ಮುಗಿಯದ ವಾಟ್ಸಾಪ್ ಗೋಳು: ಗೂಗಲ್ ಸರ್ಚ್ ನಲ್ಲಿ ‘ಮಿಂಚಿ ಮರೆಯಾದ’ ನಿಮ್ಮ ಮೊಬೈಲ್ ನಂಬರ್ !


Team Udayavani, Jan 17, 2021, 9:05 PM IST

Phone numbers of WhatsApp Web users reportedly found on Google Search

ನವದೆಹಲಿ: ಕಳೆದ ಹಲವು ದಿನಗಳಿಂದ ಒಂದಲ್ಲಾ ಒಂದು ರದ್ದಾಂತಗಳಿಂದ ಸುದ್ದಿಯಾಗುತ್ತಿರುವ ಜನಪ್ರಿಯ ಫೇಸ್ ಬುಕ್ ಒಡೆತನದ ವಾಟ್ಸಾಪ್ ಇದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಾಗುತ್ತಿದೆ.  ವಾಟ್ಸಾಪ್ ವೆಬ್ ಬಳಕೆದಾರರ ಫೋನ್ ನಂಬರ್ ಗಳು ಇಂಡೆಕ್ಸಿಂಗ್ ಮೂಲಕ ಗೂಗಲ್ ಸರ್ಚ್ ನಲ್ಲಿ ಲಭ್ಯವಿದ್ದು ಹಲವು ಅಪಾಯಗಳಿಗೆ ಎಡೆ ಮಾಡಿಕೊಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಕಳೆದ 5 ದಿನಗಳ ಹಿಂದೆ ಗೂಗಲ್ ಸರ್ಚ್ ನಲ್ಲಿ ವಾಟ್ಸಾಪ್ ಗ್ರೂಪ್ ಗಳ ಮಾಹಿತಿ ಲಭ್ಯವಾಗುತ್ತಿದೆ ಎಂದು ವರದಿಯಾಗಿತ್ತು. ಇದರರ್ಥ ಯಾರು ಬೇಕಾದರೂ ಗೂಗಲ್ ಸರ್ಚ್ ಮೂಲಕ ವಾಟ್ಸಾಪ್ ಗ್ರೂಪ್ ಗಳನ್ನು ಪತ್ತೆಹಚ್ಚಿ  ಸುಲಭವಾಗಿ ಜಾಯಿನ್ ಆಗಬಹುದಿತ್ತು.

ಸೆಕ್ಯೂರಿಟಿ ರಿಸರ್ಚರ್ ರಾಜಶೇಖರ್ ರಜಾರಿಯಾ ಅವರ ಹೇಳುವಂತೆ ‘ ವಾಟ್ಸಾಪ್ ವೆಬ್ ಬಳಕೆದಾರರ ಮೊಬೈಲ್ ಸಂಖ್ಯೆಗಳು ಗೂಗಲ್ ಸರ್ಚ್ ನಲ್ಲಿ ಕಾಣಸಿಗುತ್ತಿದೆ. ವಾಟ್ಸಾಪ್ ಅಪ್ಲಿಕೇಶನ್ ನನ್ನು ಸ್ಮಾರ್ಟ್ ಪೋನ್ ಮೂಲಕ ಮಾತ್ರವಲ್ಲದೆ ಲ್ಯಾಪ್ ಟಾಪ್, ಕಂಪ್ಯೂಟರ್ ಗಳ ಮೂಲಕವು ಬಳಕೆ ಮಾಡಬಹುದು. ಮೊಬೈಲ್ ನಂಬರ್ ಗಳ ಸೋರಿಕೆ ವಾಟ್ಸಾಪ್ ವೆಬ್ ಮೂಲಕ ನಡೆದಿದೆ. ಯಾರಾದರೂ ಈ ಅಪ್ಲಿಕೇಶನ್ ನನ್ನು ಲ್ಯಾಪ್ ಟ್ಯಾಪ್ ಮತ್ತು ಪಿ.ಸಿಗಳ ಮೂಲಕ ಬಳಸಿದಾಗ  ಅವರ ಮೊಬೈಲ್ ಸಂಖ್ಯೆ ಗೂಗಲ್ ಸರ್ಚ್ ನಲ್ಲಿ ಇಂಡೆಕ್ಸೆಡ್  ಆಗುವ ಮೂಲಕ ಕಾಣಿಸುತ್ತದೆ. ಇದು ಬಳಕೆದಾರರ ವ್ಯೆಯಕ್ತಿಕ ನಂಬರ್ ಗಳಾಗಿದ್ದು, ಯಾವುದೇ ಬ್ಯುಸಿನೆಸ್ ನಂಬರ್ ಗಳಲ್ಲ ಎಂದು ರಜಾರಿಯಾ ತಿಳಿಸಿದ್ದಾರೆ.

ಇದನ್ನೂ ಓದಿ:ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಮೂರು ಭಾರತೀಯ ಚಿತ್ರಗಳು

ಕೆಲದಿನಗಳ ಹಿಂದೆ ಗೂಗಲ್ ಸರ್ಚ್ ನಲ್ಲಿ ಹಲವು ಗ್ರೂಪ್ ಚಾಟ್ ಗಳು ಲಿಂಕ್ ಗಳು ಲಭ್ಯವಾಗಿದ್ದು, ಯಾರು ಬೇಕಾದರೂ ಈ ಲಿಂಕ್ ಗಳ ಸಹಾಯದಿಂದ ವಾಟ್ಸಾಪ್ ಗ್ರೂಪ್ ಗಳಿಗೆ ಯಾವ ಅನುಮತಿ ಇಲ್ಲದೆ ಸೇರಿಕೊಳ್ಳಬಹುದಿತ್ತು. ಈ ಕುರಿತಾಗಿ ವಾಟ್ಸಾಪ್ ಸಂಸ್ಥೆ ಅಂತಹ  ಎಲ್ಲಾ ಲಿಂಕ್ ಗಳನ್ನು ತೆಗೆದುಹಾಕುವಂತೆ ಮನವಿ ಮಾಡಿದ ಬಳಿಕ ಗೂಗಲ್ ತನ್ನ ಗೂಗಲ್ ಸರ್ಚ್ ನಲ್ಲಿದ್ದ ಗ್ರೂಪ್ ಚಾಟ್ ಲಿಂಕ್ ಗಳನ್ನು ಡಿಲೀಟ್ ಮಾಡಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ:ಕರ್ನಾಟಕ ಆಕ್ರಮಿತ ಕೆಲಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲಿದ್ದೇವೆ: ಉದ್ಧವ್ ಠಾಕ್ರೆ

ಈ ಕುರಿತಾಗಿ ಬಳಕೆದಾರರಿಗೆ ಮಾಹಿತಿ ನೀಡಿರುವ ವಾಟ್ಸಾಪ್ ಸಂಸ್ಥೆ ಒಂದು ವೇಳೆ ಯಾವುದೇ ಅಪರಿಚಿತ ವ್ಯಕ್ತಿ ನಿಮ್ಮ ಚಾಟ್ ಗ್ರೂಪ್ ಗಳಲ್ಲಿ ಕಾಣಿಸಿಕೊಂಡರೆ ಅಡ್ಮಿನ್ ಆದವರಿಗೆ ಅಂತಹ ವ್ಯಕ್ತಿಯನ್ನು ಯಾವುದೇ ಸಮಯದಲ್ಲಿ ರಿಮೂವ್  ಮಾಡುವ ಅವಕಾಶವಿದೆ ಎಂದಿದೆ. ಮಾತ್ರವಲ್ಲದೆ ಗೂಗಲ್ ಸರ್ಚ್ ನಲ್ಲಿ ವಾಟ್ಸಾಪ್ ನಂಬರ್ ಕಾಣಿಸಿಕೊಂಡ ಸಮಸ್ಯೆಯನ್ನು ತಕ್ಷಣ ಬಗೆಹರಿಸಲಾಗಿದೆ. ಈಗ ಯಾವುದೇ ಬಳಕೆದಾರರ ವ್ಯೆಯಕ್ತಿಕ ನಂಬರ್ ಗೂಗಲ್ ಸರ್ಚ್ ನಲ್ಲಿ ಲಭ್ಯವಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.