನೆಯಂಚು ಹುಡುಕುತ್ತಾ.. ಸುಂದರ ಜಾಗದ ಹಿಂದಿದೆ ರಕ್ತಸಿಕ್ತ ಇತಿಹಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.