ಯೋಗ್ಯ ರಾಗಿ ಭೋಗ್ಯ ರಾಗಿ


Team Udayavani, Apr 15, 2020, 11:32 AM IST

ಯೋಗ್ಯ ರಾಗಿ ಭೋಗ್ಯ ರಾಗಿ

ಭೋಗ್ಯ ರಾಗಿ , ರಾಗಿ ತಿಂದವನಿಗೆ ರೋಗವಿಲ್ಲ ಎಂಬ ಮಾತಿದೆ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾದ ಮತ್ತು ಮನೆಯ ಅಡುಗೆಯಿಂದಲೇ ಬಾಯಿ ರುಚಿ ತಣಿಸಿಕೊಳ್ಳಬೇಕಾದ ಈ ಸಮಯದಲ್ಲಿ, ರಾಗಿ ಬಳಸಿ ಮಾಡಬಹುದಾದ ಎರಡು ರೆಸಿಪಿ ಇಲ್ಲಿದೆ.

ಉತ್ತಪ್ಪ
ಬೇಕಾಗುವ ಸಾಮಗ್ರಿ:
ರಾಗಿ ಹಿಟ್ಟು- 1 ಕಪ್‌, ಅಕ್ಕಿ ಹಿಟ್ಟು- 1 ಚಮಚ, ರವೆ- 1 ಚಮಚ, ಮೊಸರು- 2 ಕಪ್‌, ಈರುಳ್ಳಿ- 7, ಉಪ್ಪು ರುಚಿಗೆ, ಎಣ್ಣೆ ಸ್ವಲ್ಪ.

ಮಾಡುವ ವಿಧಾನ: ರಾಗಿ, ಅಕ್ಕಿ ಹಿಟ್ಟು ಮತ್ತು ರವೆಯನ್ನು ಮೊಸರು, ನೀರು ಬೆರೆಸಿ ದೋಸೆ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಿ. ಈರುಳ್ಳಿಯನ್ನು ಸಣ್ಣದಾಗಿ ಹೆಚ್ಚಿ, ಸ್ವಲ್ಪ ಎಣ್ಣೆ ಹಾಕಿ ಫ್ರೈ ಮಾಡಿ. ನಂತರ, ಕಾವಲಿಗೆ ಎಣ್ಣೆ ಹಚ್ಚಿ, ರಾಗಿ ಹಿಟ್ಟು ಹೊಯ್ದು, ಫ್ರೈ ಮಾಡಿದ ಈರುಳ್ಳಿ ಹಾಕಿ ಒತ್ತಿ (ಹಸಿಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು, ಕ್ಯಾಪ್ಸಿಕಂ, ಶುಂಠಿ ಕೂಡ ಹಾಕಬಹುದು) ದೋಸೆ ತೆಗೆಯಿರಿ. (ಹಸಿ ಈರುಳ್ಳಿಯನ್ನು ರಾಗಿ ಹಿಟ್ಟಿನೊಂದಿಗೆ ಬೆರೆಸಬಹುದು)

ಹಲ್ವ
ಬೇಕಾಗುವ ಸಾಮಗ್ರಿ:
ರಾಗಿ- ಒಂದು ಕಪ್‌, ಹಾಲು- 1 ಕಪ್‌, ಸಕ್ಕರೆ/ ಬೆಲ್ಲ- 1 ಕಪ್‌, ತುಪ್ಪ- 4 ಚಮಚ, ಗಸಗಸೆ, ಕೊಬ್ಬರಿ, ಗೋಡಂಬಿ, ಬಾದಾಮಿ, ಏಲಕ್ಕಿ ಪುಡಿ- ಸ್ವಲ್ಪ.

ಮಾಡುವ ವಿಧಾನ:
ಹಿಂದಿನ ದಿನ ರಾತ್ರಿಯೇ ರಾಗಿಯನ್ನು ಚೆನ್ನಾಗಿ ತೊಳೆದು, ನೀರಿನಲ್ಲಿ ನೆನೆಸಿ ಇಡಿ. ಮರುದಿನ ಬೆಳಗ್ಗೆ ನೀರು ಮತ್ತು ಗಸಗಸೆ ಹಾಕಿ ನುಣ್ಣಗೆ ರುಬ್ಬಿ, ಬರುವ ಹಾಲನ್ನು ಸೋಸಿಕೊಳ್ಳಿ. ಆ ಹಾಲಿಗೆ ಬೆಲ್ಲ/ ಸಕ್ಕರೆ, ಹಸಿ ಹಾಲು ಬೆರೆಸಿ, ದಪ್ಪ ತಳದ ಪಾತ್ರೆಗೆ ಹಾಕಿ ಕುದಿಯಲು ಇಡಿ. ಮಿಶ್ರಣ ತಳ ಹಿಡಿಯದಂತೆ, ಚೆನ್ನಾಗಿ ಕೈ ಆಡಿಸುತ್ತಿರಿ. ಕ್ರಮೇಣ ಮಿಶ್ರಣವು ಗಟ್ಟಿಯಾಗುತ್ತಾ ಬರುತ್ತದೆ. ಆಗ ತುಪ್ಪ ಮತ್ತು ಏಲಕ್ಕಿ ಪುಡಿ ಹಾಕಿ, ಐದು ನಿಮಿಷ ಮಗುಚಿ. ಮಿಶ್ರಣವು ಹಲ್ವದ ಹದಕ್ಕೆ ಬಂದ ತಕ್ಷಣ, ತುಪ್ಪ ಸವರಿದ ತಟ್ಟೆಗೆ ವರ್ಗಾಯಿಸಿ. ಅಲಂಕಾರ ಮತ್ತು ರುಚಿ ಹೆಚ್ಚಿಸಲು ಮೇಲೆ ಗೋಡಂಬಿ, ಕೊಬ್ಬರಿ, ಬಾದಾಮಿ ತುಣುಕು ಹಾಕಿ, ತಣ್ಣಗಾದ ಮೇಲೆ ಕತ್ತರಿಸಿ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.