Super.Money: ಹೊಸ ಯುಪಿಐ ಆ್ಯಪ್‌ ಬಿಡುಗಡೆ ಮಾಡಿದ ಸೂಪರ್.ಮನಿ


Team Udayavani, Aug 24, 2024, 8:37 PM IST

Super.Money: ಹೊಸ ಯುಪಿಐ ಆ್ಯಪ್‌ ಬಿಡುಗಡೆ ಮಾಡಿದ ಸೂಪರ್.ಮನಿ

ಬೆಂಗಳೂರು: ಯುಪಿಐ ಸೇವೆ ಒದಗಿಸುವ, ಫ್ಲಿಪ್‌ಕಾರ್ಟ್ ಗ್ರೂಪ್‌ (Flipkart Group) ಬೆಂಬಲಿತ ಸೂಪರ್.ಮನಿ (Super.Money) ತನ್ನ ಹೊಸ ಯುಪಿಐ ಆ್ಯಪ್‌ (UPI app) ಬಿಡುಗಡೆ ಮಾಡಿದೆ.

ಇದುವರೆಗೆ ಈ ಆ್ಯಪ್‌ ನ ಬೀಟಾ ವರ್ಷನ್ ಚಾಲ್ತಿಯಲ್ಲಿದ್ದು, 1 ಕೋಟಿವರೆಗಿನ ವಹಿವಾಟು ಮಾಡಿದ ಸಾಧನೆ ಮಾಡಿದೆ. ಅಲ್ಲದೇ ಬೀಟಾ ವರ್ಷನ್ ಆ್ಯಪ್‌ 10 ಲಕ್ಷ ಡೌನ್ ಲೋಡ್ ಆಗಿದ್ದು, ಸಂಸ್ಥೆಯ ಯಶಸ್ಸಿಗೆ ಸಾಕ್ಷಿಯಾಗಿದೆ.

ಸೂಪರ್.ಮನಿ ಸಂಸ್ಥೆಯು ಈಗಾಗಲೇ ಯುಪಿಐ ಮೂಲಕ ಸಾಲ ಸೌಲಭ್ಯ ಒದಗಿಸುವ ಫೀಚರ್ ಅನ್ನು ಟೆಸ್ಟ್ ಮಾಡಿದ್ದು, ಶೀಘ್ರವೇ ಆ ಪ್ರಯೋಜನವನ್ನು ಒದಗಿಸುವ ಉದ್ದೇಶ ಹೊಂದಿದೆ. ಅದಕ್ಕಾಗಿ ವೇಯ್ಟ್ ಲಿಸ್ಟ್ ಕಾರ್ಯಕ್ರಮವನ್ನೂ ಆರಂಭಿಸಿದೆ. ರುಪೇ ಕ್ರೆಡಿಟ್ ಕಾರ್ಡ್ ಸೂಪರ್.ಮನಿಯ ಮೊದಲ ಉತ್ಪನ್ನವಾಗಿತ್ತು, ಈ ಕಾರ್ಡ್ ಅನ್ನು ಯಾವುದೇ ಯುಪಿಐ ಜೊತೆ ಲಿಂಕ್ ಮಾಡಿಕೊಂಡು ವಹಿವಾಟು ನಡೆಸಬಹುದಾಗಿತ್ತು. ಇಂಥಾ ವ್ಯವಸ್ಥೆ ಜಾಗತಿಕ ಮಟ್ಟದಲ್ಲಿ ಮೊದಲು ಎಂಬ ಹೆಗ್ಗಳಿಕೆ ಪಡೆದಿತ್ತು.

ದೈನಂದಿನ ವಹಿವಾಟುಗಳ ಮೇಲೆ ಕೊಡುಗೆಗಳನ್ನು ಒದಗಿಸುವ ಮತ್ತು ಸಾಲ ಪ್ರಯೋಜನಗಳನ್ನು ಒದಗಿಸುವ ಅನುಭವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸೂಪರ್.ಮನಿ ತನ್ನ ಯುಪಿಐ ಸೇವೆಯನ್ನು ಆರಂಭಿಸಿದೆ. ಈ ಆ್ಯಪ್‌ ಪ್ರತೀ ವ್ಯಾಪಾರ ವಹಿವಾಟಿನ ಮೇಲೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ನೀಡುತ್ತದೆ. ವಿಶೇಷವಾಗಿ ಫ್ಲಿಪ್‌ಕಾರ್ಟ್ ಮತ್ತು ಮಿಂತ್ರಾ ಸೇರಿದಂತೆ ಪಾಲುದಾರ ಬಿಸಿನೆಸ್ ಗಳ ಉತ್ಪನ್ನಗಳ ಮೇಲೆ ವಿಶೇಷ ಆಫರ್ ನೀಡುತ್ತದೆ.

ಸೂಪರ್.ಮನಿ ಸಂಸ್ಥೆಯು ತನ್ನ ಸೂಪರ್‌ನೇಮ್‌ಡ್ರಾಪ್, ರಾಫಲ್ ಮತ್ತು ಮೀಮ್-ಮನಿಯಂತಹ ಹೊಸ ರೀತಿಯ ರಿವಾರ್ಡ್ ಕಾರ್ಯಕ್ರಮಗಳನ್ನು ಆರಂಭಿಸಿದ್ದು, ಪಾವತಿ ಮಾಡುವ ಪ್ರಕ್ರಿಯೆಯನ್ನು ವಿಶಿಷ್ಟ ಅನುಭವವಾಗಿ ಮಾರ್ಪಡಿಸುತ್ತಿದೆ. ಸೂಪರ್‌ನೇಮ್‌ಡ್ರಾಪ್ ನಲ್ಲಿ ಬಳಕೆದಾರರು ಆ ವಾರ ಸಂಸ್ಥೆ ಆಯ್ಕೆ ಮಾಡಿದ ಹೆಸರುಳ್ಳ ಯಾರಿಗಾದರೂ ಹಣ ಹಳುಹಿಸಿದರೆ ತಕ್ಷಣ ಕ್ಯಾಶ್ ಬ್ಯಾಕ್ ದೊರೆಯುತ್ತದೆ. ರಾಫಲ್ ಫೀಚರ್ ಇನ್ನಷ್ಟೇ ಬಿಡುಗಡೆಯಾಗಬೇಕಿದ್ದು, ಇಲ್ಲಿ ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಅವಕಾಶ ಲಭ್ಯವಾಗುತ್ತದೆ. ಮೀಮ್-ಮನಿ ಆರ್ಥಿಕ ವಹಿವಾಟುಗಳನ್ನು ಇಂಟರೆಸ್ಟಿಂಗ್ ಮಾಡುತ್ತದೆ. ಇಲ್ಲಿ ಸಾಮಾಜಿಕವಾಗಿ ತೊಡಗಿಸಿಕೊಳ್ಳುವ ಅವಕಾಶ ಮತ್ತು ರಿವಾರ್ಡ್ ಪಡೆಯುವ ಅವಕಾಶ ಎರಡೂ ಸಿಗುತ್ತದೆ.

ವಿಶೇಷವಾಗಿ ಭಾರತದಲ್ಲಿ ಬೆಳೆಯುತ್ತಲೇ ಇರುವ ಗ್ರಾಹಕ ಸಾಲ ವಿಭಾಗದ ಕಡೆಗೆ ಗಮನ ಹರಿಸಿರುವ ಸೂಪರ್.ಮನಿ ತನ್ನ ಕ್ರೆಡಿಟ್ ಕಾರ್ಡ್ ಅನ್ನು ಎನ್‌ಪಿಸಿಐನ ರುಪೇ ಜೊತೆ ಸಂಯೋಜಿಸಲ್ಪಟ್ಟಿದೆ. ಮುಂದಿನ ದಿನಗಳಲ್ಲಿ ಯುಪಿಐ ಮೂಲಕವೇ ಸಾಲ ಲಭ್ಯವಾಗುವಂತೆ ಮಾಡುವ ಫೀಚರ್ ಅನ್ನು ಸೂಪರ್.ಮನಿ ಪರಿಚಯಿಸಲಿದೆ. ಅದರ ಜೊತೆಗೆ ಆರ್ಥಿಕ ಸಂಸ್ಥೆಗಳ ಜೊತೆಗಿನ ಪಾಲುದಾರಿಕೆ ಮೂಲಕ ಕೋ-ಬ್ರಾಂಡೆಡ್ ಕ್ರೆಡಿಟ್ ಕಾರ್ಡ್, ಫಿಕ್ಸೆಡ್ ಡಿಪಾಸಿಟ್‌ (ಎಫ್‌ಡಿ) ಮತ್ತು ಪೂರ್ವ-ಅನುಮೋದಿತ ವೈಯಕ್ತಿಕ ಸಾಲ ಸೌಲಭ್ಯ ಇತ್ಯಾದಿ ಸೌಲಭ್ಯಗಳನ್ನು ಒದಗಿಸುವ ಯೋಜನೆಗಳನ್ನು ಒದಗಿಸಲು ಸೂಪರ್.ಮನಿ ಯೋಜನೆ ಹಾಕಿಕೊಂಡಿದೆ.

ಸೂಪರ್.ಮನಿಯ ಹೊಸ ಆ್ಯಪ್‌ ಬಿಡುಗಡೆ ಮಾಡಿರುವ ಸೂಪರ್.ಮನಿಯ ಸಂಸ್ಥಾಪಕ ಮತ್ತು ಸಿಇಓ ಪ್ರಕಾಶ್ ಸಿಕಾರಿಯಾ ಸಂಸ್ಥೆಯ ಬೆಳವಣಿಗೆ ಕುರಿತು ಹರ್ಷ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಸೂಪರ್.ಮನಿ ಆ್ಯಪ್‌ ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿದೆ. ಶೀಘ್ರದಲ್ಲೇ ಐಓಎಸ್ ನಲ್ಲಿ ಆ್ಯಪ್‌ ಬಿಡುಗಡೆ ಮಾಡುವುದಾಗಿ ಕಂಪನಿ ತಿಳಿಸಿದೆ.

ಟಾಪ್ ನ್ಯೂಸ್

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

bjValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

Valmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Big screen, low price iPhone-16 launch

iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.