Google Pay ಪಿ-ಟು-ಪಿ ಸೇವೆಗೆ ಶುಲ್ಕ! ಗೂಗಲ್‌ ಪೇ ಹೇಳಿದ್ದೇನು? ಯಾರಿಗೆ ಶುಲ್ಕ ಅನ್ವಯ?


Team Udayavani, Nov 25, 2020, 4:47 PM IST

G pay

ಮಣಿಪಾಲ: ಗೂಗಲ್‌ ಪೇ ಇನ್ನು ಮುಂದೆ ಉಚಿತವಲ್ಲ; ಶುಲ್ಕ ವಿಧಿಸಲಾಗುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಸಹಜವಾಗಿ ಬಹುತೇಕ ಬಳಕೆದಾರರನ್ನು ಚಿಂತೆಗೇಡು ಮಾಡಿದೆ. ನೋಟು‌ ಅಮಾನೀಕರಣಗೊಂಡು ಡಿಜಿಟಲ್‌ ಪಾವತಿ ವ್ಯವಸ್ಥೆಗೆ ಉತ್ತೇಜನ ದೊರೆತ ಬಳಿಕ ಗೂಗಲ್‌ ಪೇ ಸೇರಿದಂತೆ ಯುಪಿಐ ವ್ಯವಸ್ಥೆ ಮೂಲಕ ಪಾವತಿ ಮಾಡುವವರ ಸಂಖ್ಯೆ ಹೆಚ್ಚಾಗಿತ್ತು. Google Pay ಗೆ ಶುಲ್ಕ ಪಾವತಿಸಿದರೆ ಮಾತ್ರ ಕಾರ್ಯನಿರ್ವಹಿಸಲಿದೆ ಎಂಬ ಸುದ್ದಿ ತಲ್ಲಣಗೊಳಿಸಿತ್ತು.

ಇದು ವಿಷಯ ಹೌದಾದರೂ, ಭಾರತಕ್ಕೆ ಅನ್ವಯವಾಗುವುದಿಲ್ಲ. ಇದು ಅಮೆರಿಕಕ್ಕೆ ಮಾತ್ರ ಅನ್ವಯಿಸಲಿದೆ ಎಂದು ಗೂಗಲ್‌ ಪೇ ಸ್ಪಷ್ಟಪಡಿಸಿದೆ. ಭಾರತದಲ್ಲಿ ಬಳಕೆದಾರರು ತನ್ನ ಪಾವತಿ ವೇದಿಕೆಯಲ್ಲಿ ಹಣ ವರ್ಗಾವಣೆಗೆ ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ ಮತ್ತು ಅಮೆರಿಕದಲ್ಲಿ ಮಾತ್ರ ಬಳಕೆದಾರರಿಗೆ ಶುಲ್ಕ ವಿಧಿಸಲಾಗಿದೆ ಎಂದು ಗೂಗಲ್ ಬುಧವಾರ ಸ್ಪಷ್ಟಪಡಿಸಿದೆ.

ಮುಂದಿನ ವರ್ಷದಿಂದ ಅಮೆರಿಕದಲ್ಲಿ ಆಂಡ್ರಾಯ್ಡ್ ಮತ್ತು ಐಒಎಸ್‌ನಲ್ಲಿ ಮರುವಿನ್ಯಾಸಗೊಳಿಸಲಾದ ಗೂಗಲ್ ಪೇ ಅಪ್ಲಿಕೇಶನ್ ಅನ್ನು ಪ್ರಾರಂಭಿಸುವುದಾಗಿ ಕಳೆದ ವಾರ ಗೂಗಲ್ ಘೋಷಿಸಿತ್ತು. ಈ ಅಪ್ಲಿಕೇಶನ್‌ ಮೂಲಕ 2021ರಿಂದ ಶುಲ್ಕ ವಿಧಿಸುವ ಕಾರ್ಯಕ್ಕೆ ಮುಂದಾಗಿದೆ. ಗೂಗಲ್ ಪೇ ತನ್ನ ವೆಬ್ ಅಪ್ಲಿಕೇಶನ್‌ನಲ್ಲಿ ಪೀರ್-ಟು-ಪೀರ್ ಪಾವತಿ ಸೌಲಭ್ಯವನ್ನು ಜನವರಿಯಲ್ಲಿ ಹಿಂದೆಗೆದುಕೊಳ್ಳಲು ಸಿದ್ಧವಾಗಿದೆ. ಜತೆಗೆ ತ್ವರಿತ ಹಣ ವರ್ಗಾವಣೆಗೆ ಶುಲ್ಕವನ್ನು ವಿಧಿಸಲಿದೆ.

ಮುಂದಿನ ವರ್ಷ ಜನವರಿಯಿಂದ ವೆಬ್ ಅಪ್ಲಿಕೇಶನ್ ಸೈಟ್ ಮೂಲಕ ಸೇವೆ ದೊರೆಯುವುದಿಲ್ಲ ಎಂದು ಬಳಕೆದಾರರಿಗೆ ತಿಳಿಸಿದೆ. 2021ರ ಆರಂಭದಿಂದ ಹಣವನ್ನು ಕಳುಹಿಸಲು ಮತ್ತು ಸ್ವೀಕರಿಸಲು pay.google.com ಅನ್ನು ಬಳಸಲು ಸಾಧ್ಯವಾಗುವುದಿಲ್ಲ. ಹಣವನ್ನು ಕಳುಹಿಸಲು ಮತ್ತು ಸ್ವೀಕರಿಸಲು ಹೊಸ Google Pay ಅಪ್ಲಿಕೇಶನ್ ಅನ್ನು ಬಳಸಬೇಕಾಗುತ್ತದೆ ಎಂದು ಗೂಗಲ್ ಪೇ ಸೂಚನೆ ನೀಡಿದೆ.

ಅಮೆರಿಕದಲ್ಲಿ ತ್ವರಿತ ಹಣ ವರ್ಗಾವಣೆಯ ಮೇಲೂ ಗೂಗಲ್ ಶುಲ್ಕ ವಿಧಿಸಲಿದೆ. ಈ ತನಕ ಉಚಿತವಾಗಿ ಬೇರೆಯವರಿಗೆ ಹಣ ಕಳುಹಿಸಬಹುದಾಗಿತ್ತು. ಗೂಗಲ್ ಕಳೆದ ವಾರ ಗೂಗಲ್ ಪೇ ಅಪ್ಲಿಕೇಶನ್‌ನಲ್ಲಿ (ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗಾಗಿ) ಪ್ರಮುಖ ಮರುವಿನ್ಯಾಸಗೊಳಿಸಲಾದ ಆವೃತ್ತಿಯನ್ನುಪರಿಚಯಿಸಿತು. ಹೊಸ ಅಪ್ಲಿಕೇಶನ್ ವಹಿವಾಟುಗಳನ್ನು ನಿಭಾಯಿಸುವುದಲ್ಲದೆ, ದೈನಂದಿನ ಖರ್ಚಿನ ಬಗ್ಗೆ ನಿಗಾ ಇಡಲು ಅನುಮತಿಸುತ್ತದೆ. ಡಿಜಿಟಲ್ ಪಾವತಿ ಪ್ಲಾಟ್‌ಫಾರ್ಮ್ ಜತೆಗೆ ಮೆಸೇಜಿಂಗ್ ಸಾಧನವಾಗಿಯೂ ಕಾರ್ಯನಿರ್ವಹಿಸುತ್ತದೆ.

ಈ ಶುಲ್ಕಗಳು ಯುಎಸ್‌ಗೆ ಮಾತ್ರ ಸೀಮಿತವಾಗಿದ್ದು, ಭಾರತೀಯರು ಚಿಂತಿಸಬೇಕಾದ ಅಗತ್ಯ ಇಲ್ಲ. ಗೂಗಲ್ ಪೇ ಭಾರತದಲ್ಲಿ 67 ಮಿಲಿಯನ್ ಬಳಕೆದಾರರನ್ನು ಹೊಂದಿದ್ದು, ಗೂಗಲ್ ಪೇ ಫಾರ್ ಬಿಸಿನೆಸ್ ಜೂನ್ 2020 ರಲ್ಲಿ 3 ಮಿಲಿಯನ್ ವ್ಯಾಪಾರಿಗಳನ್ನುಸಂಪಾದಿಸಿದೆ. ಭಾರತದಲ್ಲಿ ಪೇಟಿಎಂ, ವಾಲ್ಮಾರ್ಟ್ ಒಡೆತನದ ಫೋನ್‌ಪೇ ಮತ್ತು ಅಮೆಜಾನ್ ಪೇ ಅನಂತಹ ಸಂಸ್ಥೆಗಳಿಗೆ ಪೈಪೋಟಿ ನೀಡುತ್ತಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.