ಕೇಳಬೇಡ ಕಾರಣ: ಮೂವತ್ತಾಗಿದೆ ಮದುವೆಯಾಗಿಲ್ವಾ?


Team Udayavani, Jun 21, 2017, 12:33 PM IST

21-AVALU-8.jpg

ವಯಸ್ಸು ಮೂವತ್ತರ ಗಡಿ ಸಮೀಪಿಸುತ್ತಿದೆ ಎಂದಾಕ್ಷಣ ನಿನಗಿನ್ನೂ ಮದುವೆಯಾಗಿಲ್ವಾ…? ಯಾಕೆ, ಏನು? ಎಂಬಿತ್ಯಾದಿ ಪ್ರಶ್ನೆಗಳನ್ನು ಹೆಣ್ಣು ಎದುರಿಸುತ್ತಾಳೆ. ನೀನೇನು ಸೆಲೆಬ್ರಿಟೀನಾ…? ಲವ್‌ ಇದೆಯಾ…? ಎಂಬ ವ್ಯಂಗ್ಯದ ಮಾತುಗಳೂ ಆಕೆಯನ್ನು ಕಂಗೆಡಿಸುತ್ತವೆ.

ಇತ್ತೀಚೆಗೆ ಗೆಳತಿಯ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಫೋನ್‌ ಮಾಡಿದ್ದೆ. ಈಚೆ ಕಡೆಯಿಂದ ನಾನು ಹುಟ್ಟುಹಬ್ಬದ ಶುಭಾಶಯಗಳು ಎಂದಾಗ ಆ ಕಡೆಯಿಂದ ಆಕೆ “ಹುಂ…’ ಎಂದಷ್ಟೆ ಹೇಳಿ ಸುಮ್ಮನಾದಳು. “ಥ್ಯಾಂಕ್ಸ್‌ ಹೇಳಿದರೆ ನಿನ್ನ ಗಂಟೇನು ಹೋಗುತ್ತದೆ?’ ಎಂದಾಗ ಆಕೆ ಹಾವಿನಂತೆ ಬುಸುಗುಟ್ಟಿದಳು, “ವರ್ಷ ಮೂವತ್ತಾಯಿತು ಕಣೇ ನನಗೆ. ಹೇಗೆ ಸಂಭ್ರಮಿಸಲಿ ಈ ಹುಟ್ಟುಹಬ್ಬವನ್ನು? ಕೇಕ್‌ ಕತ್ತರಿಸಿ ಖುಷಿಪಡಲು ನನಗೇನು ಹದಿನಾರು ವರ್ಷನಾ…?’ ಎಂದಾಗ ನನಗೆ ತುಸು ಪಿಚ್ಚೆನಿಸಿತು. ಅವಳ ಅಸಮಾಧಾನಕ್ಕೆ ವರುಷವಾದರೂ ಬೆಸೆಯದ ಮದುವೆಯ ನಂಟು ಎಂಬುದು ಗೊತ್ತಾಯಿತು. 

ಆಗ ಅವಳು ಹೇಳಿದ್ದಿಷ್ಟು-
“ಏನು ಮಾಡಲಿ? ಆಫೀಸ್‌ಗೆ ಹೋಗೋದಕ್ಕೂ ಬೇಜಾರು. ಯಾವಾಗ ಮದುವೆ ಊಟ ಹಾಕಿಸ್ತೀರಿ ಎಂದು ಸಹೋದ್ಯೋಗಿಗಳು ಸಮಯ ಸಿಕ್ಕಾಗಲೆಲ್ಲ ಕಿಚಾಯಿಸುತ್ತಿರುತ್ತಾರೆ. ಯಾರಾದರೂ ಒಬ್ಬ ಹುಡುಗ ಸಿಕ್ಕಿದರೂ ಸಾಕುಮಗಳ ಕತ್ತಿನಲ್ಲಿ ಒಂದು ತಾಳಿ ನೇತಾಡಲಿ ಎಂಬುದು ಅಮ್ಮನ ಆಸೆ. ಎಷ್ಟು ಒಳ್ಳೆಯ ಸಂಬಂಧ ಬಂದರೂ ನೀನು ಏನಾದರೂ ಒಂದು ತಗಾದೆ ತೆಗೆಯುತ್ತೀಯ. ನನಗಿನ್ನು ಹುಡುಕೋದಕ್ಕೆ ಆಗುವುದಿಲ್ಲ ಎಂದು ಅಪ್ಪ ಸಿಡಿಮಿಡಿಗುಟ್ಟುತ್ತಾರೆ. 

“ನೀನು ಹೀಗೆ ತಡಮಾಡಿದರೆ ನಾನು ಮುದುಕನಾದ ಮೇಲೆ ಮದುವೆಯಾಗಬೇಕು. ಆಮೇಲೆ ನನಗೆ ಯಾರು ಹೆಣ್ಣು ಕೊಡಲು ಮುಂದೆ ಬರುತ್ತಾರೆ ತಲೆಯಲ್ಲಿ ಕೂದಲು ಉದುರಲು ಶುರುವಾಗಿದೆ’ ಎಂದು ಅಣ್ಣ ಒಳಗೊಳಗೇ ಸಿಡುಕುತ್ತಾನೆ. ಯಾರದ್ದಾದರೂ ಫೋಟೊ ಬಂದರೆ “ಅಕ್ಕಾ… ಇವನು ಚೆನ್ನಾಗಿದ್ದಾನೆ. ಹುಂ ಅನ್ನು. ಇನ್ನು ತಡ ಮಾಡಿದರೆ ಕಷ್ಟ’ ಎಂದು ತಂಗಿ ತನ್ನ ಲೈನ್‌ ಕ್ಲಿಯರ್‌ ಆಗುವುದಕ್ಕಾಗಿ ಕಾಯುತ್ತಿದ್ದಾಳೆ. ವರ್ಷ 30 ದಾಟಿದ ಮೇಲೆ ಮಕ್ಕಳಾಗೋದಕ್ಕೆ ಸ್ವಲ್ಪ ಕಷ್ಟವಾಗುತ್ತೆ. ಡೆಲಿವರಿಗೂ ಸಮಸ್ಯೆಯಾಗುತ್ತೆ. ಅದೂ ಅಲ್ಲದೆ, ಈಗ ಪಿಸಿಓಎಸ್‌ ಮಣ್ಣು ಮಸಿ ಎಂಬಿತ್ಯಾದಿ ಸಮಸ್ಯೆಗಳು ಹೆಣ್ಣಮಕ್ಕಳನ್ನು ಕಾಡುತ್ತಿವೆ. ಬೇಗ ಒಂದು ಮದುವೆಯಾದರೆ ಒಳ್ಳೆಯದು ಎಂಬುದು ಪಕ್ಕದ ಮನೆಯ ಆಂಟಿ ನೀಡುವ ಬಿಟ್ಟಿ ಉಪನ್ಯಾಸ.

ಇದನ್ನೆಲ್ಲಾ ಕೇಳಿ ಕೇಳಿ ನನಗೂ ಸಾಕಾಗಿದೆ. ಅಷ್ಟಕ್ಕೂ ಮೂವತ್ತಾಗಿದೆ ಎಂದ ತಕ್ಷಣ ಎಲ್ಲ ಮುಗಿದೇ ಹೋಗಿದೆ ಎನ್ನುವ ಹಾಗೆ ಯಾಕೆ ಈ ಜನ ವರ್ತಿಸುತ್ತಾರೆ? ಎಂದು ತನ್ನೆಲ್ಲಾ ಅಸಮಾಧಾನಗಳನ್ನೆಲ್ಲಾ ಕಕ್ಕಿ ಆದರೂ ಬೇಗ ಒಂದು ಮದುವೆಯಾಗಬೇಕು ಈ ಪ್ರಶ್ನೆಗಳನ್ನೆಲ್ಲಾ ಎದುರಿಸಿ ಸಾಕಾಗಿ ಹೋಗಿದೆ’ ಎಂದು ಮಾತಿಗೆ ವಿರಾಮ ಕೊಟ್ಟಳು.

ಕಾಲ ಬದಲಾಗಿದೆ!
ಕಾಲಕಾಲಕ್ಕೆ ಮಳೆ, ಬೆಳೆ ಆಗುವ ಹಾಗೆ ಹೆಣ್ಣುಮಕ್ಕಳು ಆಯಾ ವಯಸ್ಸಿಗೆ ಮದುವೆ, ಮಕ್ಕಳು ಅಂತ ಆದರೆ ಚೆಂದ ಎಂದು ಹಿರಿಯರು ಹೇಳುತ್ತಿರುತ್ತಾರೆ. ಆದರೆ ಈಗ ಕಾಲ ಬದಲಾಗಿದೆ. ಹೆಣ್ಣು ಗಂಡಿನಷ್ಟೇ ಸಮಾನಳು. ಗಂಡಿನಂತೆ ಸಂಸಾರದ ಜವಾಬ್ದಾರಿಗೆ ಹೆಗಲು ಕೊಡಬಲ್ಲಳು. ಅದು ಅಲ್ಲದೇ ಈಗ ಐಟಿ-ಬಿಟಿ ವಲಯದಲ್ಲಿ ಕೆಲಸಕ್ಕೆ ಹೋಗುವವರು ಜೀವನದಲ್ಲಿ ಒಂದು ನೆಲೆ ಅಂತ ಕಂಡುಕೊಂಡ ಮೇಲೆ ಮದುವೆಯಾದರೆ ಆಯ್ತು. ಇಷ್ಟು ಬೇಗ ಯಾಕೆ ಜವಾಬ್ದಾರಿ ಎಂಬ ಅಭಿಪ್ರಾಯವನ್ನೇ ಹೊಂದಿರುತ್ತಾರೆ. ಈಗಿನ ಬಹುತೇಕ ತಂದೆ ತಾಯಂದಿರು ಮಕ್ಕಳ ಅಭಿಪ್ರಾಯಕ್ಕೆ ಬೆಲೆ ಕೊಡುತ್ತಿದ್ದಾರೆ. 

ಒಂದಿಷ್ಟು ಸಮಸ್ಯೆಗಳು
ಇನ್ನು ಮಧ್ಯಮ ವರ್ಗದ ಹೆಣ್ಣು ಮಕ್ಕಳದ್ದು ಇನ್ನೊಂದು ರೀತಿಯ ಪಾಡು. ವಿದ್ಯಾಭ್ಯಾಸಕ್ಕಾಗಿ ಮಾಡಿದ ಸಾಲ ತೀರಿಸಬೇಕು, ಎಲ್ಲಾ ಭಾರವನ್ನು ಅಪ್ಪನ ಹೆಗಲ ಮೇಲೆ ಹೊರಿಸುವುದು ಬೇಡ. ತಮ್ಮನ ಓದು, ಬೆಳೆದು ನಿಂತ ತಂಗಿ, ಅಮ್ಮನ ಔಷಧಿ… ಈ ರೀತಿಯ ಹಣಕಾಸಿನ ಸಮಸ್ಯೆ ನಿವಾರಿಸುವುದಕ್ಕೆ ಒಂದು ಕೆಲಸ ಹುಡುಕಿಕೊಂಡು ನಗರದ ಕಡೆ ಹೋಗಿರುತ್ತಾರೆ. ತಾನು ಬೇಗ ಮದುವೆಯಾದರೆ ಇದನ್ನೆಲ್ಲಾ ನಿಭಾಯಿಸುವವರು ಯಾರು? ಎಂಬ ಅಭದ್ರತೆಯಿಂದ ತಮ್ಮ ಮದುವೆಯನ್ನು ಮುಂದೂಡಿರುತ್ತಾರೆ. ತಂದೆ- ತಾಯಿ ಇಲ್ಲದೇ ಇರುವುದು, ಮಗಳ ಮದುವೆಯ ಜವಾಬ್ದಾರಿ ಹೊರದ ಕುಡುಕ ಅಪ್ಪ, ಆರ್ಥಿಕ ಸಮಸ್ಯೆ, ಪ್ರೇಮ ವೈಫ‌ಲ್ಯ, ವಿದ್ಯಾಭ್ಯಾಸ, ಹೆಣ್ಣಿನ ರೂಪ, ಆಕಾರಗಳು ಕೂಡ ಮದುವೆ ತಡವಾಗುವುದಕ್ಕೆ ನೆಪಗಳಾಗಿರುತ್ತವೆ.

ಕಾಡುವ ಕಳವಳ
ತನ್ನ ಗೆಳತಿಯರಿಗೆಲ್ಲಾ ಮದುವೆಯಾಗಿ ಮಗುವಾಗಿದೆ ತನಗಿನ್ನೂ ಆಗಿಲ್ಲ ಎಂಬ ಚಿಂತೆ ಆ ಹೆಣ್ಣನ್ನು ಕಾಡುತ್ತಿರುತ್ತದೆ. ಗೆಳತಿಯರು ಫೋನ್‌ ಮಾಡಿ ತಮ್ಮ ಸಂಸಾರದ ಬಗ್ಗೆ ಗಂಟೆಗಟ್ಟಲೆ ಮಾತನಾಡುವಾಗ ಅವಳದೆಯಲ್ಲೂ ನೋವಿನ ಎಳೆ ಮೋಡ ಕಟ್ಟಿಕೊಳ್ಳುತ್ತದೆ. ಅವಳನ್ನು ನೋಡೋದಕ್ಕೆ ಬಂದವರೆಲ್ಲಾ ಯಾಕಿಷ್ಟು ತಡ ಮಾಡಿದ್ದೀರಿ? ಎಂದು ಕೇಳುವಾಗ ಅವಳ ಹೆತ್ತವರ ಮೌನವನ್ನು ಕಂಡು ಅವಳೂ ಒಳಗೊಳಗೆ ನರಳುತ್ತಾಳೆ.

ಎದುರಿಸುವ ಮನಸ್ಥಿತಿ ಬೆಳೆಸಿಕೊಳ್ಳಿ 
ಯಾವುದೋ ಒಂದು ಕಾರಣದಿಂದ ಮದುವೆ ಆಗದೇ ಇರಬಹುದು ಅಥವಾ ಸ್ವಲ್ಪ ಮುಂದೆ ಹೋಗಿರಬಹುದು. ಇರುವ ಪರಿಸ್ಥಿತಿಗೆ ಹೊಂದಿಕೊಂಡು ಬದುಕುವ ಕಲೆ ರೂಢಿಸಿಕೊಳ್ಳುವ ಮನಸ್ಥಿತಿ ಮುಖ್ಯ. “ನಾನು ಇಷ್ಟು ಬೇಗ ಮದುವೆಯಾಗುವುದಿಲ್ಲ. ಇದು ನನ್ನ ಜೀವನ. ನಾನಿರುವುದೇ ಹೀಗೆ’ ಎಂದು ವ್ಯಂಗ್ಯದಿಂದ ಪ್ರಶ್ನೆ ಕೇಳುವವರಿಗೆ ಉತ್ತರ ಹೇಳುವಷ್ಟರ ಮಟ್ಟಿಗೆ ಧೈರ್ಯ ತಂದುಕೊಳ್ಳಬೇಕು. ಮೊದಲೆಲ್ಲಾ ಹೆಣ್ಣಿಗೆ ಆಯ್ಕೆಗಳು ಇರಲಿಲ್ಲ. ಈಗ ಅವಳ ಜೀವನ ಸಂಗಾತಿಯನ್ನು ಅವಳೇ ಆಯ್ಕೆ ಮಾಡಿಕೊಳ್ಳುವಷ್ಟು ಸ್ವಾತಂತ್ರ್ಯ ಇದೆ. ಸವಾಲುಗಳನ್ನು ಎದುರಿಸುವ ಛಲವಿದ್ದರೆ ತಲೆ ಎತ್ತಿ ನಡೆಯಲು ಸಾಧ್ಯ. 

ಪವಿತ್ರಾ ಶೆಟ್ಟಿ, ಈರೋಡ್‌ 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.