ಸಣ್ಣ ವ್ಯವಹಾರಗಳಿಗೆ ಮೈಕ್ರೋಸಾಫ್ಟ್ ಟೀಮ್ಸ್ ಎಸೆನ್ಷಿಯಲ್ಸ್ ಪರಿಚಯ


Team Udayavani, Dec 3, 2021, 11:30 AM IST

ಸಣ್ಣ ವ್ಯವಹಾರಗಳಿಗೆ ಮೈಕ್ರೋಸಾಫ್ಟ್ ಟೀಮ್ಸ್ ಎಸೆನ್ಷಿಯಲ್ಸ್ ಪರಿಚಯ

ಬೆಂಗಳೂರು: ಮೈಕ್ರೋಸಾಫ್ಟ್ ನ ಟೀಮ್ಸ್ ಎಸೆನ್ಷಿಯಲ್ಸ್ ಈಗ ಸಣ್ಣ ವ್ಯಾಪಾರಿಗಳಿಗೂ ಲಭ್ಯವಾಗಲಿದೆ. ಇದೇ ಮೊದಲ ಬಾರಿಗೆ ಮೈಕ್ರೋಸಾಫ್ಟ್ ಸಣ್ಣ ವ್ಯಾಪಾರಿಗಳಿಗಾಗಿ ಮೈಕ್ರೋಸಾಫ್ಟ್ ಟೀಮ್ಸ್ ಎಸೆನ್ಷಿಯಲ್ಸ್ ಅನ್ನು ಬಿಡುಗಡೆ ಮಾಡಿದೆ. ಟೀಮ್ಸ್ ಎಸೆನ್ಷಿಯಲ್ಸ್ ಸಣ್ಣ ವ್ಯವಹಾರಗಳಿಗೆ ವೃತ್ತಿಪರ ಮತ್ತು ಕೈಗೆಟುಕುವ ಮೀಟಿಂಗ್ ಸಲೂಶನ್ಸ್ ಅನ್ನು ನೀಡುತ್ತದೆ. ಪ್ರತಿ ವ್ಯಕ್ತಿಗೆ ಮಾಸಿಕ 100 ರೂಪಾಯಿ ದರದಲ್ಲಿ ಈ ಟೀಮ್ಸ್ ಎಸೆನ್ಷಿಯಲ್ಸ್ ಲಭ್ಯವಿದೆ.

ಈ ಬಗ್ಗೆ ಮಾತನಾಡಿದ ಮೈಕ್ರೋಸಾಫ್ಟ್ ನಲ್ಲಿ ಮಾಡರ್ನ್ ವರ್ಕ್ ನ ಕಾರ್ಪೊರೇಟ್ ಉಪಾಧ್ಯಕ್ಷ ಜರೇದ್ ಸ್ಪಟಾರೋ, “ಕಳೆದ 20 ತಿಂಗಳಿಂದ ಸಣ್ಣ ವ್ಯವಹಾರಗಳು ಕಾರ್ಯನಿರ್ವಹಣೆ ಮಾಡುವುದು ಕಷ್ಟವಾಗಿದೆ ಎಂಬುದನ್ನು ನಾವು ಅರಿತಿದ್ದೇವೆ. ಈ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತವಾದ ಪರಿಕರಗಳ ಅಗತ್ಯತೆ ಇದೆ. ಹೀಗಾಗಿ ನಾವು ಮೈಕ್ರೋಸಾಫ್ಟ್ ಟೀಮ್ಸ್ ಅನ್ನು ಅವರಿಗೆ ಅನುಕೂಲವಾಗುವ ರೀತಿಯಲ್ಲಿ ವಿನ್ಯಾಸಗೊಳಿಸಿದ್ದೇವೆ. ಅಂದರೆ, ಸಣ್ಣ ವ್ಯವಹಾರಗಳ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಟೀಮ್ಸ್ ಎಸೆನ್ಷಿಯಲ್ಸ್ ಅನ್ನು ನಿರ್ದಿಷ್ಟವಾಗಿ ರೂಪಿಸಲಾಗಿದೆ. ಈ ಹೊಸ ಕೆಲಸದ ಯುಗದಲ್ಲಿ ಅವರು ಟೀಮ್ಸ್ ಎಸೆನ್ಷಿಯಲ್ಸ್ ಅನ್ನು ಬಳಸಿಕೊಂಡು ತಮ್ಮ ವ್ಯವಹಾರಗಳನ್ನು ವೃದ್ಧಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ” ಎಂದರು.

ಒಂದು ಸ್ಥಳದಲ್ಲಿ ಕುಳಿತು ವೃತ್ತಿಪರ ಸಭೆಗಳನ್ನು ನಡೆಸಲು ಈ ಟೀಮ್ಸ್ ಎಸೆನ್ಷಿಯಲ್ಸ್ ಅನುವು ಮಾಡಿಕೊಡುತ್ತದೆ. ಅಲ್ಲದೇ, ಈ ಕೆಳಗಿನ ವೈಶಿಷ್ಟ್ಯತೆಗಳನ್ನು ಹೊಂದಿದೆ:

  • 30 ಗಂಟೆಗಳವರೆಗೆ ಅನಿಯಮಿತವಾದ ಗ್ರೂಪ್ ಮೀಟಿಂಗ್ ಗಳನ್ನು ಆಯೋಜನೆ ಮಾಡಬಹುದು.
  • ಒಂದೇ ಬಾರಿಗೆ 300 ಜನರನ್ನು ಸೇರಿಸಿ ಸಂವಾದ ನಡೆಸಬಹುದು
  • ಪ್ರತಿ ಬಳಕೆದಾರನು 10 ಜಿಬಿ ಕ್ಲೌಡ್ ಸ್ಟೋರೇಜ್ ಮಾಡಬಹುದು.

ಸಣ್ಣ ವ್ಯಾಪಾರಗಳ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಟೀಮ್ಸ್ ನ ಉಚಿತ ಆವೃತ್ತಿಯಲ್ಲಿ ಲಭ್ಯವಿರುವ ಹಾಲಿ ಮತ್ತು ಹೊಸ ಸಾಮರ್ಥ್ಯಗಳನ್ನು ಟೀಮ್ಸ್ ಎಸೆನ್ಷಿಯಲ್ಸ್ ಹೊಂದಿದೆ.

ಸರಳ, ಸುಲಭ ಆಹ್ವಾನಗಳು: ಇದಕ್ಕೆ ಕೇವಲ ಇಮೇಲ್ ವಿಳಾಸವಿದ್ದರೆ ಸಾಕು. ಮೀಟಿಂಗ್ ನಲ್ಲಿ ಪಾಲ್ಗೊಳ್ಳಲು ಬಳಕೆದಾರರು ಸೈನ್ ಅಪ್, ಸೈನ್ ಇನ್ ಅಥವಾ ಟೀಮ್ಸ್ ಅನ್ನು ಇನ್ ಸ್ಟಾಲ್ ಮಾಡುವ ಅಗತ್ಯವಿಲ್ಲ,

ಇದರಲ್ಲಿ ಹೊಸ ಗೂಗಲ್ ಕ್ಯಾಲೆಂಡರ್ ಇಂಟಿಗ್ರೇಶನ್ ಇದ್ದು, ಇದು ಮೈಕ್ರೋಸಾಫ್ಟ್ ಟೀಮ್ಸ್ ನಲ್ಲಿ ಮೀಟಿಂಗ್ ಗಳನ್ನು ನಿಗದಿಪಡಿಸುವ ಕಾರ್ಯವನ್ನು ಸುಲಭಗೊಳಿಸುತ್ತದೆ.

ವೃತ್ತಿಪರ ಮೀಟಿಂಗ್ ಟೂಲ್ಸ್ ಮತ್ತು ಸಾಮರ್ಥ್ಯಗಳು: ಮೀಟಿಂಗ್ ಲಾಬಿಗಳು, ವರ್ಚುವಲ್ ಬ್ಯಾಕ್ ಗ್ರೌಂಡ್ಸ್, ಟುಗೆದರ್ ಮೋಡ್, ಲೈವ್ ಕ್ಲೋಸ್ಡ್ ಕ್ಯಾಪ್ಶನ್ಸ್ ಮತ್ತು ಲೈವ್ ರಿಯಾಕ್ಷನ್ ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ.

ಯಾವುದೇ ಕಾರಣಕ್ಕೂ ಕಾಂಟೆಕ್ಸ್ಟ್ ಅಥವಾ ನಿರಂತರತೆಗೆ ಧಕ್ಕೆಯಾಗುವುದಿಲ್ಲ. ಮೈಕ್ರೋಸಾಫ್ಟ್ ಟೀಮ್ಸ್ ನಲ್ಲಿ ಚಾಟ್ಸ್ ಮುಂದುವರಿಯುತ್ತದೆ.

ಗ್ರೂಪ್ ಪ್ರಾಜೆಕ್ಟ್ ಅನ್ನು ತ್ವರಿತವಾಗಿ ಪ್ರಾರಂಭಿಸಿ ಮತ್ತು ಯಾರೊಂದಿಗಾದರೂ ಸಭೆಗಳನ್ನು ಆಯೋಜನೆ ಮಾಡಿ, ತಂಡದ ಸದಸ್ಯರಿಗೆ ಕಾರ್ಯಗಳನ್ನು ನಿಯೋಜನೆ ಮಾಡಿ ಮತ್ತು ಹೊಸ ಸಣ್ಣ ವ್ಯಾಪಾರ ಗುಂಪು ಚಾಟ್ ಟೆಂಪ್ಲೇಟ್ ನೊಂದಿಗೆ ಒಂದೇ ಹಬ್ ನಲ್ಲಿ ತ್ವರಿತವಾಗಿ ಪ್ರತಿಕ್ರಿಯೆಯನ್ನು ಸ್ವೀಕರಿಸಲು ಸಮೀಕ್ಷೆಗಳನ್ನು ರಚಿಸಬಹುದಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.