ಶಾಂತಂ ತಾಪಂ

ಬೇಸಿಗೆಯಲ್ಲಿ ಮೈಮೇಲೆ ಗುಳ್ಳೆಗಳು!

Team Udayavani, May 8, 2019, 6:00 AM IST

1

ಬೇಸಿಗೆ ಕಾಲದಲ್ಲಿ ಚರ್ಮ ರೋಗಗಳು, ಅದರಲ್ಲಿಯೂ “ಉಷ್ಣ ಗುಳ್ಳೆಗಳು’ ಅಥವಾ “ಕುರು’ ಸಾಮಾನ್ಯವಾಗಿ ಕಂಡುಬರುತ್ತವೆ. ಇದು ಬ್ಯಾಕ್ಟೀರಿಯಾ ಸೋಂಕಾಗಿದ್ದು, ಚರ್ಮದ ಮೇಲೆ ಅಥವಾ ಒಳಗಡೆ ಆಗುವ ಬಾವು/ಕೀವು ತುಂಬಿಕೊಳ್ಳುವ ಸಮಸ್ಯೆಯಾಗಿದೆ. ದೇಹದ ನಿರ್ಜಲೀಕರಣ, ಚರ್ಮದ ಬಿರುಕು ಹಾಗೂ ತುರಿಕೆ, ಸೀಳುವಿಕೆ ಅಥವಾ ಗಾಯಗಳು, ಬೆವರು ಗ್ರಂಥಿಗಳ ಕಾರ್ಯದಲ್ಲಾಗುವ ಅಡಚಣೆ ಇದಕ್ಕೆ ಕಾರಣ.

ಸ್ತ್ರೀಯರು ಪುರುಷರಿಗಿಂತ ಹೆಚ್ಚು ಬೆವರುತ್ತಾರೆ. ದೇಹದಲ್ಲಿನ ತಾಪ ಮಟ್ಟವನ್ನು ಕಡಿಮೆ ಮಾಡಲು ಬೆವರಿನ ರೂಪದಲ್ಲಿ ಚರ್ಮವು ನೀರಿನ ಅಂಶವನ್ನು ಹೊರಹಾಕುತ್ತದೆ. ಈ ಸಮಯದಲ್ಲಿ ಬ್ಯಾಕ್ಟೀರಿಯಾಗಳು ಬೆವರಿನ ಜೊತೆ ಸೇರಿ ರಾಸಾಯನಿಕ ಚಟುವಟಿಕೆಗಳನ್ನು ನಡೆಸಿದಾಗ ಬೆವರಿನ ವಾಸನೆ ಅಧಿಕವಾಗುವುದಲ್ಲದೆ, ಸೋಂಕು ತಗುಲುವ ಸಂಭವಗಳೂ ಹೆಚ್ಚು. ಇವು ದೇಹದ ಯಾವುದೇ ಭಾಗದಲ್ಲಿ ಕಂಡು ಬರಬಹುದಾದರೂ, ಹೆಚ್ಚಾಗಿ ಕಂಕುಳ ಭಾಗ, ತೊಡೆಗಳ ಸಂಧಿ, ಕಾಲು, ಸೊಂಟದ ಭಾಗಗಳಲ್ಲಿ ಉಂಟಾಗುತ್ತವೆ. ಉಷ್ಣ ಗುಳ್ಳೆಗಳು ಚರ್ಮದ ಮೇಲೆ ಅಥವಾ ಒಳಗೆ ಆಗುತ್ತವೆ.

ಚರ್ಮದ ಮೇಲೆ ಕುರು ಆದಾಗ ಆ ಜಾಗದಲ್ಲಿ ತೀವ್ರ ನೋವು ಹಾಗೂ ಚರ್ಮ ಬಿಸಿಯಾಗಿ ಕೀವು ತುಂಬಿಕೊಂಡಿರುತ್ತದೆ. ಸೆಳೆತದಿಂದಾಗಿ 2-3 ದಿನ ಜ್ವರ ಕಾಣಿಸಿಕೊಳ್ಳಲೂಬಹುದು. ಚರ್ಮದ ಒಳಗೆ ಕುರು ಆದಲ್ಲಿ ಹೊಟ್ಟೆ ನೋವು ಅಥವಾ ಹಸಿವಿಲ್ಲದಿರುವುದು, ಸುಸ್ತು, ಜ್ವರ, ತೂಕದಲ್ಲಿ ವ್ಯತ್ಯಾಸ ಕಂಡುಬರಬಹುದು.

ಏನ್‌ ಪರಿಹಾರ?
– ಕುರು ಆದ ಜಾಗದ ಸುತ್ತ ತೆಂಗಿನೆಣ್ಣೆ ಅಥವಾ ಬೇವಿನ ಎಣ್ಣೆಯನ್ನು ಸವರಿ, ಒಂದು ಗಂಟೆಯ ನಂತರ ಸ್ನಾನ ಮಾಡಿ.
– ಅಲೋವೆರಾ ಜೆಲ… ಮತ್ತು ಅರಿಶಿನ ಮಿಕ್ಸ್ ಮಾಡಿ ಹಚ್ಚುವುದರಿಂದ ಚರ್ಮದ ಆರೋಗ್ಯ ಹೆಚ್ಚುತ್ತದೆ.
– ಕುರು ಆದ ಜಾಗದಲ್ಲಿ ಬೆಳ್ಳುಳ್ಳಿಯನ್ನು ಜಜ್ಜಿ ಅದರ ಪೇಸ್ಟ್ ಅನ್ನು ಇಟ್ಟು ಒಂದು ತೆಳು ಬಟ್ಟೆಯಿಂದ ಕಟ್ಟಿಕೊಂಡರೆ ಸಮಸ್ಯೆ ಬೇಗನೆ ನಿವಾರಣೆ ಆಗುತ್ತದೆ.
– ಲಿಂಬೆ ರಸವನ್ನು ನೇರವಾಗಿ ಕುರುವಿನ ಸುತ್ತ ಹಚ್ಚಿ 5 -10 ನಿಮಿಷದ ಬಳಿಕ ತೊಳೆದರೆ ಉರಿ, ನೋವು ಕಡಿಮೆಯಾಗುವುದು.
– ಕಹಿಬೇವಿನ ಸೊಪ್ಪನ್ನು ಅರೆದು ಪೇಸ್ಟ್ ಮಾಡಿ ಹಚ್ಚುವುದರಿಂದ ಅಥವಾ ಬೇವಿನ ಎಲೆಗಳನ್ನು ನೀರಿನಲ್ಲಿ ಹಾಕಿ ಸ್ನಾನ ಮಾಡುವುದರಿಂದ ಕುರು ಮಾಯವಾಗುತ್ತದೆ.

ಹೀಗೆ ಮಾಡಿ…
– ದೇಹವನ್ನು ತಂಪುಗೊಳಿಸುವುದರ ಮೂಲಕ ಆಂತರಿಕ ಹಾಗೂ ಬಾಹ್ಯ ಆರೋಗ್ಯವನ್ನು ಕಾಪಾಡಿಕೊಳ್ಳಿ.
– ಸಾಕಷ್ಟು ನೀರು ಕುಡಿಯಿರಿ.
– ಜಂಕ್‌ ಆಹಾರ ಪದಾರ್ಥಗಳ ಸೇವನೆಯನ್ನು ನಿಲ್ಲಿಸಿ.
– ಹಣ್ಣು, ತರಕಾರಿ, ಸೊಪ್ಪು, ಧಾನ್ಯಗಳನ್ನು ಹೆಚ್ಚೆಚ್ಚು ಸೇವಿಸಿ.
– ಮೆಂತೆ, ಗಸಗಸೆ, ಜೀರಿಗೆ, ಮಜ್ಜಿಗೆಯಂಥ ತಂಪು ಪದಾರ್ಥಗಳು ದೇಹಕ್ಕೆ ಹಿತಕಾರಿ.

– ಡಾ. ಶ್ರೀಲತಾ ಪದ್ಯಾಣ, ಪ್ರಕೃತಿ ಚಿಕಿತ್ಸಾತಜ್ಞೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.