![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 9, 2019, 4:04 AM IST
ಗರ್ಭಿಣಿಯಾಗಿದ್ದಾಗ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚುವುದಕ್ಕೆ Gestational diabetes mellitus (GDM) ಎನ್ನುತ್ತಾರೆ. ಸಾಮಾನ್ಯವಾಗಿ, ಹೆರಿಗೆಯ ನಂತರ ಇದು ಕಣ್ಮರೆಯಾಗುತ್ತದೆ. ಗರ್ಭಧಾರಣೆಯ ದ್ವಿತೀಯಾರ್ಧದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಈ ಸಮಸ್ಯೆಯನ್ನು ನಿಯಂತ್ರಿಸಬೇಕು. ಇಲ್ಲದಿದ್ದರೆ, ಹುಟ್ಟುವ ಮಕ್ಕಳು ಹದಿಹರೆಯದಲ್ಲೇ ಸಕ್ಕರೆಕಾಯಿಲೆಗೆ ತುತ್ತಾಗುವ, ಸ್ಥೂಲಕಾಯಿಗಳಾಗುವ ಅಪಾಯವಿರುತ್ತದೆ. ಹೆರಿಗೆಯ ಸಂದರ್ಭದಲ್ಲಿಯೂ ತಾಯಿ-ಮಗುವಿಗೆ ಕಷ್ಟವಾಗಬಹುದು. ಆದ್ದರಿಂದ, ಈ ಕೆಳಗಿನ ಸಲಹೆಗಳನ್ನು ಪಾಲಿಸಿದರೆ ಉತ್ತಮ…
ದೈಹಿಕ ಚಟುವಟಿಕೆ: ಗರ್ಭಿಣಿಯರು ದಿನಕ್ಕೆ ಕನಿಷ್ಠ 15-30 ನಿಮಿಷ ಸರಳ ವ್ಯಾಯಾಮಗಳನ್ನು ಮಾಡುವುದರಿಂದ ಸಕ್ಕರೆ ಕಾಯಿಲೆಯನ್ನು ದೂರವಿಡಬಹುದು. ದೈಹಿಕ ಚಟುವಟಿಕೆಗಳಿಂದ ಹೊಟ್ಟೆಯಲ್ಲಿರೋ ಮಗುವಿನ ಬೆಳವಣಿಗೆಯೂ ಉತ್ತಮವಾಗುತ್ತದೆ. ವೈದ್ಯರ ಸಲಹೆ ಪಡೆದ ನಂತರವೇ ವ್ಯಾಯಾಮ ಮಾಡಿ.
ಆಹಾರದಲ್ಲಿ ಪಥ್ಯ ಇರಲಿ: ಗರ್ಭಾವಸ್ಥೆಯಲ್ಲಿ ಸಕ್ಕರೆ ಪ್ರಮಾಣದ ನಿಯಂತ್ರಣಕ್ಕೆ ಆಹಾರ ಪದ್ಧತಿಯಲ್ಲಿ ಕೆಲವು ಬದಲಾವಣೆಗಳನ್ನು ತರುವುದು ಅಗತ್ಯ. ಮಗುವಿನ ಬೆಳವಣಿಗೆಗೆ ಪೂರಕವಾದ ಪ್ರೋಟಿನ್, ಪೋಷಕಾಂಶಯುಕ್ತ ಆಹಾರವನ್ನು ನಿಯಮಿತವಾಗಿ ಸೇವಿಸಿ. ಆಹಾರದಲ್ಲಿ ಹೆಚ್ಚಿನ ಫೈಬರ್ ಮತ್ತು ಕಡಿಮೆ ಗ್ಲೂಕೋಸ್ ಇರುವಂತೆ ನೋಡಿಕೊಳ್ಳಿ.
ಮಧುಮೇಹ ಪರೀಕ್ಷೆ ಮಾಡಿಸಿಕೊಳ್ಳಿ: ವ್ಯಾಯಾಮ ಮತ್ತು ಆಹಾರಕ್ರಮದ ಬದಲಾವಣೆಗಳಿಂದ ರಕ್ತದ ಸಕ್ಕರೆ ಪ್ರಮಾಣದಲ್ಲಿ ಬದಲಾವಣೆ ಆಗುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳಲು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿಕೊಳ್ಳಿ.
ವೈದ್ಯರ ಸಲಹೆ ಪಾಲಿಸಿ: ಜೀವನಶೈಲಿಯಲ್ಲಿ ಮೇಲೆ ತಿಳಿಸಿದ ಬದಲಾವಣೆಗಳನ್ನು ಮಾಡಿದ ನಂತರವೂ, ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚುವ ಸಂಭವವಿರುತ್ತದೆ. ಆ ಸಂದರ್ಭದಲ್ಲಿ, ವೈದ್ಯರು ಸೂಚಿಸುವ ಔಷಧಗಳನ್ನು ಕ್ರಮಬದ್ಧವಾಗಿ ತೆಗೆದುಕೊಳ್ಳಿ. ಆ ಔಷಧಗಳು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದಲ್ಲದೆ, ಮಗುವಿನ ಆರೋಗ್ಯ ರಕ್ಷಣೆ ಮಾಡುತ್ತವೆ. ಈ ಔಷಧಿಗಳೂ ಕೆಲಸ ಮಾಡದಿದ್ದಲ್ಲಿ, ಇನ್ಸುಲಿನ್ ಚುಚ್ಚುಮದ್ದು ತೆಗೆದುಕೊಳ್ಳುವಂತೆ ವೈದ್ಯರು ಶಿಫಾರಸು ಮಾಡಬಹುದು. ಸಾಮಾನ್ಯವಾಗಿ, ಹೆರಿಗೆಯ ನಂತರ ಜಿಡಿಎಂ ಸಮಸ್ಯೆ ಮಾಯವಾಗುವುದರಿಂದ, ಇನ್ಸುಲಿನ್ ತೆಗೆದುಕೊಳ್ಳುವ ಅಗತ್ಯ ಇರುವುದಿಲ್ಲ.
* ಡಾ. ರಾಧಾ ಎಸ್. ರಾವ್, ಪ್ರಸೂತಿ -ಸ್ತ್ರೀರೋಗ ತಜ್ಞೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.