ಮತ್ತೆ ಮೇರಿಕೋಮ್‌


Team Udayavani, Jan 10, 2020, 4:53 AM IST

13

ಸಾಧನೆಯನ್ನು ಪ್ರೀತಿಸುವವರಿಗೆ ಮೇರಿಕೋಮ್‌ ಸ್ಫೂರ್ತಿದಾಯಕ ಮಹಿಳೆ. ಮದುವೆ, ಮಕ್ಕಳು ಎಂಬ ಸಾಂಸಾರಿಕ ಜವಾಬ್ದಾರಿಗಳನ್ನು ನಿಭಾಯಿಸಿಕೊಂಡೇ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಯ ಮೆಟ್ಟಿಲೇರಿದ ಮೇರಿಕೋಮ್‌ ದೇಶದ ಹೆಮ್ಮೆಯ ಕ್ರೀಡಾಪಟು. ಇದೀಗ ಬಾಕ್ಸಿಂಗ್‌ನಲ್ಲಿ ಮತ್ತೆ ಭಾರತವನ್ನು ಪ್ರತಿನಿಧಿಸಲು ತಾನು ಸಮರ್ಥಳು ಎಂದು ಸಾಬೀತುಮಾಡಿದ್ದಾರೆ.

ಮನುಷ್ಯನ ವಯಸ್ಸಿನ ಸಂಖ್ಯೆ ಏರಿದಂತೆಯೇ ಸ್ಪರ್ಧಾತ್ಮಕವಾದ ಈ ಜಗತ್ತಿನಲ್ಲಿ ತನ್ನ ಸಾಮರ್ಥ್ಯವನ್ನು ಮತ್ತೆ ಸಾಬೀತು ಮಾಡಬೇಕಾದ ಅನಿವಾರ್ಯತೆ ಎಲ್ಲ ಕ್ಷೇತ್ರಗಳಲ್ಲಿಯೂ ಇದೆ. ಆರು ಬಾರಿ ವಿಶ್ವಚಾಂಪಿಯನ್‌ ಆಗಿದ್ದ ಮೇರಿಕೋಮ್‌ ಮಣಿಪುರದವರು. ಅವರನ್ನು 51 ಕೆಜಿ ವಿಭಾಗದಲ್ಲಿ ನೇರವಾಗಿ ಒಲಿಂಪಿಕ್‌ ಅರ್ಹತಾ ಟೂರ್ನಿಗೆ ಆಯ್ಕೆ ಮಾಡಿದ ಕ್ರಮವನ್ನು ಮತ್ತೋರ್ವ ಕ್ರೀಡಾಪಟು ನಿಖೀತಾ ಝರೀನ್‌ ಆಕ್ಷೇಪಿಸಿದ್ದರು. ಮೇರಿಕೋಮ್‌ ಅವರೂ ಅರ್ಹತಾ ಸುತ್ತಿನಲ್ಲಿ ಸ್ಪರ್ಧಿಸಿಯೇ ಮುಂದುವರೆಯಬೇಕು ಎಂದು ಭಾರತೀಯ ಬಾಕ್ಸಿಂಗ್‌ಫೆಡರೇಶನ್‌ ಮತ್ತು ಕ್ರೀಡಾ ಸಚಿವಾಲಯದ ಮೊರೆ ಹೋಗಿದ್ದರು.

ಹಾಗೆ ನಡೆದ ಅರ್ಹತಾ ಸುತ್ತಿನ ಸ್ಪರ್ಧೆಯಲ್ಲಿ 36 ವರ್ಷದ ಮೇರಿಕೋಮ್‌, 23 ವರ್ಷದ ಝರೀನಾರನ್ನು 9-1ರ ಅಂತರದಲ್ಲಿ ಮಣಿಸಿದರು. ಈ ಇಬ್ಬರ ನಡುವಿನ ಮಾತಿನ ಚಕಮಕಿ, ವೈಮನಸ್ಯಗಳು ಸಾಕಷ್ಟು ಸುದ್ದಿ ಮಾಡಿದ್ದರೂ, ಮೇರಿಕೋಮ್‌ ಅಭಿಮಾನಿಗಳು ಅವರ ಸಾಧನೆಯನ್ನು ಮತ್ತೆ ಮೆಚ್ಚಿಕೊಳ್ಳುವಂತಾಗಿದೆ. ಮಣಿಪುರದ ಗುಡ್ಡಗಾಡು ಪ್ರದೇಶದಲ್ಲಿ ಓಡಾಡಿ ಬೆಳೆದ ಮೇರಿಕೋಮ್‌ ಸಾಧನೆ ಸಣ್ಣದಲ್ಲ.

ಆಕೆಗೆ ರಾಜ್ಯಸಭಾ ಸದಸ್ಯತ್ವದ ಗೌರವ ದೊರೆತಿದೆ. ಮಣಿಪುರ ಸರ್ಕಾರ “ಮೀಥೋಯಿ ಲೀಮಾ “(ಶ್ರೇಷ್ಠ ಮಹಿಳೆ) ಎಂಬ ಗೌರವವನ್ನೂ ನೀಡಿದೆ. ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಮೇರಿಕೋಮ್‌ ನಿವಾಸದಿಂದ ನ್ಯಾಷನಲ್‌ ಗೇಮ್ಸ್‌ ವಿಲೇಜ್‌ಗೆ ತೆರಳುವ ರಸ್ತೆಗೆ “ಮೇರಿಕೋಮ್‌’ ರಸ್ತೆ ಎಂದು ನಾಮಕರಣ ಮಾಡಲಾಗಿದೆ. ಅವರ ಜೀವನ ಆಧರಿಸಿ ನಿರ್ಮಿಸಿದ ಸಾಕ್ಷ್ಯಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ.

ಸ್ಮಿತಾ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.