ಗಿಳಿವಿಂಡಿಗೆ ಹೋಗಿಬಂದೆವು !


Team Udayavani, Jul 26, 2019, 5:06 AM IST

aa

ಕನ್ನಡ ಸಾಹಿತಿಗಳ ಮನೆ ಸಂದರ್ಶಿಸುವುದೆಂದರೆ ನಮಗೆಲ್ಲ ಎಲ್ಲಿಲ್ಲದ ಉತ್ಸಾಹ. ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈಗಳನ್ನು ಅರಿಯದವರಿದ್ದಾರೆಯೇ? ಸಾಹಿತ್ಯದಲ್ಲಿ ಇಂದಿಗೂ ಭದ್ರವಾಗಿ ನೆಲೆಯೂರಿ ಕನ್ನಡಿಗರ ಮನದಲ್ಲಿ ಇಂದಿಗೂ ಹಚ್ಚಹಸುರಾಗಿರುವ ಹೆಸರು ಪೈಗಳದ್ದು. ಮಂಜೇಶ್ವರದಲ್ಲಿರುವ ಪೈಗಳ ಮನೆ ಸಂದರ್ಶಿಸಬೇಕೆಂದು ತೀರ್ಮಾನಿಸಿ ತಿಂಗಳುಗಳೇ ಕಳೆದಿದ್ದುವು. ಆದರೆ, ಹಲವು ಕಾರಣಗಳಿಂದ ಸಂದರ್ಶನಕ್ಕೆ ತೊಡಕುಂಟಾಗುತ್ತಿತ್ತು.ಕೊನೆಗೊಂದು ದಿನ ಎಲ್ಲಾ ಕಾರ್ಯಗಳನ್ನು ಬದಿಗಿಟ್ಟು ಮಂಜೇಶ್ವರಕ್ಕೆ ಹೋಗಿಯೇ ಬರಬೇಕೆಂದು ದಿನ ನಿಗದಿಪಡಿಸಿದೆವು. ನಿಗದಿಪಡಿಸಿದ ದಿನದಂದು ಎಲ್ಲ ರೂ ಮಂಜೇಶ್ವರದಲ್ಲಿ ಜೊತೆಯಾದೆವು. ಸ್ವತಃ ಕಾಸರಗೋಡಿನವಳಾದರೂ ಇದುವರೆಗೆ ಪೈಗಳ ಮನೆ ಸಂದರ್ಶಿಸುವ ಭಾಗ್ಯ ನನಗೊದಗಿ ಬಂದಿರಲಿಲ್ಲ. ಆದ್ದರಿಂದ ಪೈಗಳ ಮನೆಯೂ ತಿಳಿದಿರಲಿಲ್ಲ. ಮನೆ ಹುಡುಕಲು ಹೆಚ್ಚು ಕಷ್ಟಪಡಬೇಕಾಗಿಯೂ ಬರಲಿಲ್ಲ ಬಿಡಿ. ಆಟೋರಿಕ್ಷಾದ ಮೊರೆಹೊಕ್ಕು ಪೈಗಳ ಮನೆ ತಲುಪಿಯೇ ಬಿಟ್ಟೆವು. ಆಟೋದಿಂದ ಇಳಿದ ನಮಗೆ ಅಚ್ಚರಿ ಕಾದಿತ್ತು. ಪೈಗಳ ಮನೆಯು ಭವ್ಯವಾಗಿ ಕಂಗೊಳಿಸುತ್ತಿತ್ತು. ಮನೆಯೊಳಗೆ ಪ್ರವೇಶಿಸುವ ತವಕ ಎಲ್ಲರಲ್ಲೂ ಎದ್ದು ನಿಂತಿತ್ತು.

ಮನೆಯ ಮುಂಭಾಗದ ಛಾವಣಿಯಲ್ಲಿ ಪೈಗಳ ಭವ್ಯವಾದ ಮೂರ್ತಿ ಕಣ್ಮನ ಸೂರೆಗೊಳಿಸಿತು. ಒಳಹೋದವರೇ ಅಲ್ಲಿದ್ದವರಲ್ಲಿ ನಮ್ಮ ಪರಿಚಯ ಹೇಳಿಕೊಂಡೆವು. ಮನೆಯೊಳಗೆ ಹೊಕ್ಕಾಗ ಹಲವಾರು ಹೊತ್ತಗೆಗಳನ್ನು ಹೊತ್ತ ಕಪಾಟುಗಳಿದ್ದುವು. ಅದರಲ್ಲಿ ಮಲಯಾಳ, ಕನ್ನಡ ಹೀಗೆ ಬಗೆಬಗೆಯ ಪುಸ್ತಕಗಳಿದ್ದುವು. ಮತ್ತೂ ಒಳಹೊಕ್ಕಾಗ ಅಂದವಾದ ಕಲಾಕೃತಿಗಳನ್ನು ಹೊಂದಿದ ಬಾಗಿಲೊಂದರ ಮೇಲೆ “ಯಕ್ಷದೇಗುಲ’ ಎಂದು ಬರೆದಿತ್ತು.ಎಲ್ಲರ ಮನದಲ್ಲೂ ಒಂದೇ ಪ್ರಶ್ನೆ, “ಇದರೊಳಗೇನಿರಬಹುದು?’ ಎಂದು. ಕೊನೆಗೂ ಬಾಗಿಲು ತೆರೆದು ಒಳಹೊಕ್ಕ ನಮಗೆ ವಿಸ್ಮಯ ಕಾದಿತ್ತು. ಹಲವು ತರದ ಯಕ್ಷಗಾನ ವೇಷಗಳು, ಮುಖವರ್ಣಿಕೆಯ ಮಾದರಿಗಳು, ಯಕ್ಷಗಾನದಲ್ಲಿ ಉಪಯೋಗಿಸುವ ಆಯುಧಗಳು, ಆಭರಣಗಳ ಆಗರ. ಈ ಕೋಣೆಯೊಳಗಿನ ಸೌಂದರ್ಯ ನಮ್ಮ ಮನಸ್ಸಿಗೂ ಕಣ್ಣಿಗೂ ಹಬ್ಬವನ್ನುಂಟುಮಾಡಿ ನಮ್ಮನ್ನು ಹೊರಬರದಂತೆ ಅಲ್ಲೇ ಬಂಧಿಸಿತು.

-ತೇಜಶ್ರೀ ಶೆಟ್ಟಿ
ತೃತೀಯ ಪತ್ರಿಕೋದ್ಯಮ
ಮಂಗಳೂರು ವಿ. ವಿ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.