ವೆಲ್ಲಂಕಣಿ ಆರೋಗ್ಯ ಮಾತೆಯ ಸನ್ನಿಧಿಯಲ್ಲಿ ಇಂದು ಮಹೋತ್ಸವ


Team Udayavani, Sep 8, 2019, 5:30 AM IST

Procession-View-Picture11

ವೆಲ್ಲಂಕಣಿ ತಮಿಳುನಾಡಿನ ನಾಗಪಟ್ಣಮ್‌ ಜಿಲ್ಲೆಯ ವ್ಯಾಪ್ತಿಯೊಳಗೆ ಬರುವ, ಜಿಲ್ಲಾ ಕೇಂದ್ರದಿಂದ ದಕ್ಷಿಣಕ್ಕೆ ಸುಮಾರು 10 ಕಿ. ಮೀ. ದೂರಕ್ಕಿರುವ ಸಣ್ಣದೊಂದು ಹಳ್ಳಿ. ಇಲ್ಲಿ ಯೇಸು ಕ್ರಿಸ್ತರ ತಾಯಿ ಮೇರಿಗೆ ಸಮರ್ಪಿಸಲ್ಪಟ್ಟ ಬೃಹತ್‌ ಚರ್ಚ್‌ ಇದ್ದು ಇಂದು ಬೃಹತ್‌ ಪುಣ್ಯ ಕ್ಷೇತ್ರವಾಗಿ ಬೆಳೆದು ನಿಂತಿವೆ. ಮಾತೆ ಮೇರಿಯಲ್ಲಿ ದೃಢವಿಶ್ವಾಸದಿಂದ ಏನನ್ನು ಕೇಳಿದರೂ ಅದು ಸಿಗುತ್ತದೆ, ಔಷಧಿಯಲ್ಲವೆಂದು ಭಾವಿಸಲಾದ ಕಾಯಿಲೆಯೂ ವಿಸ್ಮ ಯಕರವಾಗಿ ವಾಸಿಯಾಗುತ್ತದೆ ಎಂಬುದು ಇಲ್ಲಿ ಬರುವ ಭಕ್ತಾದಿಗಳ ನಂಬಿಕೆಯಾಗಿದ್ದು, ಹಾಗಾಗಿ ಈ ಕ್ಷೇತ್ರ “ವೆಲ್ಲಂಕಣಿ ಆರೋಗ್ಯ ಮಾತಾ’ ಎಂದೇ ಖ್ಯಾತಿವೆತ್ತಿದೆ. ವರ್ಷಂಪ್ರತಿ ಈ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತ ಬರುತ್ತಿದ್ದು ಪ್ರಸಕ್ತ ಇಲ್ಲಿಗೆ ಬರುವವರ ಸಂಖ್ಯೆ ವರ್ಷಕ್ಕೆ ಇಪ್ಪತ್ತು ಮಿಲಿಯಕ್ಕೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಇಂದು ಸೆ. 8 ಕ್ಕೆ ಮೇರಿಯ ಹುಟ್ಟುಹಬ್ಬ. ಈ ಹಬ್ಬವನ್ನು ವಿಶ್ವದಾದ್ಯಂತ ಕ್ಯಾಥೋಲಿಕ್‌ ಕ್ರೆಸ್ತರು ತುಂಬಾ ಸಡಗರ ಸಂಭ್ರಮದಿಂದ ಆಚರಿಸುತ್ತಾರೆ. ವೆಲ್ಲಂಕಣಿಯಲ್ಲಂತೂ ಈ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಹಬ್ಬಕ್ಕೆ ಪೂರ್ವಭಾವಿಯಾಗಿ ಆಗಸ್ಟ್‌ 29 ರಿಂದ ದಿನನಿತ್ಯ ಇಲ್ಲಿ ಪೂಜೆ-ಪುರಸ್ಕಾರ ಸೇರಿದಂತೆ ಕೆಲವಾರು ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳುತ್ತದೆ. ಈ ಒಟ್ಟು ಹನ್ನೊಂದು ದಿನಗಳ ಕಾಲ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ದೇಶ, ದೇಶದ ನಾನಾ ಮೂಲೆಗಳಿಂದ ಇಲ್ಲಿಗೆ ಬರುವ ಒಟ್ಟು ಭಕ್ತಾದಿಗಳ ಸಂಖ್ಯೆ ಮೂವತ್ತು ಲಕ್ಷಕ್ಕೂ ಹೆಚ್ಚು !

ವೆಲ್ಲಂಕಣಿಯನ್ನು ಇಂದು ಪೂರ್ವದ ಲೂರ್ಡ್ಸ್‌ ಎಂದೂ ಕರೆಯುತ್ತಾರೆ. ಫ್ರಾನ್ಸ್‌ನ ಲೂರ್ಡ್ಸ್‌ ಎಂಬಲ್ಲಿ ಮೇರಿ ಮಾತೆ ಬರ್ನಡೆಟ್‌ ಎಂಬಾಕೆಗೆ ಹಲವು ಸಲ ದರ್ಶನ ನೀಡಿದರೆಂಬ ಕಾರಣಕ್ಕೆ ಈ ಸ್ಥಳ ಇಂದು ವಿಶ್ವಖ್ಯಾತ ಪುಣ್ಯಕ್ಷೇತ್ರವಾಗಿ ಬೆಳೆದು ನಿಂತಿದೆ. ಈ ಸ್ಥಳ ಪವಾಡಗಳಿಗೆ ಹೆಸರಾಗಿದೆ. ಇಲ್ಲಿನ ಗವಿಯೊಂದರಿಂದ ಹೊರ ಬರುವ ಚಿಲುಮೆಯ ನೀರನ್ನು ಸೇವಿಸಿದರೆ, ಇಲ್ಲವೇ ಈ ನೀರಲ್ಲಿ ಸ್ನಾನ ಮಾಡಿದರೆ ವಾಸಿ ಪಡಿಸಲಾಗದಂಥ ಎಂಥ ಕಾಯಿಲೆಗಳೂ ಆ ಕ್ಷಣದಲ್ಲೇ ಗುಣವಾಗುತ್ತದೆ ಎಂಬ ದೃಢವಿಶ್ವಾಸ ಇಲ್ಲಿಗೆ ಬರುವ ಭಕ್ತರದ್ದಾಗಿದೆ. ಇಂದು ವರ್ಷಂಪ್ರತಿ ಮಿಲಿ ಯಾಂತರ ಮಂದಿ ಯಾತ್ರಿಕರು ಈ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಳ್ಳುತ್ತಾರೆ. ಲೂರ್ಡ್ಸ್‌ನಲ್ಲಿ ನಡೆಯುವಂತಹದ್ದೇ ಅದ್ಭುತಗಳು ವೆಲ್ಲಂಕಣಿಯಲ್ಲೂ ನಡೆಯುತ್ತವೆ ಎಂಬ ನಂಬಿಕೆ ಇಲ್ಲಿಗೆ ಬರುವ ಭಕ್ತಾದಿಗಳದ್ದು.

16 ನೆಯ ಶತಮಾನದಲ್ಲಿ ಮೇರಿ ಮಾತೆ ಬಾಲ ಯೇಸುವಿನೊಂದಿಗೆ ಅಂಗವಿಕಲ ಬಾಲಕನೋರ್ವನಿಗೆ ದರ್ಶನ ನೀಡಿ ಆತನ ಮೂಲಕ ಇಲ್ಲಿ ದೇವಾಲಯವೊಂದನ್ನು ನಿರ್ಮಿಸುವಂತೆ ಸ್ಥಳೀಯ ಶ್ರೀಮಂತ ವ್ಯಕ್ತಿಯೋರ್ವನಿಗೆ ಸಂದೇಶ ನೀಡಿದಳು. ಹಾಗೆ ಇಲ್ಲಿ ಸಣ್ಣದೊಂದು ದೇವಾಲಯ ನಿರ್ಮಾಣವಾಯಿತು.

ಇಂದು ಆಚರಿಸುವ ಮಾತೆ ಮೇರಿಯ ಹುಟ್ಟುಹಬ್ಬ. ಇದಕ್ಕೆ ಪೂರ್ವಭಾವಿಯಾಗಿ ಆಗಸ್ಟ್‌ 29 ರಂದು ಮಾತೆ ಮೇರಿಯ ಚಿತ್ರವುಳ್ಳ ಧ್ವಜವನ್ನು ಆರೋಹಣ ಮಾಡುವುದರೊಂದಿಗೆ ಹಬ್ಬದ ಸಂಭ್ರಮ ಇಲ್ಲಿ ಆರಂಭಗೊಳ್ಳುತ್ತದೆ.

-ಸುನಿಲ್‌ ಕುಲಾಸೊ

ಟಾಪ್ ನ್ಯೂಸ್

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

256

ಶಾಲ್ಮಲಾ ನಮ್ಮ ಶಾಲ್ಮಲಾ!

Life Lesson: ಬುದ್ಧ ಹೇಳಿದ ಜೀವನ ಪಾಠ ಬಿಟ್ಟುಕೊಡುವ ಕಲೆ

Life Lesson: ಬುದ್ಧ ಹೇಳಿದ ಜೀವನ ಪಾಠ ಬಿಟ್ಟುಕೊಡುವ ಕಲೆ

‌Second hand book stores: ಸೆಕೆಂಡ್‌ ಹ್ಯಾಂಡ್‌ಗೆ ಶೇಕ್‌ ಹ್ಯಾಂಡ್‌

‌Second hand book stores: ಸೆಕೆಂಡ್‌ ಹ್ಯಾಂಡ್‌ಗೆ ಶೇಕ್‌ ಹ್ಯಾಂಡ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.