ಮಂಗಳೂರಿನ ನಿಜ ದರ್ಶನ


Team Udayavani, Sep 3, 2017, 6:15 AM IST

mangalore.jpg

ಹೌದು, ಎಲ್ಲಿ ಉಳಿದುಕೊಂಡಿದ್ದೀರಿ?” ಅಂದರು. 
ನಾನು, “”ಬೆಲ್‌ ಮೌಂಟ್‌”ನಲ್ಲಿ ಅಂದೆ. ಅವರಿಗೆ ಏನೆಂದರೆ ಏನೂ ಗೊತ್ತಾದಂತೆ ಕಾಣಲಿಲ್ಲ.  ಮತ್ತೆ ಅದೇ ಪ್ರಶ್ನೆ ಒಗೆದರು. 

ನಾನು “”ಮಂಗಳೂರು ಸಮಾಚಾರ”ದಲ್ಲಿ ಎಂದೆ. ಅವರು ಇನ್ನಷ್ಟು ಗೊಂದಲಕ್ಕೀಡಾದರು. 
“”ನಾನು ಕೇಳಿದ್ದು ಎಲ್ಲಿ ಕೆಲಸ ಮಾಡುತ್ತಿದ್ದೀರಿ ಅಂತಲ್ಲ” ಎಂದರು. 

ನಾನು ಆಗ ಕ್ವಿಜ್‌ ಪ್ರೋಗ್ರಾಮ್‌ಗೆ ಕೊನೆ ಹಾಡುವವನಂತೆ, “”ನಾನಿರುವುದು ಬಲ್ಮಠದಲ್ಲಿ , ಮಂಗಳೂರು ಸಮಾಚಾರ ಇರುವ ಅಂಗಳದÇÉೇ ಎಂದೆ.

“”ಮತ್ತೆ ಅದ್ಯಾಕೆ, ಬೆಲ್‌ ಮೌಂಟ… ಅಂದಿರಿ?” ಎಂದರು. 
ಆಗ ನಾನು ಅವರ ಮುಂದೆ ಮೂರು ಸಂಪುಟಗಳ ದೊಡ್ಡ ಕಟ್ಟನ್ನು ಹಿಡಿದು ನಿಲ್ಲಬೇಕಾಯಿತು.
.

ನಾನು ಯಾವಾಗಲೂ ಗೆಳೆಯರೊಂದಿಗೆ ತಮಾಶೆೆ ಮಾಡುತ್ತಿರು ತ್ತೇನೆ- “”ನನಗೆ ಮಂಗಳೂರಿನ ಗ್ರೀನ್‌ ಕಾರ್ಡ್‌ ಇದೆ” ಎಂದು.

ಎರಡು ಅವಧಿಯಲ್ಲಿ 9 ವರ್ಷಗಳ ಕಾಲ ಮಂಗಳೂರಿನಲ್ಲಿ ಇದ್ದವನು ನಾನು. 
ಬೆಂಗಳೂರಿನಿಂದ ನನ್ನ ಕೈನೆಟಿಕ್‌ ಹೋಂಡಾ ಏರಿ ಜುಮ್ಮಂತ ಘಟ್ಟ ಇಳಿದು ಕಡಲ ನಗರಿ ಸೇರಿಕೊಂಡವನಿಗೆ ಈಗಲೂ ಮನದೊಳಗೆ ಕಡಲ ಅಲೆಗಳದ್ದೇ ನಾದ. ಮಂಗಳೂರಿಗೆ ಎಂದು ಸ್ಕೂಟರ್‌ ಹತ್ತಿದವನಿಗೆ ಹೇಳಿದರು- “”ಅಲ್ಲಿ ಹೇಗಿರುತ್ತೀಯೋ ಮಾರಾಯ ದಪ್ಪ ಅಕ್ಕಿ, ಬಿರು ಬೇಸಿಗೆ, ಭಾರೀ ಮಳೆ, ಮೀನಿನ ವಾಸನೆ”

ಹಾಗೆ ಅನಿಸಿಬಿಡುತ್ತಿತ್ತೇನೋ, ನಾನು ಮಂಗಳೂರು ಹೊರಗೂ ಹೆಜ್ಜೆ ಹಾಕದಿದ್ದರೆ. ಕಾರ್ಕಳದ ಭುವನೇಂದ್ರಕ್ಕೆ ಹಾಮಾನಾ ಬರುತ್ತಾರಂತೆ, ಕುಂದಾಪುರದಲ್ಲಿ ಕಾರಂತರ ಮನೆ ಇದೆಯಂತೆ, ಉಡುಪಿಯಲ್ಲಿ ಭೂತ ಮುಖವರ್ಣಿಕೆ ಪ್ರಾತ್ಯಕ್ಷಿಕೆ ಇದೆಯಂತೆ, ಕವತ್ತಾರ್‌ನಲ್ಲಿ- ನಂದಳಿಕೆಯಲ್ಲಿ ಸಿರಿ ಜಾತ್ರೆಯಂತೆ, ಸುಳ್ಯದಲ್ಲಿ ಬಣ್ಣದ ಮಾಲಿಂಗ ಇ¨ªಾರಂತೆ ಅಂತ ಇದ್ದಬದ್ದ ನೆಪಗಳನ್ನೆಲ್ಲ ಹುಡುಕಿಕೊಂಡು ಮೂಲೆ ಮೂಲೆ ಸುತ್ತಿಬಿಟ್ಟೆ. ಜಿ. ಎಸ್‌.

ಸಿದ್ದಲಿಂಗಯ್ಯನವರು ಒಮ್ಮೆ ಹೇಳಿದ್ದರು- “”ಹಸು ಕರು ಹಾಕಿದ ತಕ್ಷಣ ಅದರ ಬಗ್ಗೆ ಪ್ರೀತಿ, ಮಮತೆ ಏನೂ ಹುಟ್ಟುವುದಿಲ್ಲ ಕಣೋ, ಯಾವಾಗ ಕರುವಿನ ಮೈ ಮೇಲಿರುವ ಲೋಳೆಯನ್ನು ಶುಚಿ ಮಾಡಲು ಅದರ ಮೈ ನೆಕ್ಕಲು ಆರಂಭಿಸುತ್ತದೋ ಅಲ್ಲಿಂದ ಹುಟ್ಟುತ್ತದೆ ಪ್ರೀತಿ ಸಂಬಂಧ” ಅಂತ.

“ಯಸ್‌, ಹೌದು, ಅಂದ್‌, ಹಾಂ ಜೀ…’ ಎಂದು ಈಗ ಖಡಕ್ಕಾಗಿ ಅದನ್ನು ಅನುಮೋದಿಸುತ್ತೇನೆ. ಏಕೆಂದರೆ, ಬಂದರಿಗೆ ಹೋಗಿ ಮೀನು ದಡ ಸೇರುವ ವೇಳೆಗೆ ಲಾಟ್‌ನಲ್ಲಿ ಮೀನು ಕೊಂಡು ಮನೆಗೆ ಬಂದವನು ನಾನು, ಯಾವ “ಕಜೆ ಅಕ್ಕಿ’ ಚೆನ್ನ ಎಂದು ನಿ¨ªೆಯಲ್ಲಿ ಕೇಳಿದರೂ ಹೇಳಬÇÉೆ, ದೋಸೆಗೆ ಹಲಸಿನ ಹಣ್ಣು ಹಾಕಿದಾಗ ಬರುವ ಸುವಾಸನೆ ಯಾವುದು ಎಂದು ಮನಮುಟ್ಟುವಂತೆ ವಿವರಿಸಬÇÉೆ, ಅದು ಬಿಡಿ ವಾಸನೆಯನ್ನು ವಾಸನೆ ಎಂದೂ ಸುವಾಸನೆಯನ್ನು ಸುವಾಸನೆ ಎಂದೂ ಗುರುತಿಸಬÇÉೆ ಎಂದರೆ ನನಗಲ್ಲದೆ ಇನ್ನಾರಿಗೆ ಗ್ರೀನ್‌ ಕಾರ್ಡ್‌ ಸಿಗಲು ಸಾಧ್ಯ!

ಆದರೆ, ಒಂದು ಅಳುಕಿತ್ತು. ಸೂಟರ್‌ಪೇಟೆ, ವೆಲೆನ್ಸಿಯಾ, ಸ್ಟರಕ್‌ ರಸ್ತೆ, ಮೋರ್ಗನ್ಸ್‌ ಗೇಟ್‌, ಹಾಮಿಲ್ಟನ್‌ ಸರ್ಕಲ್‌ ಇವು ನನಗೆ ಒಳ್ಳೆ ಗಣಿತ ಪರೀಕ್ಷೆಯ ಅತಿ ಕಠಿಣ ಥಿಯರಮ್‌ಗಳಂತೆ ಕಾಣುತ್ತಿತ್ತು. ಬಿಡಿಸಲಾಗದ ಒಗಟು. ಆ ವೇಳೆಗೆ ಈ ಅಡ್ಕಗಳೂ, ಗುಡ್ಡೆಗಳೂ ಬೈಲುಗಳೂ ಹೀಗೆಯೇ ನನ್ನ ತಲೆ ತಿಂದಿತ್ತು. ಆದರೆ, ನಾನು ಆರ್ಕೆ ಮಣಿಪಾಲರ ಸ್ಥಳನಾಮ ಅಧ್ಯಯನಗಳ ಮೊರೆ ಹೊಕ್ಕು ಇವುಗಳಲ್ಲಿ ಬಹುತೇಕ ಸಮಸ್ಯೆಗಳನ್ನು ನಿವಾರಿಸಿಕೊಂಡಿ¨ªೆ. ಹಾಗಾಗಿ ಜಲ್ಲಿಗುಡ್ಡೆ- ಮಣ್ಣಗುಡ್ಡೆಗಳೂ, ಕೊಡಿಯಾಲ್‌ಬೈಲ್‌-ದೇರೆಬೈಲುಗಳೂ, ಅಡ್ಯನಡ್ಕ- ಹಿರಿಯಡ್ಕಗಳೂ ಅಂತಹ ದೊಡ್ಡ ಭೂತವಾಗಿ ನನ್ನ ಮುಂದೆ ಕುಣಿಯುತ್ತಿರಲಿಲ್ಲ. 

ನಾನೋ ಭಟ್ಕಳದಿಂದ ಕಣ್ಣೂರಿನವರೆಗೆ ಸುತ್ತಿದ್ದೇನೆ ಎಂದು ಎಲ್ಲರ ಮುಂದೆ ಕೊಚ್ಚಿಕೊಳ್ಳುತ್ತ ಮಂಗಳೂರಿನವರಿಗೇ ಮಂಗಳೂರಿನ ದಾರಿ ಹೇಳಬÇÉೆ ಎಂದು ಮೀಸೆ ತಿರುವುತ್ತಿ¨ªೆ. ಈ ಅಹಂಗೆ ಭಂಗ ತಂದದ್ದೇ ಇವು. ಈ ಸೂಟರ್‌, ಸ್ಟರಕ್‌, ಹಾಮಿಲ್ಟನ್‌ಗಳು. ಏನು ಮಾಡಿದರೂ ಇದರ ಅರ್ಥ ಹೊಳೆಯುತ್ತಲೂ ಇರಲಿಲ್ಲ. ಅಶೋಕವರ್ಧನರ ಅತ್ರಿ ಪುಸ್ತಕದ ಅಂಗಡಿಗೆ ಹೊಕ್ಕು ಹುಡುಕಿಯೂ ಸೋತಿ¨ªೆ. ಇದು ಗೊತ್ತಾಗಲಿಲ್ಲ ಎನ್ನುವ ಕೊರತೆಯೊಂದಿಗೆ ನಾನು ಮಂಗಳೂರು ದಾಟಿ ಹೈದ್ರಾಬಾದ್‌ಗೆ ಹೋದೆ… ಅಲ್ಲಿಂದ ಬೆಂಗಳೂರು ಸೇರಿಕೊಂಡೆ.

ನಾಳಿನ ಪೀಳಿಗೆಗೂ ಮಂಗಳೂರು
ಹೀಗಿರುವಾಗಲೇ ಒಂದು ದಿನ 2500 ಪುಟಗಳು ನನ್ನ ಎದುರು ಹರಡಿಕೊಂಡವು. ನನ್ನ ಬದುಕಿಗೆ ಒಂದು “ಗಿಳಿಸೂವೆ’ಯಾಗಿರುವ ಬಿ. ಎ. ವಿವೇಕ ರೈ ಅವರ “ಸುಯಿಲ…’ ಗೆ ಹೋದಾಗ ನನ್ನೆದುರು ಹರಡಿಕೊಂಡ ಹಾಳೆಗಳು ನನ್ನನ್ನು ಒಂದೇ ಏಟಿಗೆ ಎತ್ತಿ ಅರಬ್ಬೀ ಸಮುದ್ರಕ್ಕೂ, ಅಲ್ಲಿಂದ ಅಳಿವೆಗಳಿಗೂ, ಬಂದರಿಗೂ, ಬ್ರಿಟಿಷರ ಸಾಮ್ರಾಜ್ಯಕ್ಕೂ, ಜೈನ ಬೀಡುಗಳಿಗೂ, ಗುತ್ತುಗಳಿಗೂ, ಟಿಪ್ಪು ಸುಲ್ತಾನನ ಕೋಟೆಗಳಿಗೂ, ಜೋಗಿ ಮಠಕ್ಕೂ, ಚಾಪೆಲ…,

ಚರ್ಚ್‌ಗಳಿಗೂ, ಬ್ಯಾರಿ ಸಾಹಿತ್ಯ ಅಕಾಡೆಮಿಗೂ, ಕೊಂಕಣರ ರಥ ಬೀದಿಗೂ… ಗುಜರಾತಿ ಹೊಟೇಲ್‌ಗ‌ೂ ಭೇಟಿ ಕೊಡಿಸಿ ಕುದ್ಮಲ್‌ ರಂಗರಾಯರು, ಫಾದರ್‌ ಅಗಸ್ಟಸ್‌ ಮುಲ್ಲರ್‌, ಮೊಳಹಳ್ಳಿ ಶಿವರಾವ್‌, ಕಾರ್ನಾಡ್‌ ಸದಾಶಿವರಾವ್‌, ಮಣೇಲ್‌ ಶ್ರೀನಿವಾಸ ನಾಯಕ್‌, ಜಾರ್ಜ್‌ ಫೆ‌ರ್ನಾಂಡಿಸ್‌ ಅವರ ಕೈ ಕುಲುಕಿಸಿತು. 

ನಾನು ವಿವೇಕ ರೈ ಅವರ ಮುಖ ನೋಡಿದೆ. ಅಭಿಮಾನದಿಂದ. ಮಂಗಳೂರು ಎಂಬ ಮಂಗಳೂರು 2500 ಪುಟಗಳಲ್ಲಿ ಹರಡಿ ನಿಂತಿತ್ತು. “”ಮೊದಲು ಎರಡು  ಸಂಪುಟದಲ್ಲಿ ಮಂಗಳೂರು ದರ್ಶನ ಮಾಡಿಸಬೇಕು ಎಂದಿತ್ತು. ಆದರೆ ನಾವು ಈ ನಿಟ್ಟಿನಲ್ಲಿ ಹೆಜ್ಜೆ ಹಾಕಲು ಶುರು ಮಾಡಿದಾಗ ಇದು ಇಷ್ಟಕ್ಕೇ ಮುಗಿಯುವ ಕೆಲಸವಲ್ಲ ಅನಿಸಿ ಹೋಯಿತು. ಸಂಪಾದಕ ಮಂಡಳಿ ಸಂಗ್ರಹಿಸಿದ ಮಾಹಿತಿಗಳು ನಾಲ್ಕು ಸಂಪುಟಕ್ಕಾಗುವಷ್ಟಿತ್ತು. ಕೊನೆಗೆ ಮೂರು ಸಂಪುಟ ನಿಮ್ಮ ಮುಂದಿದೆ” ಎಂದರು. 

ವಿವೇಕ ರೈ  ಅವರಿಗೆ “ವಿವೇಕ’ ಎನ್ನುವ ಹೆಸರು ಕೊಟ್ಟದ್ದೇ ಶಿವರಾಮ ಕಾರಂತರು. ವಿವೇಕಾನಂದ ಎನ್ನುವ ಹೆಸರು ಹೇಳಿದರೇನೋ ಎನ್ನುವ ಗೊಂದಲ ತಂದೆ ಪುರಂದರ ರೈ ಅವರಿಗೆ. ಕಾರಂತರನ್ನೇ ಕೇಳಿದರಂತೆ ವಿವೇಕಾನಂದ ಎನ್ನುವ ಹೆಸರಿಡಬೇಕೆ ಎಂದು. ಆಗ ಕಾರಂತರು ಹೇಳಿದರು- “ವಿವೇಕ ಅನ್ನುವ ಹೆಸರಿಡು. ಆನಂದ ತಾನಾಗಿಯೇ ಜೊತೆಗೆ ಬರುತ್ತದೆ’ ಎಂದು. “ಮಂಗಳೂರು ದರ್ಶನ’ದ ಈ ಮೂರೂ ಸಂಪುಟಗಳನ್ನು ನೋಡಿದಾಗ “ವಿವೇಕ’ ಹಾಗೂ “ಆನಂದ’ ಎರಡರ ಹೆಜ್ಜೆ ಗುರುತೂ ಸಿಕ್ಕಿಬಿಡುತ್ತದೆ. 

ವಿವೇಕ ರೈ ಅವರು ಮೈಸೂರು ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳಾಗಿ¨ªಾಗ “ಮೈಸೂರು ದರ್ಶನ’ದ ನಾಲ್ಕು ಸಂಪುಟಗಳನ್ನು ರೂಪಿಸಿದ್ದರು. ದಕ್ಷಿಣ ಕನ್ನಡ ಜಿÇÉಾ ಆಡಳಿತಕ್ಕೆ 200 ವರ್ಷವಾದಾಗ ಪೊಲಿ ಸ್ಮರಣ ಸಂಚಿಕೆ ರೂಪಿಸಿದ್ದರು. ಈಗ ಈ ಮಂಗಳೂರು ದರ್ಶನ. ಮಂಗಳೂರು ಮಹಾನಗರಪಾಲಿಕೆಗೆ 150 ವರ್ಷಗಳಾದ ಹಿನ್ನೆಲೆಯಲ್ಲಿ ಜಿÇÉಾಧಿಕಾರಿಗಳಾಗಿದ್ದ ಎ. ಬಿ. ಇಬ್ರಾಹಿಂ, ಅಧ್ಯಕ್ಷತೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಈ ಘನ ಕಾರ್ಯದ ಹೊಣೆ ಹೊತ್ತುಕೊಂಡಿತು. ಅಧ್ಯಕ್ಷರಾಗಿದ್ದ ಇಬ್ರಾಹಿಂ ಕೋಡಿಜಾಲ್‌ ಹಾಗೂ ಆಯುಕ್ತರಾಗಿದ್ದ ಮೊಹಮ್ಮದ್‌ ನಜೀರ್‌ ಚುಕ್ಕಾಣಿ ಹಿಡಿದರು. ಡಾ. ವಾಮನ ನಂದಾವರ, ಡಾ. ಸತ್ಯನಾರಾಯಣ ಮಲ್ಲಿಪಟ್ಟಣ, ಮುದ್ದು ಮೂಡುಬೆಳ್ಳೆ ಅವರು ಸಹಾಯಕ ಸಂಪಾದಕರ ಗುರುತರ ಜವಾಬ್ದಾರಿ ಹೊತ್ತರು. 18 ತಿಂಗಳುಗಳ ಕಾಲ ಮಂಗಳೂರಿನ ಮೂಲೆ ಮೂಲೆಗಳಲ್ಲಿ ಕಂಡಿದ್ದು ಈ ಮಂಗಳೂರು ದರ್ಶನದ ತಂಡ. 

ಮಂಗಳೂರಿನ ಒಳಗೆ ಸೇರಿ ಹೋದ ಮೇಲೆಯೇ ಗೊತ್ತಾದದ್ದು ಮಂಗಳೂರು ಒಂದು ನಗರ ಹಲವು ಹೆಸರು ಎಂದು. ಅದು ತುಳುವರಿಗೆ “ಕುಡ್ಲ’ , ಕೊಂಕಣಿಗರಿಗೆ “ಕೊಡಿಯಾಲ’, ಬ್ಯಾರಿಗಳಿಗೆ “ಮೈಕಾಲ’. ಓಹ್‌! ಒಂದು ನಗರಕ್ಕೆ ಅಷ್ಟೊಂದು ಹೆಸರಿದೆಯಾ ಎಂದು ಕಣ್ಣು ಬಾಯಿ ಬಿಟ್ಟಿ¨ªೆ. ಆದರೆ “ದರ್ಶನ’ದ ಪುಟ ತಿರುಗಿಸುತ್ತ¤ ಹೋದಂತೆ… ಇದಕ್ಕೆ ಮಂಗಳಾಪುರ,  ಮ್ಯಾಂಗರೌತ್‌, ಮಂಜರೂರ್‌ ಎನ್ನುವ ಹೆಸರುಗಳೂ ಇತ್ತು ಎನ್ನುವ ದರ್ಶನವೂ ಆಗಿ ಹೋಯ್ತು. 

ನನಗೆ ಗೊತ್ತಿಲ್ಲದ ಮಂಗಳೂರೇ… ಎನ್ನುವ ನನ್ನ ಅಹಮಿಕೆಯ ಬೆಲೂನಿಗೆ ಒಂದೊಂದು ಸಂಪುಟವೂ ಸೂಜಿಯಂತೆ ಚುಚ್ಚುತ್ತ ಹೋಯಿತು. “”ಮಂಗಳೂರು ಏನು?” ಎಂದು ನೇರಾ ನೇರ ವಿವೇಕ ರೈ  ಅವರನ್ನೇ ಕೇಳಿದೆ- “”ಮಂಗಳೂರು ದೇಶದ ಒಳಗೂ, ಹೊರಗೂ ಜನಪ್ರಿಯ, ಅರಬ್ಬೀ ಸಮುದ್ರದ ದಡದಲ್ಲಿ ನೇತ್ರಾವತಿ, ಗುರುಪುರ ನದಿಗಳ ನಡುವೆ ಇರುವ ಊರು. ಇದು ಬಂದರಾಗಿ, ಪಟ್ಟಣವಾಗಿ, ನಗರವಾಗಿ ಬೆಳೆದ ವಿದ್ಯಮಾನವೇ ಒಂದು ರೋಚಕ ಸಂಕಥನ. ಇದು ಬೇರೆ ಬೇರೆ ಧರ್ಮ, ದೇಶ, ರಾಜ ಮನೆತನ, ಸಮುದಾಯಗಳ ಆಡಳಿತಕ್ಕೆ ಒಳಪಟ್ಟಿತ್ತು. ಅದರ ಎÇÉಾ ಧನಾತ್ಮಕ ಅಂಶಗಳನ್ನು ಹೀರಿಕೊಂಡು ಒಂದು ಸಮ್ಮಿಶ್ರ ಸಂಕೀರ್ಣ ಪ್ರದೇಶವಾಗಿ ಬೆಳೆದ ಪರಿಯೇ ಬೆರಗನ್ನು ಉಂಟುಮಾಡುತ್ತದೆ” ಎನ್ನುತ್ತಾರೆ. 

ತುಳು, ಕನ್ನಡ, ಕೊಂಕಣಿ, ಬ್ಯಾರಿ, ಮಲಯಾಳಿ, ಮರಾಠಿ, ಉರ್ದು, ಇಂಗ್ಲಿಶ್‌ ಎಲ್ಲವನ್ನೂ ಒಳಗೊಂಡು ಭಾಷಾವಿಜ್ಞಾನಿಗಳಿಗೆ ಸವಾಲಾಗಿ ಬೆಳೆದಿರುವ ಊರು ಮಂಗಳೂರು. ಶೈವ, ವೈಷ್ಣವ, ಶಾಕ್ತ, ಗಾಣಪತ್ಯ, ಬ್ರಹ್ಮ ಮುಂತಾದ ದೇವರುಗಳ ಆರಾಧನೆಯ ಜೊತೆಯೇ ತುಳುವ ಸಂಸ್ಕೃತಿಯ ಕೊರಗ ತನಿಯ, ಕೋರ್ದಬ್ಬು , ತನ್ನಿಮಾನಿಗ, ಕಾಣದ ಕಾಟದ, ಪಂಜುರ್ಲಿ, ಕಲ್ಲುಡ ಕಲ್ಲುರ್ಟಿ ಮುಂತಾದ ದೈವಗಳ ಕೋಲ ನೇಮಗಳ ಆವಾಸ ಸ್ಥಾನವೂ… ನಾಥಪಂಥದ ಒಂದು ಮುಖ್ಯ ಕೇಂದ್ರವಾಗಿ ಕೂಡಾ ಐತಿಹಾಸಿಕವಾಗಿ ಮಂಗಳೂರು ಸಂಶೋಧಕರ ಗಮನವನ್ನು ಸೆಳೆದಿದೆ. ಮುಸ್ಲಿಂ ಸಂಸ್ಕೃತಿಯ ಭಿನ್ನ ವಿನ್ಯಾಸಗಳ ಮಸೀದಿಗಳು ಮತ್ತು ದರ್ಗಾಗಳೂ, ರೋಮನ್‌ ಕ್ರೈಸ್ತ ಪಂಥದ ಮತ್ತು ಪ್ರೊಟೆಸ್ಟೆಂಟ್‌ ಪಂಥದ ಭಿನ್ನ ಮಾದರಿ ಇಗರ್ಜಿಗಳು, ಜೈನ ಬಸದಿ, ವೀರಶೈವ ಮಠಗಳ ಜೊತೆಗೆಯೇ ಇತ್ತೀಚಿನ ಸಿಖVರ ಗುರುದ್ವಾರ ಕೂಡಾ ಮಂಗಳೂರಿನ ಬಹುಧರ್ಮದ ಸಾಮರಸ್ಯದ ಭೂಮಿಕೆಗೆ ಪ್ರವೇಶ ಮಾಡಿದೆ.

ವಿವೇಕ ರೈ ಅವರು ಬಣ್ಣಿಸುತ್ತ ಹೋದರು. ನನಗೋ “ಸಹೋದಯ’ದ ನೆನಪು. ಮಂಗಳೂರಿಗೆ ಕಾಲಿಟ್ಟರೆ ನಾನು ಸೇರಿಕೊಳ್ಳುವುದೇ ಸಹೋದಯದ ಅಂಗಳಕ್ಕೆ. ನನ್ನ ಎÇÉಾ ಗೆಳೆಯರಿಗೂ ಆಶ್ಚರ್ಯ. “ಮಂಗಳೂರಿನಲ್ಲಿ ಈಗ ಪಾಶ್‌ ಹೊಟೇಲು ಉಂಟು ಮಾರಾಯ’ ಎನ್ನುತ್ತಾರೆ. ನನಗೋ ಮಂಗಳೂರು ಸಮಾಚಾರ ಪತ್ರಿಕೆ ಮುದ್ರಿತವಾಗುತ್ತಿದ್ದ, ಅದರ ಅಚ್ಚುಮೊಳೆಗಳು ಇನ್ನೂ ಇರುವ, ಜೈಮಿನಿ ಭಾರತ, ತೊರವೆ ರಾಮಾಯಣ, ದಾಸರ ಪದಗಳು, ಕುಮಾರವ್ಯಾಸ ಭಾರತ, ಬಸವ ಪುರಾಣ, ರಾವಣೇಶ್ವರನ ದಿಗ್ವಿಜಯಗಳನ್ನು ತಾಳೆಗರಿಯಿಂದ ಬಿಡಿಸಿಕೊಂಡು ಬಂದು ಕೈಗಿತ್ತ ಮೋಗ್ಲಿಂಗ್‌, ಕಿಟ್ಟೆಲ…, ವೈಗ್ಲೆ ಅವರು ಇದ್ದ ಈ ಅಂಗಳವೇ ಎದೆಗೆ ಹತ್ತಿರ. 

ನಾನು ಆ ಅಂಗಳಕ್ಕೆ ಎಷ್ಟು ಬಾರಿ ಕಾಲಿಟ್ಟಿದ್ದೆನೋ- ಹಾಗೆ ಒಮ್ಮೆ ಹೋದಾಗ ಅಲ್ಲಿ ಶ್ರೀನಿವಾಸ ಹಾವನೂರರು ತಮ್ಮ ಕೊಠಡಿಯ ಹೊರಗೆ ತಮ್ಮ ಯಾವತ್ತೂ ಪ್ರೀತಿಯ ಶ್ರೀಖಂಡವನ್ನು ಮೆಲ್ಲುತ್ತ¤ ಕುಳಿತಿದ್ದವರು. ನನ್ನನ್ನು ನೋಡಿದವರೇ “ಬಾ ಇಲ್ಲಿ’ ಎಂದು ಕೈಹಿಡಿದು, “ಈ ಮೋಗ್ಲಿಂಗ್‌ ಎಂತ ಮನುಷ್ಯ ಮಾರಾಯ’ ಎಂದರು. ನನಗೋ ಅವರನ್ನು ಸದಾ ಚುಡಾಯಿಸಿಯೇ ಗೊತ್ತು. “ಎಂತ ಮನುಷ್ಯ’ ಎಂದೆ. ಅವರು ಆಗಲೇ ಮೋಗ್ಲಿಂಗ್‌ ಲೋಕದಲ್ಲಿ ಕಳೆದುಹೋಗಿದ್ದರು. ಯಾವುದೋ ಸಾಲುಗಳ ಮೇಲೆ ಕೈಯಾಡಿಸಿದರು. ನಾನು ಇಣುಕಿ ನೋಡಿದೆ. ಅಲ್ಲಿ ಮೋಗ್ಲಿಂಗ್‌ ಬರೆದಿದ್ದ  “ಇನ್ನೂ ಹುಟ್ಟದಿರುವ ಕನ್ನಡದ ಬಾಲಕರ ಕೃತಜ್ಞತೆಗೆ ಪಾತ್ರನಾಗುವ ಹೆಮ್ಮೆ ನನ್ನದು’ ಎಂದಿತ್ತು. ಹೌದÇÉಾ…

ತಾಳೆಗರಿಗಳು ಮೋಗ್ಲಿಂಗ್‌ ಕಾಲದಲ್ಲಿಯೇ ಕಪ್ಪಗಾಗಿ ಹೊಗೆ ಹಿಡಿದಿತ್ತು. ಅದನ್ನು ಆತ ಅಲ್ಲಿಂದ ನಡೆಸಿಕೊಂಡು ಬಂದು ಪುಸ್ತಕದ ಹಾಳೆಗಳ ಒಳಗೆ ಪ್ರವೇಶ ಕೊಡಿಸದಿದ್ದರೆ ನಮಗೆಲ್ಲರಿಗೂ ಈ ಶ್ರೀಮಂತ ಸಾಹಿತ್ಯವೇ ಕೈತಪ್ಪಿ ಹೋಗುತ್ತಿತ್ತÇÉಾ ಅನಿಸಿತು. 

ಹೌದÇÉಾ… ಬಿ. ಎ. ವಿವೇಕ ರೈ ಅವರೂ ತಮ್ಮ ತಂಡವನ್ನು ಕಟ್ಟಿಕೊಂಡು ಹೊರಡದಿದ್ದರೆ ನಾಳಿನ ಪೀಳಿಗೆಗೆ ಮಂಗಳೂರು ಎಂದರೇನು ಎನ್ನುವುದರ ಚರಿತ್ರೆಯೇ ಸಿಕ್ಕದೇ ಹೋಗುತ್ತಿತ್ತಲ್ಲ ಅನಿಸಿತು. 

ಅದೆÇÉಾ ಸರಿ ನೀವು ಬಲ್ಮಠಕ್ಕೆ “ಬೆಲ್‌ ಮೌಂಟ್‌’ ಅಂತ ಕರೆದಿದ್ದು ಏಕೆ ಹೇಳಲೇ ಇಲ್ಲ ಅಂದಿರಾ?
ಹೇಳಲ್ಲ, ಬೇಕಿದ್ದರೆ “ಮಂಗಳೂರು ದರ್ಶನ’ದ ಪುಟ ತಿರುಗಿಸಿ.

– ಜಿ. ಎನ್‌. ಮೋಹನ್‌

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Kannada Sahitya Ranga: ಅಮೆರಿಕದಲ್ಲಿ ವಸಂತೋತ್ಸವ; ಕನ್ನಡ‌ ಸಾಹಿತ್ಯ ರಂಗದ ಸಾರ್ಥಕ ಸೇವೆ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

ಕಣ್ಣಿಗೆ ಬಟ್ಟೆ ಕಟ್ಟಿಕೊಂಡವಳ ಕಷ್ಟ, ಕೋಪ ಮತ್ತು ಕನವರಿಕೆ

ಕಣ್ಣಿಗೆ ಬಟ್ಟೆ ಕಟ್ಟಿಕೊಂಡವಳ ಕಷ್ಟ, ಕೋಪ ಮತ್ತು ಕನವರಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

04

Kasaragod: ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.