ಚಂದನವನಕ್ಕೆ ಮತ್ತೂಬ್ಬಳು ಆಶಾ ಸುಂದರಿ!


Team Udayavani, Sep 15, 2019, 5:13 AM IST

as-1

ಸ್ಟಾರ್‌ ನಟರ ಚಿತ್ರಗಳಿಗೆ ಕನ್ನಡಕ್ಕಿಂತ ಹೆಚ್ಚಾಗಿ ಪರಭಾಷಾ ನಟಿಯರೇ ಹೀರೋಯಿನ್‌ ಆಗಿರುತ್ತಾರೆ ಅನ್ನೋ ಅಪವಾದದ ಮಾತುಗಳು ಆಗಾಗ್ಗೆ ಚಿತ್ರರಂಗದಲ್ಲಿ ಕೇಳಿಬರುತ್ತಲೇ ಇರುತ್ತದೆ. ಇದಕ್ಕೆ ಇಂಬು ನೀಡುವಂತೆ ಅನೇಕ ಸ್ಟಾರ್‌ ನಟರ ಚಿತ್ರಗಳಿಗೆ ನಿರ್ಮಾಪಕರು ಮತ್ತು ನಿರ್ದೇಶಕರು ಕೂಡ ಕೊಂಚ ಹೆಚ್ಚಾಗಿಯೇ ಪರಭಾಷಾ ಹೀರೋಯಿನ್‌ಗಳಿಗೆ ಮಣೆ ಹಾಕುತ್ತಿರುವುದು ಕೂಡ ಒಪ್ಪಿಕೊಳ್ಳಲೇ ಬೇಕಾಗಿರುವ ಸತ್ಯ.

ಸದ್ಯ ಛಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಮುಂಬರುವ ಚಿತ್ರ ರಾಬರ್ಟ್‌ ಅದ್ದೂರಿಯಾಗಿ ಚಿತ್ರೀಕರಣ ನಡೆಸುತ್ತಿದೆ. ಇದರ ನಡುವೆಯೇ ಚಿತ್ರಕ್ಕೆ ನಾಯಕಿ ಯಾರಾಗುತ್ತಾರೆ ಅನ್ನೋ ವಿಷಯ ಕೂಡ ಕಳೆದ ಕೆಲ ತಿಂಗಳಿನಿಂದ ಚರ್ಚೆಯಲ್ಲಿತ್ತು. ಚಿತ್ರಕ್ಕೆ ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ, ರಾಕುಲ್‌ ಪ್ರೀತ್‌ ಸಿಂಗ್‌, ಕೀರ್ತಿ ಸುರೇಶ್‌, ಸಾಯಿ ಪಲ್ಲವಿ ಮೊದಲಾದ ಬಹುಭಾಷಾ ನಟಿಯರು ಹೀರೋಯಿನ್‌ ಆಗಲಿದ್ದಾರೆ ಎಂಬ ಸುದ್ದಿ ಕೂಡ ಆಗಾಗ್ಗೆ ಹರಿದಾಡುತ್ತಿತ್ತು. ಇನ್ನು ಮೊದಲಿನಿಂದಲೂ ದರ್ಶನ್‌ ಅವರ ಚಿತ್ರಕ್ಕೆ ಪರಭಾಷಾ ನಟಿಯರೇ ಹೆಚ್ಚಾಗಿ ನಾಯಕಿಯ ಪಟ್ಟ ಅಲಂಕರಿಸುತ್ತ ಬಂದಿರುವುದರಿಂದ ಈ ಬಾರಿ ಕೂಡ ರಾಬರ್ಟ್‌ ಚಿತ್ರದ ಹೀರೋಯಿನ್‌ ಪಟ್ಟ ಪರಭಾಷಾ ನಟಿಯರ ಪಾಲಾಗಬಹುದು ಎಂದೇ ಹೇಳಲಾಗುತ್ತಿತ್ತು. ಆದರೆ ಇತ್ತೀಚೆಗೆ ನಡೆದ ಅಚ್ಚರಿಯ ಬೆಳವಣಿಗೆಯಲ್ಲಿ ರಾಬರ್ಟ್‌ಚಿತ್ರಕ್ಕೆ ಸದ್ಯ ಅಪ್ಪಟ ಕನ್ನಡತಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಹೌದು, ಈ ಬಾರಿ ರಾಬರ್ಟ್‌ ಗೆಪಟ್‌ನಲ್ಲಿ ಅಭಿಮಾನಿಗಳ ಮುಂದೆ ಬರಲು ರೆಡಿಯಾಗುತ್ತಿರುವ ದರ್ಶನ್‌ ಅವರಿಗೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಆಶಾ ಭಟ್‌ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

2014ರ ಮಿಸ್‌ ಸುಪ್ರ ನ್ಯಾಶನಲ್‌ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ ಆಶಾ ಭಟ್‌, ಈಗಾಗಲೇ ಹಲವಾರು ಬ್ಯೂಟಿ ಕಂಟೆಸ್ಟ್‌ಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಇದರ ನಡುವೆಯೇ ಬಾಲಿವುಡ್‌ಗೂ ಕಾಲಿಟ್ಟಿರುವ ಆಶಾ ಭಟ್‌, ಹಿಂದಿಯ ಜಂಗ್ಲಿ ಚಿತ್ರದಲ್ಲಿ ವಿದ್ಯುತ್‌ ಜಮಾಲ್‌ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ವರ್ಷದ ಆರಂಭದಲ್ಲಿ ತೆರೆಗೆ ಬಂದಿದ್ದ ಈ ಚಿತ್ರ ಬಾಕ್ಸಾಫೀಸ್‌ನಲ್ಲಿ ಕಮಾಲ್‌ ಮಾಡದಿದ್ದರೂ, ಚಿತ್ರ ಆಶಾ ಭಟ್‌ ಎನ್ನುವ ನವ ನಾಯಕಿಯನ್ನು ಗುರುತಿಸುವಂತೆ ಮಾಡಿತ್ತು. ಸದ್ಯ ಬಾಲಿವುಡ್‌ನ‌ಲ್ಲಿ ತಮ್ಮ ಸಿನಿಮಾ ಜರ್ನಿ ಶುರು ಮಾಡಿದ ಆಶಾ ಭಟ್‌, ಈಗ ಕನ್ನಡದಲ್ಲಿ ತಮ್ಮ ಚೊಚ್ಚಲ ಚಿತ್ರವನ್ನು ದರ್ಶನ್‌ ಜೊತೆಗೆ ಮಾಡುವ ಅವಕಾಶ ಗಿಟ್ಟಿಸಿಕೊಂಡಿ¨ªಾರೆ. ಈಗಾಗಲೇ ರಾಬರ್ಟ್‌ ಚಿತ್ರದ ಶೂಟಿಂಗ್‌ ಶುರುವಾಗಿದ್ದು, ಎಲ್ಲಾ ಅಂದುಕೊಂಡಂತೆ ನಡೆದರೆ, ಆಶಾ ಭಟ್‌ ಎಂಬ ಕನ್ನಡದ ಚೆಲುವೆ ಈ ವರ್ಷದ ಕೊನೆಗೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಕನ್ನಡ ಸಿನಿಪ್ರಿಯರ ಮುಂದೆ ಬರೋದಂತು ಪಕ್ಕಾ ಎನ್ನಲಾ ಗುತ್ತಿದೆ.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

D. R. Bendre: ಹೀಗಿದ್ದರು ಬೇಂದ್ರೆ…

Mahakumbh Mela: ದೇವ ಬೊಂಬೆ ಪೂಜೆ ಆಟ: ಭಕ್ತಿ ಸೋಜಿಗ! 

Mahakumbh Mela: ದೇವ ಬೊಂಬೆ ಪೂಜೆ ಆಟ: ಭಕ್ತಿ ಸೋಜಿಗ! 

11

Shopping Time: ಶಾಪಿಂಗ್‌ ಎಂಬ ಸಿಹಿಯಾದ ಶಾಪ!

10

Badami Banashankari Festival: ಬನಶಂಕರಿ ಜಾತ್ರ್ಯಾಗ ನಾಟಕಗಳ ಸುಗ್ಗಿ ಜಾತ್ರೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.