ನಕ್ಷತ್ರ ಕೃತಿಕಾ !


Team Udayavani, Sep 9, 2018, 6:00 AM IST

x-1.jpg

“ಬಿಗ್‌ ಬಾಸ್‌’ನಿಂದ ಹೊರಬಂದು ಎರಡು ವರ್ಷಗಳಾಗಿವೆ. ಆದರೂ ರಾಧಾ ಕಲ್ಯಾಣ ಖ್ಯಾತಿಯ ಕೃತಿಕಾ ರವೀಂದ್ರ ಯಾವೊಂದು ಸಿನೆಮಾದಲ್ಲೂ ಕಾಣಿಸಿಕೊಳ್ಳಲಿಲ್ಲ. ಇನ್ನು “ಬಿಗ್‌ ಬಾಸ್‌’ ಮನೆಗೆ ಹೋಗುವ ಮುನ್ನ ಅವರು ಒಪ್ಪಿದ್ದ  ಕೆಂಗುಲಾಬಿ ಎಂಬ ಮಹಿಳಾ ಪ್ರಧಾನ ಸಿನೆಮಾ ಸಹ ಬಿಡುಗಡೆಯಾಗಲಿಲ್ಲ. ಸಹಜವಾಗಿಯೇ ಕೃತಿಕಾ ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಗಳು ಕಾಡಿದ್ದು ಸುಳ್ಳಲ್ಲ. ಈಗ ಆ ಎಲ್ಲಾ ಪ್ರಶ್ನೆಗಳಿಗೆ ಕೃತಿಕಾ ಕೊನೆಗೂ ಉತ್ತರ ಕೊಟ್ಟಿದ್ದಾರೆ.

ಕೃತಿಕಾ ಇದೀಗ ಸದ್ದಿಲ್ಲದೆ ಎರಡು ಚಿತ್ರಗಳಲ್ಲಿ ನಟಿಸಿದ್ದು, ಎರಡೂ ಚಿತ್ರಗಳು ಬಿಡುಗಡೆಯಾಗುವುದಕ್ಕೆ ಅಣಿಯಾಗುತ್ತಿವೆ. ಮೊದಲನೆಯದು ಕಿರಣ್‌ ಗೋವಿ ನಿರ್ದೇಶನದ ಯಾರಿಗುಂಟು ಯಾರಿಗಿಲ್ಲ. ಒರಟ ಪ್ರಶಾಂತ್‌ ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಕೃತಿಕಾ ಮೊದಲ ನಾಯಕಿಯಾಗಿ ನಟಿಸುತ್ತಿದ್ದಾರೆ. ಜೊತೆಗೆ ಲೇಖಚಂದ್ರ ಮತ್ತು ಅದಿತಿ ರಾವ್‌ ಸಹ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಕೃತಿಕಾ, ಶಾರ್ದೂಲ ಎಂಬ ಚಿತ್ರದಲ್ಲೂ ನಟಿಸಿದ್ದಾರೆ.  ಶಾರ್ದೂಲ ಚಿತ್ರವನ್ನು ಅರವಿಂದ್‌ ಕೌಶಿಕ್‌ ನಿರ್ದೇಶಿಸಿದ್ದು, ಈ ಚಿತ್ರದ ಚಿತ್ರೀಕರಣವೂ ಮುಗಿದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿವೆ. ಇನ್ನು ಹಲವಾರು ಸಮಸ್ಯೆಗಳನ್ನೆದುರಿಸಿದ ಕೆಂಗುಲಾಬಿ ಚಿತ್ರ ಮುಗಿದಿದ್ದು, ಅದೂ ಸಹ ಬಿಡುಗಡೆಯ ಹಂತದಲ್ಲಿದೆ. ಎಲ್ಲ ಅಂದುಕೊಂಡಂತೆ ಆದರೆ, ಮುಂದಿನ ಆರು ತಿಂಗಳುಗಳಲ್ಲಿ ಕೃತಿಕಾ ಅಭಿನಯದ ಮೂರು ಚಿತ್ರಗಳು ಬಿಡುಗಡೆಯಾಗುತ್ತವೆ.

“ಬಿಗ್‌ ಬಾಸ್‌’ ಮನೆಯಿಂದ ಬಂದ ಮೇಲೆ ಕೃತಿಕಾಗೆ ಹಿರಿತೆರೆಗೆ ಹೋಗಬೇಕೋ, ಕಿರುತೆರೆಯಲ್ಲಿ ಮುಂದುವರೆಯಬೇಕೋ ಎಂಬ ಜಿಜ್ಞಾಸೆ ಕಾಡಿತ್ತಂತೆ. ಏಕೆಂದರೆ, ಅಷ್ಟರಲ್ಲಾಗಲೇ ಕೃತಿಕಾ ಕಿರುತೆರೆಯಲ್ಲಿ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ರಾಧಾ ಕಲ್ಯಾಣ ಮತ್ತು ಮನೆ ಮಗಳುವಿನಂಥ ಯಶಸ್ವಿ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲ, ರಾಧೆ ಎಂದೇ ಜನಪ್ರಿಯರಾಗಿದ್ದವರು. ಹೀಗಿರುವಾಗ ಅಂತಹ ಗೊಂದಲ ಕಾಡುವುದು ಸಹಜವೇ. ಕೊನೆಗೆ ಸಾಕಷ್ಟು ಯೋಚನೆ ಮಾಡಿದ ನಂತರ ಅವರು ಹಿರಿತೆರೆಯಲ್ಲೇ ಮುಂದುವರೆಯುವುದಕ್ಕೆ ತೀರ್ಮಾನಿಸಿದ್ದಾರೆ. ಹಾಗೆ ನೋಡಿದರೆ, ಅವರಿಗೆ ಹಿರಿತೆರೆ ಹೊಸದೇನಲ್ಲ. ಕೆಂಗುಲಾಬಿ ಚಿತ್ರಕ್ಕೂ ಕೆಲವು ವರ್ಷಗಳ ಮುನ್ನವೇ ಪಟ್ರೆ ಲವ್ಸ್‌ ಪದ್ಮ ಎಂಬ ಚಿತ್ರದಲ್ಲಿ ಕೃತಿಕಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಆ ನಂತರ ಕಿರುತೆರೆಗೆ ಜಂಪ್‌ ಆಗಿದ್ದರು. ಈಗ ಹಿರಿತೆರೆಯಲ್ಲೇ ಮುಂದುವರೆಯುವುದಕ್ಕೆ ತೀರ್ಮಾನಿಸಿದ್ದಾರೆ.

ಹಾಗಾದರೆ, ಕೃತಿಕಾ ಕಿರುತೆರೆಯಲ್ಲಿ ಕಾಣಿಸಿಕೊಳ್ಳುವುದಿಲ್ಲವಾ? ಸದ್ಯಕ್ಕಿಲ್ಲ ಎಂಬ ತೀರ್ಮಾನಕ್ಕೆ ಅವರು ಬಂದಿದ್ದಾರೆ. ಜೊತೆಗೆ ಅಭಿನಯಿಸಿರುವ ಮೂರು ಚಿತ್ರಗಳ ಬಿಡುಗಡೆಗೆ ಅವರು ಎದುರು ನೋಡುತ್ತಿದ್ದಾರೆ. ಈ ಮೂರೂ ಚಿತ್ರಗಳ ಬಗ್ಗೆ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕೆಂಗುಲಾಬಿ ಚಿತ್ರದಲ್ಲಿ ಅವರದ್ದು ಉತ್ತರ ಕರ್ನಾಟಕದ ಹುಡುಗಿಯ ಪಾತ್ರವಂತೆ. ಮೊದಲ ಬಾರಿಗೆ ವಯಸ್ಸಿಗೆ ಮೀರಿದ ಪಾತ್ರವನ್ನು ಅವರು ಆ ಚಿತ್ರದಲ್ಲಿ ನಿರ್ವಹಿಸಿದ್ದಾರೆ. ಇನ್ನು ಉಳಿದ ಎರಡೂ ಚಿತ್ರಗಳು ಬೇರೆ ಬೇರೆ ಬ್ಯಾನರ್‌ಗೆ ಸೇರಿದ್ದವಾಗಿದ್ದು, ಆ ಚಿತ್ರಗಳಲ್ಲೂ ಬಹಳ ಒಳ್ಳೆಯ ಪಾತ್ರಗಳಿವೆಯಂತೆ.

ಪಟ್ರೆ ಲವ್ಸ್‌ ಪದ್ಮ ಚಿತ್ರದ ಮೂಲಕ ಚಿಕ್ಕ ವಯಸ್ಸಿಗೇ ಕನ್ನಡ ಚಿತ್ರರಂಗಕ್ಕೆ ಬಂದ ಕೃತಿಕಾ, ಈಗ ಇಲ್ಲೊಂದಿಷ್ಟು ಹೆಸರು ಮಾಡುವುದಕ್ಕೆ ಎದುರು ನೋಡುತ್ತಿದ್ದಾರೆ. ಅವರ ಆಸೆ, ಕನಸುಗಳೆಲ್ಲಾ ಮೂರು ಚಿತ್ರಗಳ ಮೇಲೆ ನಿಂತಿದೆ. ಅವರ ಕನಸುಗಳೆಲ್ಲಾ ನನಸಾಗುತ್ತದಾ ಎಂಬ ಪ್ರಶ್ನೆ, ಈ ಮೂರು ಚಿತ್ರಗಳು ಬಿಡುಗಡೆಯಾಗುವವರೆಗೂ ಕಾಯಬೇಕು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

D. R. Bendre: ಹೀಗಿದ್ದರು ಬೇಂದ್ರೆ…

Mahakumbh Mela: ದೇವ ಬೊಂಬೆ ಪೂಜೆ ಆಟ: ಭಕ್ತಿ ಸೋಜಿಗ! 

Mahakumbh Mela: ದೇವ ಬೊಂಬೆ ಪೂಜೆ ಆಟ: ಭಕ್ತಿ ಸೋಜಿಗ! 

11

Shopping Time: ಶಾಪಿಂಗ್‌ ಎಂಬ ಸಿಹಿಯಾದ ಶಾಪ!

10

Badami Banashankari Festival: ಬನಶಂಕರಿ ಜಾತ್ರ್ಯಾಗ ನಾಟಕಗಳ ಸುಗ್ಗಿ ಜಾತ್ರೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.