![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 18, 2020, 3:05 PM IST
ನವದೆಹಲಿ: ಪೇಮೆಂಟ್ ಆ್ಯಪ್ ಪೇಟಿಎಂ ಅಚ್ಚರಿ ಎಂಬಂತೆ ಗೂಗಲ್ ಪ್ಲೇ ಸ್ಟೋರ್ ನಿಂದ ಕಣ್ಮರೆಯಾಗಿದೆ. ಅದಾಗ್ಯೂ ಪೇಟಿಎಂ ಬ್ಯುಸಿನೆಸ್, ಪೇಟಿಎಂ ಮನಿ, ಪೇಟಿಎಂ ಮಾಲ್, ಮತ್ತು ಇತರ ಆ್ಯಪ್ ಗಳು ಪ್ಲೇಸ್ಟೋರ್ ನಲ್ಲಿ ಲಭ್ಯವಿದೆ.
One 97 Communication Ltd. ಪೇಟಿಎಂ ಮಾಲಿಕತ್ವವನ್ನು ಹೊಂದಿತ್ತು. ಇದೀಗ ಈ ಆ್ಯಪ್ ಗೂಗಲ್ ಪ್ಲೇ ಸ್ಟೋರ್ ನಿಂದ ರಿಮೂವ್ ಆಗಿದ್ದು ಆ್ಯಪಲ್ ಸ್ಟೋರ್ ನಲ್ಲಿ ಮಾತ್ರ ಲಭ್ಯವಿದೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ನೀಡಿದ ಪೇಟಿಎಂ “ಪೇಟಿಎಂ ಆ್ಯಂಡ್ರಾಯ್ಡ್ ಆ್ಯಪ್ ತಾತ್ಕಲಿಕವಾಗಿ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿಲ್ಲ. ಮಾತ್ರವಲ್ಲದೆ ಯಾವುದೇ ಹೊಸ ಅಪ್ ಡೆಟ್ ಗಳು ಕೂಡ ದೊರಕುವುದಿಲ್ಲ. ಶೀಘ್ರದಲ್ಲಿ ವಾಪಾಸಾಗುತ್ತೇವೆ. ನಿಮ್ಮ ಎಲ್ಲಾ ಪಾವತಿ ಸೇವೆಗಳು ಸಂಪೂರ್ಣ ಭದ್ರವಾಗಿದೆ’ ಎಂದಿದೆ.
ಗೂಗಲ್ ಹೊಸ ನೀತಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ಆ್ಯಪ್ ಅನ್ನು ತೆಗೆದುಹಾಕಲಾಗಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.
ಕೆಲವೊಂದು ಸಂಭಾವ್ಯ ಹಾನಿಯಿಂದ ಬಳಕೆದಾರರನ್ನು ರಕ್ಷಿಸಲು ಹೊಸ ನೀತಿಗಳನ್ನು ಜಾರಿಗೆ ತರಲಾಗಿದೆ. ಯಾವುದೇ ಅಪ್ಲಿಕೇಶನ್ ಗಳು ಈ ನೀತಿಗಳನ್ನು ಉಲ್ಲಂಘಿಸಿದಾಗ, ಅದರ ಡೆವಲಪರ್ಗೆ ಮಾಹಿತಿ ನೀಡುತ್ತೇವೆ. ಆದರೇ ಆ್ಯಪ್ ಡೆವಲಪರ್ ಗಳು ಈ ನೀತಿಗಳನ್ನು ಅನುಸರಿಸದಿದ್ದರೇ ಪ್ಲೇಸ್ಟೋರ್ ನಿಂದ ಅವನ್ನು ತೆಗೆದುಹಾಕಲಾಗುವುದು. ಹೊಸ ನೀತಿಗಳನ್ನು ಅಳವಡಿಸಿಕೊಂಡರೇ ಮಾತ್ರ ಅಂತಹ ಆ್ಯಪ್ ಗಳಿಗೆ ಪ್ಲೇಸ್ಟೋರ್ ನಲ್ಲಿ ಜಾಗವಿರುತ್ತದೆ. ಅದಾಗ್ಯೂ 2ನೇ ಬಾರಿ ಗೂಗಲ್ ನಿಯಮ ಉಲ್ಲಂಘಿಸಿದರೇ ಹೆಚ್ಚು ಗಂಭೀರವಾದ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಗೂಗಲ್ ಆ್ಯಂಡ್ರಾಯ್ಡ್ ಸೆಕ್ಯೂರಿಟಿ ಮತ್ತು ಪ್ರೈವಸಿಯ ಉಪಾಧ್ಯಕ್ಷ ಸುಝಾನೆ ಫ್ರೇ ತಿಳಿಸಿದ್ದಾರೆ.
ಆನ್ ಲೈನ್ ಕ್ಯಾಸಿನೋ ಮತ್ತು ಜೂಜು ಅಥವಾ ಸ್ಪೋರ್ಟ್ಸ್ ಬೆಟ್ಟಿಂಗ್ ಕುರಿತಾದ ಆ್ಯಪ್ ಗಳನ್ನು ಗೂಗಲ್ ಪ್ರೋತ್ಸಾಹಿಸುವುದಿಲ್ಲ. ಇಂತಹ ಆ್ಯಪ್ ಗಳ ಜಾಹೀರಾತು ಅಥವಾ ಲಿಂಕ್ ಹಂಚಿಕೊಳ್ಳುವುದು ಹಾಗೂ ಥರ್ಢ್ ಪಾರ್ಟಿ ಆ್ಯಪ್ ಗಳಿಗೆ ಬಳಕೆದಾರರನ್ನು ಸೆಳೆಯುವುದು ಗೂಗಲ್ ಪಾಲಿಸಿಯ ಉಲ್ಲಂಘನೆಯಾಗುತ್ತದೆ ಎಂದು ಸುಝಾನೆ ತಿಳಿಸಿದ್ದಾರೆ.
ಈ ಕಾರಣಕ್ಕಾಗಿ ಪೇಟಿಎಂ ಅಪ್ಲಿಕೇಶನ್ ನನ್ನು ರಿಮೂವ್ ಮಾಡಲಾಗಿದೆ. ಪೇಟಿಎಂ ಭಾರತೀಯ ಮೂಲದ ಕಂಪೆನಿ One 97 Communication Ltd. ಮಾಲಿಕತ್ವವನ್ನು ಹೊಂದಿದ್ದು, ವಿಜಯ್ ಶಂಕರ್ ಶರ್ಮಾ ಇದರ ಸಂಸ್ಥಾಪಕರಾಗಿದ್ದಾರೆ. ಈ ಕಂಪೆನಿ ಚೀನಾದ ಆಲಿಬಾಬ ಗ್ರೂಪ್ ನ ಮಿತ್ರ ಸಂಸ್ಥೆ fintech firm Ant Financials ನಿಂದ ಭಾರೀ ಹಣವನ್ನು ಪಡೆದಿದೆ ಎಂದು ವರದಿಯಾಗಿದೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಇದೀಗ ಜಿಯೋ ಹಾಟ್ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.