![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 4, 2021, 5:26 PM IST
ನವದೆಹಲಿ: ಬಹುದಿನಗಳಿಂದ ಗೇಮಿಂಗ್ ಪ್ರಿಯರು ಕಾತರದಿಂದ ಕಾಯುತ್ತಿದ್ದ ಪಬ್ ಜಿ ಪರ್ಯಾಯ ಎಂದೇ ಗುರುತಿಸಲ್ಪಟ್ಟಿರುವ FAU-G ಗೇಮ್ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಇದನ್ನು ಭಾರತದಲ್ಲೇ ಅಭಿವೃದ್ಧಿ ಪಡಿಸಿದ್ದು , ಪ್ರಧಾನಿ ಮೋದಿಯವರ ಆತ್ಮನಿರ್ಭರ ಯೋಜನೆಗೆ ಬೆಂಬಲವಾಗಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಈ ಗೇಮ್ ಪರಿಚಯಿಸಿದ್ದರು.
ಗಣರಾಜ್ಯೋತ್ಸವ ದಿನವಾದ ಜನವರಿ 26 ರಂದು ಈ ಗೇಮಿಂಗ್ ಅಪ್ಲಿಕೇಶನ್ ಬಿಡುಗಡೆಗೊಳ್ಳಲಿದೆ. ಈಗಾಗಲೇ ಟ್ರೇಲರ್ ರಿಲೀಸ್ ಆಗಿದ್ದು, ಲಡಾಕ್ ನ ಹಿಮ ಪ್ರದೇಶದಲ್ಲಿ ಆ್ಯಕ್ಷನ್ ದೃಶ್ಯಗಳಿರುವಂತೆ ರೂಪುಗೊಳಿಸಲಾಗಿದೆ. ಈ ಗೇಮ್ ಗೆ ಪಂಜಾಬ್ ಮತ್ತು ಹಿಂದಿ ಭಾಷೆಯಲ್ಲಿ ಥೀಮ್ ಸಾಂಗ್ ಅನ್ನು ಕೂಡ ನೀಡಲಾಗಿದ್ದು, ಗೇಮಿಂಗ್ ಪ್ರಿಯರ ಮನಗೆಲ್ಲುವುದರಲ್ಲಿ ಆಶ್ಚರ್ಯವಿಲ್ಲ.
1 ನಿಮಿಷ 38 ಸೆಕೆಂಡ್ ಗಳಿರುವ FAU-G ಟ್ರೇಲರ್ ಫೇಸ್ ಬುಕ್, ಯೂಟ್ಯೂಬ್, ಟ್ವಿಟ್ಟರ್ ನಲ್ಲಿ ಲಭ್ಯವಿದೆ. ಇಲ್ಲಿ ಆಟಗಾರರು ಭಾರತೀಯ ಸೈನಿಕರ ಸಮವಸ್ತ್ರ ಧರಿಸಿದ್ದು, ಶತ್ರುಗಳೊಂದಿಗೆ ಹೋರಾಟದಲ್ಲಿ ನಿರತರಾಗಿದ್ದಾರೆ. ಭಾರತ ಮತ್ತು ಚೀನಾ ಗಡಿಯಲ್ಲಿ ನಡೆದ ಸಂಘರ್ಷವೇ ಈ ಗೇಮ್ ಗೆ ಪ್ರೇರಣೆಯಾಗಿದ್ದು, ಈ ಕಾರಣಕ್ಕಾಗಿ ಭಾರತೀಯ ಸೈನಿಕರು ಗಡಿಯಲ್ಲಿ ಶತ್ರುಗಳೊಂದಿಗೆ ಹೋರಾಡುವ ರೀತಿಯಲ್ಲಿ ಚಿತ್ರಿಸಲಾಗಿದೆ. ಇದರ ಜೊತೆಗೆ ಗಲ್ವಾನ್ ಕಣಿವೆಯ ಹಂತವನ್ನೂ ಕೂಡ ನೀಡಲಾಗಿದೆ.
FAU-G ಗೇಮ್ ಅನ್ನು nCore ಸಂಸ್ಥೆ ಅಭಿವೃದ್ಧಿಪಡಿಸಿದ್ದು, ಅದೇ ಹೇಳುವಂತೆ ಈ ಗೇಮ್ ನಲ್ಲಿ ಗನ್ (ಬಂದೂಕು) ನೀಡಲಾಗಿಲ್ಲ. ಮುಂದಿನ ಹಂತದಲ್ಲಿ ಅಥವಾ ಅಪ್ ಡೇಟ್ ಗಳಲ್ಲಿ ಬಂದೂಕು ಸೇರಿದಂತೆ ಇತರ ಶಸ್ತ್ರಾಸ್ತ್ರ ನೀಡುವುದಾಗಿ ತಿಳಿಸಿದೆ.
ಆ್ಯಂಡ್ರಾಯ್ಡ್ ಬಳಕೆದಾರರಿಗಾಗಿ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಈ ಗೇಮ್ ಲಭ್ಯವಿರಲಿದ್ದು, ಈವರೆಗೂ 1 ಮಿಲಿಯನ್ ಗಳಿಗಿಂತಲೂ ಹೆಚ್ಚು ಜನರು ನೊಂದಾಯಿಸಿಕೊಂಡಿದ್ದಾರೆ. ಆದರೇ ಐಓಎಸ್ ನಲ್ಲಿ ಫೌ-ಜಿ ಎಂದು ಬಿಡುಗಡೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.
FAU-G ಎಂದರೇ Fearless and United-Guards ಎಂಬರ್ಥವಿದೆ. ಈ ಗೇಮ್ ನಿಂದ ಬರುವ 20% ಆದಾಯವನ್ನು Bharatkeveer ಟ್ರಸ್ಟ್ ಗೆ ನೀಡಲಾಗುತ್ತದೆ ಎಂದು ಅಕ್ಷಯ್ ಕುಮಾರ್ ಹೇಳಿಕೊಂಡಿದ್ದಾರೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಇದೀಗ ಜಿಯೋ ಹಾಟ್ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.