ಚುನಾವಣಾ ಸಮಯದಲ್ಲಿ ಕೂ ಅಪ್ಲಿಕೇಶನ್ ನಿಂದ ‘ಸ್ವಯಂಪ್ರೇರಿತ ನೀತಿ ಸಂಹಿತೆ’


Team Udayavani, Jan 13, 2022, 4:46 PM IST

ಚುನಾವಣಾ ಸಮಯದಲ್ಲಿ ಕೂ ಅಪ್ಲಿಕೇಶನ್ ನಿಂದ ‘ಸ್ವಯಂಪ್ರೇರಿತ ನೀತಿ ಸಂಹಿತೆ’

ಬೆಂಗಳೂರು: ಮುಂಬರುವ ಚುನಾವಣೆಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಸುರಕ್ಷಿತ ಸಂವಾದಗಳನ್ನು ನಡೆಸುವತ್ತ ಹೆಜ್ಜೆ ಹಾಕುತ್ತಿರುವ ಕೂ (Koo) ಆ್ಯಪ್ ‘ಸ್ವಯಂಪ್ರೇರಿತ ನೀತಿ ಸಂಹಿತೆ’ಯನ್ನು ಅಳವಡಿಸಿಕೊಂಡಿದೆ.

ಇಂಟರ್ನೆಟ್ ಮತ್ತು ಮೊಬೈಲ್ ಅಸೋಸಿಯೇಷನ್ ​​ಆಫ್ ಇಂಡಿಯಾ (IAMAI) ನಿಂದ ರಚಿಸಲ್ಪಟ್ಟ ಸ್ವಯಂಪ್ರೇರಿತ ನೀತಿ ಸಂಹಿತೆ 2019 ರ ಸಾರ್ವತ್ರಿಕ ಚುನಾವಣೆಗೂ ಮುನ್ನ IAMAI ಭಾರತದ ಚುನಾವಣಾ ಆಯೋಗಕ್ಕೆ ಮೊದಲು ಪ್ರಸ್ತುತಪಡಿಸಿತು. ಚುನಾವಣಾ ಸಮಯದಲ್ಲಿ ಸಾಮಾಜಿಕ ಮಾಧ್ಯಮದ ನ್ಯಾಯಯುತ ಮತ್ತು ನೈತಿಕ ಬಳಕೆಯನ್ನು ಈ ನೀತಿ ಸಂಹಿತೆ ಬಯಸುತ್ತದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದಲ್ಲಿ ಫೆಬ್ರವರಿ ಮತ್ತು ಮಾರ್ಚ್ 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳಿಗೂ ಮುನ್ನ ನೀತಿ ಸಂಹಿತೆಯನ್ನು ಅಳವಡಿಸಿಕೊಳ್ಳುವ ಮೂಲಕ, ಕೂ ಆ್ಯಪ್ ಬಳಕೆದಾರರಿಗೆ ಸುರಕ್ಷಿತ ಮತ್ತು ನ್ಯಾಯಯುತ ಚುನಾವಣೆಯ ಕುರಿತು ಬದ್ಧತೆಯ ಭರವಸೆ ನೀಡುತ್ತದೆ. ಸಾಮಾಜಿಕ ಮಾಧ್ಯಮ ವೇದಿಕೆಯಾಗಿ ತನ್ನ ಜವಾಬ್ದಾರಿಯನ್ನು ಖಾತ್ರಿಪಡಿಸುತ್ತದೆ.

ಅಪ್ಪಟ ಭಾರತೀಯ ವೇದಿಕೆಯಾದ ಕೂ ಭಾರತೀಯರು ತಮ್ಮ ಮಾತೃಭಾಷೆಯಲ್ಲಿ ತಮ್ಮ ಮನದಾಳದ ಮಾತುಗಳನ್ನು ವ್ಯಕ್ತಪಡಿಸಲು ಅವಕಾಶ ಕಲ್ಪಿಸುತ್ತದೆ. ಯಾವುದೇ ರೀತಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗದಂತೆ ಭಾರತದ ಚುನಾವಣಾ ಆಯೋಗವು ನೀಡಿದ ನಿರ್ದೇಶನಗಳನ್ನು ಅನುಸರಿಸುತ್ತದೆ. ಈಕುರಿತು ತನ್ನ ಬಳಕೆದಾರರಿಗೆ ಮಾಹಿತಿ ನೀಡುತ್ತದೆ. ಮತ್ತು ಚುನಾವಣೆಯ ಕುರಿತು ಅವರಲ್ಲಿ ವಿಶ್ವಾಸ ಹೆಚ್ಚಿಸುತ್ತದೆ.

ಪ್ರಮುಖ ಸಾಮಾಜಿಕ ಮಧ್ಯವರ್ತಿ ವೇದಿಕೆಯಾಗಿ ನಿಗದಿತ ಅವಧಿಯಲ್ಲಿ ನಿಂದನೀಯ ಮತ್ತು ದ್ವೇಷಪೂರಿತ ವಿಷಯದಿಂದ ಬಳಕೆದಾರರನ್ನು ರಕ್ಷಿಸಲು ಕೂ ಕುಂದುಕೊರತೆ ಪರಿಹಾರ ತಂಡವನ್ನು ಹೊಂದಿದೆ. ಜೊತೆಗೆ ಜವಾಬ್ದಾರಿಯುತ ಆನ್‌ಲೈನ್‌ ನಡವಳಿಕೆಯನ್ನು ಬಳಕೆದಾರರಿಗೆ ತಿಳಿಸುತ್ತದೆ. ಬಹುಭಾ‍ಷಾ ವೇದಿಕೆಯಾಗಿರುವ ಕೂ ಬಳಕೆದಾರರಿಗೆ 10 ಭಾಷೆಗಳಲ್ಲಿ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ಅನುವು ಮಾಡಿಕೊಡುತ್ತದೆ. ಕೂ ಕಂಪ್ಲಾಯನ್ಸ್ ನೀತಿಯನ್ನು ಜಾರಿಗೊಳಿಸಿದ ಮೊದಲ ಭಾರತೀಯ ಸಾಮಾಜಿಕ ವೇದಿಕೆಯಾಗಿದ್ದು, ಚಾಲ್ತಿಯಲ್ಲಿರುವ ನಿಯಂತ್ರಕ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕಂಪ್ಲಾಯನ್ಸ್ ನಿಯಮಗಳನ್ನು ನಿಯಮಿತವಾಗಿ ಒದಗಿಸುತ್ತದೆ. ಮತ್ತು ಅಸಮಂಜಸ ವಿಷಯಗಳನ್ನು ಪುರ್ವಭಾವಿಯಾಗಿ ನಿಯಂತ್ರಿಸುತ್ತದೆ.

ಈ ಕುರಿತು ವಿವರಿಸಿದ ಕೂ ಸಹ-ಸಂಸ್ಥಾಪಕ ಮತ್ತು ಸಿಇಒ ಅಪ್ರಮೇಯ ರಾಧಾಕೃಷ್ಣ, “ಇಂದು, ಸಾಮಾಜಿಕ ಮಾಧ್ಯಮವು ಜನರ ಜೀವನದಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಚುನಾವಣಾ ಪ್ರಕ್ರಿಯೆಯ ಬಗ್ಗೆ ಜನರಿಗೆ ತಿಳಿವಳಿಕೆ ನೀಡುವಲ್ಲಿ ಇದು ಸಹಕಾರಿಯಾಗಬಲ್ಲದು. ಅಲ್ಲದೇ, ಅವರು ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಪ್ರಭಾವ ಬೀರುತ್ತದೆ. ಪಕ್ಷಪಾತವಿಲ್ಲದ, ಪಾರದರ್ಶಕ ಮತ್ತು ವಿಶ್ವಾಸಾರ್ಹ ಸಾಮಾಜಿಕ ಮಾಧ್ಯಮ ವೇದಿಕೆಯಾಗಿ, IAMAI ರಚಿಸಿದ ಸ್ವಯಂಪ್ರೇರಿತ ನೀತಿ ಸಂಹಿತೆಯನ್ನು ಕೂ ಅನೂಚಾನವಾಗಿ ಪಾಲಿಸುತ್ತದೆ. ಪ್ರಜಾಪ್ರಭುತ್ವದ ವೈಶಿಷ್ಟ್ಯವಾದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸುವಲ್ಲಿ ಸಹಕರಿಸುತ್ತದೆ. ನಮ್ಮ ಅತ್ಯುತ್ತಮ ಮತ್ತು ಕುಂದುಕೊರತೆ ಪರಿಹಾರದ ಕಾರ್ಯವಿಧಾನಗಳು ಬಳಕೆದಾರರಿಗೆ ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸಲು ಮತ್ತು ಅವರ ಸಮುದಾಯಗಳೊಂದಿಗೆ ಅವರ ಆಯ್ಕೆಯ ಭಾಷೆಯಲ್ಲಿ ಸಂಪರ್ಕ ಸಾಧಿಸಲು ಸುರಕ್ಷಿತ ಆನ್‌ಲೈನ್ ಪರಿಸರವನ್ನು ಒದಗಿಸುತ್ತದೆ. ಕೂ ಅಪ್ಲಿಕೇಶನ್ ನಮ್ಮ ಬಳಕೆದಾರರಿಗೆ ಸುರಕ್ಷಿತ ಮತ್ತು ಗಾಢ ಭಾಷಾ ಅನುಭವವನ್ನು ಒದಗಿಸಲು ಉತ್ತಮ ಅವಕಾಶ ಮತ್ತು ಕಾರ್ಯಸಾಧ್ಯವಾದ ಪರಿಹಾರಗಳನ್ನು ಒದಗಿಸಲು ಪ್ರಯತ್ನಿಸುತ್ತದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.